HomeಮುಖಪುಟBihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

Bihar SIR| ಉತ್ತರದ ಬದಲು ಸಮಜಾಯಿಷಿ ನೀಡುತ್ತಿರುವ ಚು.ಆಯೋಗ: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ 65 ಲಕ್ಷ ಹೆಸರುಗಳು ಮತ್ತು ಅದಕ್ಕೆ ಕಾರಣವನ್ನು ಬಹಿರಂಗಪಡಿಸುವಂತೆ ಚುನಾವಣಾ ಆಯೋಗಕ್ಕೆ ಗುರುವಾರ (ಆ.14) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಪಾಲಿಸುವ ಬದಲು ಚುನಾವಣಾ ಆಯೋಗ ಸಮಜಾಯಿಷಿ ನೀಡುವುದನ್ನು ಮುಂದುವರಿಸಿದ್ದು, ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ವೋಟ್ ಅಧಿಕಾರ್ ಯಾತ್ರಾ’ ಭಾನುವಾರ (ಆ.17) ಬಿಹಾರದಲ್ಲಿ ಪ್ರಾರಂಭಗೊಳ್ಳಲಿದೆ.

ಇದಕ್ಕೂ ಮುನ್ನ ಶನಿವಾರ (ಆ.16) ಹೇಳಿಕೆ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, “ಕಾನೂನು, ನಿಯಮಗಳು ಮತ್ತು ಮಾರ್ಗಸೂಚಿಗಳ ಪ್ರಕಾರ ಅತ್ಯಂತ ಪಾರದರ್ಶಕತೆಯು ಮತದಾರರ ಪಟ್ಟಿ ಪರಿಷ್ಕರಣೆಯ ‘ಹಾಲ್ ಮಾರ್ಕ್’ ಎಂದು ಹೇಳಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಅಕ್ರಮಗಳ ಕುರಿತ ಕಾಂಗ್ರೆಸ್‌ನ ಆರೋಪಗಳನ್ನು ಪರೋಕ್ಷವಾಗಿ ಉಲ್ಲೇಖಿಸಿದ ಚುನಾವಣಾ ಆಯೋಗ,”ಕೆಲ ರಾಜಕೀಯ ಪಕ್ಷಗಳು ಮತ್ತು ಅವುಗಳ ಬೂತ್-ಮಟ್ಟದ ಏಜೆಂಟ್‌ಗಳು (ಬಿಎಲ್‌ಎಗಳು) ಸೂಕ್ತ ಸಮಯದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಲಿಲ್ಲ ಮತ್ತು ದೋಷಗಳಿದ್ದರೆ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು /ಚುನಾವಣಾ ನೋಂದಣಿ ಅಧಿಕಾರಿಗಳು, ಜಿಲ್ಲಾ ಚುನಾವಣಾ ಅಧಿಕಾರಿಗಳು ಅಥವಾ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿಲ್ಲ ಎಂದು ತೋರುತ್ತದೆ” ಎಂದಿದೆ.

ಈ ಮೂಲಕ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡಿದೆ. ಆದರೆ, ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿಲ್ಲ.

ಚುನಾವಣಾ ಆಯೋಗದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್,”ಮತ ಕಳ್ಳತನ ಮತ್ತು ಸಾಮೂಹಿಕ ಅಕ್ರಮಗಳ ಗಂಭೀರ ಆರೋಪಗಳ ನಡುವೆಯೂ, ಚುನಾವಣಾ ಆಯೋಗವು ತನ್ನ ಎಲ್ಲಾ ಜವಾಬ್ದಾರಿಗಳನ್ನು ನಿರ್ಲಕ್ಷಿಸುವ ಮೂಲಕ ನಾಚಿಕೆಯಿಲ್ಲದೆ ಮಿತಿಗಳನ್ನು ಮೀರಿದೆ. ಸಾಂವಿಧಾನಿಕ ಅಧಿಕಾರಿಗಳು ಪ್ರಾಮಾಣಿಕತೆಯ ಸಂಕೇತವಾಗಿರಬೇಕು. ತಮ್ಮ ತಪ್ಪನ್ನು ಮರೆಮಾಚಲು ಪ್ರಜಾಪ್ರಭುತ್ವವನ್ನು ನಾಶಮಾಡುವ ಅಸ್ಪಷ್ಟ ಪತ್ರಿಕಾ ಹೇಳಿಕೆಗಳ ಹಿಂದೆ ಅಡಗಿಕೊಳ್ಳಬಾರದು” ಎಂದಿದ್ದಾರೆ.

