Homeಮುಖಪುಟಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

ಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

- Advertisement -
- Advertisement -

ಹೊಸದಿಲ್ಲಿ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ‘ಮಹಾಘಟಬಂಧನ’ (ಮೈತ್ರಿಕೂಟ) ಬಹುಮತ ಗಳಿಸಿದರೆ, ರಾಷ್ಟ್ರೀಯ ಜನತಾದಳ (RJD)ದ ತೇಜಸ್ವಿ ಯಾದವ್ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ತೇಜಸ್ವಿ ಯಾದವ್ ಅವರೇ ಸಿಎಂ ಸ್ಥಾನಕ್ಕೆ ನಮ್ಮ ಮೈತ್ರಿಕೂಟದ ಪ್ರಮುಖ ನಾಯಕರು. ಈ ಬಗ್ಗೆ “ಯಾವುದೇ ಗೊಂದಲ ಅಥವಾ ವಿವಾದ” ಇಲ್ಲ ಎಂದು ಕನ್ಹಯ್ಯಾ ಕುಮಾರ್ ಸ್ಪಷ್ಟಪಡಿಸಿದರು. ಚುನಾವಣೆಯಲ್ಲಿ ಜನರ ಸಮಸ್ಯೆಗಳೇ ಮುಖ್ಯ ಎಂದು ಒತ್ತಿ ಹೇಳಿದ ಅವರು, ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಪದೇ ಪದೇ ಪ್ರಶ್ನೆಗಳನ್ನು ಎತ್ತುವ ಮೂಲಕ ವಿರೋಧಿಗಳು “ಷಡ್ಯಂತ್ರ” ಮಾಡುತ್ತಿದ್ದಾರೆ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಗೆ ಅಧಿಕಾರ ಸಿಕ್ಕ ತಕ್ಷಣ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಕೆಳಗಿಳಿಸಿ, ತಮ್ಮದೇ ನಾಯಕರನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆ ಎಂದು ಕನ್ಹಯ್ಯಾ ಕುಮಾರ್ ಗಂಭೀರವಾಗಿ ಆರೋಪಿಸಿದ್ದಾರೆ. “ಬಿಜೆಪಿ ತನ್ನ ಹಳೆಯ ತಂತ್ರವನ್ನೇ ಇಲ್ಲಿಯೂ ಅನುಸರಿಸುತ್ತಿದೆ. ಮೊದಲು ಚಿಕ್ಕ ಪಕ್ಷಗಳ ಬೆಂಬಲ ಪಡೆದು, ನಂತರ ನಿಧಾನವಾಗಿ ಅವುಗಳನ್ನು ನುಂಗಿಹಾಕುತ್ತದೆ” ಎಂದು ಅವರು ದೂರಿದರು. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ನಂತರ ತಮ್ಮದೇ ನಾಯಕರನ್ನು ಅಧಿಕಾರಕ್ಕೆ ತಂದ ಉದಾಹರಣೆಯನ್ನು ಅವರು ಈ ಸಂದರ್ಭದಲ್ಲಿ ನೀಡಿದರು. “ಬಿಹಾರದಲ್ಲಿ ಬಿಜೆಪಿ ಹಲವು ವರ್ಷಗಳಿಂದ ಇದನ್ನೇ ಮಾಡಲು ಪ್ರಯತ್ನಿಸುತ್ತಿದೆಯಾದರೂ, ಯಶಸ್ವಿಯಾಗಿಲ್ಲ” ಎಂದು ಕುಮಾರ್ ಸ್ಪಷ್ಟಪಡಿಸಿದರು.

ಬಿಹಾರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಿಗಿಂತಲೂ “ಬದಲಾವಣೆಯ ಗಾಳಿ” ಈಗ ಹೆಚ್ಚು ಬಲವಾಗಿದೆ. ಬಿಜೆಪಿ ‘ಆಪರೇಷನ್ ಸಿಂಧೂರ್’ ಅನ್ನು ಚುನಾವಣಾ ಅಸ್ತ್ರವಾಗಿ ಬಳಸುತ್ತಿಲ್ಲ, ಏಕೆಂದರೆ ಬಿಹಾರದ ಜನರು ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಾರೆ ಎಂಬುದು ಅವರಿಗೆ ತಿಳಿದಿದೆ. ಜನರು ಇದನ್ನು ದೇಶದ ಗೌರವದ ವಿಷಯ ಎಂದು ನಂಬುತ್ತಾರೆ ಮತ್ತು ಯಾವುದೇ ಪಕ್ಷವು ಇದನ್ನು ರಾಜಕೀಯಗೊಳಿಸಬಾರದು ಎಂಬುದು ಅವರ ಅಭಿಪ್ರಾಯವಾಗಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕುಮಾರ್‌ ಹೇಳಿದರು.

