Homeಚಳವಳಿಬಿಹಾರ | ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ಮುಖ್ಯ ಕಾರ್ಯದರ್ಶಿಯ ಭೇಟಿ - ಸಭೆ ವಿಫಲ

ಬಿಹಾರ | ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ಮುಖ್ಯ ಕಾರ್ಯದರ್ಶಿಯ ಭೇಟಿ – ಸಭೆ ವಿಫಲ

- Advertisement -
- Advertisement -

ಬಿಹಾರದ ಎಲ್ಲಾ 912 ಕೇಂದ್ರಗಳಲ್ಲಿ ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‌ಸಿ) ನಡೆಸಿದ ಪ್ರಾಥಮಿಕ ಪರೀಕ್ಷೆಯನ್ನು ಮರುಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಬಿಪಿಎಸ್‌ಸಿ ಅಭ್ಯರ್ಥಿಗಳ ನಿಯೋಗವು ಸೋಮವಾರ ಬಿಹಾರದ ಮುಖ್ಯ ಕಾರ್ಯದರ್ಶಿ ಅಮೃತ್ ಲಾಲ್ ಮೀನಾ ಅವರನ್ನು ಭೇಟಿ ಮಾಡಿದೆ. ಆದರೆ ಸಭೆಯು ಫಲಪ್ರದವಾಗಿಲ್ಲ ಎಂದು ವರದಿಯಾಗಿದೆ.

ಡಿಸೆಂಬರ್ 18 ರಿಂದ ನೂರಾರು ಅಭ್ಯರ್ಥಿಗಳು ತಮ್ಮ ಬೇಡಿಕೆಯನ್ನು ಮುಂದಿಟ್ಟು ಆಂದೋಲನ ನಡೆಸುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿ ಮೀನಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ವಿದ್ಯಾರ್ಥಿಗಳು, ತಮ್ಮ ಬೇಡಿಕೆಗಳನ್ನು ಪರಿಹರಿಸಲು ಸರ್ಕಾರ ಯಾವುದೇ ದೃಢವಾದ ಭರವಸೆ ಅಥವಾ ಕಾಲವಕಾಶವನ್ನು ನೀಡಿಲ್ಲ ಎಂದು ಹೇಳಿದ್ದಾರೆ. ಬಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರತಿಭಟನಾ ನಿರತ ವಿದ್ಯಾರ್ಥಿಗಳು, ಮರು ಪರೀಕ್ಷೆ ನಡೆಸುವಂತೆ, ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ಆದೇಶಿಸುವಂತೆ ಮತ್ತು ಹನ್ನೆರಡು ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವಂತೆ ಆಗ್ರಹಿಸುತ್ತಿದ್ದಾರೆ.

ಈ ನಡುವೆ, ಜನ್ ಸ್ವಾರಾಜ್ ಪಾರ್ಟಿ (ಜೆಎಸ್‌ಪಿ) ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರಕ್ಕೆ 48 ಗಂಟೆಗಳ ಸಮಯಾವಕಾಶ ನೀಡಿದ್ದು, ಇಲ್ಲದಿದ್ದರೆ ವಿದ್ಯಾರ್ಥಿಗಳು ಹೆಚ್ಚಿನ ತೀವ್ರತೆಯೊಂದಿಗೆ ಪ್ರತಿಭಟನೆಯನ್ನು ಪುನರಾರಂಭಿಸುತ್ತಾರೆ ಎಂದು ಹೇಳಿದ್ದಾರೆ.

ಖಾಲಿ ಇರುವ ಹುದ್ದೆಗಳಿಗೆ ಬಿಪಿಎಸ್‌ಸಿ ನಡೆಸುವ ಪರೀಕ್ಷೆಯ ಮೂಲಕ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿರುವುದು ಗೊತ್ತಾಗಿದೆ ಎಂದು ಕಿಶೋರ್‌ ಬೆಳಗ್ಗೆ ಆರೋಪಿಸಿದ್ದಾರೆ. ಜಲಫಿರಂಗಿಗಳು, ಪೊಲೀಸರು ಮತ್ತು ಲಾಠಿ ಪ್ರಹಾರವನ್ನು ಎದುರಿಸಿ ವಿದ್ಯಾರ್ಥಿಗಳು ಕೊರೆಯುವ ಚಳಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇನ್ನೂ ಮೌನ ವಹಿಸಿರುವ ಬಗ್ಗೆ ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಮುಖ್ಯ ಕಾರ್ಯದರ್ಶಿ ಅಮೃತ್ ಲಾಲ್ ಮೀನಾ ಅವರನ್ನು ಭೇಟಿ ಮಾಡಿದ ನಿಯೋಗದ ಭಾಗವಾಗಿದ್ದ ವಿದ್ಯಾರ್ಥಿ ಮುಖಂಡರೊಬ್ಬರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯ ಕಾರ್ಯದರ್ಶಿ ತಮ್ಮ ಬೇಡಿಕೆಗಳನ್ನು ಆಲಿಸಿದರು ಆದರೆ ಯಾವುದೇ ಖಚಿತ ಭರವಸೆ ನೀಡಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟ್ರಾವೆಲ್ ಏಜೆನ್ಸಿ ವಂಚನೆ – ಮದೀನಾದಲ್ಲಿ ಪರದಾಡುತ್ತಿರುವ ಕರಾವಳಿಯ 160 ಉಮ್ರಾ ಯಾತ್ರಾರ್ಥಿಗಳು

https://naanugauri.com/travel-agency-fraud-medina-paradadu-coast-umrah-pilgrim/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...