HomeಮುಖಪುಟBihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

Bihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣವನ್ನು ಬಹಿರಂಗಪಡಿಸುವಂತೆ ಚುನಾವಣಾ ಆಯೋಗಕ್ಕೆ ಗುರುವಾರ (ಆ.14) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಪಾಲಿಸುವ ಬದಲು ಚುನಾವಣಾ ಆಯೋಗ ಸಮಜಾಯಿಷಿ ನೀಡುವುದನ್ನು ಮುಂದುವರಿಸಿದ್ದು, ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ವೋಟ್ ಅಧಿಕಾರ್ ಯಾತ್ರಾ’ ಭಾನುವಾರ (ಆ.17) ಬಿಹಾರದಲ್ಲಿ ಪ್ರಾರಂಭಗೊಳ್ಳಲಿದೆ.

ಇದಕ್ಕೂ ಮುನ್ನ ಶನಿವಾರ (ಆ.16) ಹೇಳಿಕೆ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, “ಕಾನೂನು, ನಿಯಮಗಳು ಮತ್ತು ಮಾರ್ಗಸೂಚಿಗಳ ಪ್ರಕಾರ ಅತ್ಯಂತ ಪಾರದರ್ಶಕತೆಯು ಮತದಾರರ ಪಟ್ಟಿ ಪರಿಷ್ಕರಣೆಯ ‘ಹಾಲ್ ಮಾರ್ಕ್’ ಎಂದು ಹೇಳಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮಗಳ ಕುರಿತ ಕಾಂಗ್ರೆಸ್‌ನ ಆರೋಪಗಳನ್ನು ಪರೋಕ್ಷವಾಗಿ ಉಲ್ಲೇಖಿಸಿದ ಚುನಾವಣಾ ಆಯೋಗ,”ಕೆಲ ರಾಜಕೀಯ ಪಕ್ಷಗಳು ಮತ್ತು ಅವುಗಳ ಬೂತ್-ಮಟ್ಟದ ಏಜೆಂಟ್‌ಗಳು (ಬಿಎಲ್‌ಎಗಳು) ಸೂಕ್ತ ಸಮಯದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಲಿಲ್ಲ ಮತ್ತು ದೋಷಗಳಿದ್ದರೆ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು /ಚುನಾವಣಾ ನೋಂದಣಿ ಅಧಿಕಾರಿಗಳು, ಜಿಲ್ಲಾ ಚುನಾವಣಾ ಅಧಿಕಾರಿಗಳು ಅಥವಾ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿಲ್ಲ ಎಂದು ತೋರುತ್ತದೆ” ಎಂದಿದೆ.

ಈ ಮೂಲಕ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡಿದೆ. ಆದರೆ, ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿಲ್ಲ.

ಚುನಾವಣಾ ಆಯೋಗದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್,”ಮತ ಕಳ್ಳತನ ಮತ್ತು ಸಾಮೂಹಿಕ ಅಕ್ರಮಗಳ ಗಂಭೀರ ಆರೋಪಗಳ ನಡುವೆಯೂ, ಚುನಾವಣಾ ಆಯೋಗವು ತನ್ನ ಎಲ್ಲಾ ಜವಾಬ್ದಾರಿಗಳನ್ನು ನಿರ್ಲಕ್ಷಿಸುವ ಮೂಲಕ ನಾಚಿಕೆಯಿಲ್ಲದೆ ಮಿತಿಗಳನ್ನು ಮೀರಿದೆ. ಸಾಂವಿಧಾನಿಕ ಅಧಿಕಾರಿಗಳು ಪ್ರಾಮಾಣಿಕತೆಯ ಸಂಕೇತವಾಗಿರಬೇಕು. ತಮ್ಮ ತಪ್ಪನ್ನು ಮರೆಮಾಚಲು ಪ್ರಜಾಪ್ರಭುತ್ವವನ್ನು ನಾಶಮಾಡುವ ಅಸ್ಪಷ್ಟ ಪತ್ರಿಕಾ ಹೇಳಿಕೆಗಳ ಹಿಂದೆ ಅಡಗಿಕೊಳ್ಳಬಾರದು” ಎಂದಿದ್ದಾರೆ.

