Homeಮುಖಪುಟಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿದೆ ‘ಪಾಕಿಸ್ತಾನ’: ಮರುನಾಮಕರಣಕ್ಕೆ ಗ್ರಾಮಸ್ಥರ ಆಗ್ರಹ..!

ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿದೆ ‘ಪಾಕಿಸ್ತಾನ’: ಮರುನಾಮಕರಣಕ್ಕೆ ಗ್ರಾಮಸ್ಥರ ಆಗ್ರಹ..!

- Advertisement -
- Advertisement -

ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಪಾಕಿಸ್ತಾನ ಹೆಸರಿನ ಒಂದು ಗ್ರಾಮವಿದೆ.  ಗ್ರಾಮದ ಜನರಿಗೆ ಗ್ರಾಮದ ಹೆಸರು ಇರಿಸುಮುರಿಸು ಉಂಟಾಗುವಂತೆ ಮಾಡಿದೆ.  ಹೀಗಾಗಿ ಗ್ರಾಮದ ಹೆಸರನ್ನು ಬದಲಾಯಿಸಿ ಬಿರ್ಸಾ ಎಂದು ಮರು ನಾಮಕರಣ ಮಾಡುವಂತೆ ಗ್ರಾಮದ ಜನತೆ ಪಟ್ಟು ಹಿಡಿದಿದ್ದಾರೆ.

ಗ್ರಾಮದ ಜನರ ಪ್ರಕಾರ, ಹಳ್ಳಿಯ ಹೆಸರು ಹೇಳಲು ನಾಚಿಕೆಯಾಗುತ್ತದೆ.  ಗ್ರಾಮದ ಹೆಸರು ಪಾಕಿಸ್ತಾನ ಎಂದು ಹೇಳಲು ಮುಜುಗರವಾಗುತ್ತದೆ.  ಹೀಗಾಗಿ ಗ್ರಾಮದ ಹೆಸರನ್ನು ಬದಲಾಯಿಸಿ, ಬಿರ್ಸಾ ಎಂದು ಮರುನಾಮಕರಣ ಮಾಡಲು ಜಿಲ್ಲಾಧಿಕಾರಿಯವರಿಗೆ ಸಾಮೂಹಿಕವಾಗಿ ಮನವಿ ಪತ್ರ ಬರೆದು ಸಲ್ಲಿಸಿದ್ದೇವೆ.  ಆದರೆ ಜಿಲ್ಲಾಧಿಕಾರಿ ರಾಹುಲ್ ಕುಮಾರ್ ಮಾತನಾಡಿ, ಮನವಿ ಪತ್ರ ಕೈಗೆ ಬಂದಿಲ್ಲ. ಗ್ರಾಮಸ್ಥರ ಇಚ್ಛೆಯನುಸಾರ ಗ್ರಾಮದ ಹೆಸರು ಬದಲಾಯಿಸುವುದಾಗಿ ಹೇಳಿದರು.

ಗ್ರಾಮಸ್ಥರು ಹೇಳುವಂತೆ, ಊರಿನ ಹೆಸರು ಪಾಕಿಸ್ತಾನ ಆಗಿರುವುದರಿಂದ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ವಯಸ್ಸಿಗೆ ಬಂದ ಗಂಡು-ಹೆಣ್ಣು ಮಕ್ಕಳಿಗೆ ಮದುವೆಯಾಗುತ್ತಿಲ್ಲ. ಸಂಬಂಧಗಳು ಬರುತ್ತಿಲ್ಲ. ಆದ್ದರಿಂದ ಊರಿನ ಹೆಸರು ಬದಲಾಯಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇನ್ನು ಪೂರ್ಣಿಯಾ ಜಿಲ್ಲೆಯಿಂದ 35 ಕಿ.ಮೀ ದೂರದಲ್ಲಿ ಪಾಕಿಸ್ತಾನ ಗ್ರಾಮವಿದೆ. ಇಲ್ಲಿ ಕೇವಲ ಆದಿವಾಸಿ ಜನರೇ ನೆಲೆಸಿದ್ದು, ಪಾಕಿಸ್ತಾನ ಹೆಸರನ್ನು ಬದಲಾಯಿಸಿ, ಆದಿವಾಸಿಗಳ ದೇವರಾದ ಬಿರ್ಸಾ ಮುಂಡಾ ಹೆಸರು ಮರುನಾಮಕರಣ ಮಾಡುವಂತೆ ಬೇಡಿಕೆಯಿಟ್ಟಿದ್ದಾರೆ.

ಪತ್ರದಲ್ಲಿ ಪಾಕಿಸ್ತಾನ ಭಾರತದ ಮೇಲೆ ಭಯೋತ್ಪಾದಕರನ್ನು ಬಿಟ್ಟು, ರಕ್ತಪಾತಕ್ಕೆ ಕುಮ್ಮಕ್ಕು ನೀಡುತ್ತಿದೆ. ಭಾರತದ ವಿರುದ್ಧ ವಿಷಕಾರುತ್ತಿರುವ ಪಾಕಿಸ್ತಾನ ಹೆಸರನ್ನು ಗ್ರಾಮದಿಂದ ತೆಗೆದು ಹಾಕಿ ಬಿರ್ಸಾ ಮುಂಡಾ ಎಂದು ಪುನರ್ ನಾಮಕರಣ ಮಾಡುವಂತೆ ಉಲ್ಲೇಖಿಸಿದ್ದಾರೆ.

ಶ್ರೀನಗರ ಬಿಡಿಎ ನಂದನ್ ಕುಮಾರ್ ಮನವಿ ಪತ್ರ ಸ್ವೀಕರಿಸಿ, ಗ್ರಾಮದ ಹೆಸರು ಬದಲಾಯಿಸುವಂತೆ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದ್ದಾರೆ. ಆದರೆ ಗ್ರಾಮದ ಹೆಸರು ಬದಲಾಯಿಸುವ ಕಾರ್ಯ ನಮ್ಮ ಕಾರ್ಯಕ್ಷೇತ್ರದಡಿ ಬರುವುದಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಪತ್ರ ರವಾನಿಸುವುದಾಗಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...