Homeಮುಖಪುಟಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

ಬಿಹಾರ: ಮಹಾಘಟಬಂಧನದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್– ಕನ್ಹಯ್ಯಾ ಕುಮಾರ್ ಸ್ಪಷ್ಟನೆ

- Advertisement -
- Advertisement -

ಹೊಸದಿಲ್ಲಿ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ‘ಮಹಾಘಟಬಂಧನ’ (ಮೈತ್ರಿಕೂಟ) ಬಹುಮತ ಗಳಿಸಿದರೆ, ರಾಷ್ಟ್ರೀಯ ಜನತಾದಳ (RJD)ದ ತೇಜಸ್ವಿ ಯಾದವ್ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ತೇಜಸ್ವಿ ಯಾದವ್ ಅವರೇ ಸಿಎಂ ಸ್ಥಾನಕ್ಕೆ ನಮ್ಮ ಮೈತ್ರಿಕೂಟದ ಪ್ರಮುಖ ನಾಯಕರು. ಈ ಬಗ್ಗೆ “ಯಾವುದೇ ಗೊಂದಲ ಅಥವಾ ವಿವಾದ” ಇಲ್ಲ ಎಂದು ಕನ್ಹಯ್ಯಾ ಕುಮಾರ್ ಸ್ಪಷ್ಟಪಡಿಸಿದರು. ಚುನಾವಣೆಯಲ್ಲಿ ಜನರ ಸಮಸ್ಯೆಗಳೇ ಮುಖ್ಯ ಎಂದು ಒತ್ತಿ ಹೇಳಿದ ಅವರು, ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಪದೇ ಪದೇ ಪ್ರಶ್ನೆಗಳನ್ನು ಎತ್ತುವ ಮೂಲಕ ವಿರೋಧಿಗಳು “ಷಡ್ಯಂತ್ರ” ಮಾಡುತ್ತಿದ್ದಾರೆ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಗೆ ಅಧಿಕಾರ ಸಿಕ್ಕ ತಕ್ಷಣ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಕೆಳಗಿಳಿಸಿ, ತಮ್ಮದೇ ನಾಯಕರನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆ ಎಂದು ಕನ್ಹಯ್ಯಾ ಕುಮಾರ್ ಗಂಭೀರವಾಗಿ ಆರೋಪಿಸಿದ್ದಾರೆ. “ಬಿಜೆಪಿ ತನ್ನ ಹಳೆಯ ತಂತ್ರವನ್ನೇ ಇಲ್ಲಿಯೂ ಅನುಸರಿಸುತ್ತಿದೆ. ಮೊದಲು ಚಿಕ್ಕ ಪಕ್ಷಗಳ ಬೆಂಬಲ ಪಡೆದು, ನಂತರ ನಿಧಾನವಾಗಿ ಅವುಗಳನ್ನು ನುಂಗಿಹಾಕುತ್ತದೆ” ಎಂದು ಅವರು ದೂರಿದರು. ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ, ನಂತರ ತಮ್ಮದೇ ನಾಯಕರನ್ನು ಅಧಿಕಾರಕ್ಕೆ ತಂದ ಉದಾಹರಣೆಯನ್ನು ಅವರು ಈ ಸಂದರ್ಭದಲ್ಲಿ ನೀಡಿದರು. “ಬಿಹಾರದಲ್ಲಿ ಬಿಜೆಪಿ ಹಲವು ವರ್ಷಗಳಿಂದ ಇದನ್ನೇ ಮಾಡಲು ಪ್ರಯತ್ನಿಸುತ್ತಿದೆಯಾದರೂ, ಯಶಸ್ವಿಯಾಗಿಲ್ಲ” ಎಂದು ಕುಮಾರ್ ಸ್ಪಷ್ಟಪಡಿಸಿದರು.

ಬಿಹಾರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಿಗಿಂತಲೂ “ಬದಲಾವಣೆಯ ಗಾಳಿ” ಈಗ ಹೆಚ್ಚು ಬಲವಾಗಿದೆ. ಬಿಜೆಪಿ ‘ಆಪರೇಷನ್ ಸಿಂಧೂರ್’ ಅನ್ನು ಚುನಾವಣಾ ಅಸ್ತ್ರವಾಗಿ ಬಳಸುತ್ತಿಲ್ಲ, ಏಕೆಂದರೆ ಬಿಹಾರದ ಜನರು ಇದಕ್ಕೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸುತ್ತಾರೆ ಎಂಬುದು ಅವರಿಗೆ ತಿಳಿದಿದೆ. ಜನರು ಇದನ್ನು ದೇಶದ ಗೌರವದ ವಿಷಯ ಎಂದು ನಂಬುತ್ತಾರೆ ಮತ್ತು ಯಾವುದೇ ಪಕ್ಷವು ಇದನ್ನು ರಾಜಕೀಯಗೊಳಿಸಬಾರದು ಎಂಬುದು ಅವರ ಅಭಿಪ್ರಾಯವಾಗಿದೆ ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕುಮಾರ್‌ ಹೇಳಿದರು.