“ಪತ್ರಿಕಾ ಹೇಳಿಕೆಯ ಸ್ವರ ಮತ್ತು ಸ್ವರೂಪವು, ಬಿಜೆಪಿ ನಿಯಂತ್ರಿತ ಚುನಾವಣಾ ಸಂಸ್ಥೆಯಿಂದ ನಡೆದಿದೆ ಎನ್ನಲಾದ ಸಾಮೂಹಿಕ ಮತದಾನ ವಂಚನೆಯ ಬಗ್ಗೆ ಸಾರ್ವಜನಿಕರ ಗಂಭೀರ ಕಳವಳಗಳನ್ನು ಪರಿಹರಿಸಲು ಚುನಾವಣಾ ಆಯೋಗ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂಬ ಹೆಚ್ಚಿನ ಅನುಮಾನಗಳನ್ನು ಹುಟ್ಟುಹಾಕುತ್ತದೆ” ಎಂದು ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

“ಚುನಾವಣಾ ಆಯೋಗ ಮತದಾರರ ಪಟ್ಟಿಯ ಪರಿಶೀಲನೆಯನ್ನು ಸ್ವಾಗತಿಸುತ್ತದೆ ಎಂದಾದರೆ, ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಅಧಿಕಾರಿಗಳು ಪಕ್ಷಗಳಿಗೆ ಮೆಶಿನ್ ರೀಡೇಬಲ್ ಮತದಾರರ ಪಟ್ಟಿಯನ್ನು ನೀಡಲು ಏಕೆ ನಿರಾಕರಿಸುತ್ತಿದ್ದಾರೆ? ಸಿಸಿಟಿವಿ ದೃಶ್ಯಾವಳಿಗಳನ್ನು ಏಕೆ ಅಳಿಸಲಾಗುತ್ತಿದೆ ಎಂಬುದರ ಕುರಿತು ಸ್ಪಷ್ಟನೆ ನೀಡಬೇಕು” ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.

ಶುದ್ಧ ಮತದಾರರ ಪಟ್ಟಿಗಳು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತವೆ.ರಾಜಕೀಯ ಪಕ್ಷಗಳು ಅವುಗಳ ತಯಾರಿಕೆಯ ಪ್ರತಿಯೊಂದು ಹಂತದಲ್ಲೂ ತೊಡಗಿಸಿಕೊಂಡಿವೆ ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ಪುನರುಚ್ಚರಿಸಿದೆ.

“ಯಾವುದಾದರೂ ದೋಷಗಳಿದ್ದರೆ ಅವುಗಳನ್ನು ಸರಿಪಡಿಸಲು ಮತದಾರರು ಮತ್ತು ರಾಜಕೀಯ ಪಕ್ಷಗಳಿಗೆ ಸೂಕ್ತ ಸಮಯ ಮತ್ತು ಅವಕಾಶವನ್ನು ನೀಡಲಾಗುತ್ತದೆ. ಭಾರತದಲ್ಲಿ ಸಂಸತ್ತು ಮತ್ತು ವಿಧಾನಸಭಾ ಚುನಾವಣೆಗಳಿಗೆ ಚುನಾವಣಾ ವ್ಯವಸ್ಥೆಯು ಕಾನೂನು ಹೇಳಿದಂತೆ ಬಹು-ಹಂತದ ವಿಕೇಂದ್ರೀಕೃತ ರಚನೆಯಾಗಿದೆ” ಎಂದಿದೆ.

ಭಾರತ ಚುನಾವಣಾ ಆಯೋಗ ಹೊರಡಿಸಿದ ಮಾರ್ಗಸೂಚಿಗಳ ಆಧಾರದ ಮೇಲೆ, ಎಸ್‌ಡಿಎಂ ಮಟ್ಟದ ಅಧಿಕಾರಿಗಳಾಗಿರುವ ಚುನಾವಣಾ ನೋಂದಣಿ ಅಧಿಕಾರಿಗಳು (ಇಆರ್‌ಒ) ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಸಹಾಯದಿಂದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತಾರೆ ಮತ್ತು ಅಂತಿಮಗೊಳಿಸುತ್ತಾರೆ. ಮತದಾರರ ಪಟ್ಟಿಯ ನಿಖರತೆಯ ಜವಾಬ್ದಾರಿಯನ್ನು ಇಆರ್‌ಒ ಮತ್ತು ಬಿಎಲ್‌ಒ ವಹಿಸಿಕೊಳ್ಳುತ್ತಾರೆ ಎಂದು ಚುನಾವಣಾ ಆಯೋಗದ ಹೇಳಿಕೆಯಲ್ಲಿ ಸೇರಿಸಲಾಗಿದೆ.

“ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ, ಅದರ ಡಿಜಿಟಲ್ ಮತ್ತು ಭೌತಿಕ ಪ್ರತಿಗಳನ್ನು ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. ಯಾರು ಬೇಕಾದರು ನೋಡುವಂತೆ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಹಾಕಲಾಗುತ್ತದೆ. ಕರಡು ಪಟ್ಟಿಯನ್ನು ಪ್ರಕಟಿಸಿದ ನಂತರ, ಅಂತಿಮ ಪಟ್ಟಿಯನ್ನು ಪ್ರಕಟಿಸುವ ಮೊದಲು ವಾದ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಮತದಾರರು ಮತ್ತು ರಾಜಕೀಯ ಪಕ್ಷಗಳಿಗೆ ಪೂರ್ಣ ಒಂದು ತಿಂಗಳ ಅವಧಿ ಸಮಯವಿದೆ” ಎಂದು ಚುನಾವಣಾ ಆಯೋಗ ತಿಳಿಸಿದೆ.

“ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಮತದಾರರ ಪಟ್ಟಿಗಳ ಡಿಜಿಟಲ್ ಮತ್ತು ಭೌತಿಕ ಪ್ರತಿಗಳನ್ನು ಹಂಚಿಕೊಳ್ಳಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯ ಪ್ರಕಟಣೆಯ ನಂತರ, ಎರಡು ಹಂತದ ಮೇಲ್ಮನವಿ ಪ್ರಕ್ರಿಯೆ ಲಭ್ಯವಿದೆ. ಇದರಲ್ಲಿ ಮೊದಲ ಮೇಲ್ಮನವಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮತ್ತು ಎರಡನೇ ಮೇಲ್ಮನವಿಯನ್ನು ಪ್ರತಿ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸಿಇಒ ಅವರಿಗೆ ಸಲ್ಲಿಸಬಹುದು. ಕಾನೂನು, ನಿಯಮಗಳು ಮತ್ತು ಮಾರ್ಗಸೂಚಿಗಳ ಪ್ರಕಾರ ಮತದಾರರ ಪಟ್ಟಿಯ ತಯಾರಿಕೆಯ ವಿಶಿಷ್ಟ ಲಕ್ಷಣವೆಂದರೆ ಅತ್ಯಂತ ಪಾರದರ್ಶಕತೆ” ಎಂದು ಹೇಳಿದೆ.

“ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎತ್ತಲು ಸೂಕ್ತ ಸಮಯವೆಂದರೆ ಅದು ವಾದಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿ. ಇದು ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳೊಂದಿಗೆ ಮತದಾರರ ಪಟ್ಟಿಯನ್ನು ಹಂಚಿಕೊಳ್ಳುವುದರ ಹಿಂದಿನ ಉದ್ದೇಶವಾಗಿದೆ. ಸರಿಯಾದ ಸಮಯದಲ್ಲಿ ಈ ಸಮಸ್ಯೆಗಳನ್ನು ಸರಿಯಾದ ಮಾರ್ಗಗಳ ಮೂಲಕ ಎತ್ತಿದ್ದರೆ, ಸಂಬಂಧಪಟ್ಟ ಎಸ್‌ಡಿಎಂ/ಇಆರ್‌ಒಗಳು ಆ ಚುನಾವಣೆಗಳಿಗೆ ಮೊದಲು ತಪ್ಪುಗಳನ್ನು ಸರಿಪಡಿಸಲು ಅನುವು ಮಾಡಿಕೊಡುತ್ತಿತ್ತು. ರಾಜಕೀಯ ಪಕ್ಷಗಳು ಮತ್ತು ಯಾವುದೇ ಮತದಾರರಿಂದ ಮತದಾರರ ಪಟ್ಟಿಯ ಪರಿಶೀಲನೆಯನ್ನು ಇಸಿಐ ಸ್ವಾಗತಿಸುತ್ತಲೇ ಇದೆ. ಇದು ಎಸ್‌ಡಿಎಂ/ಇಆರ್‌ಒಗಳು ದೋಷಗಳನ್ನು ಸರಿಪಡಿಸಲು ಮತ್ತು ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ, ಇದು ನಮ್ಮ ಉದ್ದೇಶವಾಗಿದೆ” ಎಂದು ಚುನಾವಣಾ ಆಯೋಗ ತನ್ನ ಹೇಳಿಕೆಯಲ್ಲಿ ವಿವರಿಸಿದೆ.

ನಿಷೇಧಿತ ‘ಸಿಮಿ’ ಜೊತೆ ಸಂಪರ್ಕ ಆರೋಪ: 18 ವರ್ಷಗಳ ಬಳಿಕ 8 ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...