Homeಮುಖಪುಟಬಿಹಾರ ಎಸ್‌ಐಆರ್ : ಅಂತಿಮ ಪಟ್ಟಿಯಿಂದ ಕೈಬಿಟ್ಟ 3.66 ಲಕ್ಷ ಮತದಾರರ ಮಾಹಿತಿ ಕೇಳಿದ ಸುಪ್ರೀಂ...

ಬಿಹಾರ ಎಸ್‌ಐಆರ್ : ಅಂತಿಮ ಪಟ್ಟಿಯಿಂದ ಕೈಬಿಟ್ಟ 3.66 ಲಕ್ಷ ಮತದಾರರ ಮಾಹಿತಿ ಕೇಳಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಅಂತಿಮ ಪಟ್ಟಿಯಿಂದ ಕೈಬಿಟ್ಟಿರುವ 3.66 ಲಕ್ಷ ಮತದಾರರ ವಿವರಗಳನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.7) ಭಾರತೀಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ವಿಚಾರಣೆ ವೇಳೆ, ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಿದ ಹೆಚ್ಚಿನ ಹೆಸರುಗಳು ಹೊಸ ಮತದಾರರದ್ದು, ಕೆಲವು ಹಳೆಯ ಮತದಾರನ್ನು ಸೇರಿಸಲಾಗಿದೆ. ಪಟ್ಟಿಯಿಂದ ಕೈಬಿಟ್ಟಿರುವ ಯಾವುದೇ ಮತದಾರರು ಇದುವರೆಗೆ ಯಾವುದೇ ದೂರು ಅಥವಾ ಮೇಲ್ಮನವಿ ಸಲ್ಲಿಸಿಲ್ಲ ಚುನಾವಣಾ ಆಯೋಗ ಹೇಳಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಬಿಹಾರ ಎಸ್ಐಆರ್ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಇಂದಿನ ವಿಚಾರಣೆ ಬಳಿಕ, ಅಂತಿಮ ಪಟ್ಟಿಯಿಂದ ಕೈ ಬಿಡಲಾದ ಮತದಾರರ ಬಗ್ಗೆ ಅಕ್ಟೋಬರ್ 9ರೊಳಗೆ ಮಾಹಿತಿ ಒದಗಿಸುವಂತೆ ಪೀಠ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಅದೇ ದಿನ ನಡೆಸಲಿದೆ.

ಅಂತಿಮ ಪಟ್ಟಿಯನ್ನು ಪ್ರಕಟಿಸಿರುವುದರಿಂದ ಅಗತ್ಯವಿರುವ ದತ್ತಾಂಶವನ್ನು ತುಲನಾತ್ಮಕ ವಿಶ್ಲೇಷಣೆಯ ಮೂಲಕ ಒದಗಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಎಸ್‌ಐಆರ್ ಬಳಿಕ ಸೆಪ್ಟೆಂಬರ್ 30ರಂದು ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಅಕ್ಟೋಬರ್ 6 ರಂದು ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನೂ ಘೋಷಿಸಿದೆ.

ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿ ಬಾಗ್ಚಿ ಅವರು ಚುನಾವಣಾ ಆಯೋಗದ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ ಅವರಿಗೆ, ನ್ಯಾಯಾಲಯದ ಆದೇಶಗಳು ಹೆಚ್ಚಿನ ಪಾರದರ್ಶಕತೆಗೆ ಕಾರಣವಾಗಿವೆ ಎಂದು ಹೇಳಿದ್ದಾರೆ.

“ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಜನರಿಗೆ ಲಭ್ಯತೆ ಸುಧಾರಿಸಿದೆ. ಆದರೆ, ಕರಡು ಮತದಾರರ ಪಟ್ಟಿಯಿಂದ 65 ಲಕ್ಷ ಜನರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ದತ್ತಾಂಶಗಳಿಂದ ತಿಳಿದುಬಂದಿದೆ. ಸತ್ತವರು ಅಥವಾ ಬೇರೆಡೆಗೆ ಸ್ಥಳಾಂತರಗೊಂಡವರ ಹೆಸರುಗಳನ್ನು ತೆಗೆಯುವುದು ಸರಿಯಾದ ಕ್ರಮವಾಗಿದೆ. ಆದರೂ, ಯಾರನ್ನಾದರೂ ಪಟ್ಟಿಯಿಂದ ಕೈಬಿಡುವಾಗ ಚುನಾವಣಾ ನಿಯಮ 21 ಮತ್ತು ನಿಗದಿತ ಕಾರ್ಯವಿಧಾನಗಳನ್ನು (ಎಸ್‌ಒಪಿ) ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಪೀಠ ಸೂಚಿಸಿದೆ.

“ಮತದಾರರ ಪಟ್ಟಿಯಿಂದ ಯಾರನ್ನಾದರು ಕೈ ಬಿಟ್ಟಾಗ ಅವರ ಮಾಹಿತಿಯನ್ನು ಚುನಾವಣಾ ಕಚೇರಿಗಳಲ್ಲಿ ಪ್ರದರ್ಶಿಸಬೇಕು ಎಂದು ಹಿಂದೆ ಸೂಚಿಸಲಾಗಿತ್ತು. ಆದರೆ, ಅಂತಿಮ ಮತದಾರರ ಪಟ್ಟಿಯು ಕೇವಲ ಸಂಖ್ಯೆಗಳ ಸಂಗ್ರಹವಾಗಿದ್ದು, ಇದರಿಂದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದೆ. ಪಟ್ಟಿಯಲ್ಲಿ ಸೇರಿಸಲಾದ ಹೊಸ ಹೆಸರುಗಳು ತೆಗೆದುಹಾಕಲಾದವರಿಗೆ ಸಂಬಂಧಿಸಿದವುಗಳೇ ಇಲ್ಲವೆ ಸಂಪೂರ್ಣ ಹೊಸ ಹೆಸರುಗಳೇ ಎಂಬ ಸ್ಪಷ್ಟತೆ ಇಲ್ಲ ಎಂದು ಪೀಠ ಹೇಳಿದೆ.

ಇದಕ್ಕೆ ಉತ್ತರಿಸಿದ ದ್ವಿವೇದಿ ಅವರು, ಇದುವರೆಗೆ ಯಾವುದೇ ತೆಗೆದುಹಾಕಲಾದ ಮತದಾರರಿಂದ ದೂರು ಅಥವಾ ಮೇಲ್ಮನವಿ ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದ್ದಾರೆ.

‘ಫಾದರ್ ಸ್ಟಾನ್ ಸ್ವಾಮಿ ನೈಸರ್ಗಿಕ ಕಾರಣಗಳಿಂದ ಸಾವನ್ನಪ್ಪಿದ್ದಾರೆ..’; ನ್ಯಾಯಾಲಯಕ್ಕೆ ತಿಳಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...