HomeಮುಖಪುಟBihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

Bihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣವನ್ನು ಬಹಿರಂಗಪಡಿಸುವಂತೆ ಚುನಾವಣಾ ಆಯೋಗಕ್ಕೆ ಗುರುವಾರ (ಆ.14) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಪಾಲಿಸುವ ಬದಲು ಚುನಾವಣಾ ಆಯೋಗ ಸಮಜಾಯಿಷಿ ನೀಡುವುದನ್ನು ಮುಂದುವರಿಸಿದ್ದು, ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ವೋಟ್ ಅಧಿಕಾರ್ ಯಾತ್ರಾ’ ಭಾನುವಾರ (ಆ.17) ಬಿಹಾರದಲ್ಲಿ ಪ್ರಾರಂಭಗೊಳ್ಳಲಿದೆ.

ಇದಕ್ಕೂ ಮುನ್ನ ಶನಿವಾರ (ಆ.16) ಹೇಳಿಕೆ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, “ಕಾನೂನು, ನಿಯಮಗಳು ಮತ್ತು ಮಾರ್ಗಸೂಚಿಗಳ ಪ್ರಕಾರ ಅತ್ಯಂತ ಪಾರದರ್ಶಕತೆಯು ಮತದಾರರ ಪಟ್ಟಿ ಪರಿಷ್ಕರಣೆಯ ‘ಹಾಲ್ ಮಾರ್ಕ್’ ಎಂದು ಹೇಳಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮಗಳ ಕುರಿತ ಕಾಂಗ್ರೆಸ್‌ನ ಆರೋಪಗಳನ್ನು ಪರೋಕ್ಷವಾಗಿ ಉಲ್ಲೇಖಿಸಿದ ಚುನಾವಣಾ ಆಯೋಗ,”ಕೆಲ ರಾಜಕೀಯ ಪಕ್ಷಗಳು ಮತ್ತು ಅವುಗಳ ಬೂತ್-ಮಟ್ಟದ ಏಜೆಂಟ್‌ಗಳು (ಬಿಎಲ್‌ಎಗಳು) ಸೂಕ್ತ ಸಮಯದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಲಿಲ್ಲ ಮತ್ತು ದೋಷಗಳಿದ್ದರೆ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು /ಚುನಾವಣಾ ನೋಂದಣಿ ಅಧಿಕಾರಿಗಳು, ಜಿಲ್ಲಾ ಚುನಾವಣಾ ಅಧಿಕಾರಿಗಳು ಅಥವಾ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿಲ್ಲ ಎಂದು ತೋರುತ್ತದೆ” ಎಂದಿದೆ.

ಈ ಮೂಲಕ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡಿದೆ. ಆದರೆ, ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿಲ್ಲ.

ಚುನಾವಣಾ ಆಯೋಗದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್,”ಮತ ಕಳ್ಳತನ ಮತ್ತು ಸಾಮೂಹಿಕ ಅಕ್ರಮಗಳ ಗಂಭೀರ ಆರೋಪಗಳ ನಡುವೆಯೂ, ಚುನಾವಣಾ ಆಯೋಗವು ತನ್ನ ಎಲ್ಲಾ ಜವಾಬ್ದಾರಿಗಳನ್ನು ನಿರ್ಲಕ್ಷಿಸುವ ಮೂಲಕ ನಾಚಿಕೆಯಿಲ್ಲದೆ ಮಿತಿಗಳನ್ನು ಮೀರಿದೆ. ಸಾಂವಿಧಾನಿಕ ಅಧಿಕಾರಿಗಳು ಪ್ರಾಮಾಣಿಕತೆಯ ಸಂಕೇತವಾಗಿರಬೇಕು. ತಮ್ಮ ತಪ್ಪನ್ನು ಮರೆಮಾಚಲು ಪ್ರಜಾಪ್ರಭುತ್ವವನ್ನು ನಾಶಮಾಡುವ ಅಸ್ಪಷ್ಟ ಪತ್ರಿಕಾ ಹೇಳಿಕೆಗಳ ಹಿಂದೆ ಅಡಗಿಕೊಳ್ಳಬಾರದು” ಎಂದಿದ್ದಾರೆ.

