Homeಕರೋನಾ ತಲ್ಲಣಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

"ಜನರು ಏನನ್ನಾದರೂ ಒಳ್ಳೆಯದನ್ನು ನಿರೀಕ್ಷಿಸುತ್ತಿರಬಹುದು. ನಮ್ಮ ಭಾರತದಲ್ಲಿ ಜನರು ಸಾಕಷ್ಟು ಭರವಸೆ ಹೊಂದಿದ್ದಾರೆ. ಜನ ಕೆಲವೊಮ್ಮೆ ಎಂಥವರಿಗೂ ಎರಡನೇ, ಮೂರನೆಯ ಅವಕಾಶವನ್ನು ನೀಡುತ್ತಾರೆ.’

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಹಠಾತ್ತನೆ ಘೋಷಿಸಲಾದ ರಾಷ್ಟ್ರವಾಪಿ ಲಾಕ್‌ಡೌನ್‌ನಿಂದ ತೀವ್ರ ತೊಂದರೆಗೆ ಒಳಗಾದವರು ಬಿಹಾರ, ಉತ್ತರಪ್ರದೇಶದ ವಲಸೆ ಕಾರ್ಮಿಕರು. ಆಗ ವಲಸೆ ಕಾರ್ಮಿಕರು, ಜನ ಸಾಮಾನ್ಯರು ಆಢಳಿತರೂಢ ಎನ್‌ಡಿಎ ಸರ್ಕಾರದ ವಿರುದ್ಧ ಹಿಡಿ ಶಾಪ ಹಾಕಿದ್ದರು. ಆ ಸಮಯದಲ್ಲಿ ಇವರ ಸಹಾಯಕ್ಕೆ ನಿಂತು ತಮ್ಮ ತಮ್ಮ ಸ್ವಂತ ಸ್ಥಳಗಳಿಗೆ ಮರಳಲು ಸಹಾಯ ಮಾಡಿ ನಿಜ ಹೀರೋ ಎನಿಸಿಕೊಂಡಿದ್ದು ನಟ ಸೋನು ಸೂದ್. ಅವರೀಗ ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ್ದಾರೆ.

ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ನಟ ಸೋನು ಸೂದ್ ವಿವರಿಸಿದ್ದು ಹೀಗೆ, “ಬಿಹಾರದ ಜನರು ಸರ್ಕಾರ ಲಾಕ್‌ಡೌನ್ ಸಮಯದಲ್ಲಿ ಅವರಿಗೆ ಏನು ಮಾಡಿತೋ ಅದರಲ್ಲೂ ಏನೋ ಒಳ್ಳೆಯದನ್ನೇ ನೋಡಿರಬೇಕು” ಎಂದು ಹೇಳಿದ್ದಾರೆ.

“ಜನರು ಏನನ್ನಾದರೂ ಒಳ್ಳೆಯದನ್ನು ನಿರೀಕ್ಷಿಸುತ್ತಿರಬಹುದು. ನಮ್ಮ ಭಾರತದಲ್ಲಿ ಜನರು ಸಾಕಷ್ಟು ಭರವಸೆ ಹೊಂದಿದ್ದಾರೆ. ಜನ ಕೆಲವೊಮ್ಮೆ ಎಂಥವರಿಗೂ ಎರಡನೇ, ಮೂರನೆಯ ಅವಕಾಶವನ್ನು ನೀಡುತ್ತಾರೆ. ಜೊತೆಗೆ ತಮ್ಮ ಜೀವನಕ್ಕೆ ಭದ್ರ ಬುನಾದಿ ಬೇಕೆಂದು ಬಯಸುತ್ತಾರೆ” ಎಂದು ಸೂದ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) 43 ಸ್ಥಾನಗಳನ್ನು ಗೆದ್ದಿದ್ದರೂ ಸಹ, ಮಿತ್ರಪಕ್ಷ ಬಿಜೆಪಿಯ 74 ಸ್ಥಾನಗಳೊಂದಿಗೆ, ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)  125 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಮರಳಿದೆ.

ಮುಂಬೈ ಮತ್ತು ಮಹಾರಾಷ್ಟ್ರದ ಇತರ ಭಾಗಗಳಿಂದ ಬಸ್ಸುಗಳನ್ನು ಬಾಡಿಗೆಗೆ ಪಡೆಯುವ ಮೂಲಕ ಹೆಚ್ಚಿನ ಸಂಖ್ಯೆಯ ವಲಸಿಗರು ಅದರಲ್ಲೂ ಮುಖ್ಯವಾಗಿ ಬಿಹಾರ ಮತ್ತು ಉತ್ತರ ಪ್ರದೇಶಕದ ಕಾರ್ಮಿಕರು ತಮ್ಮ ಊರಿಗೆ  ಮರಳಲು ಸೋನು ಸೂದ್ ಸಹಾಯ ಮಾಡಿದ್ದರು. “ನಾನು ಬಿಹಾರದ ಬಹಳಷ್ಟು ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ನೀವು ಶಿಕ್ಷಣ ಅಥವಾ ಮೂಲಸೌಕರ್ಯ ಸೌಲಭ್ಯಗಳ ಬಗ್ಗೆ ಮಾತನಾಡಿದರೇ ನಿಜಕ್ಕೂ ಅವರು ತೀರಾ ಕೆಟ್ಟ ಸ್ಥಿತಿಯಲ್ಲಿದ್ದಾರೆ” ಎಂದು ನಟ ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ತಿಳಿಸುತ್ತಾರೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

“ಯಾರು ಗೆದ್ದರು ಎಂಬುದು ಮುಖ್ಯವಲ್ಲ, ಐದು ವರ್ಷಗಳ ನಂತರ ನಾವು ಬೇರೆ ಬಿಹಾರವನ್ನು ಹೊಂದಿರಬೇಕು ಎಂಬುದು ಮುಖ್ಯ ಎಂದು ನಾನು ಭಾವಿಸುತ್ತೇನೆ ಮತ್ತು ನಂಬುತ್ತೇನೆ. ಜನರು ತಾವು ಆಯ್ಕೆ ಮಾಡಿದ  ಸರ್ಕಾರದ ಬಗ್ಗೆ ಅವರು ಹೆಮ್ಮೆ ಪಡಬೇಕು” ಎಂದು ತಿಳಿಸಿದರು.

ಕೊರೊನಾವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರ ನೆರವಿಗೆ ನಿಂತ ಸೋನು ಸೂದ್ ಪ್ರಯತ್ನಗಳಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅವರ ಮಾನವೀಯ ಪ್ರಯತ್ನಗಳಿಗಾಗಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ. ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯದ ಅಗತ್ಯವಿರುವವರಿಗೆ ಸಹಾಯ ಮಾಡಲು ಲಾಕ್‌ಡೌನ್ ಸಮಯದಲ್ಲಿ ಟೋಲ್-ಫ್ರೀ ಸಹಾಯವಾಣಿಯನ್ನು ಸಹ ಪ್ರಾರಂಭಿಸಿದ್ದರು.


ಇದನ್ನೂ ಓದಿ: ಬಿಹಾರ: ‘ವಲಸೆ ಕಾರ್ಮಿಕರು’ ನಿತೀಶ್‌ ಕುಮಾರ್ ವಿರುದ್ಧ ಮತಚಲಾಯಿಸಿದ್ದಾರೆ- ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...