Homeಮುಖಪುಟಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

ಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

- Advertisement -
- Advertisement -

ಹೊಸದಿಲ್ಲಿ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ‘ಮಹಾಘಟಬಂಧನ’ (ಮೈತ್ರಿಕೂಟ) ಬಹುಮತ ಗಳಿಸಿದರೆ, ರಾಷ್ಟ್ರೀಯ ಜನತಾದಳ (RJD)ದ ತೇಜಸ್ವಿ ಯಾದವ್ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ತೇಜಸ್ವಿ ಯಾದವ್ ಅವರೇ ಸಿಎಂ ಸ್ಥಾನಕ್ಕೆ ನಮ್ಮ ಮೈತ್ರಿಕೂಟದ ಪ್ರಮುಖ ನಾಯಕರು. ಈ ಬಗ್ಗೆ “ಯಾವುದೇ ಗೊಂದಲ ಅಥವಾ ವಿವಾದ” ಇಲ್ಲ ಎಂದು ಕನ್ಹಯ್ಯಾ ಕುಮಾರ್ ಸ್ಪಷ್ಟಪಡಿಸಿದರು. ಚುನಾವಣೆಯಲ್ಲಿ ಜನರ ಸಮಸ್ಯೆಗಳೇ ಮುಖ್ಯ ಎಂದು ಒತ್ತಿ ಹೇಳಿದ ಅವರು, ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಪದೇ ಪದೇ ಪ್ರಶ್ನೆಗಳನ್ನು ಎತ್ತುವ ಮೂಲಕ ವಿರೋಧಿಗಳು “ಷಡ್ಯಂತ್ರ” ಮಾಡುತ್ತಿದ್ದಾರೆ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಗೆ ಅಧಿಕಾರ ಸಿಕ್ಕ ತಕ್ಷಣ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಕೆಳಗಿಳಿಸಿ, ತಮ್ಮದೇ ನಾಯಕರನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆ ಎಂದು ಕನ್ಹಯ್ಯಾ ಕುಮಾರ್ ಗಂಭೀರವಾಗಿ ಆರೋಪಿಸಿದ್ದಾರೆ. “ಬಿಜೆಪಿ ತನ್ನ ಹಳೆಯ ತಂತ್ರವನ್ನೇ ಇಲ್ಲಿಯೂ ಅನುಸರಿಸುತ್ತಿದೆ. ಮೊದಲು ಚಿಕ್ಕ ಪಕ್ಷಗಳ ಬೆಂಬಲ ಪಡೆದು, ನಂತರ ನಿಧಾನವಾಗಿ ಅವುಗಳನ್ನು ನುಂಗಿಹಾಕುತ್ತದೆ” ಎಂದು ಅವರು ದೂರಿದರು. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ನಂತರ ತಮ್ಮದೇ ನಾಯಕರನ್ನು ಅಧಿಕಾರಕ್ಕೆ ತಂದ ಉದಾಹರಣೆಯನ್ನು ಅವರು ಈ ಸಂದರ್ಭದಲ್ಲಿ ನೀಡಿದರು. “ಬಿಹಾರದಲ್ಲಿ ಬಿಜೆಪಿ ಹಲವು ವರ್ಷಗಳಿಂದ ಇದನ್ನೇ ಮಾಡಲು ಪ್ರಯತ್ನಿಸುತ್ತಿದೆಯಾದರೂ, ಯಶಸ್ವಿಯಾಗಿಲ್ಲ” ಎಂದು ಕುಮಾರ್ ಸ್ಪಷ್ಟಪಡಿಸಿದರು.

ಬಿಹಾರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಿಗಿಂತಲೂ “ಬದಲಾವಣೆಯ ಗಾಳಿ” ಈಗ ಹೆಚ್ಚು ಬಲವಾಗಿದೆ. ಬಿಜೆಪಿ ‘ಆಪರೇಷನ್ ಸಿಂಧೂರ್’ ಅನ್ನು ಚುನಾವಣಾ ಅಸ್ತ್ರವಾಗಿ ಬಳಸುತ್ತಿಲ್ಲ, ಏಕೆಂದರೆ ಬಿಹಾರದ ಜನರು ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಾರೆ ಎಂಬುದು ಅವರಿಗೆ ತಿಳಿದಿದೆ. ಜನರು ಇದನ್ನು ದೇಶದ ಗೌರವದ ವಿಷಯ ಎಂದು ನಂಬುತ್ತಾರೆ ಮತ್ತು ಯಾವುದೇ ಪಕ್ಷವು ಇದನ್ನು ರಾಜಕೀಯಗೊಳಿಸಬಾರದು ಎಂಬುದು ಅವರ ಅಭಿಪ್ರಾಯವಾಗಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕುಮಾರ್‌ ಹೇಳಿದರು.

