Homeಮುಖಪುಟಬಿಹಾರದಲ್ಲಿ ಆರ್‌ಜೆಡಿಯ 'ಬಿ' ತಂಡವಾಗಿ ನಾವು ಕೆಲಸ ಮಾಡಲ್ಲ - ಕಾಂಗ್ರೆಸ್

ಬಿಹಾರದಲ್ಲಿ ಆರ್‌ಜೆಡಿಯ ‘ಬಿ’ ತಂಡವಾಗಿ ನಾವು ಕೆಲಸ ಮಾಡಲ್ಲ – ಕಾಂಗ್ರೆಸ್

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಆಡಳಿತರೂಢ ಬಿಜೆಪಿ ಮತ್ತು ಜೆಡಿ(ಯು) ಮೈತ್ರಿಕೂಟವನ್ನು ಮತ್ತಷ್ಟು ಬಲಪಡಿಸುತ್ತಿದೆ. ಆದರೆ, ಮತ್ತೊಂದು ಕಡೆಯಲ್ಲಿ ವಿಪಕ್ಷದ ಮಿತ್ರ ಪಕ್ಷಗಳಾದ ಕಾಂಗ್ರೆಸ್ ಮತ್ತು ಆರ್‌ಜೆಡಿ ವಾಗ್ವಾದಗಳನ್ನು ಪ್ರಾರಂಭಿಸಿವೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ ಆರ್‌ಜೆಡಿಯ ‘ಬಿ’ ತಂಡವಾಗಿ ಕೆಲಸ ಮಾಡುವುದಿಲ್ಲ ಎಂದು ಬಿಹಾರಕ್ಕೆ ಹೊಸದಾಗಿ ನೇಮಕಗೊಂಡ ಪಕ್ಷದ ಉಸ್ತುವಾರಿ ಕೃಷ್ಣ ಅಲ್ಲಾವರು ಅವರು ಹೇಳಿಕೆ ನೀಡಿದ್ದಾರೆ. ಬಿಹಾರದಲ್ಲಿ

ಕೃಷ್ಣಾ ಅವರು ಈ ಹೇಳಿಕೆಯು ವಿರೋಧ ಪಕ್ಷದ ಮೈತ್ರಿಕೂಟದ ಪಾಲುದಾರರಲ್ಲಿ ಸೀಟು ಹಂಚಿಕೆ ಸುಲಭದ ಕೆಲಸವಲ್ಲ ಎಂಬುವುದನ್ನು ಸೂಚಿಸಿದೆ. ಕಳೆದ ಹದಿನೈದು ದಿನಗಳ ಒಳಗೆ ಎರಡನೇ ಬಾರಿಗೆ ಭಾನುವಾರ ಪಾಟ್ನಾ ತಲುಪಿದ್ದ ಕೃಷ್ಣ ಅಲ್ಲಾವರು ಅವರು, “ಬಿಹಾರದಲ್ಲಿ ಕಾಂಗ್ರೆಸ್ ‘ಬಿ’ ತಂಡವಾಗಿ ಕೆಲಸ ಮಾಡುವುದಿಲ್ಲ ಎಂದು ಹೇಳಿದರು. ಬದಲಾಗಿ, ಅದು ‘ಎ’ ತಂಡವಾಗಿ ಕೆಲಸ ಮಾಡುತ್ತದೆ.” ಎಂದು ಹೇಳಿದ್ದಾರೆ.

2020 ರಲ್ಲಿ, ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಆದಾಗ್ಯೂ, ಪಕ್ಷವು 19 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಈ ಬಾರಿ ಪಕ್ಷವೂ ಉತ್ತಮ ಫಲಿತಾಂಶಗಳನ್ನು ಪಡೆಯಲು ಪ್ರಾಥಮಿಕವಾಗಿ ಚುನಾವಣೆಗೆ ಮೊದಲು ಬೂತ್ ಮಟ್ಟದಲ್ಲಿ ತನ್ನ ನೆಲೆಯನ್ನು ಬಲಪಡಿಸುವತ್ತ ಗಮನಹರಿಸುತ್ತದೆ ಎಂದು ಕೃಷ್ಣಾ ಅಲ್ಲಾವರು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಕೃಷ್ಣಾ, ಮಹಾಮೈತ್ರಿಕೂಟದ ಪಾಲುದಾರರ ನಡುವೆ ಸೀಟು ಹಂಚಿಕೆಗಾಗಿ ಮಾತುಕತೆ ಇನ್ನೂ ಆರಂಭವಾಗಿಲ್ಲ. ಆದರೆ ಈ ಬಾರಿ ಪಕ್ಷವು ಜನರ ‘ಬಿ’ ತಂಡವಾಗಿ ಕೆಲಸ ಮಾಡುವುದಿಲ್ಲ ಎಂಬುದು ಖಚಿತ ಎಂದು ಹೇಳಿದ್ದಾರೆ.

