Homeಕರೋನಾ ತಲ್ಲಣಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

ಬಿಹಾರ ಫಲಿತಾಂಶ: ಜನ ಕೆಲವೊಮ್ಮೆ ಎರಡನೇ ಅವಕಾಶ ನೀಡುತ್ತಾರೆ- ಸೋನು ಸೂದ್

"ಜನರು ಏನನ್ನಾದರೂ ಒಳ್ಳೆಯದನ್ನು ನಿರೀಕ್ಷಿಸುತ್ತಿರಬಹುದು. ನಮ್ಮ ಭಾರತದಲ್ಲಿ ಜನರು ಸಾಕಷ್ಟು ಭರವಸೆ ಹೊಂದಿದ್ದಾರೆ. ಜನ ಕೆಲವೊಮ್ಮೆ ಎಂಥವರಿಗೂ ಎರಡನೇ, ಮೂರನೆಯ ಅವಕಾಶವನ್ನು ನೀಡುತ್ತಾರೆ.’

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಹಿನ್ನೆಲೆ ಹಠಾತ್ತನೆ ಘೋಷಿಸಲಾದ ರಾಷ್ಟ್ರವಾಪಿ ಲಾಕ್‌ಡೌನ್‌ನಿಂದ ತೀವ್ರ ತೊಂದರೆಗೆ ಒಳಗಾದವರು ಬಿಹಾರ, ಉತ್ತರಪ್ರದೇಶದ ವಲಸೆ ಕಾರ್ಮಿಕರು. ಆಗ ವಲಸೆ ಕಾರ್ಮಿಕರು, ಜನ ಸಾಮಾನ್ಯರು ಆಢಳಿತರೂಢ ಎನ್‌ಡಿಎ ಸರ್ಕಾರದ ವಿರುದ್ಧ ಹಿಡಿ ಶಾಪ ಹಾಕಿದ್ದರು. ಆ ಸಮಯದಲ್ಲಿ ಇವರ ಸಹಾಯಕ್ಕೆ ನಿಂತು ತಮ್ಮ ತಮ್ಮ ಸ್ವಂತ ಸ್ಥಳಗಳಿಗೆ ಮರಳಲು ಸಹಾಯ ಮಾಡಿ ನಿಜ ಹೀರೋ ಎನಿಸಿಕೊಂಡಿದ್ದು ನಟ ಸೋನು ಸೂದ್. ಅವರೀಗ ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ್ದಾರೆ.

ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ನಟ ಸೋನು ಸೂದ್ ವಿವರಿಸಿದ್ದು ಹೀಗೆ, “ಬಿಹಾರದ ಜನರು ಸರ್ಕಾರ ಲಾಕ್‌ಡೌನ್ ಸಮಯದಲ್ಲಿ ಅವರಿಗೆ ಏನು ಮಾಡಿತೋ ಅದರಲ್ಲೂ ಏನೋ ಒಳ್ಳೆಯದನ್ನೇ ನೋಡಿರಬೇಕು” ಎಂದು ಹೇಳಿದ್ದಾರೆ.

“ಜನರು ಏನನ್ನಾದರೂ ಒಳ್ಳೆಯದನ್ನು ನಿರೀಕ್ಷಿಸುತ್ತಿರಬಹುದು. ನಮ್ಮ ಭಾರತದಲ್ಲಿ ಜನರು ಸಾಕಷ್ಟು ಭರವಸೆ ಹೊಂದಿದ್ದಾರೆ. ಜನ ಕೆಲವೊಮ್ಮೆ ಎಂಥವರಿಗೂ ಎರಡನೇ, ಮೂರನೆಯ ಅವಕಾಶವನ್ನು ನೀಡುತ್ತಾರೆ. ಜೊತೆಗೆ ತಮ್ಮ ಜೀವನಕ್ಕೆ ಭದ್ರ ಬುನಾದಿ ಬೇಕೆಂದು ಬಯಸುತ್ತಾರೆ” ಎಂದು ಸೂದ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾದಳ (ಯುನೈಟೆಡ್) 43 ಸ್ಥಾನಗಳನ್ನು ಗೆದ್ದಿದ್ದರೂ ಸಹ, ಮಿತ್ರಪಕ್ಷ ಬಿಜೆಪಿಯ 74 ಸ್ಥಾನಗಳೊಂದಿಗೆ, ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)  125 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಮರಳಿದೆ.

