Homeಮುಖಪುಟಬಿಹಾರ | 'ವಲಸೆ ನಿಲ್ಲಿಸಿ, ಉದ್ಯೋಗ ನೀಡಿ' ಪಾದಯಾತ್ರೆಯಲ್ಲಿ ಭಾಗಿಯಾದ ರಾಹುಲ್ ಗಾಂಧಿ

ಬಿಹಾರ | ‘ವಲಸೆ ನಿಲ್ಲಿಸಿ, ಉದ್ಯೋಗ ನೀಡಿ’ ಪಾದಯಾತ್ರೆಯಲ್ಲಿ ಭಾಗಿಯಾದ ರಾಹುಲ್ ಗಾಂಧಿ

- Advertisement -
- Advertisement -

ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ‘ಪಲಾಯನ್ ರೋಕೋ, ನೌಕ್ರಿ ದೋ’ (ವಲಸೆ ನಿಲ್ಲಿಸಿ, ಉದ್ಯೋಗ ನೀಡಿ) ಪಾದಯಾತ್ರೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಸೇರಿಕೊಂಡಿದ್ದಾರೆ. ಎನ್‌ಎಸ್‌ಯುಐ ರಾಷ್ಟ್ರೀಯ ಉಸ್ತುವಾರಿ ಕನ್ಹಯ್ಯಾ ಕುಮಾರ್ ನೇತೃತ್ವದಲ್ಲಿ ಈ ಯಾತ್ರೆ ಆರಂಭವಾಗಿದೆ. ಬಿಹಾರ

ಬೇಗುಸರಾಯ್ ಪಟ್ಟಣದಲ್ಲಿ ನಡೆದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರ ಜೊತೆಗೆ ಕನ್ಹಯ್ಯಾ ಕುಮಾರ್ ಮತ್ತು ಬಿಹಾರ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಜೇಶ್ ಕುಮಾರ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು.

ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮತ್ತು ಅದರ ವಿದ್ಯಾರ್ಥಿ ಮತ್ತು ಯುವ ಘಟಕಗಳ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ರಕ್ಷಣಾ ಪಡೆಗಳಲ್ಲಿನ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಒತ್ತಾಯಿಸಿದ್ದಾರೆ. ಬಿಹಾರ

ಪಾಟ್ನಾದಿಂದ ಬೇಗುಸರಾಯ್‌ಗೆ ಪಾದಯಾತ್ರೆಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಜಯ ಪ್ರಕಾಶ್ ನಾರಾಯಣ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜೇಶ್ ಕುಮಾರ್ ಮತ್ತು ಇತರ ಹಿರಿಯ ಪಕ್ಷದ ನಾಯಕರು ಬರಮಾಡಿಕೊಂಡರು.

ಚುನಾವಣೆ ನಡೆಯಲಿರುವ ಬಿಹಾರಕ್ಕೆ ಈ ವರ್ಷದ  ಜನವರಿಯಿಂದ ರಾಹುಲ್ ಗಾಂಧಿ ಅವರ ಮೂರನೇ ಭೇಟಿ ಇದಾಗಿದೆ. ಬೇಗುಸರಾಯ್ ಕನ್ಹಯ್ಯಾ ಅವರ ತವರು ಜಿಲ್ಲೆಯಾಗಿದ್ದು, ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೇಗುಸರಾಯ್ ಜಿಲ್ಲೆಯ ವಿಧಾನಸಭಾ ಯಾವುದಾದರೂ ಕ್ಷೇತ್ರದಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆಯಿದೆ.

ಪಾದಯಾತ್ರೆಯಲ್ಲಿ ಭಾಗವಹಿಸಿದ ನಂತರ ಪಾಟ್ನಾದಲ್ಲಿ ‘ಸಂವಿಧಾನ ಸುರಕ್ಷಾ ಸಮ್ಮೇಳನ’ವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಮತ್ತು ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ರಾಹುಲ್ ಗಾಂಧಿ ಸೋಮವಾರ ಬೇಗುಸರಾಯ್‌ನಲ್ಲಿ ನಡೆಯಲಿರುವ ‘ಪಲಾಯನ್ ರೋಕೋ, ನೌಕ್ರಿ ದೋ’ ಯಾತ್ರೆಯಲ್ಲಿ ಭಾಗವಹಿಸುವಂತೆ ಯುವಕರಿಗೆ ಮನವಿ ಮಾಡಿದ್ದಾರೆ. ಬಿಳಿ ಟಿ-ಶರ್ಟ್‌ಗಳನ್ನು ಧರಿಸಿ ಯಾತ್ರೆಯಲ್ಲಿ ಭಾಗವಹಿಸುವಂತೆ ಅವರು ಕೇಳಿಕೊಂಡಿದ್ದರು.

