Homeಮುಖಪುಟಬಿಹಾರ: ಕಾಂಗ್ರೆಸ್ ಸೇರಿದ ಶರದ್ ಯಾದವ್ ಪುತ್ರಿ ಸುಭಾಷಿಣಿ

ಬಿಹಾರ: ಕಾಂಗ್ರೆಸ್ ಸೇರಿದ ಶರದ್ ಯಾದವ್ ಪುತ್ರಿ ಸುಭಾಷಿಣಿ

ಸುಭಾಷಿಣಿ ಜೊತೆ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖಂಡ ಮತ್ತು ಮಾಜಿ ಸಂಸದ ಕಾಳಿ ಪಾಂಡೆ ಕೂಡ  ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ರೆಡಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಬದಲಾವಣೆಗಳು ಆರಂಭವಾಗಿವೆ. ಇಂದು(ಅ.14) ಲೋಕತಾಂತ್ರಿಕ ಜನತಾದಳದ ಮುಖ್ಯಸ್ಥ ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ಯಾದವ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಸುಭಾಷಿಣಿ ಜೊತೆ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖಂಡ ಮತ್ತು ಮಾಜಿ ಸಂಸದ ಕಾಳಿ ಪಾಂಡೆ ಕೂಡ  ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. ಬಿಹಾರ ಕಾಂಗ್ರೆಸ್ ಮುಖ್ಯಸ್ಥ ಮದನ್ ಮೋಹನ್ ಝಾ ಮತ್ತು ಬಿಹಾರದ ಎಐಸಿಸಿ ಕಾರ್ಯದರ್ಶಿ ದೇವೇಂದ್ರ ಯಾದವ್ ಇಬ್ಬರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಕಾಂಗ್ರೆಸ್‌ಗೆ ಸೇರ್ಪಡೆಯಾದ ಇಬ್ಬರೂ ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಮತ್ತು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೋರಿದ್ದಾರೆ ಎನ್ನಲಾಗಿದೆ.

ಪಕ್ಷ ಸೇರ್ಪಡೆ ನಂತರ ಮಾತನಾಡಿದ ಸುಭಾಷಿಣಿ ಯಾದವ್ ಅವರು “ಬಿಹಾರದಲ್ಲಿ ’ಮಹಾಘಟಬಂಧನ್’ ಮುನ್ನಡೆಸುವ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತಿದ್ದೇನೆ, ಏಕೆಂದರೆ ನನ್ನ ತಂದೆ ಶರದ್ ಯಾದವ್ ಯಾವಾಗಲೂ ಇದನ್ನು ಬೆಂಬಲಿಸುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: ತ್ರಿಪುರ BJP ಸರ್ಕಾರದಲ್ಲಿ ಬಿರುಕು; ದೆಹಲಿಗೆ ದೌಡಾಯಿಸಿದ ಬಂಡಾಯ ಶಾಸಕರು

ಸಮಾಜ ಸೇವಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸುಭಾಷಿಣಿ ಯಾದವ್ ’’ನನಗೆ ಈ ಅವಕಾಶ ನೀಡಿದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಶರದ್ ಯಾದವ್ ಅವರು ಅನಾರೋಗ್ಯ ಹಿನ್ನೆಲೆ ಬಿಹಾರ ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿಲ್ಲ. ಅವರು ಯಾವಾಗಲೂ ’ಮಹಾಘಟಬಂಧನ್ಗೆ’ ಬೆಂಬಲ ನೀಡಿದ್ದಾರೆ. ಈಗ ಇದನ್ನು ಮುನ್ನಡೆಸುವ ಜವಾಬ್ದಾರಿ ನನ್ನದಾಗಿದೆ” ಎಂದರು.

‘1984ರಲ್ಲಿ ಲೋಕಸಭಾ ಸದಸ್ಯರಾಗಿದ್ದ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಬೆಂಬಲ ನೀಡಿದ್ದೆ.  ಈಗ ಕಾಂಗ್ರೆಸ್ ಸೇರಿರುವುದು ಮತ್ತೆ ನನ್ನ ಹಳೆಯ ಮನೆಗೆ ವಾಪಸ್ ಬಂದಂತಾಗಿದೆ’ ಎಂದು ಮಾಜಿ ಸಂಸದ ಕಾಳಿ ಪಾಂಡೆ ಹೇಳಿದ್ದಾರೆ.

1980ರಲ್ಲಿ ಕಾಳಿ ಪಾಂಡೆ  ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಜಯಗಳಿಸಿದರು 1984ರ ಸಂಸತ್ ಚುನಾವಣೆಯಲ್ಲಿ ಗೋಪಾಲ್‌ಗಂಜ್‌ನಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಬಹುಭಾಷಾ ನಟಿ, ರಾಜಕಾರಣಿ ಖುಷ್ಬೂ ಸುಂದರ್ ಕಾಂಗ್ರೆಸ್ ತೊರೆದು ಅ.12 ರಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದ ನಟಿ ’ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಬಯಸುವ ನನ್ನಂತಹ ಜನರನ್ನು ತುಳಿಯಲಾಗುತ್ತಿದೆ ಎಂದಿದ್ದರು. ಜೊತೆಗೆ ’ಪಕ್ಷದಲ್ಲಿ ವಾಸ್ತವ ಪರಿಸ್ಥಿತಿಯ ಅರಿವಿಲ್ಲದವರು ಅಥವಾ ಸಾರ್ವಜನಿಕವಾಗಿ ಗುರುತಿಸಿಕೊಳ್ಳದ ವ್ಯಕ್ತಿಗಳು ನಿಯಂತ್ರಣ ಹೇರುತ್ತಿದ್ದಾರೆ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದರು.


ಇದನ್ನೂ ಓದಿರಾಷ್ಟ್ರ ಮುಂದುವರಿಯಲು ಪ್ರಧಾನಿ ಮೋದಿಯಂತಹ ವ್ಯಕ್ತಿ ಬೇಕು: ಬಿಜೆಪಿ ಸೇರ್ಪಡೆ ಬಳಿಕ ನಟಿ ಖುಷ್ಬೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...