Homeಮುಖಪುಟಬಿಹಾರ | 'ವಲಸೆ ನಿಲ್ಲಿಸಿ, ಉದ್ಯೋಗ ನೀಡಿ' ಪಾದಯಾತ್ರೆಯಲ್ಲಿ ಭಾಗಿಯಾದ ರಾಹುಲ್ ಗಾಂಧಿ

ಬಿಹಾರ | ‘ವಲಸೆ ನಿಲ್ಲಿಸಿ, ಉದ್ಯೋಗ ನೀಡಿ’ ಪಾದಯಾತ್ರೆಯಲ್ಲಿ ಭಾಗಿಯಾದ ರಾಹುಲ್ ಗಾಂಧಿ

- Advertisement -
- Advertisement -

ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ‘ಪಲಾಯನ್ ರೋಕೋ, ನೌಕ್ರಿ ದೋ’ (ವಲಸೆ ನಿಲ್ಲಿಸಿ, ಉದ್ಯೋಗ ನೀಡಿ) ಪಾದಯಾತ್ರೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಸೇರಿಕೊಂಡಿದ್ದಾರೆ. ಎನ್‌ಎಸ್‌ಯುಐ ರಾಷ್ಟ್ರೀಯ ಉಸ್ತುವಾರಿ ಕನ್ಹಯ್ಯಾ ಕುಮಾರ್ ನೇತೃತ್ವದಲ್ಲಿ ಈ ಯಾತ್ರೆ ಆರಂಭವಾಗಿದೆ. ಬಿಹಾರ

ಬೇಗುಸರಾಯ್ ಪಟ್ಟಣದಲ್ಲಿ ನಡೆದ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರ ಜೊತೆಗೆ ಕನ್ಹಯ್ಯಾ ಕುಮಾರ್ ಮತ್ತು ಬಿಹಾರ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಾಜೇಶ್ ಕುಮಾರ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು.

ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮತ್ತು ಅದರ ವಿದ್ಯಾರ್ಥಿ ಮತ್ತು ಯುವ ಘಟಕಗಳ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ರಕ್ಷಣಾ ಪಡೆಗಳಲ್ಲಿನ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಒತ್ತಾಯಿಸಿದ್ದಾರೆ. ಬಿಹಾರ

ಪಾಟ್ನಾದಿಂದ ಬೇಗುಸರಾಯ್‌ಗೆ ಪಾದಯಾತ್ರೆಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಜಯ ಪ್ರಕಾಶ್ ನಾರಾಯಣ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜೇಶ್ ಕುಮಾರ್ ಮತ್ತು ಇತರ ಹಿರಿಯ ಪಕ್ಷದ ನಾಯಕರು ಬರಮಾಡಿಕೊಂಡರು.

ಚುನಾವಣೆ ನಡೆಯಲಿರುವ ಬಿಹಾರಕ್ಕೆ ಈ ವರ್ಷದ  ಜನವರಿಯಿಂದ ರಾಹುಲ್ ಗಾಂಧಿ ಅವರ ಮೂರನೇ ಭೇಟಿ ಇದಾಗಿದೆ. ಬೇಗುಸರಾಯ್ ಕನ್ಹಯ್ಯಾ ಅವರ ತವರು ಜಿಲ್ಲೆಯಾಗಿದ್ದು, ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೇಗುಸರಾಯ್ ಜಿಲ್ಲೆಯ ವಿಧಾನಸಭಾ ಯಾವುದಾದರೂ ಕ್ಷೇತ್ರದಲ್ಲಿ ಅವರು ಸ್ಪರ್ಧಿಸುವ ಸಾಧ್ಯತೆಯಿದೆ.

ಪಾದಯಾತ್ರೆಯಲ್ಲಿ ಭಾಗವಹಿಸಿದ ನಂತರ ಪಾಟ್ನಾದಲ್ಲಿ ‘ಸಂವಿಧಾನ ಸುರಕ್ಷಾ ಸಮ್ಮೇಳನ’ವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ ಮತ್ತು ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ರಾಹುಲ್ ಗಾಂಧಿ ಸೋಮವಾರ ಬೇಗುಸರಾಯ್‌ನಲ್ಲಿ ನಡೆಯಲಿರುವ ‘ಪಲಾಯನ್ ರೋಕೋ, ನೌಕ್ರಿ ದೋ’ ಯಾತ್ರೆಯಲ್ಲಿ ಭಾಗವಹಿಸುವಂತೆ ಯುವಕರಿಗೆ ಮನವಿ ಮಾಡಿದ್ದಾರೆ. ಬಿಳಿ ಟಿ-ಶರ್ಟ್‌ಗಳನ್ನು ಧರಿಸಿ ಯಾತ್ರೆಯಲ್ಲಿ ಭಾಗವಹಿಸುವಂತೆ ಅವರು ಕೇಳಿಕೊಂಡಿದ್ದರು.