“ಬಿಹಾರದ ಯುವ ಸ್ನೇಹಿತರೇ, ನಾನು ಏಪ್ರಿಲ್ 7 ರಂದು ‘ಪಲಾಯನ್ ರೋಕೋ, ನೌಕ್ರಿ ದೋ’ ಮೆರವಣಿಗೆಯಲ್ಲಿ ನಿಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಡೆಯಲು ಬೇಗುಸರಾಯ್‌ಗೆ ಬರುತ್ತಿದ್ದೇನೆ. ಉದ್ಯೋಗ ಹುಡುಕಿಕೊಂಡು ಇತರ ರಾಜ್ಯಗಳಿಗೆ ವಲಸೆ ಹೋಗಬೇಕಾದ ಬಿಹಾರದ ಯುವಕರ ದುಃಸ್ಥಿತಿಯನ್ನು ಜಗತ್ತಿಗೆ ತೋರಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

“ನೀವೂ ಬಿಳಿ ಟೀ ಶರ್ಟ್ ಧರಿಸಿ ಬನ್ನಿ, ಪ್ರಶ್ನೆಗಳನ್ನು ಕೇಳಿ ಮತ್ತು ನಿಮ್ಮ ಹಕ್ಕುಗಳಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಮತ್ತು ಅವರನ್ನು ಅಧಿಕಾರದಿಂದ ಕಿತ್ತುಹಾಕಲು ನಿಮ್ಮ ಧ್ವನಿಯನ್ನು ಎತ್ತಿ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಜೊತೆಗೆ ಬಿಳಿ ಟೀ ಶರ್ಟ್ ಚಳವಳಿಗೆ ಸೇರಲು ಅವರು ಲಿಂಕ್ ಅನ್ನು ಹಂಚಿಕೊಂಡಿದ್ದಾರೆ.

ಬಿಹಾರವನ್ನು ಅವಕಾಶಗಳ ರಾಜ್ಯವನ್ನಾಗಿ ಮಾಡುವಂತೆ ಅವರು ಇದೇ ವೇಳೆ ಯುವಕರಿಗೆ ಮನವಿ ಮಾಡಿದ್ದಾರೆ.

ಇದರ ನಂತರ ರಾಹುಲ್ ಗಾಂಧಿ ಅವರು ರಾಜ್ಯದ ರಾಜಧಾನಿಯಲ್ಲಿ ‘ಸಂವಿಧಾನ ಉಳಿಸಿ ಸಮ್ಮೇಳನ’ ಮತ್ತು ಕಾರ್ಯಕರ್ತ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ ವಲಸೆ ಮತ್ತು ನಿರುದ್ಯೋಗವನ್ನು ಎತ್ತಿ ತೋರಿಸಲು ಮಾರ್ಚ್ 16 ರಂದು ಪಶ್ಚಿಮ ಚಂಪಾರಣ್ ಜಿಲ್ಲೆಯ ಮಹಾತ್ಮ ಗಾಂಧಿಯವರ ಭಿತಿಹರ್ವ ಆಶ್ರಮದಿಂದ ಕಾಂಗ್ರೆಸ್ ‘ಪಳಯನ್ ರೋಕೊ, ನೌಕ್ರಿ ದೋ’ ಮೆರವಣಿಗೆಯನ್ನು ಪ್ರಾರಂಭಿಸಿತು. ಕನ್ಹಯ್ಯಾ ಅವರನ್ನು ಬಿಹಾರ ರಾಜಕೀಯದ ಮುನ್ನಲೆಗೆ ತರುವ ಮೂಲಕ, ಕಾಂಗ್ರೆಸ್ ಪಕ್ಷವೂ ಲಾಲು ಪ್ರಸಾದ್ ನೇತೃತ್ವದ ತನ್ನ ಮಿತ್ರ ಪಕ್ಷವಾದ ಆರ್‌ಜೆಡಿಯ ನೆರಳಿನಿಂದ ಹೊರಬರಲು ಪ್ರಯತ್ನಿಸುತ್ತಿದೆ.

ವಾಸ್ತವವಾಗಿ ಕಾಂಗ್ರೆಸ್ ಇಬಿಸಿ ಮತ್ತು ದಲಿತರನ್ನು ತಲುಪಲು ಪ್ರಯತ್ನಿಸುತ್ತಿದೆ ಎಂದು ವರದಿಗಳು ಸೂಚಿಸಿವೆ. ಅದರಲ್ಲೂ ‘ಸಂವಿಧಾನ ಸುರಕ್ಷಾ ಸಮ್ಮೇಳನ’ದ ಮೂಲಕ ಮುಸ್ಲಿಮರನ್ನು ತಲುಪಲು ಪ್ರಯತ್ನಿಸುತ್ತಿದೆಯಾದರೂ, ಪಕ್ಷದ ಮುಖ್ಯ ಗಮನವು ಇಬಿಸಿಗಳ ಮೇಲೆಯಾಗಿದೆ. ರಾಜ್ಯದ ಜನಸಂಖ್ಯೆಯ ಸುಮಾರು 36.1% ರಷ್ಟು ಇಬಿಸಿಗಳಿದ್ದಾರೆ. ಪಕ್ಷದೊಳಗೆ ಇಬಿಸಿ ಸಮುದಾಯಗಳಿಂದ ಹೆಚ್ಚಿನ ನಾಯಕರನ್ನು ಉತ್ತೇಜಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೆ ಕಾಂಗ್ರೆಸ್ ತನ್ನ ಜಿಲ್ಲಾ ಘಟಕಗಳನ್ನು ಪರಿಷ್ಕರಿಸಿತ್ತು. “ಜಾತಿ ಸಂಯೋಜನೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಜಿಲ್ಲಾ ಮುಖ್ಯಸ್ಥರ ಆಯ್ಕೆಯನ್ನು ಮಾಡಲಾಯಿತು” ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ ಎಂದು ವರದಿಯಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...