Homeಮುಖಪುಟಹಿಜಾಬ್ ಧರಿಸಿದ್ದ ಯುವತಿಗೆ ಬ್ಯಾಂಕ್ ಸೇವೆ ನಿರಾಕರಿಸಿದ ಸಿಬ್ಬಂದಿ

ಹಿಜಾಬ್ ಧರಿಸಿದ್ದ ಯುವತಿಗೆ ಬ್ಯಾಂಕ್ ಸೇವೆ ನಿರಾಕರಿಸಿದ ಸಿಬ್ಬಂದಿ

- Advertisement -
- Advertisement -

ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಹಿಜಾಬ್‌ ಧರಿಸಿರುವ ಯುವತಿಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ವಹಿವಾಟು ನಡೆಸದಂತೆ ತಡೆಯಲಾಗಿದೆ ಎಂದು ವರದಿಯಾಗಿದೆ. ಯುವತಿಯು ಘಟನೆಯನ್ನು ವಿಡಿಯೊ ರೆಕಾರ್ಡ್ ಮಾಡಿ ಭಾನುವಾರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಶನಿವಾರದಂದು ಈ ಘಟನೆ ನಡೆದಿದ್ದು, ಯುವತಿ ಬೇಗುಸರಾಯ್‌ನಲ್ಲಿರುವ ಮನ್ಸೂರ್ ಚೌಕ್‌ನ ಯುಕೊ ಬ್ಯಾಂಕ್‌ಗೆ ಹಣ ಡ್ರಾ ಮಾಡಲು ತೆರಳಿದ್ದರು.

ವೀಡಿಯೊದ ಪ್ರಕಾರ, ಮೂರ್ನಾಲ್ಕು ಬ್ಯಾಂಕ್ ಉದ್ಯೋಗಿಗಳು ಹಿಜಾಬ್ ಅನ್ನು ತೆಗೆದು ಹಾಕುವಂತೆ ಕೇಳಿದ್ದು, ನಂತರವಷ್ಟೇ ಹಣವನ್ನು ಹಿಂಪಡೆಯಲು ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ. ಇದಕ್ಕೆ ಬಾಲಕಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪೋಷಕರಿಗೆ ಕರೆ ಮಾಡಿದ್ದಾರೆ. ಬ್ಯಾಂಕಿಗೆ ಆಗಮಿಸಿದ ಅವರ ಪೋಷಕರು ಬ್ಯಾಂಕಿನೊಳಗೆ ಹಿಜಾಬ್ ಅನ್ನು ಅನುಮತಿಸಲಾಗುವುದಿಲ್ಲ ಎಂದು ಲಿಖಿತ ಸೂಚನೆಯನ್ನು ತೋರಿಸಲು ಬ್ಯಾಂಕ್‌‌ ಉದ್ಯೋಗಿಗಳನ್ನು ಕೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳ ಸದಸ್ಯನ ಕೊಲೆಯ ಹಿಂದೆ ಸಂಘಟನೆಗಳಿರುವ ಮಾಹಿತಿ ಸಿಕ್ಕಿಲ್ಲ: ಗೃಹಸಚಿವ

‘‘ನಾನು ಮತ್ತು ನನ್ನ ಮಗಳು ಪ್ರತಿ ತಿಂಗಳು ಬ್ಯಾಂಕ್‌ಗೆ ಬರುತ್ತಿದ್ದೆವು ಆದರೆ ಹಿಂದೆ ಯಾರೂ ಆಕ್ಷೇಪಿಸಿರಲಿಲ್ಲ. ಈಗ ಯಾಕೆ ಹೀಗೆ ಮಾಡುತ್ತಿದ್ದಾರೆ? ಬ್ಯಾಂಕಿಂಗ್‌ ಜೊತೆಗೆ ವ್ಯವಹರಿಸುವಾಗ ಹಿಜಾಬ್ ಅನ್ನು ನಿಷೇಧಿಸುವ ಕುರಿತು ಅವರು ಯಾವುದೇ ಲಿಖಿತ ಅಧಿಸೂಚನೆ ಅವರಲ್ಲಿ ಇದೆಯೇ?” ಎಂದು ಆಕೆಯ ತಂದೆ ವಿಡಿಯೋದಲ್ಲಿ ಪ್ರಶ್ನಿಸಿದ್ದಾರೆ.

ಈ ಮಧ್ಯೆ ಯುವತಿ ಘಟನೆಯ ವಿಡಿಯೊ ಮಾಡುತ್ತಿರುವುದನ್ನು ಆಕ್ಷೇಪ ವ್ಯಕ್ತಪಡಿಸಿರುವ ಬ್ಯಾಂಕ್ ಉದ್ಯೋಗಿಗಳು ಅದನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಲಾಗಿದ್ದು, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ರೀಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟ್ಯಾಗ್ ಮಾಡಿರುವ ಅವರು, “ನಿಮ್ಮ ಹುದ್ದೆಯನ್ನು ಭದ್ರಪಡಿಸಿಕೊಳ್ಳಲು ನೀವು ಯಾವ ಮಟ್ಟಕ್ಕೆ ಹೋಗುತ್ತೀರಿ? ನೀವು ನಿಮ್ಮ ಸಿದ್ಧಾಂತ, ನೀತಿಗಳು, ನೈತಿಕ ಜವಾಬ್ದಾರಿ ಮತ್ತು ಆತ್ಮಸಾಕ್ಷಿಯನ್ನು ಬಿಜೆಪಿಯ ಮುಂದೆ ಅಡಮಾನವಿಟ್ಟಿದ್ದೀರಿ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೆ ನೀವು ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದೀರಿ. ಕನಿಷ್ಠ ಸಂವಿಧಾನವನ್ನು ಗೌರವಿಸಿ ಮತ್ತು ಆಪಾದಿತ ನೌಕರರನ್ನು ಬಂಧಿಸಿ” ಎಂದು ಬರೆದಿದ್ದಾರೆ.

ಈ ಮಧ್ಯೆ, UCO ಬ್ಯಾಂಕ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಈ ಘಟನೆಯ ಕುರಿತು ಹೇಳಿಕೆಯನ್ನು ನೀಡಿದೆ. “ಬ್ಯಾಂಕ್ ನಾಗರಿಕರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತದೆ ಮತ್ತು ತನ್ನ ಗೌರವಾನ್ವಿತ ಗ್ರಾಹಕರನ್ನು ಜಾತಿ ಅಥವಾ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ. ಬ್ಯಾಂಕ್ ಈ ಪ್ರಕರಣದ ಬಗೆಗಿನ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದೆ” ಎಂದು ಹೇಳಿದೆ.

ಇದನ್ನೂ ಓದಿ:  ಪಂಜಾಬ್‌ನಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ: ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...