Homeಮುಖಪುಟಬಿಹಾರದಲ್ಲಿ ಮತ್ತೊಮ್ಮೆ ಎನ್‌ಡಿಎ ಅಧಿಕಾರದತ್ತ: ಇನ್ನೂ ವಿಶ್ವಾಸವಿದೆ ಎನ್ನುತ್ತಿರುವ ತೇಜಸ್ವಿ ಯಾದವ್

ಬಿಹಾರದಲ್ಲಿ ಮತ್ತೊಮ್ಮೆ ಎನ್‌ಡಿಎ ಅಧಿಕಾರದತ್ತ: ಇನ್ನೂ ವಿಶ್ವಾಸವಿದೆ ಎನ್ನುತ್ತಿರುವ ತೇಜಸ್ವಿ ಯಾದವ್

ಎಡಪಕ್ಷಗಳು 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಸಿಪಿಐ(ಎಂಎಲ್) 14 ಸ್ಥಾನಗಳಲ್ಲಿ, ಸಿಪಿಐ 03 ಮತ್ತು ಸಿಪಿಐ(ಎಂ) 03 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

- Advertisement -
- Advertisement -

ಚುನಾವಣೋತ್ತರ ಸಮೀಕ್ಷೆಗಳು ಮತ್ತು ಇಂದಿನ ಆರಂಭಿಕ ಮುನ್ನಡೆಗಳಿಂದ ಬಿಹಾರದ ಕಿರಿಯ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಆಸೆ ಹೊತ್ತಿದ್ದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಕನಸು ನಿಧಾನವಾಗಿ ಕ್ಷೀಣಿಸುತ್ತಿದೆ. ಸದ್ಯದ ಮತ ಎಣಿಕೆ ವರದಿಗಳ ಆಧಾರದಲ್ಲಿ ಎನ್‌ಡಿಎ 127 ಕ್ಷೇತ್ರಗಳಲ್ಲಿ ಸ್ಪಷ್ಟ ಮುನ್ನಡೆ ಕಾಯ್ದುಕೊಂಡರೆ ಮಹಾಘಟಬಂಧನ್ 103 ಕ್ಕೆ ಕುಸಿದಿದೆ.

ಇಂದು ಬೆಳಿಗ್ಗೆ 9:30ರವರೆಗೂ ಮಹಾಘಟಬಂಧನ್ 125 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿತ್ತು. ಆದರೆ ತದನಂತರ ಎನ್‌ಡಿಎ ಸ್ಪಷ್ಟ ಮುನ್ನಡೆ ಸಾಧಿಸುತ್ತಿದ್ದು ಅಧಿಕಾರದತ್ತ ದಾಪುಗಾಲಿಡುತ್ತಿದೆ. ಅಲ್ಲಿಗೆ ಮತ್ತೊಮ್ಮೆ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗುವುದು ಖಾತರಿಯಾಗುತ್ತಿದೆ.

ಈ ಚುನಾವಣೆಯಲ್ಲಿ ಗಮನಿಸಬೇಕಾದ ಅಂಶವೆಂದರೆ ಬಿಜೆಪಿಯು ಕಳೆದ ಚುನಾವಣೆಗಿಂತ 21ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಯು 20 ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಆದರೂ ಎನ್‌ಡಿಎ ಕಳೆದ ಬಾರಿಗಿಂತ 07 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಸರಳ ಬಹುಮತ ಪಡೆಯುವ ನಿರೀಕ್ಷೆಯಲ್ಲಿದೆ.

ಇನ್ನೊಂದು ಕಡೆ ಮಹಾಘಟಬಂಧನ್‌ನಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಹಿನ್ನಡೆ ಅನುಭವಿಸಿದರೆ ಎಡಪಕ್ಷಗಳು ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಕಳೆದ ಬಾರಿಗಿಂತ ಆರ್‌ಜೆಡಿ 21 ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿದೆ. ಅದೇ ರೀತಿಯಲ್ಲಿ ಕಾಂಗ್ರೆಸ್ 7 ಸ್ಥಾನಗಳಲ್ಲಿ ಹಿನ್ನಡೆ ಅನುಭವಿಸುತ್ತಿದೆ.

ಆಶ್ಚರ್ಯಕರ ರೀತಿಯಲ್ಲಿ ಮಹಾಘಟಬಂಧನ್ ನ ಭಾಗವಾದ ಎಡಪಕ್ಷಗಳು 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಸಿಪಿಐ(ಎಂಎಲ್) 14 ಸ್ಥಾನಗಳಲ್ಲಿ, ಸಿಪಿಐ 03 ಮತ್ತು ಸಿಪಿಐ(ಎಂ) 03 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ಇನ್ನು ಚಿರಾಗ್ ಪಾಸ್ವಾನ್‌ರವರ ಎಲ್‌ಜೆಪಿ 05 ಸ್ಥಾನಗಳಲ್ಲಿ ಮತ್ತು ಇತರರು 08 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸರಳ ಬಹುಮತಕ್ಕೆ 122 ಸ್ಥಾನಗಳು ಅಗತ್ಯವಿದ್ದು ಸದ್ಯದ ಮುನ್ನಡೆ ಟ್ರೆಂಡ್ ಗಮನಿಸಿದರೆ ಎನ್‌ಡಿಎ ಅದನ್ನು ಸುಲಭಕ್ಕೆ ಮುಟ್ಟುವಂತೆ ತೋರುತ್ತಿದೆ.


ಇದನ್ನೂ ಓದಿ: ಮಧ್ಯಪ್ರದೇಶ ಉಪಚುನಾವಣೆ: ಬಿಜೆಪಿ- 18, ಕಾಂಗ್ರೆಸ್- 9 ಸ್ಥಾನಗಳಲ್ಲಿ ಮುನ್ನೆಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...