‘ಮಹಾಘಟಬಂಧನ’ದ ಆಂತರಿಕ ನಡೆಗಳನ್ನು ವಿವರಿಸಿದ ಕನ್ಹಯ್ಯಾ ಕುಮಾರ್, ಮೈತ್ರಿಕೂಟದಲ್ಲಿ ದೊಡ್ಡ ಅಥವಾ ಚಿಕ್ಕ ಪಾಲುದಾರರು ಎಂಬ ವಿಚಾರವನ್ನು ತಳ್ಳಿಹಾಕಿದರು. “ನೀವು ಕಾರನ್ನು ನೋಡಿದರೆ, ಕ್ಲಚ್ ಎಷ್ಟು ಮುಖ್ಯವೋ, ಬ್ರೇಕ್ ಮತ್ತು ಮಿರರ್ ಕೂಡ ಅಷ್ಟೇ ಮುಖ್ಯ” ಎಂದು ಉದಾಹರಣೆ ನೀಡುವ ಮೂಲಕ ಮೈತ್ರಿಕೂಟದ ಎಲ್ಲಾ ಪಕ್ಷಗಳ ಸಮಾನ ಪ್ರಾಮುಖ್ಯತೆಯನ್ನು ಅವರು ಸ್ಪಷ್ಟಪಡಿಸಿದರು.

“ಆರ್‌ಜೆಡಿ (RJD) ದೊಡ್ಡ ಪಕ್ಷವಾಗಿದ್ದು, ಹೆಚ್ಚು ಶಾಸಕರನ್ನು ಹೊಂದಿದೆ. ಇದು ನಮ್ಮ ಮೈತ್ರಿಕೂಟಕ್ಕೆ ನಾಯಕತ್ವ ನೀಡುತ್ತದೆ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನವೂ ಅವರಿಗಿದೆ” ಎಂದು ಕನ್ಹಯ್ಯಾ ಕುಮಾರ್ ಸ್ಪಷ್ಟಪಡಿಸಿದರು. ಆದರೆ, ವಿಕಾಸ್ಶೀಲ್ ಇನ್ಸಾನ್ ಪಾರ್ಟಿಯ ಮುಖೇಶ್ ಸಹಾನಿ ಸೇರಿದಂತೆ ಮೈತ್ರಿಕೂಟದ ಎಲ್ಲಾ ಪಕ್ಷಗಳಿಗೂ ತಮ್ಮದೇ ಆದ ಪ್ರಮುಖ ಪಾತ್ರವಿದೆ ಎಂದು ಅವರು ಒತ್ತಿ ಹೇಳಿದರು.

ಕಾಂಗ್ರೆಸ್ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಕನ್ಹಯ್ಯಾ ಕುಮಾರ್ ಅವರು, ಕಾಂಗ್ರೆಸ್ ಸೇರಿದಂತೆ ಮಹಾಘಟಬಂಧನದ’ ಎಲ್ಲಾ ಪಕ್ಷಗಳೂ ಒಟ್ಟಾಗಿ ಎಲ್ಲಾ 243 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ನಮ್ಮ ಮೈತ್ರಿ ನಿಜವಾಗಿಯೂ ಸಮಸ್ಯೆಗಳ ಆಧಾರದ ಮೇಲೆ ರೂಪುಗೊಂಡಿದ್ದರೆ, ಯಾರು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಾಗುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಊಟದಲ್ಲಿ ಒಂದು ಚಿಟಿಕೆ ಉಪ್ಪು ಕಡಿಮೆಯಾದರೂ ರುಚಿ ತಪ್ಪುತ್ತದೆ, ಹೆಚ್ಚಾದರೂ ಚೆನ್ನಾಗಿರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸುವುದು ಮುಖ್ಯ ಎಂದು ಅವರು ಉದಾಹರಣೆ ನೀಡಿ ವಿವರಿಸಿದರು.

‘ಮಹಾಘಟಬಂಧನ’ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ತೇಜಸ್ವಿ ಯಾದವ್ ಪ್ರಮುಖರಾಗುತ್ತಾರೆಯೇ ಎಂಬ ಪ್ರಶ್ನೆಗೆ, “ಇದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಜನರೇ ನಿರ್ಧರಿಸುತ್ತಾರೆ. ಹೆಚ್ಚು ಶಾಸಕರು ಇರುವವರೇ ಮುಖ್ಯಮಂತ್ರಿಯಾಗುತ್ತಾರೆ. ಆರ್‌ಜೆಡಿ (RJD) ಹೆಚ್ಚು ಸ್ಥಾನಗಳನ್ನು ಗೆಲ್ಲುವುದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಅವರೇ ಅರ್ಹರು” ಎಂದು ಕನ್ಹಯ್ಯಾ ಕುಮಾರ್ ಉತ್ತರಿಸಿದರು.