ದೆಹಲಿ ಮಾದರಿಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸುವ ಸಾಧ್ಯತೆಯ ಕುರಿತು ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷವು ಚುನಾವಣಾ ಕಾರ್ಯತಂತ್ರವನ್ನು ರೂಪಿಸುವ ಪ್ರಕ್ರಿಯೆಯಲ್ಲಿದೆ ಎಂದು ಹೇಳಿದ್ದಾರೆ. ಬಿಹಾರದಲ್ಲಿ

ತಳಮಟ್ಟದಲ್ಲಿ ಶ್ರಮಿಸುವ ಪಕ್ಷದ ಕಾರ್ಯಕರ್ತರಿಗೆ ಮಾತ್ರ ಸಂಘಟನೆಯಲ್ಲಿ ಸ್ಥಾನಗಳನ್ನು ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಅದೇ ರೀತಿ, ವಿಧಾನಸಭಾ ಚುನಾವಣೆಯಲ್ಲಿ ಕಠಿಣ ಪರಿಶ್ರಮಿಗಳಿಗೆ ಮಾತ್ರ ಟಿಕೆಟ್ ಸಿಗುತ್ತದೆ. ಈ ಉದ್ದೇಶಕ್ಕಾಗಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಾಸ್ತವವಾಗಿ, ಕಾಂಗ್ರೆಸ್ ಗ್ರಾಮ ಮತ್ತು ಬೂತ್ ಮಟ್ಟದಲ್ಲಿ ತನ್ನ ನೆಲೆಯನ್ನು ಬಲಪಡಿಸಲು ಬಯಸಿದೆ ಮತ್ತು ಆರ್‌ಜೆಡಿಯನ್ನು ಅವಲಂಬಿಸಬಾರದು ಎಂದು ಮೂಲಗಳು ತಿಳಿಸಿವೆ. ಡಬಲ್ ಎಂಜಿನ್ ಸರ್ಕಾರವು ಅಭಿವೃದ್ಧಿ ಸಾಧಿಸಲು ವಿಫಲವಾಗಿದ್ದು, ವಾಸ್ತವಿಕವಾಗಿ ‘ಖರತ’ (ಹಳತಾಗಿದೆ) ಎಂಬ ಆರ್‌ಜೆಡಿ ನಾಯಕ ತೇಜಶ್ವಿ ಯಾದವ್ ಅವರ ಹೇಳಿಕೆಯನ್ನು ಕಾಂಗ್ರೆಸ್ ದೃಢೀಕರಿಸಿದ್ದು, ಆಡಳಿತರೂಢ ಪಕ್ಷವು ಜನರ ನಿರೀಕ್ಷೆಗಳನ್ನು ತಲುಪಿಲ್ಲ ಎಂಬುದರಲ್ಲಿ ಸಂದೇಹವಿಲ್ಲ ಎಂದು ಕೃಷ್ಣಾ ಅವರು ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿಯವರ ಪುತ್ರ ನಿಶಾಂತ್ ಕುಮಾರ್ ಅವರ ರಾಜಕೀಯ ಪ್ರವೇಶದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ನಿತೀಶ್ ಅಥವಾ ನಿಶಾಂತ್ ಅವರು ನಿರ್ಧರಿಸಬೇಕು ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  15 ವರ್ಷ ಹಳೆಯ ವಾಹನಗಳಿಗೆ ಇಂಧನ ಸಿಗಲ್ಲ; ದೆಹಲಿ ಬಿಜೆಪಿ ಸರ್ಕಾರದಿಂದ ಮಹತ್ವದ ಘೋಷಣೆ

15 ವರ್ಷ ಹಳೆಯ ವಾಹನಗಳಿಗೆ ಇಂಧನ ಸಿಗಲ್ಲ; ದೆಹಲಿ ಬಿಜೆಪಿ ಸರ್ಕಾರದಿಂದ ಮಹತ್ವದ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...