Homeಮುಖಪುಟಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

ಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

- Advertisement -
- Advertisement -

ಮಹಾ ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಬಜರಂಗದಳದ ದುಷ್ಕರ್ಮಿಗಳು “ಲವ್ ಜಿಹಾದ್” ಎಂಬ ವಿಷಯದಲ್ಲಿ ಬುಧವಾರ ಉದ್ರೇಕಕಾರಿ ಟ್ಯಾಬ್ಲೋವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ ಬಿಹಾರದ ಮುಂಗೇರ್ ಪಟ್ಟಣದಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ ಎಂದು ವರದಿಯಾಗಿದೆ. ಈ ವಿವಾದದ ತನಿಖೆಗೆ ಇಬ್ಬರು ಸದಸ್ಯರ ಸಮಿತಿ ರಚಿಸಲಾಗಿದೆ ಎಂದು ವರದಿ ಹೇಳಿದೆ. ಬಿಹಾರ

ಕನಿಷ್ಠ 50 ಟ್ಯಾಬ್ಲೋಗಳನ್ನು ಒಳಗೊಂಡಿದ್ದ ಶಿವರಾತ್ರಿ ಮೆರವಣಿಗೆಯಲ್ಲಿ “ಲವ್ ಜಿಹಾದ್” ಅನ್ನು ಎತ್ತಿ ತೋರಿಸುವ ಟ್ಯಾಬ್ಲೋ ಇತ್ತು ಎಂದು ವರದಿಯಾಗಿದೆ. ವಿವಾದಿತ ಲವ್ ಜಿಹಾದ್ ಟ್ಯಾಬ್ಲೋದಲ್ಲಿ “ಘೋರ ಚಿತ್ರಗಳು” ಮತ್ತು “ಕೋಮುವಾದಿ” ಸಂದೇಶಗಳನ್ನು ಹೊಂದಿರುವ ವೃತ್ತಪತ್ರಿಕೆ ತುಣುಕುಗಳನ್ನು ಪ್ರದರ್ಶಿಲಾಗಿತ್ತು.

ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಹಾದುಹೋದ ನಂತರ, ಮೆರವಣಿಗೆಯು ಮಂಕೇಶ್ವರ ನಾಥ್ ಮಹಾದೇವ ದೇವಸ್ಥಾನದಲ್ಲಿ ಮುಕ್ತಾಯಗೊಂಡಿತು, ಅಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ತಮ್ಮ ಸಂಘಟನೆಯ ಕೃತ್ಯವನ್ನು ಮುಂಗೇರ್‌ನಲ್ಲಿ ಬಜರಂಗದಳ ಸಂಚಾಲಕ ಸೌರಭ್ ಎಸ್ ಸಂಪಣ್ಣ ಸಮರ್ಥಿಸಿಕೊಂಡಿದ್ದು, ಇದು “ಸಾಮಾಜಿಕ ಸಂದೇಶ”ವನ್ನು ನೀಡುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

“ಯಾವುದೇ ಧರ್ಮವನ್ನು ಟ್ಯಾಬ್ಲೋದಲ್ಲಿ ಹೆಸರಿಸಲಾಗಿಲ್ಲ ಅಥವಾ ದಾಳಿ ಮಾಡಲಾಗಿಲ್ಲ. ಮದುವೆಯ ಹೆಸರಿನಲ್ಲಿ ಹಿಂದೂ ಮಹಿಳೆಯರ ಮೇಲಿನ ದೌರ್ಜನ್ಯದ ಕಡೆಗೆ ಜನರ ಗಮನ ಸೆಳೆಯುವುದು ನಮ್ಮ ಉದ್ದೇಶವಾಗಿತ್ತು.” ಎಂದು ಅವರು ಹೇಳಿದ್ದಾರೆ

ಆದಾಗ್ಯೂ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಅದರ ಮಿತ್ರ ಪಕ್ಷ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು, ಸಂಘಟಕರು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. “ಎರಡು ಧಾರ್ಮಿಕ ನಂಬಿಕೆಗಳ ಸದಸ್ಯರ ನಡುವೆ ಗಲಭೆಗಳನ್ನು ಸೃಷ್ಟಿಸಲು ಪಿತೂರಿ ನಡೆಸಲಾಗುತ್ತಿದೆ” ಎಂದು ಆರ್‌ಜೆಡಿ ವಕ್ತಾರ ಮೃತ್ಯುಂಜಯ್ ತಿವಾರಿ ಹೇಳಿದ್ದಾರೆ.

ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶನ ಮಾಡಿರುವ ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ನಿತೀಶ್ ಕುಮಾರ್ ಸರ್ಕಾರವನ್ನು ವಿಪಕ್ಷಗಳು ಒತ್ತಾಯಿಸಿವೆ. “ಇಂತಹ ಘಟನೆಗಳನ್ನು ಸಹಿಸಬಾರದು. ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂದು ಮೃತ್ಯುಂಜಯ್ ತಿವಾರಿ ಅವರು ಹೇಳಿದ್ದಾರೆ. ಬಿಹಾರ

ಬಿಹಾರ ಕಾಂಗ್ರೆಸ್ ವಕ್ತಾರ ಜ್ಞಾನ್ ರಂಜನ್ ಗುಪ್ತಾ ಇದೇ ರೀತಿಯ ಆತಂಕಗಳನ್ನು ವ್ಯಕ್ತಪಡಿಸಿದ್ದು, “ಭಾರತದ ಸಂವಿಧಾನವು ಯಾವುದೇ ಧರ್ಮವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಕ್ರಮಣ ಮಾಡಲು ಯಾರಿಗೂ ಅನುಮತಿ ನೀಡುವುದಿಲ್ಲ. ಮೆರವಣಿಗೆಯಲ್ಲಿನ ಬಜರಂಗದಳದ ಪೋಸ್ಟರ್ ಕೆಟ್ಟ ಅಭಿರುಚಿಯಿಂದ ಕೂಡಿತ್ತು” ಎಂದು ಹೇಳಿದ್ದಾರೆ.

ಈ ನಡುವೆ, ಬಿಜೆಪಿ ಈ ವಿಷಯದ ಸೂಕ್ಷ್ಮತೆಯನ್ನು ಒಪ್ಪಿಕೊಂಡಿದ್ದು, ಆದರೆ ಟ್ಯಾಬ್ಲೋದಲ್ಲಿ ತೆಗೆದುಕೊಳ್ಳಲಾದ ವಿಧಾನವನ್ನು ಟೀಕಿಸಿದೆ. “ಲವ್ ಜಿಹಾದ್ ಬಹಳ ಕಳವಳಕಾರಿ ವಿಷಯವಾಗಿದೆ. ಆದರೆ ಅದರ ಸಾಮಾಜಿಕ ಸಂದೇಶವನ್ನು ಉತ್ತಮ ರೀತಿಯಲ್ಲಿ ತಿಳಿಸಬಹುದಿತ್ತು. ಕೆಲವು ರಕ್ತಸಿಕ್ತ ಚಿತ್ರಗಳ ಬಳಕೆಯನ್ನು ತಪ್ಪಿಸಬಹುದಿತ್ತು” ಎಂದು ಪಕ್ಷದ ಪ್ರತಿನಿಧಿಯೊಬ್ಬರು ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

ಈ ನಡುವೆ, ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಅಪರಿಚಿತ ವ್ಯಕ್ತಿಗಳು ಹಿಂದೂ ದೇವತೆಗಳ ವಿಗ್ರಹಗಳನ್ನು ದೇವಸ್ಥಾನದಿಂದ ಹೊರಗೆ ಎಸೆದು ಅರ್ಚಕರ ಗುಡಿಸಲಿಗೆ ಬೆಂಕಿ ಹಚ್ಚಿದ ನಂತರ ಉದ್ವಿಗ್ನತೆ ಹೆಚ್ಚಾಗಿದೆ. ಗಣೇಶ ಮತ್ತು ಕಾರ್ತಿಕೇಯನ ವಿಗ್ರಹಗಳನ್ನು ಅಪವಿತ್ರಗೊಳಿಸಲಾಗಿದ್ದು, ಪರಮಾನಂದಪುರ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದ ಘಟನೆ ಬಗ್ಗೆ ತಿಳಿದು ಬಂದಿತ್ತು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಸದರ್) ರಾಮಕೃಷ್ಣ ಅವರು ಹೇಳಿದ್ದಾರೆ. ಬಿಹಾರ

ಯಾವುದೇ ಹೆಚ್ಚಿನ ಗಲಭೆಗಳನ್ನು ತಡೆಗಟ್ಟಲು, ಪ್ರದೇಶದಲ್ಲಿ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಲಾಗಿದೆ ಮತ್ತು ಪೊಲೀಸ್ ಠಾಣೆಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ನವಾಡ ಮತ್ತು ನಳಂದ ಜಿಲ್ಲೆಗಳಿಂದಲೂ ಕೋಮು ಉದ್ವಿಗ್ನತೆ ಘಟನೆಗಳು ವರದಿಯಾಗಿದ್ದು, ನಳಂದದಲ್ಲಿ, ಅಶಾಂತಿಗೆ ಸಂಬಂಧಿಸಿದಂತೆ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ; ಸಾವರ್ಕರ್ ಮೊಮ್ಮಗ ಆಕ್ಷೇಪ!

ರಾಹುಲ್ v/s ಸಾವರ್ಕರ್‌ | ನ್ಯಾಯಾಲಯದಲ್ಲಿ ಐತಿಹಾಸಿಕ ದಾಖಲೆ ಪ್ರಸ್ತುತಪಡಿಸಲು ಸಿದ್ಧ ಎಂದ ರಾಹುಲ್ ಗಾಂಧಿ; ಸಾವರ್ಕರ್ ಮೊಮ್ಮಗ ಆಕ್ಷೇಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...