“ಪತ್ರಿಕಾ ಹೇಳಿಕೆಯ ಸ್ವರ ಮತ್ತು ಸ್ವರೂಪವು, ಬಿಜೆಪಿ ನಿಯಂತ್ರಿತ ಚುನಾವಣಾ ಸಂಸ್ಥೆಯಿಂದ ನಡೆದಿದೆ ಎನ್ನಲಾದ ಸಾಮೂಹಿಕ ಮತದಾನ ವಂಚನೆಯ ಬಗ್ಗೆ ಸಾರ್ವಜನಿಕರ ಗಂಭೀರ ಕಳವಳಗಳನ್ನು ಪರಿಹರಿಸಲು ಚುನಾವಣಾ ಆಯೋಗ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂಬ ಹೆಚ್ಚಿನ ಅನುಮಾನಗಳನ್ನು ಹುಟ್ಟುಹಾಕುತ್ತದೆ” ಎಂದು ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

“ಚುನಾವಣಾ ಆಯೋಗ ಮತದಾರರ ಪಟ್ಟಿಯ ಪರಿಶೀಲನೆಯನ್ನು ಸ್ವಾಗತಿಸುತ್ತದೆ ಎಂದಾದರೆ, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಅಧಿಕಾರಿಗಳು ಪಕ್ಷಗಳಿಗೆ ಮೆಶಿನ್ ರೀಡೇಬಲ್ ಮತದಾರರ ಪಟ್ಟಿಯನ್ನು ನೀಡಲು ಏಕೆ ನಿರಾಕರಿಸುತ್ತಿದ್ದಾರೆ? ಸಿಸಿಟಿವಿ ದೃಶ್ಯಾವಳಿಗಳನ್ನು ಏಕೆ ಅಳಿಸಲಾಗುತ್ತಿದೆ ಎಂಬುದರ ಕುರಿತು ಸ್ಪಷ್ಟನೆ ನೀಡಬೇಕು” ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.

ಶುದ್ಧ ಮತದಾರರ ಪಟ್ಟಿಗಳು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತವೆ.ರಾಜಕೀಯ ಪಕ್ಷಗಳು ಅವುಗಳ ತಯಾರಿಕೆಯ ಪ್ರತಿಯೊಂದು ಹಂತದಲ್ಲೂ ತೊಡಗಿಸಿಕೊಂಡಿವೆ ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ಪುನರುಚ್ಚರಿಸಿದೆ.

“ಯಾವುದಾದರೂ ದೋಷಗಳಿದ್ದರೆ ಅವುಗಳನ್ನು ಸರಿಪಡಿಸಲು ಮತದಾರರು ಮತ್ತು ರಾಜಕೀಯ ಪಕ್ಷಗಳಿಗೆ ಸೂಕ್ತ ಸಮಯ ಮತ್ತು ಅವಕಾಶವನ್ನು ನೀಡಲಾಗುತ್ತದೆ. ಭಾರತದಲ್ಲಿ ಸಂಸತ್ತು ಮತ್ತು ವಿಧಾನಸಭಾ ಚುನಾವಣೆಗಳಿಗೆ ಚುನಾವಣಾ ವ್ಯವಸ್ಥೆಯು ಕಾನೂನು ಹೇಳಿದಂತೆ ಬಹು-ಹಂತದ ವಿಕೇಂದ್ರೀಕೃತ ರಚನೆಯಾಗಿದೆ” ಎಂದಿದೆ.

ಭಾರತ ಚುನಾವಣಾ ಆಯೋಗ ಹೊರಡಿಸಿದ ಮಾರ್ಗಸೂಚಿಗಳ ಆಧಾರದ ಮೇಲೆ, ಎಸ್‌ಡಿಎಂ ಮಟ್ಟದ ಅಧಿಕಾರಿಗಳಾಗಿರುವ ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್‌ಒ) ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಸಹಾಯದಿಂದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತಾರೆ ಮತ್ತು ಅಂತಿಮಗೊಳಿಸುತ್ತಾರೆ. ಮತದಾರರ ಪಟ್ಟಿಯ ನಿಖರತೆಯ ಜವಾಬ್ದಾರಿಯನ್ನು ಇಆರ್‌ಒ ಮತ್ತು ಬಿಎಲ್‌ಒ ವಹಿಸಿಕೊಳ್ಳುತ್ತಾರೆ ಎಂದು ಚುನಾವಣಾ ಆಯೋಗದ ಹೇಳಿಕೆಯಲ್ಲಿ ಸೇರಿಸಲಾಗಿದೆ.

“ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ, ಅದರ ಡಿಜಿಟಲ್ ಮತ್ತು ಭೌತಿಕ ಪ್ರತಿಗಳನ್ನು ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. ಯಾರು ಬೇಕಾದರು ನೋಡುವಂತೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಹಾಕಲಾಗುತ್ತದೆ. ಕರಡು ಪಟ್ಟಿಯನ್ನು ಪ್ರಕಟಿಸಿದ ನಂತರ, ಅಂತಿಮ ಪಟ್ಟಿಯನ್ನು ಪ್ರಕಟಿಸುವ ಮೊದಲು ವಾದ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಮತದಾರರು ಮತ್ತು ರಾಜಕೀಯ ಪಕ್ಷಗಳಿಗೆ ಪೂರ್ಣ ಒಂದು ತಿಂಗಳ ಅವಧಿ ಸಮಯವಿದೆ” ಎಂದು ಚುನಾವಣಾ ಆಯೋಗ ತಿಳಿಸಿದೆ.

“ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಮತದಾರರ ಪಟ್ಟಿಗಳ ಡಿಜಿಟಲ್ ಮತ್ತು ಭೌತಿಕ ಪ್ರತಿಗಳನ್ನು ಹಂಚಿಕೊಳ್ಳಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯ ಪ್ರಕಟಣೆಯ ನಂತರ, ಎರಡು ಹಂತದ ಮೇಲ್ಮನವಿ ಪ್ರಕ್ರಿಯೆ ಲಭ್ಯವಿದೆ. ಇದರಲ್ಲಿ ಮೊದಲ ಮೇಲ್ಮನವಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಎರಡನೇ ಮೇಲ್ಮನವಿಯನ್ನು ಪ್ರತಿ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸಿಇಒ ಅವರಿಗೆ ಸಲ್ಲಿಸಬಹುದು. ಕಾನೂನು, ನಿಯಮಗಳು ಮತ್ತು ಮಾರ್ಗಸೂಚಿಗಳ ಪ್ರಕಾರ ಮತದಾರರ ಪಟ್ಟಿಯ ತಯಾರಿಕೆಯ ವಿಶಿಷ್ಟ ಲಕ್ಷಣವೆಂದರೆ ಅತ್ಯಂತ ಪಾರದರ್ಶಕತೆ” ಎಂದು ಹೇಳಿದೆ.

“ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎತ್ತಲು ಸೂಕ್ತ ಸಮಯವೆಂದರೆ ಅದು ವಾದಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ. ಇದು ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳೊಂದಿಗೆ ಮತದಾರರ ಪಟ್ಟಿಯನ್ನು ಹಂಚಿಕೊಳ್ಳುವುದರ ಹಿಂದಿನ ಉದ್ದೇಶವಾಗಿದೆ. ಸರಿಯಾದ ಸಮಯದಲ್ಲಿ ಈ ಸಮಸ್ಯೆಗಳನ್ನು ಸರಿಯಾದ ಮಾರ್ಗಗಳ ಮೂಲಕ ಎತ್ತಿದ್ದರೆ, ಸಂಬಂಧಪಟ್ಟ ಎಸ್‌ಡಿಎಂ/ಇಆರ್‌ಒಗಳು ಆ ಚುನಾವಣೆಗಳಿಗೆ ಮೊದಲು ತಪ್ಪುಗಳನ್ನು ಸರಿಪಡಿಸಲು ಅನುವು ಮಾಡಿಕೊಡುತ್ತಿತ್ತು. ರಾಜಕೀಯ ಪಕ್ಷಗಳು ಮತ್ತು ಯಾವುದೇ ಮತದಾರರಿಂದ ಮತದಾರರ ಪಟ್ಟಿಯ ಪರಿಶೀಲನೆಯನ್ನು ಇಸಿಐ ಸ್ವಾಗತಿಸುತ್ತಲೇ ಇದೆ. ಇದು ಎಸ್‌ಡಿಎಂ/ಇಆರ್‌ಒಗಳು ದೋಷಗಳನ್ನು ಸರಿಪಡಿಸಲು ಮತ್ತು ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ, ಇದು ನಮ್ಮ ಉದ್ದೇಶವಾಗಿದೆ” ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ವಿವರಿಸಿದೆ.

ನಿಷೇಧಿತ ‘ಸಿಮಿ’ ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...