“ಬಿಹಾರದ ಯುವ ಸ್ನೇಹಿತರೇ, ನಾನು ಏಪ್ರಿಲ್ 7 ರಂದು ‘ಪಲಾಯನ್ ರೋಕೋ, ನೌಕ್ರಿ ದೋ’ ಮೆರವಣಿಗೆಯಲ್ಲಿ ನಿಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಡೆಯಲು ಬೇಗುಸರಾಯ್‌ಗೆ ಬರುತ್ತಿದ್ದೇನೆ. ಉದ್ಯೋಗ ಹುಡುಕಿಕೊಂಡು ಇತರ ರಾಜ್ಯಗಳಿಗೆ ವಲಸೆ ಹೋಗಬೇಕಾದ ಬಿಹಾರದ ಯುವಕರ ದುಃಸ್ಥಿತಿಯನ್ನು ಜಗತ್ತಿಗೆ ತೋರಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

“ನೀವೂ ಬಿಳಿ ಟೀ ಶರ್ಟ್ ಧರಿಸಿ ಬನ್ನಿ, ಪ್ರಶ್ನೆಗಳನ್ನು ಕೇಳಿ ಮತ್ತು ನಿಮ್ಮ ಹಕ್ಕುಗಳಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಮತ್ತು ಅವರನ್ನು ಅಧಿಕಾರದಿಂದ ಕಿತ್ತುಹಾಕಲು ನಿಮ್ಮ ಧ್ವನಿಯನ್ನು ಎತ್ತಿ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಜೊತೆಗೆ ಬಿಳಿ ಟೀ ಶರ್ಟ್ ಚಳವಳಿಗೆ ಸೇರಲು ಅವರು ಲಿಂಕ್ ಅನ್ನು ಹಂಚಿಕೊಂಡಿದ್ದಾರೆ.

ಬಿಹಾರವನ್ನು ಅವಕಾಶಗಳ ರಾಜ್ಯವನ್ನಾಗಿ ಮಾಡುವಂತೆ ಅವರು ಇದೇ ವೇಳೆ ಯುವಕರಿಗೆ ಮನವಿ ಮಾಡಿದ್ದಾರೆ.

ಇದರ ನಂತರ ರಾಹುಲ್ ಗಾಂಧಿ ಅವರು ರಾಜ್ಯದ ರಾಜಧಾನಿಯಲ್ಲಿ ‘ಸಂವಿಧಾನ ಉಳಿಸಿ ಸಮ್ಮೇಳನ’ ಮತ್ತು ಕಾರ್ಯಕರ್ತ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ ವಲಸೆ ಮತ್ತು ನಿರುದ್ಯೋಗವನ್ನು ಎತ್ತಿ ತೋರಿಸಲು ಮಾರ್ಚ್ 16 ರಂದು ಪಶ್ಚಿಮ ಚಂಪಾರಣ್ ಜಿಲ್ಲೆಯ ಮಹಾತ್ಮ ಗಾಂಧಿಯವರ ಭಿತಿಹರ್ವ ಆಶ್ರಮದಿಂದ ಕಾಂಗ್ರೆಸ್ ‘ಪಳಯನ್ ರೋಕೊ, ನೌಕ್ರಿ ದೋ’ ಮೆರವಣಿಗೆಯನ್ನು ಪ್ರಾರಂಭಿಸಿತು. ಕನ್ಹಯ್ಯಾ ಅವರನ್ನು ಬಿಹಾರ ರಾಜಕೀಯದ ಮುನ್ನಲೆಗೆ ತರುವ ಮೂಲಕ, ಕಾಂಗ್ರೆಸ್ ಪಕ್ಷವೂ ಲಾಲು ಪ್ರಸಾದ್ ನೇತೃತ್ವದ ತನ್ನ ಮಿತ್ರ ಪಕ್ಷವಾದ ಆರ್‌ಜೆಡಿಯ ನೆರಳಿನಿಂದ ಹೊರಬರಲು ಪ್ರಯತ್ನಿಸುತ್ತಿದೆ.

ವಾಸ್ತವವಾಗಿ ಕಾಂಗ್ರೆಸ್ ಇಬಿಸಿ ಮತ್ತು ದಲಿತರನ್ನು ತಲುಪಲು ಪ್ರಯತ್ನಿಸುತ್ತಿದೆ ಎಂದು ವರದಿಗಳು ಸೂಚಿಸಿವೆ. ಅದರಲ್ಲೂ ‘ಸಂವಿಧಾನ ಸುರಕ್ಷಾ ಸಮ್ಮೇಳನ’ದ ಮೂಲಕ ಮುಸ್ಲಿಮರನ್ನು ತಲುಪಲು ಪ್ರಯತ್ನಿಸುತ್ತಿದೆಯಾದರೂ, ಪಕ್ಷದ ಮುಖ್ಯ ಗಮನವು ಇಬಿಸಿಗಳ ಮೇಲೆಯಾಗಿದೆ. ರಾಜ್ಯದ ಜನಸಂಖ್ಯೆಯ ಸುಮಾರು 36.1% ರಷ್ಟು ಇಬಿಸಿಗಳಿದ್ದಾರೆ. ಪಕ್ಷದೊಳಗೆ ಇಬಿಸಿ ಸಮುದಾಯಗಳಿಂದ ಹೆಚ್ಚಿನ ನಾಯಕರನ್ನು ಉತ್ತೇಜಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೆ ಕಾಂಗ್ರೆಸ್ ತನ್ನ ಜಿಲ್ಲಾ ಘಟಕಗಳನ್ನು ಪರಿಷ್ಕರಿಸಿತ್ತು. “ಜಾತಿ ಸಂಯೋಜನೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಜಿಲ್ಲಾ ಮುಖ್ಯಸ್ಥರ ಆಯ್ಕೆಯನ್ನು ಮಾಡಲಾಯಿತು” ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ ಎಂದು ವರದಿಯಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...