Homeಮುಖಪುಟಬಿಹಾರ | ಅಧಿಕಾರಕ್ಕೇರಿದರೆ ಪಿಂಚಣಿ ಹೆಚ್ಚಿಸುವುದಾಗಿ ತೇಜಸ್ವಿ ಯಾದವ್ ಭರವಸೆ

ಬಿಹಾರ | ಅಧಿಕಾರಕ್ಕೇರಿದರೆ ಪಿಂಚಣಿ ಹೆಚ್ಚಿಸುವುದಾಗಿ ತೇಜಸ್ವಿ ಯಾದವ್ ಭರವಸೆ

- Advertisement -
- Advertisement -

ತಮ್ಮ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ, ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಪಾವತಿಸುವ ಮೊತ್ತವನ್ನು ಹೆಚ್ಚಿಸುವುದಾಗಿ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಸೋಮವಾರ ಹೇಳಿದ್ದಾರೆ. ಬಿಹಾರದಲ್ಲಿ ಮುಂದಿನ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಹಾರ

ಹಿರಿಯ ನಾಗರಿಕರು, ವಿಧವೆಯರು ಮತ್ತು ಅಂಗವಿಕಲರಿಗೆ ನೀಡುವ ಮೊತ್ತವನ್ನು ತಿಂಗಳಿಗೆ 400 ರೂ.ನಿಂದ 1500 ರೂ.ಗೆ ಹೆಚ್ಚಿಸಲಾಗುವುದು ಎಂದು ತೇಜಸ್ವಿ ಭರವಸೆ ನೀಡಿದ್ದಾರೆ. “ವಿಧಾನಸಭಾ ಚುನಾವಣೆಯ ನಂತರ ನಾವು ಸರ್ಕಾರವನ್ನು ರಚಿಸಿದರೆ, 60 ವರ್ಷಕ್ಕಿಂತ ಮೇಲ್ಪಟ್ಟವರು ಅಥವಾ ಅಂಗವಿಕಲರು ಮತ್ತು ವಿಧವೆಯರಿಗೆ ನೀಡುವ ಸಾಮಾಜಿಕ ಭದ್ರತಾ ಯೋಜನೆಯ ಅನುದಾವನ್ನು ತಿಂಗಳಿಗೆ 1500 ರೂ. ನೀಡಲಾಗುವುದು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಕ್ಷದ ಕಾರ್ಯಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ತೇಜಸ್ವಿ ಯಾದವ್, ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ರಾಜ್ಯ ಸರ್ಕಾರವು ಜನರಿಗೆ ಪಾವತಿಸುವ ಮೊತ್ತವು ಅತ್ಯಲ್ಪವಾಗಿದೆ. ಪ್ರಸ್ತುತ ರಾಜ್ಯ ಸರ್ಕಾರವು ಸಾಮಾಜಿಕ ಭದ್ರತಾ ಯೋಜನೆಗಳಡಿ ಫಲಾನುಭವಿಗಳಿಗೆ ಮಾಸಿಕ 400 ರೂ. ನೀಡುತ್ತಿದೆ ಎಂದು ಹೇಳಿದ್ದಾರೆ. ಬಿಹಾರ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಜನರಿಗೆ 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ತೇಜಸ್ವಿ ಯಾದವ್ ಇತ್ತಿಚೆಗೆ ಹೇಳಿದ್ದರು. ಅದರ ನಂತರ ಚುನಾವಣಾ ವಿಚಾರವಾಗಿ ಜನರಿಗೆ ನೀಡುತ್ತಿರುವ ಮತ್ತೊಂದು ಭರವಸೆ ಇದಾಗಿದೆ. ಈ ಹಿಂದೆ ಜನರಿಗೆ ಏನೇನು ಭರವಸೆ ನೀಡಿದ್ದೇವೋ ಅದನ್ನು ಈಡೇರಿಸಿದ್ದೇನೆ ಎಂದು ಅವರು ಪುನರುಚ್ಚರಿಸಿದ್ದಾರೆ.

ತಮ್ಮ ಪಕ್ಷವು ಮಹಾಮೈತ್ರಿಕೂಟ ಸರ್ಕಾರದ ಭಾಗವಾಗಿದ್ದಾಗ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಜನರಿಗೆ ಉದ್ಯೋಗಗಳನ್ನು ಒದಗಿಸಿದೆ ಎಂದು ತೇಜಸ್ವಿ ಹೇಳಿಕೊಂಡಿದ್ದಾರೆ. “ನಾವು, ಮಹಾಮೈತ್ರಿ ಸರ್ಕಾರದ ಭಾಗವಾಗಿ, ಜನರಿಗೆ 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ನಮ್ಮ ಭರವಸೆಯನ್ನು ಪೂರ್ತಿ ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.

ಆರ್‌ಜೆಡಿ ಮುಂದಿನ ಬಾರಿ ಸರ್ಕಾರವನ್ನು ರಚಿಸಿದರೆ ಅವರ ಕುಂದುಕೊರತೆಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡುವ ಮೂಲಕ ಜೀವಿಕಾ ದೀದಿಗಳ ಬೆಂಬಲವನ್ನು ಗೆಲ್ಲಲು ಅವರು ಪ್ರಯತ್ನಿಸಿದ್ದಾರೆ. ಇದೇ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡ ತೇಜಸ್ವಿ, “ನಿತೀಶ್ ಅವರು ಜೀವಿಕಾ ದೀದಿಗಳನ್ನು ತಮ್ಮ ಮತದಾರರನ್ನಾಗಿ ಮಾಡಲು ಬಯಸುತ್ತಾರೆ. ಆದರೆ ನಮ್ಮ ಪಕ್ಷವು ಅವರ ಸಮಸ್ಯೆಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು

ದೆಹಲಿಯಲ್ಲಿ ವಿರೋಧ; ತೆಲಂಗಾಣದಲ್ಲಿ ಪರ – ಅದಾನಿ ಬಗ್ಗೆ ಕಾಂಗ್ರೆಸ್‌ನ ದ್ವಂದ್ವ ನಿಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...