Homeಮುಖಪುಟಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

ಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

- Advertisement -
- Advertisement -

ಮಹಾ ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಬಜರಂಗದಳದ ದುಷ್ಕರ್ಮಿಗಳು “ಲವ್ ಜಿಹಾದ್” ಎಂಬ ವಿಷಯದಲ್ಲಿ ಬುಧವಾರ ಉದ್ರೇಕಕಾರಿ ಟ್ಯಾಬ್ಲೋವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ ಬಿಹಾರದ ಮುಂಗೇರ್ ಪಟ್ಟಣದಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ ಎಂದು ವರದಿಯಾಗಿದೆ. ಈ ವಿವಾದದ ತನಿಖೆಗೆ ಇಬ್ಬರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ವರದಿ ಹೇಳಿದೆ. ಬಿಹಾರ

ಕನಿಷ್ಠ 50 ಟ್ಯಾಬ್ಲೋಗಳನ್ನು ಒಳಗೊಂಡಿದ್ದ ಶಿವರಾತ್ರಿ ಮೆರವಣಿಗೆಯಲ್ಲಿ “ಲವ್ ಜಿಹಾದ್” ಅನ್ನು ಎತ್ತಿ ತೋರಿಸುವ ಟ್ಯಾಬ್ಲೋ ಇತ್ತು ಎಂದು ವರದಿಯಾಗಿದೆ. ವಿವಾದಿತ ಲವ್ ಜಿಹಾದ್ ಟ್ಯಾಬ್ಲೋದಲ್ಲಿ “ಘೋರ ಚಿತ್ರಗಳು” ಮತ್ತು “ಕೋಮುವಾದಿ” ಸಂದೇಶಗಳನ್ನು ಹೊಂದಿರುವ ವೃತ್ತಪತ್ರಿಕೆ ತುಣುಕುಗಳನ್ನು ಪ್ರದರ್ಶಿಲಾಗಿತ್ತು.

ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಹಾದುಹೋದ ನಂತರ, ಮೆರವಣಿಗೆಯು ಮಂಕೇಶ್ವರ ನಾಥ್ ಮಹಾದೇವ ದೇವಸ್ಥಾನದಲ್ಲಿ ಮುಕ್ತಾಯಗೊಂಡಿತು, ಅಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ತಮ್ಮ ಸಂಘಟನೆಯ ಕೃತ್ಯವನ್ನು ಮುಂಗೇರ್‌ನಲ್ಲಿ ಬಜರಂಗದಳ ಸಂಚಾಲಕ ಸೌರಭ್ ಎಸ್ ಸಂಪಣ್ಣ ಸಮರ್ಥಿಸಿಕೊಂಡಿದ್ದು, ಇದು “ಸಾಮಾಜಿಕ ಸಂದೇಶ”ವನ್ನು ನೀಡುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

“ಯಾವುದೇ ಧರ್ಮವನ್ನು ಟ್ಯಾಬ್ಲೋದಲ್ಲಿ ಹೆಸರಿಸಲಾಗಿಲ್ಲ ಅಥವಾ ದಾಳಿ ಮಾಡಲಾಗಿಲ್ಲ. ಮದುವೆಯ ಹೆಸರಿನಲ್ಲಿ ಹಿಂದೂ ಮಹಿಳೆಯರ ಮೇಲಿನ ದೌರ್ಜನ್ಯದ ಕಡೆಗೆ ಜನರ ಗಮನ ಸೆಳೆಯುವುದು ನಮ್ಮ ಉದ್ದೇಶವಾಗಿತ್ತು.” ಎಂದು ಅವರು ಹೇಳಿದ್ದಾರೆ

ಆದಾಗ್ಯೂ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಅದರ ಮಿತ್ರ ಪಕ್ಷ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು, ಸಂಘಟಕರು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ಎರಡು ಧಾರ್ಮಿಕ ನಂಬಿಕೆಗಳ ಸದಸ್ಯರ ನಡುವೆ ಗಲಭೆಗಳನ್ನು ಸೃಷ್ಟಿಸಲು ಪಿತೂರಿ ನಡೆಸಲಾಗುತ್ತಿದೆ” ಎಂದು ಆರ್‌ಜೆಡಿ ವಕ್ತಾರ ಮೃತ್ಯುಂಜಯ್ ತಿವಾರಿ ಹೇಳಿದ್ದಾರೆ.

ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ನಿತೀಶ್ ಕುಮಾರ್ ಸರ್ಕಾರವನ್ನು ವಿಪಕ್ಷಗಳು ಒತ್ತಾಯಿಸಿವೆ. “ಇಂತಹ ಘಟನೆಗಳನ್ನು ಸಹಿಸಬಾರದು. ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಮೃತ್ಯುಂಜಯ್ ತಿವಾರಿ ಅವರು ಹೇಳಿದ್ದಾರೆ. ಬಿಹಾರ

ಬಿಹಾರ ಕಾಂಗ್ರೆಸ್ ವಕ್ತಾರ ಜ್ಞಾನ್ ರಂಜನ್ ಗುಪ್ತಾ ಇದೇ ರೀತಿಯ ಆತಂಕಗಳನ್ನು ವ್ಯಕ್ತಪಡಿಸಿದ್ದು, “ಭಾರತದ ಸಂವಿಧಾನವು ಯಾವುದೇ ಧರ್ಮವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಕ್ರಮಣ ಮಾಡಲು ಯಾರಿಗೂ ಅನುಮತಿ ನೀಡುವುದಿಲ್ಲ. ಮೆರವಣಿಗೆಯಲ್ಲಿನ ಬಜರಂಗದಳದ ಪೋಸ್ಟರ್ ಕೆಟ್ಟ ಅಭಿರುಚಿಯಿಂದ ಕೂಡಿತ್ತು” ಎಂದು ಹೇಳಿದ್ದಾರೆ.

ಈ ನಡುವೆ, ಬಿಜೆಪಿ ಈ ವಿಷಯದ ಸೂಕ್ಷ್ಮತೆಯನ್ನು ಒಪ್ಪಿಕೊಂಡಿದ್ದು, ಆದರೆ ಟ್ಯಾಬ್ಲೋದಲ್ಲಿ ತೆಗೆದುಕೊಳ್ಳಲಾದ ವಿಧಾನವನ್ನು ಟೀಕಿಸಿದೆ. “ಲವ್ ಜಿಹಾದ್ ಬಹಳ ಕಳವಳಕಾರಿ ವಿಷಯವಾಗಿದೆ. ಆದರೆ ಅದರ ಸಾಮಾಜಿಕ ಸಂದೇಶವನ್ನು ಉತ್ತಮ ರೀತಿಯಲ್ಲಿ ತಿಳಿಸಬಹುದಿತ್ತು. ಕೆಲವು ರಕ್ತಸಿಕ್ತ ಚಿತ್ರಗಳ ಬಳಕೆಯನ್ನು ತಪ್ಪಿಸಬಹುದಿತ್ತು” ಎಂದು ಪಕ್ಷದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

ಈ ನಡುವೆ, ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಅಪರಿಚಿತ ವ್ಯಕ್ತಿಗಳು ಹಿಂದೂ ದೇವತೆಗಳ ವಿಗ್ರಹಗಳನ್ನು ದೇವಸ್ಥಾನದಿಂದ ಹೊರಗೆ ಎಸೆದು ಅರ್ಚಕರ ಗುಡಿಸಲಿಗೆ ಬೆಂಕಿ ಹಚ್ಚಿದ ನಂತರ ಉದ್ವಿಗ್ನತೆ ಹೆಚ್ಚಾಗಿದೆ. ಗಣೇಶ ಮತ್ತು ಕಾರ್ತಿಕೇಯನ ವಿಗ್ರಹಗಳನ್ನು ಅಪವಿತ್ರಗೊಳಿಸಲಾಗಿದ್ದು, ಪರಮಾನಂದಪುರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದ ಘಟನೆ ಬಗ್ಗೆ ತಿಳಿದು ಬಂದಿತ್ತು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಸದರ್) ರಾಮಕೃಷ್ಣ ಅವರು ಹೇಳಿದ್ದಾರೆ. ಬಿಹಾರ

ಯಾವುದೇ ಹೆಚ್ಚಿನ ಗಲಭೆಗಳನ್ನು ತಡೆಗಟ್ಟಲು, ಪ್ರದೇಶದಲ್ಲಿ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಲಾಗಿದೆ ಮತ್ತು ಪೊಲೀಸ್ ಠಾಣೆಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ನವಾಡ ಮತ್ತು ನಳಂದ ಜಿಲ್ಲೆಗಳಿಂದಲೂ ಕೋಮು ಉದ್ವಿಗ್ನತೆ ಘಟನೆಗಳು ವರದಿಯಾಗಿದ್ದು, ನಳಂದದಲ್ಲಿ, ಅಶಾಂತಿಗೆ ಸಂಬಂಧಿಸಿದಂತೆ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ; ಸಾವರ್ಕರ್ ಮೊಮ್ಮಗ ಆಕ್ಷೇಪ!

ರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ; ಸಾವರ್ಕರ್ ಮೊಮ್ಮಗ ಆಕ್ಷೇಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...