Homeಮುಖಪುಟಬಿಹಾರ: ಕಾಂಗ್ರೆಸ್ ಸೇರಿದ ಶರದ್ ಯಾದವ್ ಪುತ್ರಿ ಸುಭಾಷಿಣಿ

ಬಿಹಾರ: ಕಾಂಗ್ರೆಸ್ ಸೇರಿದ ಶರದ್ ಯಾದವ್ ಪುತ್ರಿ ಸುಭಾಷಿಣಿ

ಸುಭಾಷಿಣಿ ಜೊತೆ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖಂಡ ಮತ್ತು ಮಾಜಿ ಸಂಸದ ಕಾಳಿ ಪಾಂಡೆ ಕೂಡ  ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ರೆಡಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಬದಲಾವಣೆಗಳು ಆರಂಭವಾಗಿವೆ. ಇಂದು(ಅ.14) ಲೋಕತಾಂತ್ರಿಕ ಜನತಾದಳದ ಮುಖ್ಯಸ್ಥ ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ಯಾದವ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಸುಭಾಷಿಣಿ ಜೊತೆ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖಂಡ ಮತ್ತು ಮಾಜಿ ಸಂಸದ ಕಾಳಿ ಪಾಂಡೆ ಕೂಡ  ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಬಿಹಾರ ಕಾಂಗ್ರೆಸ್ ಮುಖ್ಯಸ್ಥ ಮದನ್ ಮೋಹನ್ ಝಾ ಮತ್ತು ಬಿಹಾರದ ಎಐಸಿಸಿ ಕಾರ್ಯದರ್ಶಿ ದೇವೇಂದ್ರ ಯಾದವ್ ಇಬ್ಬರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಕಾಂಗ್ರೆಸ್‌ಗೆ ಸೇರ್ಪಡೆಯಾದ ಇಬ್ಬರೂ ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಮತ್ತು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೋರಿದ್ದಾರೆ ಎನ್ನಲಾಗಿದೆ.

ಪಕ್ಷ ಸೇರ್ಪಡೆ ನಂತರ ಮಾತನಾಡಿದ ಸುಭಾಷಿಣಿ ಯಾದವ್ ಅವರು “ಬಿಹಾರದಲ್ಲಿ ’ಮಹಾಘಟಬಂಧನ್’ ಮುನ್ನಡೆಸುವ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತಿದ್ದೇನೆ, ಏಕೆಂದರೆ ನನ್ನ ತಂದೆ ಶರದ್ ಯಾದವ್ ಯಾವಾಗಲೂ ಇದನ್ನು ಬೆಂಬಲಿಸುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ಸಮಾಜ ಸೇವಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸುಭಾಷಿಣಿ ಯಾದವ್ ’’ನನಗೆ ಈ ಅವಕಾಶ ನೀಡಿದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಶರದ್ ಯಾದವ್ ಅವರು ಅನಾರೋಗ್ಯ ಹಿನ್ನೆಲೆ ಬಿಹಾರ ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿಲ್ಲ. ಅವರು ಯಾವಾಗಲೂ ’ಮಹಾಘಟಬಂಧನ್ಗೆ’ ಬೆಂಬಲ ನೀಡಿದ್ದಾರೆ. ಈಗ ಇದನ್ನು ಮುನ್ನಡೆಸುವ ಜವಾಬ್ದಾರಿ ನನ್ನದಾಗಿದೆ” ಎಂದರು.

‘1984ರಲ್ಲಿ ಲೋಕಸಭಾ ಸದಸ್ಯರಾಗಿದ್ದ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಬೆಂಬಲ ನೀಡಿದ್ದೆ.  ಈಗ ಕಾಂಗ್ರೆಸ್ ಸೇರಿರುವುದು ಮತ್ತೆ ನನ್ನ ಹಳೆಯ ಮನೆಗೆ ವಾಪಸ್ ಬಂದಂತಾಗಿದೆ’ ಎಂದು ಮಾಜಿ ಸಂಸದ ಕಾಳಿ ಪಾಂಡೆ ಹೇಳಿದ್ದಾರೆ.

1980ರಲ್ಲಿ ಕಾಳಿ ಪಾಂಡೆ  ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಜಯಗಳಿಸಿದರು 1984ರ ಸಂಸತ್ ಚುನಾವಣೆಯಲ್ಲಿ ಗೋಪಾಲ್‌ಗಂಜ್‌ನಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಬಹುಭಾಷಾ ನಟಿ, ರಾಜಕಾರಣಿ ಖುಷ್ಬೂ ಸುಂದರ್ ಕಾಂಗ್ರೆಸ್ ತೊರೆದು ಅ.12 ರಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದ ನಟಿ ’ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಬಯಸುವ ನನ್ನಂತಹ ಜನರನ್ನು ತುಳಿಯಲಾಗುತ್ತಿದೆ ಎಂದಿದ್ದರು. ಜೊತೆಗೆ ’ಪಕ್ಷದಲ್ಲಿ ವಾಸ್ತವ ಪರಿಸ್ಥಿತಿಯ ಅರಿವಿಲ್ಲದವರು ಅಥವಾ ಸಾರ್ವಜನಿಕವಾಗಿ ಗುರುತಿಸಿಕೊಳ್ಳದ ವ್ಯಕ್ತಿಗಳು ನಿಯಂತ್ರಣ ಹೇರುತ್ತಿದ್ದಾರೆ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದರು.


ಇದನ್ನೂ ಓದಿರಾಷ್ಟ್ರ ಮುಂದುವರಿಯಲು ಪ್ರಧಾನಿ ಮೋದಿಯಂತಹ ವ್ಯಕ್ತಿ ಬೇಕು: ಬಿಜೆಪಿ ಸೇರ್ಪಡೆ ಬಳಿಕ ನಟಿ ಖುಷ್ಬೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...