Homeಮುಖಪುಟಬಿಹಾರ: NDA ಮುನ್ನಡೆಯಲ್ಲಿ ಡಿಢೀರ್ ಕುಸಿತ - ಮೇಲೇಳುತ್ತಿರುವ ಮಹಾಘಟಬಂಧನ್!

ಬಿಹಾರ: NDA ಮುನ್ನಡೆಯಲ್ಲಿ ಡಿಢೀರ್ ಕುಸಿತ – ಮೇಲೇಳುತ್ತಿರುವ ಮಹಾಘಟಬಂಧನ್!

ಆರ್‌ಜೆಡಿ ಬಿಜೆಪಿಯನ್ನು ಹಿಂದಿಕ್ಕಿ ಅತಿ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಹೊಂದಿರುವ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸದ್ಯ ಅದು 75 ಕ್ಷೇತ್ರಗಳಲ್ಲಿ ಮುಂದಿದೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆ ಮತ ಎಣಿಕೆ ದಿಢೀರ್ ತಿರುವುಗಳನ್ನು ನೀಡುತ್ತಿದೆ. ಬೆಳಿಗ್ಗೆ ಮತ ಎಣಿಕೆ ಶುರುವಾದಾಗ ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡು ನಂತರ ದಿಢೀರ್ ಕುಸಿತ ಕಂಡಿದ್ದ ಮಹಾಘಟಬಂಧನ್ ಮತ್ತೆ ಮೇಲೇಳುತ್ತಿದೆ. ಬೆಳಿಗ್ಗೆ 10 ಗಂಟೆಯಿಂದಲೂ ಸತತ ಮುನ್ನಡೆ ಕಾಯ್ದುಕೊಂಡಿದ್ದ ಎನ್‌ಡಿಎ ಕ್ರಮೇಣ ಕುಸಿಯುತ್ತಿದೆ. ಒಟ್ಟಿನಲ್ಲಿ ಮುನ್ನಡೆ-ಹಿನ್ನಡೆಯ ಹಗ್ಗ ಜಗ್ಗಾಟ ಶುರುವಾಗಿದೆ.

ಸದ್ಯದ ಟ್ರೆಂಡ್ ಪ್ರಕಾರ ಎನ್‌ಡಿಎ ಈಗಲೂ 122 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 130 ರಿಂದ ಅದು 120ರವರೆಗೆ ಕುಸಿದಿತ್ತು. ಇನ್ನು ಮಹಾಘಟಬಂಧನ್ 100 ರಿಂದ 113 ಸ್ಥಾನಕ್ಕೆ ಏರಿ ಮುನ್ನಡೆ ಸಾಧಿಸಿದೆ. ಆರ್‌ಜೆಡಿ ಬಿಜೆಪಿಯನ್ನು ಹಿಂದಿಕ್ಕಿ ಅತಿ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಹೊಂದಿರುವ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸದ್ಯ ಅದು 75 ಕ್ಷೇತ್ರಗಳಲ್ಲಿ ಮುಂದಿದೆ. ಬಿಜೆಪಿ 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಆದರೆ ಮತ ಎಣಿಕೆಯು ರಾತ್ರಿವರೆಗೂ ಮುಂದುವರೆಯಬಹದು ಎಂದು ಚುನಾವಣಾ ಆಯೋಗ ತಿಳಿಸಿದೆ. 62.5% ಮತ ಎಣಿಕೆ ಮುಗಿದಿದ್ದು ಒಟ್ಟು ಚಲಾವಣೆಯಾದ 4.16 ಕೋಟಿ ಮತಗಳಲ್ಲಿ ಇದುವರೆಗೂ ಕೇವಲ 2.60 ಮತ ಎಣಿಕೆ ಅಷ್ಟೇ ಮುಗಿದಿದೆ. ಅಂದರೆ ಇನ್ನೂ ಒಂದೂವರೆ ಕೋಟಿ ಮತ ಎಣಿಕೆ ಬಾಕಿ ಇದೆ. 

ಕೂತೂಹಲಕಾರಿಯಾಗಿ ಬಿಹಾರದ 20 ಕ್ಷೇತ್ರಗಳಲ್ಲಿ ನೇರ ಪೈಪೋಟಿ ಏರ್ಪಟ್ಟಿದೆ. ಅಲ್ಲಿ ಕೇವಲ ಎರಡು ಪಕ್ಷಗಳ ನಡುವೆ ಕೇವಲ 1000 ಮತಗಳ ವ್ಯತ್ಯಾಸ ಕಂಡುಬಂದಿದೆ. ಇನ್ನೂ 73 ಕ್ಷೇತ್ರಗಳಲ್ಲಿ 5000 ಮತಗಳ ವ್ಯತ್ಯಾಸವಿದೆ. ಹಾಗಾಗಿ ಫಲಿತಾಂಶ ಯಾವ ಕ್ಷಣದಲ್ಲಿ ಬೇಕಾದರೂ ಯಾರ ಪರವಾದರೂ ವಾಲುವ ಸಾಧ್ಯತೆ ಇದೆ.

ಈಗಾಗಿಯೇ ಆರ್‌ಜೆಡಿ ಸರ್ಕಾರ ತಮ್ಮದೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ. “ಆರಂಭಿಕ ಸುತ್ತಿನ ಎಣಿಕೆಯಲ್ಲಿ ಎನ್‌ಡಿಎ ಸ್ಪಷ್ಟ ಮುನ್ನಡೆ ಸಾಧಿಸಿದ್ದರೂ ಸಹ, ನಾವು ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಭರವಸೆ ಇದೆ. ತಡರಾತ್ರಿಯವರೆಗೆ ಎಣಿಕೆ ಮುಂದುವರಿಯುತ್ತದೆ. ನಮ್ಮ ಸರ್ಕಾರ ದೃಢ ಪಟ್ಟಿದೆ. ಬಿಜೆಪಿ ಬದಲಾಯಿಸಲು ಜನ ಮತ ಹಾಕಿದ್ದಾರೆ. ಎಣಿಕೆ ಮುಗಿಯುವವರೆಗೂ ಎಲ್ಲಾ ಅಭ್ಯರ್ಥಿಗಳನ್ನು ಎಣಿಕೆ ಕೇಂದ್ರಗಳಲ್ಲಿ ಇರಲು ಕೇಳಲಾಗುತ್ತಿದೆ” ಎಂದು ಪಕ್ಷವು ಟ್ವೀಟ್ ಮಾಡಿದೆ.


ಇದನ್ನೂ ಓದಿ: ತಡರಾತ್ರಿಯವರೆಗೆ ಎಣಿಕೆ ಮುಂದುವರಿಯುತ್ತದೆ. ಸರ್ಕಾರ ನಮ್ಮದೆ: RJD ವಿಶ್ವಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...