‘ಮಹಾಘಟಬಂಧನ’ದ ಆಂತರಿಕ ನಡೆಗಳನ್ನು ವಿವರಿಸಿದ ಕನ್ಹಯ್ಯಾ ಕುಮಾರ್, ಮೈತ್ರಿಕೂಟದಲ್ಲಿ ದೊಡ್ಡ ಅಥವಾ ಚಿಕ್ಕ ಪಾಲುದಾರರು ಎಂಬ ವಿಚಾರವನ್ನು ತಳ್ಳಿಹಾಕಿದರು. “ನೀವು ಕಾರನ್ನು ನೋಡಿದರೆ, ಕ್ಲಚ್ ಎಷ್ಟು ಮುಖ್ಯವೋ, ಬ್ರೇಕ್ ಮತ್ತು ಮಿರರ್ ಕೂಡ ಅಷ್ಟೇ ಮುಖ್ಯ” ಎಂದು ಉದಾಹರಣೆ ನೀಡುವ ಮೂಲಕ ಮೈತ್ರಿಕೂಟದ ಎಲ್ಲಾ ಪಕ್ಷಗಳ ಸಮಾನ ಪ್ರಾಮುಖ್ಯತೆಯನ್ನು ಅವರು ಸ್ಪಷ್ಟಪಡಿಸಿದರು.

“ಆರ್‌ಜೆಡಿ (RJD) ದೊಡ್ಡ ಪಕ್ಷವಾಗಿದ್ದು, ಹೆಚ್ಚು ಶಾಸಕರನ್ನು ಹೊಂದಿದೆ. ಇದು ನಮ್ಮ ಮೈತ್ರಿಕೂಟಕ್ಕೆ ನಾಯಕತ್ವ ನೀಡುತ್ತದೆ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನವೂ ಅವರಿಗಿದೆ” ಎಂದು ಕನ್ಹಯ್ಯಾ ಕುಮಾರ್ ಸ್ಪಷ್ಟಪಡಿಸಿದರು. ಆದರೆ, ವಿಕಾಸ್ಶೀಲ್ ಇನ್ಸಾನ್ ಪಾರ್ಟಿಯ ಮುಖೇಶ್ ಸಹಾನಿ ಸೇರಿದಂತೆ ಮೈತ್ರಿಕೂಟದ ಎಲ್ಲಾ ಪಕ್ಷಗಳಿಗೂ ತಮ್ಮದೇ ಆದ ಪ್ರಮುಖ ಪಾತ್ರವಿದೆ ಎಂದು ಅವರು ಒತ್ತಿ ಹೇಳಿದರು.

ಕಾಂಗ್ರೆಸ್ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಕನ್ಹಯ್ಯಾ ಕುಮಾರ್ ಅವರು, ಕಾಂಗ್ರೆಸ್ ಸೇರಿದಂತೆ ಮಹಾಘಟಬಂಧನದ’ ಎಲ್ಲಾ ಪಕ್ಷಗಳೂ ಒಟ್ಟಾಗಿ ಎಲ್ಲಾ 243 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ನಮ್ಮ ಮೈತ್ರಿ ನಿಜವಾಗಿಯೂ ಸಮಸ್ಯೆಗಳ ಆಧಾರದ ಮೇಲೆ ರೂಪುಗೊಂಡಿದ್ದರೆ, ಯಾರು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಾಗುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಊಟದಲ್ಲಿ ಒಂದು ಚಿಟಿಕೆ ಉಪ್ಪು ಕಡಿಮೆಯಾದರೂ ರುಚಿ ತಪ್ಪುತ್ತದೆ, ಹೆಚ್ಚಾದರೂ ಚೆನ್ನಾಗಿರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸುವುದು ಮುಖ್ಯ ಎಂದು ಅವರು ಉದಾಹರಣೆ ನೀಡಿ ವಿವರಿಸಿದರು.

‘ಮಹಾಘಟಬಂಧನ’ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ತೇಜಸ್ವಿ ಯಾದವ್ ಪ್ರಮುಖರಾಗುತ್ತಾರೆಯೇ ಎಂಬ ಪ್ರಶ್ನೆಗೆ, “ಇದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಜನರೇ ನಿರ್ಧರಿಸುತ್ತಾರೆ. ಹೆಚ್ಚು ಶಾಸಕರು ಇರುವವರೇ ಮುಖ್ಯಮಂತ್ರಿಯಾಗುತ್ತಾರೆ. ಆರ್‌ಜೆಡಿ (RJD) ಹೆಚ್ಚು ಸ್ಥಾನಗಳನ್ನು ಗೆಲ್ಲುವುದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಅವರೇ ಅರ್ಹರು” ಎಂದು ಕನ್ಹಯ್ಯಾ ಕುಮಾರ್ ಉತ್ತರಿಸಿದರು.