‘ಮಹಾಘಟಬಂಧನ’ದ ಆಂತರಿಕ ನಡೆಗಳನ್ನು ವಿವರಿಸಿದ ಕನ್ಹಯ್ಯಾ ಕುಮಾರ್, ಮೈತ್ರಿಕೂಟದಲ್ಲಿ ದೊಡ್ಡ ಅಥವಾ ಚಿಕ್ಕ ಪಾಲುದಾರರು ಎಂಬ ವಿಚಾರವನ್ನು ತಳ್ಳಿಹಾಕಿದರು. “ನೀವು ಕಾರನ್ನು ನೋಡಿದರೆ, ಕ್ಲಚ್ ಎಷ್ಟು ಮುಖ್ಯವೋ, ಬ್ರೇಕ್ ಮತ್ತು ಮಿರರ್ ಕೂಡ ಅಷ್ಟೇ ಮುಖ್ಯ” ಎಂದು ಉದಾಹರಣೆ ನೀಡುವ ಮೂಲಕ ಮೈತ್ರಿಕೂಟದ ಎಲ್ಲಾ ಪಕ್ಷಗಳ ಸಮಾನ ಪ್ರಾಮುಖ್ಯತೆಯನ್ನು ಅವರು ಸ್ಪಷ್ಟಪಡಿಸಿದರು.

“ಆರ್‌ಜೆಡಿ (RJD) ದೊಡ್ಡ ಪಕ್ಷವಾಗಿದ್ದು, ಹೆಚ್ಚು ಶಾಸಕರನ್ನು ಹೊಂದಿದೆ. ಇದು ನಮ್ಮ ಮೈತ್ರಿಕೂಟಕ್ಕೆ ನಾಯಕತ್ವ ನೀಡುತ್ತದೆ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನವೂ ಅವರಿಗಿದೆ” ಎಂದು ಕನ್ಹಯ್ಯಾ ಕುಮಾರ್ ಸ್ಪಷ್ಟಪಡಿಸಿದರು. ಆದರೆ, ವಿಕಾಸ್ಶೀಲ್ ಇನ್ಸಾನ್ ಪಾರ್ಟಿಯ ಮುಖೇಶ್ ಸಹಾನಿ ಸೇರಿದಂತೆ ಮೈತ್ರಿಕೂಟದ ಎಲ್ಲಾ ಪಕ್ಷಗಳಿಗೂ ತಮ್ಮದೇ ಆದ ಪ್ರಮುಖ ಪಾತ್ರವಿದೆ ಎಂದು ಅವರು ಒತ್ತಿ ಹೇಳಿದರು.

ಕಾಂಗ್ರೆಸ್ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಕನ್ಹಯ್ಯಾ ಕುಮಾರ್ ಅವರು, ಕಾಂಗ್ರೆಸ್ ಸೇರಿದಂತೆ ಮಹಾಘಟಬಂಧನದ’ ಎಲ್ಲಾ ಪಕ್ಷಗಳೂ ಒಟ್ಟಾಗಿ ಎಲ್ಲಾ 243 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ನಮ್ಮ ಮೈತ್ರಿ ನಿಜವಾಗಿಯೂ ಸಮಸ್ಯೆಗಳ ಆಧಾರದ ಮೇಲೆ ರೂಪುಗೊಂಡಿದ್ದರೆ, ಯಾರು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಮುಖ್ಯವಾಗುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಊಟದಲ್ಲಿ ಒಂದು ಚಿಟಿಕೆ ಉಪ್ಪು ಕಡಿಮೆಯಾದರೂ ರುಚಿ ತಪ್ಪುತ್ತದೆ, ಹೆಚ್ಚಾದರೂ ಚೆನ್ನಾಗಿರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ನಿರ್ವಹಿಸುವುದು ಮುಖ್ಯ ಎಂದು ಅವರು ಉದಾಹರಣೆ ನೀಡಿ ವಿವರಿಸಿದರು.

‘ಮಹಾಘಟಬಂಧನ’ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಸ್ಥಾನಕ್ಕೆ ತೇಜಸ್ವಿ ಯಾದವ್ ಪ್ರಮುಖರಾಗುತ್ತಾರೆಯೇ ಎಂಬ ಪ್ರಶ್ನೆಗೆ, “ಇದರಲ್ಲಿ ಯಾವುದೇ ಅನುಮಾನವಿಲ್ಲ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಜನರೇ ನಿರ್ಧರಿಸುತ್ತಾರೆ. ಹೆಚ್ಚು ಶಾಸಕರು ಇರುವವರೇ ಮುಖ್ಯಮಂತ್ರಿಯಾಗುತ್ತಾರೆ. ಆರ್‌ಜೆಡಿ (RJD) ಹೆಚ್ಚು ಸ್ಥಾನಗಳನ್ನು ಗೆಲ್ಲುವುದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಅವರೇ ಅರ್ಹರು” ಎಂದು ಕನ್ಹಯ್ಯಾ ಕುಮಾರ್ ಉತ್ತರಿಸಿದರು.

