Homeಮುಖಪುಟಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

ಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

- Advertisement -
- Advertisement -

ಮಹಾ ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಬಜರಂಗದಳದ ದುಷ್ಕರ್ಮಿಗಳು “ಲವ್ ಜಿಹಾದ್” ಎಂಬ ವಿಷಯದಲ್ಲಿ ಬುಧವಾರ ಉದ್ರೇಕಕಾರಿ ಟ್ಯಾಬ್ಲೋವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ ಬಿಹಾರದ ಮುಂಗೇರ್ ಪಟ್ಟಣದಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ ಎಂದು ವರದಿಯಾಗಿದೆ. ಈ ವಿವಾದದ ತನಿಖೆಗೆ ಇಬ್ಬರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ವರದಿ ಹೇಳಿದೆ. ಬಿಹಾರ

ಕನಿಷ್ಠ 50 ಟ್ಯಾಬ್ಲೋಗಳನ್ನು ಒಳಗೊಂಡಿದ್ದ ಶಿವರಾತ್ರಿ ಮೆರವಣಿಗೆಯಲ್ಲಿ “ಲವ್ ಜಿಹಾದ್” ಅನ್ನು ಎತ್ತಿ ತೋರಿಸುವ ಟ್ಯಾಬ್ಲೋ ಇತ್ತು ಎಂದು ವರದಿಯಾಗಿದೆ. ವಿವಾದಿತ ಲವ್ ಜಿಹಾದ್ ಟ್ಯಾಬ್ಲೋದಲ್ಲಿ “ಘೋರ ಚಿತ್ರಗಳು” ಮತ್ತು “ಕೋಮುವಾದಿ” ಸಂದೇಶಗಳನ್ನು ಹೊಂದಿರುವ ವೃತ್ತಪತ್ರಿಕೆ ತುಣುಕುಗಳನ್ನು ಪ್ರದರ್ಶಿಲಾಗಿತ್ತು.

ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಹಾದುಹೋದ ನಂತರ, ಮೆರವಣಿಗೆಯು ಮಂಕೇಶ್ವರ ನಾಥ್ ಮಹಾದೇವ ದೇವಸ್ಥಾನದಲ್ಲಿ ಮುಕ್ತಾಯಗೊಂಡಿತು, ಅಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ತಮ್ಮ ಸಂಘಟನೆಯ ಕೃತ್ಯವನ್ನು ಮುಂಗೇರ್‌ನಲ್ಲಿ ಬಜರಂಗದಳ ಸಂಚಾಲಕ ಸೌರಭ್ ಎಸ್ ಸಂಪಣ್ಣ ಸಮರ್ಥಿಸಿಕೊಂಡಿದ್ದು, ಇದು “ಸಾಮಾಜಿಕ ಸಂದೇಶ”ವನ್ನು ನೀಡುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

“ಯಾವುದೇ ಧರ್ಮವನ್ನು ಟ್ಯಾಬ್ಲೋದಲ್ಲಿ ಹೆಸರಿಸಲಾಗಿಲ್ಲ ಅಥವಾ ದಾಳಿ ಮಾಡಲಾಗಿಲ್ಲ. ಮದುವೆಯ ಹೆಸರಿನಲ್ಲಿ ಹಿಂದೂ ಮಹಿಳೆಯರ ಮೇಲಿನ ದೌರ್ಜನ್ಯದ ಕಡೆಗೆ ಜನರ ಗಮನ ಸೆಳೆಯುವುದು ನಮ್ಮ ಉದ್ದೇಶವಾಗಿತ್ತು.” ಎಂದು ಅವರು ಹೇಳಿದ್ದಾರೆ

ಆದಾಗ್ಯೂ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಅದರ ಮಿತ್ರ ಪಕ್ಷ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು, ಸಂಘಟಕರು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ಎರಡು ಧಾರ್ಮಿಕ ನಂಬಿಕೆಗಳ ಸದಸ್ಯರ ನಡುವೆ ಗಲಭೆಗಳನ್ನು ಸೃಷ್ಟಿಸಲು ಪಿತೂರಿ ನಡೆಸಲಾಗುತ್ತಿದೆ” ಎಂದು ಆರ್‌ಜೆಡಿ ವಕ್ತಾರ ಮೃತ್ಯುಂಜಯ್ ತಿವಾರಿ ಹೇಳಿದ್ದಾರೆ.

ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ನಿತೀಶ್ ಕುಮಾರ್ ಸರ್ಕಾರವನ್ನು ವಿಪಕ್ಷಗಳು ಒತ್ತಾಯಿಸಿವೆ. “ಇಂತಹ ಘಟನೆಗಳನ್ನು ಸಹಿಸಬಾರದು. ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಮೃತ್ಯುಂಜಯ್ ತಿವಾರಿ ಅವರು ಹೇಳಿದ್ದಾರೆ. ಬಿಹಾರ

ಬಿಹಾರ ಕಾಂಗ್ರೆಸ್ ವಕ್ತಾರ ಜ್ಞಾನ್ ರಂಜನ್ ಗುಪ್ತಾ ಇದೇ ರೀತಿಯ ಆತಂಕಗಳನ್ನು ವ್ಯಕ್ತಪಡಿಸಿದ್ದು, “ಭಾರತದ ಸಂವಿಧಾನವು ಯಾವುದೇ ಧರ್ಮವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಕ್ರಮಣ ಮಾಡಲು ಯಾರಿಗೂ ಅನುಮತಿ ನೀಡುವುದಿಲ್ಲ. ಮೆರವಣಿಗೆಯಲ್ಲಿನ ಬಜರಂಗದಳದ ಪೋಸ್ಟರ್ ಕೆಟ್ಟ ಅಭಿರುಚಿಯಿಂದ ಕೂಡಿತ್ತು” ಎಂದು ಹೇಳಿದ್ದಾರೆ.

ಈ ನಡುವೆ, ಬಿಜೆಪಿ ಈ ವಿಷಯದ ಸೂಕ್ಷ್ಮತೆಯನ್ನು ಒಪ್ಪಿಕೊಂಡಿದ್ದು, ಆದರೆ ಟ್ಯಾಬ್ಲೋದಲ್ಲಿ ತೆಗೆದುಕೊಳ್ಳಲಾದ ವಿಧಾನವನ್ನು ಟೀಕಿಸಿದೆ. “ಲವ್ ಜಿಹಾದ್ ಬಹಳ ಕಳವಳಕಾರಿ ವಿಷಯವಾಗಿದೆ. ಆದರೆ ಅದರ ಸಾಮಾಜಿಕ ಸಂದೇಶವನ್ನು ಉತ್ತಮ ರೀತಿಯಲ್ಲಿ ತಿಳಿಸಬಹುದಿತ್ತು. ಕೆಲವು ರಕ್ತಸಿಕ್ತ ಚಿತ್ರಗಳ ಬಳಕೆಯನ್ನು ತಪ್ಪಿಸಬಹುದಿತ್ತು” ಎಂದು ಪಕ್ಷದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

ಈ ನಡುವೆ, ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಅಪರಿಚಿತ ವ್ಯಕ್ತಿಗಳು ಹಿಂದೂ ದೇವತೆಗಳ ವಿಗ್ರಹಗಳನ್ನು ದೇವಸ್ಥಾನದಿಂದ ಹೊರಗೆ ಎಸೆದು ಅರ್ಚಕರ ಗುಡಿಸಲಿಗೆ ಬೆಂಕಿ ಹಚ್ಚಿದ ನಂತರ ಉದ್ವಿಗ್ನತೆ ಹೆಚ್ಚಾಗಿದೆ. ಗಣೇಶ ಮತ್ತು ಕಾರ್ತಿಕೇಯನ ವಿಗ್ರಹಗಳನ್ನು ಅಪವಿತ್ರಗೊಳಿಸಲಾಗಿದ್ದು, ಪರಮಾನಂದಪುರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದ ಘಟನೆ ಬಗ್ಗೆ ತಿಳಿದು ಬಂದಿತ್ತು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಸದರ್) ರಾಮಕೃಷ್ಣ ಅವರು ಹೇಳಿದ್ದಾರೆ. ಬಿಹಾರ

ಯಾವುದೇ ಹೆಚ್ಚಿನ ಗಲಭೆಗಳನ್ನು ತಡೆಗಟ್ಟಲು, ಪ್ರದೇಶದಲ್ಲಿ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಲಾಗಿದೆ ಮತ್ತು ಪೊಲೀಸ್ ಠಾಣೆಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ನವಾಡ ಮತ್ತು ನಳಂದ ಜಿಲ್ಲೆಗಳಿಂದಲೂ ಕೋಮು ಉದ್ವಿಗ್ನತೆ ಘಟನೆಗಳು ವರದಿಯಾಗಿದ್ದು, ನಳಂದದಲ್ಲಿ, ಅಶಾಂತಿಗೆ ಸಂಬಂಧಿಸಿದಂತೆ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ; ಸಾವರ್ಕರ್ ಮೊಮ್ಮಗ ಆಕ್ಷೇಪ!

ರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ; ಸಾವರ್ಕರ್ ಮೊಮ್ಮಗ ಆಕ್ಷೇಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...