ಮುಂಬೈ ಮತ್ತು ಮಹಾರಾಷ್ಟ್ರದ ಇತರ ಭಾಗಗಳಿಂದ ಬಸ್ಸುಗಳನ್ನು ಬಾಡಿಗೆಗೆ ಪಡೆಯುವ ಮೂಲಕ ಹೆಚ್ಚಿನ ಸಂಖ್ಯೆಯ ವಲಸಿಗರು ಅದರಲ್ಲೂ ಮುಖ್ಯವಾಗಿ ಬಿಹಾರ ಮತ್ತು ಉತ್ತರ ಪ್ರದೇಶಕದ ಕಾರ್ಮಿಕರು ತಮ್ಮ ಊರಿಗೆ  ಮರಳಲು ಸೋನು ಸೂದ್ ಸಹಾಯ ಮಾಡಿದ್ದರು. “ನಾನು ಬಿಹಾರದ ಬಹಳಷ್ಟು ಜನರೊಂದಿಗೆ ಸಂಪರ್ಕ ಹೊಂದಿದ್ದೇನೆ. ನೀವು ಶಿಕ್ಷಣ ಅಥವಾ ಮೂಲಸೌಕರ್ಯ ಸೌಲಭ್ಯಗಳ ಬಗ್ಗೆ ಮಾತನಾಡಿದರೇ ನಿಜಕ್ಕೂ ಅವರು ತೀರಾ ಕೆಟ್ಟ ಸ್ಥಿತಿಯಲ್ಲಿದ್ದಾರೆ” ಎಂದು ನಟ ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ತಿಳಿಸುತ್ತಾರೆ.

ಇದನ್ನೂ ಓದಿ: ನಟ ಸೋನು ಸೂದ್ ಮಾನವೀಯ ಕಾರ್ಯಕ್ಕೆ ವಿಶ್ವಸಂಸ್ಥೆಯ ಗೌರವ

“ಯಾರು ಗೆದ್ದರು ಎಂಬುದು ಮುಖ್ಯವಲ್ಲ, ಐದು ವರ್ಷಗಳ ನಂತರ ನಾವು ಬೇರೆ ಬಿಹಾರವನ್ನು ಹೊಂದಿರಬೇಕು ಎಂಬುದು ಮುಖ್ಯ ಎಂದು ನಾನು ಭಾವಿಸುತ್ತೇನೆ ಮತ್ತು ನಂಬುತ್ತೇನೆ. ಜನರು ತಾವು ಆಯ್ಕೆ ಮಾಡಿದ  ಸರ್ಕಾರದ ಬಗ್ಗೆ ಅವರು ಹೆಮ್ಮೆ ಪಡಬೇಕು” ಎಂದು ತಿಳಿಸಿದರು.

ಕೊರೊನಾವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರ ನೆರವಿಗೆ ನಿಂತ ಸೋನು ಸೂದ್ ಪ್ರಯತ್ನಗಳಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅವರ ಮಾನವೀಯ ಪ್ರಯತ್ನಗಳಿಗಾಗಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (ಯುಎನ್​ಡಿಪಿ) ದಿಂದ ಎಸ್‌ಡಿಜಿ ವಿಶೇಷ ಮಾನವೀಯ ಕ್ರಿಯಾ ಪ್ರಶಸ್ತಿಯನ್ನು ಪಡೆದಿದ್ದಾರೆ. ಸಾಂಕ್ರಾಮಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯದ ಅಗತ್ಯವಿರುವವರಿಗೆ ಸಹಾಯ ಮಾಡಲು ಲಾಕ್‌ಡೌನ್ ಸಮಯದಲ್ಲಿ ಟೋಲ್-ಫ್ರೀ ಸಹಾಯವಾಣಿಯನ್ನು ಸಹ ಪ್ರಾರಂಭಿಸಿದ್ದರು.


ಇದನ್ನೂ ಓದಿ: ಬಿಹಾರ: ‘ವಲಸೆ ಕಾರ್ಮಿಕರು’ ನಿತೀಶ್‌ ಕುಮಾರ್ ವಿರುದ್ಧ ಮತಚಲಾಯಿಸಿದ್ದಾರೆ- ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...