ಈ ಆಯ್ಕೆ ತಾನಾಗಿಯೇ ನಡೆಯುತ್ತದೆ. ನಮ್ಮ ಮೈತ್ರಿಕೂಟದಲ್ಲಿ ಈ ಬಗ್ಗೆ ಯಾವುದೇ ಗೊಂದಲವಿಲ್ಲ. ಆದರೆ, ಎನ್‌ಡಿಎ (ಬಿಜೆಪಿ ಮೈತ್ರಿಕೂಟ)ದಲ್ಲಿ ನಿತೀಶ್ ಕುಮಾರ್ ಸಿಎಂ ಆಗುತ್ತಾರೆಯೇ ಅಥವಾ ಇಲ್ಲವೇ, ಮತ್ತು ಯಾವ ಪಕ್ಷ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಬಗ್ಗೆ ಗೊಂದಲವಿದೆ ಎಂದು ಅವರು ಟೀಕಿಸಿದರು.

ಇದು ಕೇವಲ ಒಂದು ತಂತ್ರ. ಮುಖ್ಯಮಂತ್ರಿ ದೊಡ್ಡ ಪಕ್ಷದಿಂದಲೇ ಆಗುತ್ತಾರೆ ಎಂಬುದರಲ್ಲಿ ಯಾವುದೇ ಗೊಂದಲ ಅಥವಾ ಅನುಮಾನವಿಲ್ಲ. ಇದು ಒಂದು ಸ್ವಾಭಾವಿಕ ಬೆಳವಣಿಗೆಯ ಭಾಗವಾಗಿ ತಾನಾಗಿಯೇ ನಡೆಯುತ್ತದೆ. ಆದರೆ ಚುನಾವಣೆಯಲ್ಲಿ ಮುಖ್ಯವಾದುದು ಸಮಸ್ಯೆಗಳು, ಅಭ್ಯರ್ಥಿಯ ಮುಖ ಅಲ್ಲ. ತೇಜಸ್ವಿ ಯಾದವ್ ಅವರೇ ಮಹಾಘಟಬಂಧನದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಬಗ್ಗೆ ಯಾವುದೇ ಅನುಮಾನ ಅಥವಾ ವಿವಾದ ಇಲ್ಲ ಎಂದು ಕನ್ಹಯ್ಯಾ ಕುಮಾರ್ ಪಿಟಿಐಗೆ ತಿಳಿಸಿದರು.

‘ಮಹಾಘಟಬಂಧನ’ ಸ್ಪಷ್ಟ ಬಹುಮತ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಕುಮಾರ್, ನಿರುದ್ಯೋಗ, ವಲಸೆ, ಶಿಕ್ಷಣ, ರೈತರ ಸಮಸ್ಯೆಗಳು, ಪರೀಕ್ಷೆಗಳಲ್ಲಿನ ಅಕ್ರಮಗಳು ಮತ್ತು ಕಳಪೆ ಆರೋಗ್ಯ ಸೇವೆಗಳಂತಹ ವಿಷಯಗಳೇ ಚುನಾವಣೆಯಲ್ಲಿ ಪ್ರಮುಖವಾಗಿವೆ ಎಂದು ಹೇಳಿದರು. ಈಗ ಸರ್ಕಾರವನ್ನು ಅಧಿಕಾರಿಗಳು “ನಿರ್ದಯವಾಗಿ” ನಡೆಸುತ್ತಿರುವುದರಿಂದ ಜನರು ಬದಲಾವಣೆಗಾಗಿ ಮತ ಚಲಾಯಿಸುತ್ತಾರೆ ಎಂದು ತಾವು ನಿರೀಕ್ಷಿಸುವುದಾಗಿ ಕನ್ಹಯ್ಯಾ ಕುಮಾರ್ ತಿಳಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ, ‘ಮಹಾಘಟಬಂಧನದ’ ಅತಿದೊಡ್ಡ ಪಕ್ಷವಾದ ಆರ್‌ಜೆಡಿ (RJD) 144 ಸ್ಥಾನಗಳಲ್ಲಿ ಸ್ಪರ್ಧಿಸಿ 75ರಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ, ಕೇವಲ 19 ಸ್ಥಾನಗಳಿಗೆ ತೃಪ್ತಿಪಟ್ಟಿತ್ತು. ಮೈತ್ರಿಕೂಟದ ಭಾಗವಾಗಿದ್ದ ಸಿಪಿಐ (ಎಂ.ಎಲ್.) ಲಿಬರೇಷನ್ 19 ಸ್ಥಾನಗಳಲ್ಲಿ ಸ್ಪರ್ಧಿಸಿ 12ರಲ್ಲಿ ಜಯಗಳಿಸಿತ್ತು. ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯು 2025ರ ಅಕ್ಟೋಬರ್-ನವೆಂಬರ್ ಸುಮಾರಿಗೆ ನಡೆಯುವ ಸಾಧ್ಯತೆ ಇದೆ.

ಪಶ್ಚಿಮ ಬಂಗಾಳ | ಕಾನೂನು ಕಾಲೇಜಿನೊಳಗೆ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...