Homeಮುಖಪುಟಬಿಹಾರ: ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ

ಬಿಹಾರ: ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ

ಸಿಎಂ ನಿತೀಶ್ ಕುಮಾರ್, ಆರ್‌ಜೆಡಿಯೊಂದಿಗೆ ಹೆಚ್ಚು ಬೆರೆಯುತ್ತಿರುವುದು ಬಿಜೆಪಿಯನ್ನು ಆತಂಕಕ್ಕೆ ನೂಕಿದೆ.

- Advertisement -
- Advertisement -

ಬಿಹಾರದಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂನ ನಾಲ್ವರು ಶಾಸಕರು ವಿರೋಧ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ತೇಜಸ್ವಿ ಯಾದವ್ ಅವರ ಆರ್‌ಜೆಡಿ ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

243 ಸದಸ್ಯರ ವಿಧಾನಸಭೆಯಲ್ಲಿ ಆರ್‌ಜೆಡಿ ಈಗ 80 ಶಾಸಕರನ್ನು ಹೊಂದಿದೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ 45 ಶಾಸಕರನ್ನು ಹೊಂದಿದೆ. ಅವರ ಮಿತ್ರ ಪಕ್ಷ ಬಿಜೆಪಿಗಿಂತ ಮೂರು ಹೆಚ್ಚು ಶಾಸಕರನ್ನು ಆರ್‌ಜೆಡಿ ಹೊಂದಿದೆ.

ಒಂದೆಡೆ ಆರ್‌ಜೆಡಿ ಪಕ್ಷ ಬಿಜೆಪಿಗೆ ಚಿಂತೆಯನ್ನು ನೀಡುತ್ತಿ‌ದರೇ, ಅದರ ಜೊತೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಮಿತ್ರ ಪಕ್ಷಕ್ಕಿಂತ ಹೆಚ್ಚಾಗಿ RJD ಯೊಂದಿಗೆ ಬೆರೆಯುತ್ತಿರುವುದು ಕೂಡ ಬಿಜೆಪಿಗೆ ಮತ್ತಷ್ಟು ಆತಂಕ ಉಂಟು ಮಾಡುತ್ತಿದೆ.

2020 ರ ಬಿಹಾರ ಚುನಾವಣೆಯಲ್ಲಿ, RJD ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು, ಆದರೆ ವಿರೋಧ ಪಕ್ಷವು ಬಹುಮತದ ಕೊರತೆಯನ್ನು ಅನುಭವಿಸಿತು. ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗೆ ಸೇರಿ ಅಧಿಕಾರ ಪಡೆದರು. ಆದರೆ ಅವರ ಪಕ್ಷವು ಮೂರನೇ ಸ್ಥಾನವನ್ನು ಗಳಿಸಿದ್ದರಿಂದ ಮೈತ್ರಿಯಲ್ಲಿ ಸ್ಥಾನಮಾನವನ್ನು ಕಡಿಮೆಗೊಳಿಸಿಕೊಂಡಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ: ಹೊಸ ಸರ್ಕಾರ ರಚನೆಗೂ ಮುನ್ನವೇ ಸಚಿವ ಸ್ಥಾನಕ್ಕೆ ಒಳಜಗಳ, ಏಕನಾಥ್ ಶಿಂಧೆ ಸ್ಪಷ್ಟನೆ

ಕಳೆದ ಎರಡು ವರ್ಷಗಳಲ್ಲಿ, ನಿತೀಶ್ ಕುಮಾರ್ ಅವರ ಬಿಜೆಪಿಯೊಂದಿಗಿನ ಸಂಬಂಧವು ಜಟಿಲವಾಗಿದೆ. ಇದು ಆಗಾಗ್ಗೆ ಹೊರ ಬಂದಿದೆ ಕೂಡ. ಇನ್ನು, ಜಾತಿ ಗಣತಿಯಂತಹ ವಿಷಯಗಳಲ್ಲಿ ಮುಖ್ಯಮಂತ್ರಿ ಮತ್ತು ತೇಜಸ್ವಿ ಯಾದವ್ ಇಬ್ಬರು ಒಂದೇ ರೀತಿಯಲ್ಲಿದ್ದಾರೆ. ಈ ಎಲ್ಲಾ ಲಕ್ಷಣಗಳು ಮತ್ತೆ ಇಬ್ಬರು ಒಂದಾಗಬಹುದು ಎಂಬ ಊಹಾಪೋಹಕ್ಕೆ ಕಾರಣವಾಗಿದೆ.

ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್, ತಮ್ಮ ಪಕ್ಷಕ್ಕೆ ಎಐಎಂಐಎಂನ ನಾಲ್ವರು ಶಾಸಕರ ಸೇರ್ಪಡೆಯನ್ನು ರಾಜ್ಯದಲ್ಲಿ “ಜಾತ್ಯತೀತ ಶಕ್ತಿಗಳ ಬಲವರ್ಧನೆ” ಎಂದು ಕರೆದಿದ್ದಾರೆ.

ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ 2020 ರ ಬಿಹಾರ ಚುನಾವಣೆಯಲ್ಲಿ ಐದು ಸ್ಥಾನಗಳನ್ನು ಗೆದ್ದಿದೆ ಆದರೆ ಐವರು ಶಾಸಕರ ಪೈಕಿ ಒಬ್ಬರನ್ನು ಹೊರತುಪಡಿಸಿ ಎಲ್ಲರೂ ಆರ್‌ಜೆಡಿ ಸೇರಿದ್ದಾರೆ.

ಎಲ್ಲಾ ನಾಲ್ವರು ಶಾಸಕರು ಆರೋಗ್ಯ, ಶಿಕ್ಷಣ ಮತ್ತು ಇತರ ರೀತಿಯ ಸಾರ್ವಜನಿಕ ಕಲ್ಯಾಣದ ಬಗ್ಗೆ ಕಾಳಜಿ ವಹಿಸದ ಸರ್ಕಾರದ ನಿರಾಸಕ್ತಿಯಿಂದ ಬಳಲುತ್ತಿರುವ “ರಾಜ್ಯದ ಅತ್ಯಂತ ಬಡ, ಪ್ರವಾಹ ಪೀಡಿತ ಪ್ರದೇಶದಿಂದ ಬಂದವರು” ಎಂದು ತೇಜಸ್ವಿ ಯಾದವ್ ಒತ್ತಿ ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಆರ್‌ಜೆಡಿ 75 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಉಪಚುನಾವಣೆಯಲ್ಲಿ ಮತ್ತೊಂದು ಸ್ಥಾನ ಗೆದ್ದಿದೆ. ಈಗ ನಾಲ್ವರು ಶಾಸಕರು ಸೇರಿ ಒಟ್ಟು 80 ಶಾಸಕರನ್ನು ಹೊಂದಿದೆ.

“ಎಲ್ಲಾ ಜಾತ್ಯತೀತ ಶಕ್ತಿಗಳು ಒಗ್ಗೂಡಿ ಬಲಿಷ್ಠವಾಗಬೇಕೆಂದು ನಾವು ಬಯಸುತ್ತೇವೆ. ಕೋಮುವಾದದ ವಿರುದ್ಧದ ಹೋರಾಟದಲ್ಲಿ ಆರ್‌ಜೆಡಿ ಪಾತ್ರವನ್ನು ಅತಿಯಾಗಿ ಹೇಳಲಾಗುವುದಿಲ್ಲ. ಬಿಹಾರದಲ್ಲಿ ಬಿಜೆಪಿಯು ಸ್ವಂತವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯವನ್ನು ಎಂದಿಗೂ ತೋರಿಸಲಿಲ್ಲ. ಎನ್‌ಡಿಎಯು ಬಿಹಾರದಲ್ಲಿ ಅನೈತಿಕ ವಿಧಾನಗಳಿಂದ ಅಧಿಕಾರವನ್ನು ಪಡೆದಿರಬಹುದು. ಆದರೆ, ಸಂಖ್ಯಾಬಲದಲ್ಲಿ ಮೂರನೇ ಸ್ಥಾನದಲ್ಲಿರುವ ಮುಖ್ಯಮಂತ್ರಿಯನ್ನು ಸಹಿಸಿಕೊಳ್ಳುತ್ತಿದೆ” ಎಂದು ಆರ್‌ಜೆಡಿ ನಾಯಕ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...