ಈ ಆಯ್ಕೆ ತಾನಾಗಿಯೇ ನಡೆಯುತ್ತದೆ. ನಮ್ಮ ಮೈತ್ರಿಕೂಟದಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಆದರೆ, ಎನ್‌ಡಿಎ (ಬಿಜೆಪಿ ಮೈತ್ರಿಕೂಟ)ದಲ್ಲಿ ನಿತೀಶ್ ಕುಮಾರ್ ಸಿಎಂ ಆಗುತ್ತಾರೆಯೇ ಅಥವಾ ಇಲ್ಲವೇ, ಮತ್ತು ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಬಗ್ಗೆ ಗೊಂದಲವಿದೆ ಎಂದು ಅವರು ಟೀಕಿಸಿದರು.

ಇದು ಕೇವಲ ಒಂದು ತಂತ್ರ. ಮುಖ್ಯಮಂತ್ರಿ ದೊಡ್ಡ ಪಕ್ಷದಿಂದಲೇ ಆಗುತ್ತಾರೆ ಎಂಬುದರಲ್ಲಿ ಯಾವುದೇ ಗೊಂದಲ ಅಥವಾ ಅನುಮಾನವಿಲ್ಲ. ಇದು ಒಂದು ಸ್ವಾಭಾವಿಕ ಬೆಳವಣಿಗೆಯ ಭಾಗವಾಗಿ ತಾನಾಗಿಯೇ ನಡೆಯುತ್ತದೆ. ಆದರೆ ಚುನಾವಣೆಯಲ್ಲಿ ಮುಖ್ಯವಾದುದು ಸಮಸ್ಯೆಗಳು, ಅಭ್ಯರ್ಥಿಯ ಮುಖ ಅಲ್ಲ. ತೇಜಸ್ವಿ ಯಾದವ್ ಅವರೇ ಮಹಾಘಟಬಂಧನದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಬಗ್ಗೆ ಯಾವುದೇ ಅನುಮಾನ ಅಥವಾ ವಿವಾದ ಇಲ್ಲ ಎಂದು ಕನ್ಹಯ್ಯಾ ಕುಮಾರ್ ಪಿಟಿಐಗೆ ತಿಳಿಸಿದರು.

‘ಮಹಾಘಟಬಂಧನ’ ಸ್ಪಷ್ಟ ಬಹುಮತ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಕುಮಾರ್, ನಿರುದ್ಯೋಗ, ವಲಸೆ, ಶಿಕ್ಷಣ, ರೈತರ ಸಮಸ್ಯೆಗಳು, ಪರೀಕ್ಷೆಗಳಲ್ಲಿನ ಅಕ್ರಮಗಳು ಮತ್ತು ಕಳಪೆ ಆರೋಗ್ಯ ಸೇವೆಗಳಂತಹ ವಿಷಯಗಳೇ ಚುನಾವಣೆಯಲ್ಲಿ ಪ್ರಮುಖವಾಗಿವೆ ಎಂದು ಹೇಳಿದರು. ಈಗ ಸರ್ಕಾರವನ್ನು ಅಧಿಕಾರಿಗಳು “ನಿರ್ದಯವಾಗಿ” ನಡೆಸುತ್ತಿರುವುದರಿಂದ ಜನರು ಬದಲಾವಣೆಗಾಗಿ ಮತ ಚಲಾಯಿಸುತ್ತಾರೆ ಎಂದು ತಾವು ನಿರೀಕ್ಷಿಸುವುದಾಗಿ ಕನ್ಹಯ್ಯಾ ಕುಮಾರ್ ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ, ‘ಮಹಾಘಟಬಂಧನದ’ ಅತಿದೊಡ್ಡ ಪಕ್ಷವಾದ ಆರ್‌ಜೆಡಿ (RJD) 144 ಸ್ಥಾನಗಳಲ್ಲಿ ಸ್ಪರ್ಧಿಸಿ 75ರಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ, ಕೇವಲ 19 ಸ್ಥಾನಗಳಿಗೆ ತೃಪ್ತಿಪಟ್ಟಿತ್ತು. ಮೈತ್ರಿಕೂಟದ ಭಾಗವಾಗಿದ್ದ ಸಿಪಿಐ (ಎಂ.ಎಲ್.) ಲಿಬರೇಷನ್ 19 ಸ್ಥಾನಗಳಲ್ಲಿ ಸ್ಪರ್ಧಿಸಿ 12ರಲ್ಲಿ ಜಯಗಳಿಸಿತ್ತು. ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯು 2025ರ ಅಕ್ಟೋಬರ್-ನವೆಂಬರ್ ಸುಮಾರಿಗೆ ನಡೆಯುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳ | ಕಾನೂನು ಕಾಲೇಜಿನೊಳಗೆ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...