ಈ ಆಯ್ಕೆ ತಾನಾಗಿಯೇ ನಡೆಯುತ್ತದೆ. ನಮ್ಮ ಮೈತ್ರಿಕೂಟದಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಆದರೆ, ಎನ್‌ಡಿಎ (ಬಿಜೆಪಿ ಮೈತ್ರಿಕೂಟ)ದಲ್ಲಿ ನಿತೀಶ್ ಕುಮಾರ್ ಸಿಎಂ ಆಗುತ್ತಾರೆಯೇ ಅಥವಾ ಇಲ್ಲವೇ, ಮತ್ತು ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಬಗ್ಗೆ ಗೊಂದಲವಿದೆ ಎಂದು ಅವರು ಟೀಕಿಸಿದರು.

ಇದು ಕೇವಲ ಒಂದು ತಂತ್ರ. ಮುಖ್ಯಮಂತ್ರಿ ದೊಡ್ಡ ಪಕ್ಷದಿಂದಲೇ ಆಗುತ್ತಾರೆ ಎಂಬುದರಲ್ಲಿ ಯಾವುದೇ ಗೊಂದಲ ಅಥವಾ ಅನುಮಾನವಿಲ್ಲ. ಇದು ಒಂದು ಸ್ವಾಭಾವಿಕ ಬೆಳವಣಿಗೆಯ ಭಾಗವಾಗಿ ತಾನಾಗಿಯೇ ನಡೆಯುತ್ತದೆ. ಆದರೆ ಚುನಾವಣೆಯಲ್ಲಿ ಮುಖ್ಯವಾದುದು ಸಮಸ್ಯೆಗಳು, ಅಭ್ಯರ್ಥಿಯ ಮುಖ ಅಲ್ಲ. ತೇಜಸ್ವಿ ಯಾದವ್ ಅವರೇ ಮಹಾಘಟಬಂಧನದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಬಗ್ಗೆ ಯಾವುದೇ ಅನುಮಾನ ಅಥವಾ ವಿವಾದ ಇಲ್ಲ ಎಂದು ಕನ್ಹಯ್ಯಾ ಕುಮಾರ್ ಪಿಟಿಐಗೆ ತಿಳಿಸಿದರು.

‘ಮಹಾಘಟಬಂಧನ’ ಸ್ಪಷ್ಟ ಬಹುಮತ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಕುಮಾರ್, ನಿರುದ್ಯೋಗ, ವಲಸೆ, ಶಿಕ್ಷಣ, ರೈತರ ಸಮಸ್ಯೆಗಳು, ಪರೀಕ್ಷೆಗಳಲ್ಲಿನ ಅಕ್ರಮಗಳು ಮತ್ತು ಕಳಪೆ ಆರೋಗ್ಯ ಸೇವೆಗಳಂತಹ ವಿಷಯಗಳೇ ಚುನಾವಣೆಯಲ್ಲಿ ಪ್ರಮುಖವಾಗಿವೆ ಎಂದು ಹೇಳಿದರು. ಈಗ ಸರ್ಕಾರವನ್ನು ಅಧಿಕಾರಿಗಳು “ನಿರ್ದಯವಾಗಿ” ನಡೆಸುತ್ತಿರುವುದರಿಂದ ಜನರು ಬದಲಾವಣೆಗಾಗಿ ಮತ ಚಲಾಯಿಸುತ್ತಾರೆ ಎಂದು ತಾವು ನಿರೀಕ್ಷಿಸುವುದಾಗಿ ಕನ್ಹಯ್ಯಾ ಕುಮಾರ್ ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ, ‘ಮಹಾಘಟಬಂಧನದ’ ಅತಿದೊಡ್ಡ ಪಕ್ಷವಾದ ಆರ್‌ಜೆಡಿ (RJD) 144 ಸ್ಥಾನಗಳಲ್ಲಿ ಸ್ಪರ್ಧಿಸಿ 75ರಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ, ಕೇವಲ 19 ಸ್ಥಾನಗಳಿಗೆ ತೃಪ್ತಿಪಟ್ಟಿತ್ತು. ಮೈತ್ರಿಕೂಟದ ಭಾಗವಾಗಿದ್ದ ಸಿಪಿಐ (ಎಂ.ಎಲ್.) ಲಿಬರೇಷನ್ 19 ಸ್ಥಾನಗಳಲ್ಲಿ ಸ್ಪರ್ಧಿಸಿ 12ರಲ್ಲಿ ಜಯಗಳಿಸಿತ್ತು. ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯು 2025ರ ಅಕ್ಟೋಬರ್-ನವೆಂಬರ್ ಸುಮಾರಿಗೆ ನಡೆಯುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳ | ಕಾನೂನು ಕಾಲೇಜಿನೊಳಗೆ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...