Homeಮುಖಪುಟಹಲವರು ವೈರಸ್ ವಿರುದ್ಧ ಹೋರಾಡುತ್ತಿದ್ದರೆ ಬಿಹಾರ ಸಿಎಂ ಚುನಾವಣೆ ಪ್ರಚಾರದಲ್ಲಿದ್ದಾರೆ; ಪ್ರಶಾಂತ್ ಕಿಶೋರ್

ಹಲವರು ವೈರಸ್ ವಿರುದ್ಧ ಹೋರಾಡುತ್ತಿದ್ದರೆ ಬಿಹಾರ ಸಿಎಂ ಚುನಾವಣೆ ಪ್ರಚಾರದಲ್ಲಿದ್ದಾರೆ; ಪ್ರಶಾಂತ್ ಕಿಶೋರ್

- Advertisement -
- Advertisement -

ಹಲವು ರಾಜ್ಯಗಳು ವೈರಸ್ ವಿರುದ್ಧ ಹೋರಾಡುತ್ತಿದ್ದರೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತ್ರ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಆರೋಪಿಸಿದ್ದಾರೆ.

ಕಳೆದ ವಾರ ಬಿಹಾರದಲ್ಲಿ ನಿತೀಶ್ ಕುಮಾರ್‌ರವರು ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿರುವುದನ್ನು ಹಲವಾರು ಜನ ಖಂಡಿಸಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅದರ ಮೇಲೆ ಗಮನಹರಿಸಬೇಕೆಂದು ಆಗ್ರಹಿಸಿದ್ದಾರೆ.

ಲಾಕ್‌ಡೌನ್‌ ಘೋಷಿಸಿದಾಗಿನಿಂದ ಪತ್ರಿಕಾಗೋಷ್ಠಿ ಅಥವಾ ಜನರೊಂದಿಗೆ ಸಂವಾದ ನಡೆಸದ ಕೆಲವೇ ಕೆಲವು ಮುಖ್ಯಮಂತ್ರಿಗಳಲ್ಲಿ ನಿತೀಶ್ ಕುಮಾರ್‌ ಸಹ ಒಬ್ಬರಾಗಿದ್ದಾರೆ. ಅವರಿಗೆ ಜನಾಭಿಪ್ರಾಯಗಳು ಬೇಕಿಲ್ಲ ಎಂದು ಪ್ರಶಾಂತ್ ಕಿಶೋರ್ ಮುಖ್ಯಮಂತ್ರಿ ವಿರುದ್ಧ ಕಿಡಿಕಾರಿದ್ದಾರೆ.

“ಕಡಿಮೆ ಪರೀಕ್ಷಾ ದರ, ಪರೀಕ್ಷೆಯಲ್ಲಿ 7-9 ಶೇಕಡಾ ಧನಾತ್ಮಕ ಪ್ರಕರಣಗಳ ಪ್ರಮಾಣ ಮತ್ತು 6,000 ಕ್ಕೂ ಹೆಚ್ಚು ಪ್ರಕರಣಗಳು ಬಿಹಾರದಲ್ಲಿ ದಾಖಲಾಗಿರುವುದರ ಹೊರತಾಗಿಯೂ ಇಲ್ಲಿನ ಮುಖ್ಯಮಂತ್ರಿ ಚುನಾವಣೆಗಳ ಬಗ್ಗೆ ಚರ್ಚಿಸುತ್ತಿದ್ದಾರೆ. ಕೊರೊನಾ ವೈರಸ್ ಭಯದ ನಡುವೆ ಮೂರು ತಿಂಗಳು ತನ್ನನ್ನು ತನ್ನ ಮನೆಗೆ ಸೀಮಿತಗೊಳಿಸಿಕೊಂಡಿದ್ದ ನಿತೀಶ್ ಕುಮಾರ್, ಈಗ ಚುನಾವಣೆಯಲ್ಲಿ ಭಾಗವಹಿಸಲು ತಮ್ಮ ಮನೆಯಿಂದ ಹೊರಬಂದರೆ?” ಎಂದು ಪ್ರಶಾಂತ್ ಕಿಶೋರ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ನಿತೀಶ್ ಕುಮಾರ್ ಅವರು ಮಾರ್ಚ್ 16 ರಿಂದ ಪಾಟ್ನಾದ ಆನ್ ಮಾರ್ಗ್ 1 ರ ತಮ್ಮ ಸರ್ಕಾರಿ ಬಂಗಲೆಯಿಂದ ಹೊರಬಂದಿಲ್ಲ. 84 ದಿನಗಳ ಸಾಮಾಜಿಕ ಅಂತರದ ನಂತರ ಕ್ಯಾಬಿನೆಟ್ ಸಭೆಯಲ್ಲಿ ಪಾಲ್ಗೊಳ್ಳಲು ಮಂಗಳವಾರ ಹೊರಬಂದಿದ್ದಾರೆ. ಆದರೆ ಅವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ವಾಸ್ತವ ಸಭೆಗಳನ್ನು ನಡೆಸುತ್ತಿದ್ದರು ಎಂದು ಹಲವರು ದೂರಿದ್ದಾರೆ.

ಕೊರೊನಾ ವೈರಸ್ ಪ್ರಕರಣಗಳಲ್ಲಿ ರಾಜ್ಯವು 6,000 ದಾಟಿದ್ದರೆ, ಆಡಳಿತಾರೂಢ ಎನ್‌ಡಿಎ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ಪ್ರಶಾಂತ್ ಆರೋಪಿಸಿದ್ದಾರೆ.

ಕೆಲ ದಿನಗಳ ಹಿಂದೆ ಪ್ರಶಾಂತ್ ಕಿಶೋರ್ ಸಹ ಜೆಡಿಯು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದರು. ಸಿಎಎ, ಎನ್‌ಆರ್‌ಸಿಯನ್ನು ನಿತೀಶ್ ಕುಮಾರ್ ಬೆಂಬಲಿಸಿದಾಗ ಉಂಟಾದ ವಾಗ್ವಾದಿದಿಂದಾಗಿ ಪ್ರಶಾಂತ್ ಪಕ್ಷದಿಂದ ಹೊರಬಂದಿದ್ದಾರೆ.

ಪ್ರಶಾಂತ್ ಕಿಶೋರ್ ಕೋವಿಡ್ ಎದುರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದ್ದಾರೆ. “COVID ಅನ್ನು ದೂರವಿಡಲು ಸಾಧ್ಯವಿಲ್ಲ. ನಾವು ಅದರ ವಿರುದ್ಧ ಹೋರಾಡಬೇಕು. ಜಾಗತಿಕವಾಗಿ ಹಲವಾರು ನಾಯಕರು ಈ ಹೋರಾಟವನ್ನು ಹ್ಯೂಮಿಲಿಟಿ, ಟ್ರಾನ್ಸ್‌ಪರೆನ್ಸಿ, ಸೈನ್ಸ್ ಮತ್ತು ವ್ಯಾಪಕವಾದ ಸಾರ್ವಜನಿಕ ಬೆಂಬಲದೊಂದಿಗೆ ಗೆದ್ದಿದ್ದಾರೆ. ಇದು ನಾವು ಇತರರಿಂದ ಕಲಿಯುವ ಸಮಯ ಎಂದು ಕಿಶೋರ್ ಶುಕ್ರವಾರ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ – ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...