Homeಮುಖಪುಟಬಿಹಾರದಾದ್ಯಂತ ಧಾರ್ಮಿಕ ‘ಪವಿತ್ರ ಸ್ನಾನ’ದ ವೇಳೆ 37 ಮಕ್ಕಳು ಸೇರಿದಂತೆ 43 ಸಾವು!

ಬಿಹಾರದಾದ್ಯಂತ ಧಾರ್ಮಿಕ ‘ಪವಿತ್ರ ಸ್ನಾನ’ದ ವೇಳೆ 37 ಮಕ್ಕಳು ಸೇರಿದಂತೆ 43 ಸಾವು!

ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಆಚರಿಸುವ ಹಬ್ಬದಲ್ಲಿ ದುರ್ಘಟನೆ

- Advertisement -
- Advertisement -

ಮೂರು ದಿನಗಳ ಕಾಲ ನಡೆಯುವ ‘ಜೀವಿತಪುತ್ರಿಕಾ’ ಹಬ್ಬದ ಆಚರಣೆಯಲ್ಲಿ ಬಿಹಾರದಾದ್ಯಂತ ನದಿಗಳು ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುವ ವೇಳೆ 37 ಮಕ್ಕಳು ಸೇರಿದಂತೆ 46 ಜನರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಗುರುವಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ. ಮೃತಪಟ್ಟ 46 ಮಂದಿಯಲ್ಲಿ ನಾಲ್ವರು ಮಹಿಳೆಯರು ಸೇರಿದ್ದಾರೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023ರಲ್ಲಿ ರಾಜ್ಯದಲ್ಲಿ ‘ಜೀವಿತಪುತ್ರಿಕ’ ಹಬ್ಬದ ಆಚರಣೆ ವೇಳೆ ಒಟ್ಟು 22 ಮಂದಿ ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಮಹಿಳೆಯರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಉಪವಾಸವನ್ನು ಆಚರಿಸುತ್ತಾರೆ. ಮೂರು ದಿನಗಳ ಈ ಉತ್ಸವವು ‘ನಹಯ್ ಖಯ್’ ನೊಂದಿಗೆ ಪ್ರಾರಂಭವಾಗುತ್ತದೆ ಮತ್ತು ಈ ಸಂದರ್ಭದಲ್ಲಿ ಭಕ್ತರು ನದಿಗಳು ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ.

ಇದನ್ನೂ ಓದಿ: ‘ಬಿಜೆಪಿ ರಕ್ತದಲ್ಲಿ ಕೋಮುವಾದ ಸೇರಿಕೊಂಡಿರುವ ಹಾಗೆ ಅಂತರ್‌ಕಲಹವೂ ಇದೆ..’; ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬುಧವಾರ ಆಚರಿಸಲಾದ ಉತ್ಸವದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಸಾವುಗಳು ವರದಿಯಾಗಿವೆ. ಇಲ್ಲಿಯವರೆಗೆ ಒಟ್ಟು 43 ಮೃತದೇಹಗಳು ಸಿಕ್ಕಿದ್ದು, ಮತ್ತಷ್ಟು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಬಿಹಾರ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ. ಪೂರ್ವ ಚಂಪಾರಣ್, ಪಶ್ಚಿಮ ಚಂಪಾರಣ್, ಔರಂಗಾಬಾದ್, ನಳಂದಾ, ಕೈಮೂರ್, ಬಕ್ಸರ್, ಸಿವಾನ್, ರೋಹ್ತಾಸ್, ಸರನ್, ಪಾಟ್ನಾ, ವೈಶಾಲಿ, ಮುಜಾಫರ್‌ಪುರ, ಸಮಸ್ತಿಪುರ್, ಗೋಪಾಲ್‌ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ಘಟನೆಗಳು ಸಂಭವಿಸಿವೆ.

ಔರಂಗಾಬಾದ್‌ನಲ್ಲಿ ಎಂಟು, ಕೈಮೂರ್‌ನಲ್ಲಿ ಏಳು, ಪಾಟ್ನಾ, ಸರನ್, ಪೂರ್ವ ಚಂಪಾರಣ್‌ನಲ್ಲಿ ತಲಾ ಐದು, ಪಶ್ಚಿಮ ಚಂಪಾರಣ್‌ನಲ್ಲಿ ಮೂರು, ರೋಹ್ತಾಸ್‌ನಲ್ಲಿ ಮೂವರು, ವೈಶಾಲಿ, ಸಮಸ್ತಿಪುರ್ ಮತ್ತು ಮುಜಾಫರ್‌ಪುರದಲ್ಲಿ ತಲಾ ಇಬ್ಬರು, ಗೋಪಾಲ್‌ಗಂಜ್ ಮತ್ತು ಅರ್ವಾಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ ರೂ.4 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ವಿಡಿಯೊ ನೋಡಿ: ಮೀಸಲಾತಿ ಅವರಪ್ಪನ ಮನೆಯ ಸ್ವತ್ತಲ್ಲ: ಮಾವಳ್ಳಿ ಶಂಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...