“ಪತ್ರಿಕಾ ಹೇಳಿಕೆಯ ಸ್ವರ ಮತ್ತು ಸ್ವರೂಪವು, ಬಿಜೆಪಿ ನಿಯಂತ್ರಿತ ಚುನಾವಣಾ ಸಂಸ್ಥೆಯಿಂದ ನಡೆದಿದೆ ಎನ್ನಲಾದ ಸಾಮೂಹಿಕ ಮತದಾನ ವಂಚನೆಯ ಬಗ್ಗೆ ಸಾರ್ವಜನಿಕರ ಗಂಭೀರ ಕಳವಳಗಳನ್ನು ಪರಿಹರಿಸಲು ಚುನಾವಣಾ ಆಯೋಗ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂಬ ಹೆಚ್ಚಿನ ಅನುಮಾನಗಳನ್ನು ಹುಟ್ಟುಹಾಕುತ್ತದೆ” ಎಂದು ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

“ಚುನಾವಣಾ ಆಯೋಗ ಮತದಾರರ ಪಟ್ಟಿಯ ಪರಿಶೀಲನೆಯನ್ನು ಸ್ವಾಗತಿಸುತ್ತದೆ ಎಂದಾದರೆ, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಅಧಿಕಾರಿಗಳು ಪಕ್ಷಗಳಿಗೆ ಮೆಶಿನ್ ರೀಡೇಬಲ್ ಮತದಾರರ ಪಟ್ಟಿಯನ್ನು ನೀಡಲು ಏಕೆ ನಿರಾಕರಿಸುತ್ತಿದ್ದಾರೆ? ಸಿಸಿಟಿವಿ ದೃಶ್ಯಾವಳಿಗಳನ್ನು ಏಕೆ ಅಳಿಸಲಾಗುತ್ತಿದೆ ಎಂಬುದರ ಕುರಿತು ಸ್ಪಷ್ಟನೆ ನೀಡಬೇಕು” ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.

ಶುದ್ಧ ಮತದಾರರ ಪಟ್ಟಿಗಳು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತವೆ.ರಾಜಕೀಯ ಪಕ್ಷಗಳು ಅವುಗಳ ತಯಾರಿಕೆಯ ಪ್ರತಿಯೊಂದು ಹಂತದಲ್ಲೂ ತೊಡಗಿಸಿಕೊಂಡಿವೆ ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ಪುನರುಚ್ಚರಿಸಿದೆ.

“ಯಾವುದಾದರೂ ದೋಷಗಳಿದ್ದರೆ ಅವುಗಳನ್ನು ಸರಿಪಡಿಸಲು ಮತದಾರರು ಮತ್ತು ರಾಜಕೀಯ ಪಕ್ಷಗಳಿಗೆ ಸೂಕ್ತ ಸಮಯ ಮತ್ತು ಅವಕಾಶವನ್ನು ನೀಡಲಾಗುತ್ತದೆ. ಭಾರತದಲ್ಲಿ ಸಂಸತ್ತು ಮತ್ತು ವಿಧಾನಸಭಾ ಚುನಾವಣೆಗಳಿಗೆ ಚುನಾವಣಾ ವ್ಯವಸ್ಥೆಯು ಕಾನೂನು ಹೇಳಿದಂತೆ ಬಹು-ಹಂತದ ವಿಕೇಂದ್ರೀಕೃತ ರಚನೆಯಾಗಿದೆ” ಎಂದಿದೆ.

ಭಾರತ ಚುನಾವಣಾ ಆಯೋಗ ಹೊರಡಿಸಿದ ಮಾರ್ಗಸೂಚಿಗಳ ಆಧಾರದ ಮೇಲೆ, ಎಸ್‌ಡಿಎಂ ಮಟ್ಟದ ಅಧಿಕಾರಿಗಳಾಗಿರುವ ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್‌ಒ) ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಸಹಾಯದಿಂದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತಾರೆ ಮತ್ತು ಅಂತಿಮಗೊಳಿಸುತ್ತಾರೆ. ಮತದಾರರ ಪಟ್ಟಿಯ ನಿಖರತೆಯ ಜವಾಬ್ದಾರಿಯನ್ನು ಇಆರ್‌ಒ ಮತ್ತು ಬಿಎಲ್‌ಒ ವಹಿಸಿಕೊಳ್ಳುತ್ತಾರೆ ಎಂದು ಚುನಾವಣಾ ಆಯೋಗದ ಹೇಳಿಕೆಯಲ್ಲಿ ಸೇರಿಸಲಾಗಿದೆ.

“ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ, ಅದರ ಡಿಜಿಟಲ್ ಮತ್ತು ಭೌತಿಕ ಪ್ರತಿಗಳನ್ನು ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. ಯಾರು ಬೇಕಾದರು ನೋಡುವಂತೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಹಾಕಲಾಗುತ್ತದೆ. ಕರಡು ಪಟ್ಟಿಯನ್ನು ಪ್ರಕಟಿಸಿದ ನಂತರ, ಅಂತಿಮ ಪಟ್ಟಿಯನ್ನು ಪ್ರಕಟಿಸುವ ಮೊದಲು ವಾದ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಮತದಾರರು ಮತ್ತು ರಾಜಕೀಯ ಪಕ್ಷಗಳಿಗೆ ಪೂರ್ಣ ಒಂದು ತಿಂಗಳ ಅವಧಿ ಸಮಯವಿದೆ” ಎಂದು ಚುನಾವಣಾ ಆಯೋಗ ತಿಳಿಸಿದೆ.

“ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಮತದಾರರ ಪಟ್ಟಿಗಳ ಡಿಜಿಟಲ್ ಮತ್ತು ಭೌತಿಕ ಪ್ರತಿಗಳನ್ನು ಹಂಚಿಕೊಳ್ಳಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯ ಪ್ರಕಟಣೆಯ ನಂತರ, ಎರಡು ಹಂತದ ಮೇಲ್ಮನವಿ ಪ್ರಕ್ರಿಯೆ ಲಭ್ಯವಿದೆ. ಇದರಲ್ಲಿ ಮೊದಲ ಮೇಲ್ಮನವಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಎರಡನೇ ಮೇಲ್ಮನವಿಯನ್ನು ಪ್ರತಿ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸಿಇಒ ಅವರಿಗೆ ಸಲ್ಲಿಸಬಹುದು. ಕಾನೂನು, ನಿಯಮಗಳು ಮತ್ತು ಮಾರ್ಗಸೂಚಿಗಳ ಪ್ರಕಾರ ಮತದಾರರ ಪಟ್ಟಿಯ ತಯಾರಿಕೆಯ ವಿಶಿಷ್ಟ ಲಕ್ಷಣವೆಂದರೆ ಅತ್ಯಂತ ಪಾರದರ್ಶಕತೆ” ಎಂದು ಹೇಳಿದೆ.

“ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎತ್ತಲು ಸೂಕ್ತ ಸಮಯವೆಂದರೆ ಅದು ವಾದಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ. ಇದು ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳೊಂದಿಗೆ ಮತದಾರರ ಪಟ್ಟಿಯನ್ನು ಹಂಚಿಕೊಳ್ಳುವುದರ ಹಿಂದಿನ ಉದ್ದೇಶವಾಗಿದೆ. ಸರಿಯಾದ ಸಮಯದಲ್ಲಿ ಈ ಸಮಸ್ಯೆಗಳನ್ನು ಸರಿಯಾದ ಮಾರ್ಗಗಳ ಮೂಲಕ ಎತ್ತಿದ್ದರೆ, ಸಂಬಂಧಪಟ್ಟ ಎಸ್‌ಡಿಎಂ/ಇಆರ್‌ಒಗಳು ಆ ಚುನಾವಣೆಗಳಿಗೆ ಮೊದಲು ತಪ್ಪುಗಳನ್ನು ಸರಿಪಡಿಸಲು ಅನುವು ಮಾಡಿಕೊಡುತ್ತಿತ್ತು. ರಾಜಕೀಯ ಪಕ್ಷಗಳು ಮತ್ತು ಯಾವುದೇ ಮತದಾರರಿಂದ ಮತದಾರರ ಪಟ್ಟಿಯ ಪರಿಶೀಲನೆಯನ್ನು ಇಸಿಐ ಸ್ವಾಗತಿಸುತ್ತಲೇ ಇದೆ. ಇದು ಎಸ್‌ಡಿಎಂ/ಇಆರ್‌ಒಗಳು ದೋಷಗಳನ್ನು ಸರಿಪಡಿಸಲು ಮತ್ತು ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ, ಇದು ನಮ್ಮ ಉದ್ದೇಶವಾಗಿದೆ” ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ವಿವರಿಸಿದೆ.

ನಿಷೇಧಿತ ‘ಸಿಮಿ’ ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...