Homeಮುಖಪುಟಬಿಹಾರ: ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ

ಬಿಹಾರ: ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ

ಸಿಎಂ ನಿತೀಶ್ ಕುಮಾರ್, ಆರ್‌ಜೆಡಿಯೊಂದಿಗೆ ಹೆಚ್ಚು ಬೆರೆಯುತ್ತಿರುವುದು ಬಿಜೆಪಿಯನ್ನು ಆತಂಕಕ್ಕೆ ನೂಕಿದೆ.

- Advertisement -
- Advertisement -

ಬಿಹಾರದಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂನ ನಾಲ್ವರು ಶಾಸಕರು ವಿರೋಧ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ತೇಜಸ್ವಿ ಯಾದವ್ ಅವರ ಆರ್‌ಜೆಡಿ ಮತ್ತೊಮ್ಮೆ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

243 ಸದಸ್ಯರ ವಿಧಾನಸಭೆಯಲ್ಲಿ ಆರ್‌ಜೆಡಿ ಈಗ 80 ಶಾಸಕರನ್ನು ಹೊಂದಿದೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ ಯುನೈಟೆಡ್ 45 ಶಾಸಕರನ್ನು ಹೊಂದಿದೆ. ಅವರ ಮಿತ್ರ ಪಕ್ಷ ಬಿಜೆಪಿಗಿಂತ ಮೂರು ಹೆಚ್ಚು ಶಾಸಕರನ್ನು ಆರ್‌ಜೆಡಿ ಹೊಂದಿದೆ.

ಒಂದೆಡೆ ಆರ್‌ಜೆಡಿ ಪಕ್ಷ ಬಿಜೆಪಿಗೆ ಚಿಂತೆಯನ್ನು ನೀಡುತ್ತಿ‌ದರೇ, ಅದರ ಜೊತೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಮಿತ್ರ ಪಕ್ಷಕ್ಕಿಂತ ಹೆಚ್ಚಾಗಿ RJD ಯೊಂದಿಗೆ ಬೆರೆಯುತ್ತಿರುವುದು ಕೂಡ ಬಿಜೆಪಿಗೆ ಮತ್ತಷ್ಟು ಆತಂಕ ಉಂಟು ಮಾಡುತ್ತಿದೆ.

2020 ರ ಬಿಹಾರ ಚುನಾವಣೆಯಲ್ಲಿ, RJD ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು, ಆದರೆ ವಿರೋಧ ಪಕ್ಷವು ಬಹುಮತದ ಕೊರತೆಯನ್ನು ಅನುಭವಿಸಿತು. ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗೆ ಸೇರಿ ಅಧಿಕಾರ ಪಡೆದರು. ಆದರೆ ಅವರ ಪಕ್ಷವು ಮೂರನೇ ಸ್ಥಾನವನ್ನು ಗಳಿಸಿದ್ದರಿಂದ ಮೈತ್ರಿಯಲ್ಲಿ ಸ್ಥಾನಮಾನವನ್ನು ಕಡಿಮೆಗೊಳಿಸಿಕೊಂಡಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ: ಹೊಸ ಸರ್ಕಾರ ರಚನೆಗೂ ಮುನ್ನವೇ ಸಚಿವ ಸ್ಥಾನಕ್ಕೆ ಒಳಜಗಳ, ಏಕನಾಥ್ ಶಿಂಧೆ ಸ್ಪಷ್ಟನೆ

ಕಳೆದ ಎರಡು ವರ್ಷಗಳಲ್ಲಿ, ನಿತೀಶ್ ಕುಮಾರ್ ಅವರ ಬಿಜೆಪಿಯೊಂದಿಗಿನ ಸಂಬಂಧವು ಜಟಿಲವಾಗಿದೆ. ಇದು ಆಗಾಗ್ಗೆ ಹೊರ ಬಂದಿದೆ ಕೂಡ. ಇನ್ನು, ಜಾತಿ ಗಣತಿಯಂತಹ ವಿಷಯಗಳಲ್ಲಿ ಮುಖ್ಯಮಂತ್ರಿ ಮತ್ತು ತೇಜಸ್ವಿ ಯಾದವ್ ಇಬ್ಬರು ಒಂದೇ ರೀತಿಯಲ್ಲಿದ್ದಾರೆ. ಈ ಎಲ್ಲಾ ಲಕ್ಷಣಗಳು ಮತ್ತೆ ಇಬ್ಬರು ಒಂದಾಗಬಹುದು ಎಂಬ ಊಹಾಪೋಹಕ್ಕೆ ಕಾರಣವಾಗಿದೆ.

ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್, ತಮ್ಮ ಪಕ್ಷಕ್ಕೆ ಎಐಎಂಐಎಂನ ನಾಲ್ವರು ಶಾಸಕರ ಸೇರ್ಪಡೆಯನ್ನು ರಾಜ್ಯದಲ್ಲಿ “ಜಾತ್ಯತೀತ ಶಕ್ತಿಗಳ ಬಲವರ್ಧನೆ” ಎಂದು ಕರೆದಿದ್ದಾರೆ.

ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ 2020 ರ ಬಿಹಾರ ಚುನಾವಣೆಯಲ್ಲಿ ಐದು ಸ್ಥಾನಗಳನ್ನು ಗೆದ್ದಿದೆ ಆದರೆ ಐವರು ಶಾಸಕರ ಪೈಕಿ ಒಬ್ಬರನ್ನು ಹೊರತುಪಡಿಸಿ ಎಲ್ಲರೂ ಆರ್‌ಜೆಡಿ ಸೇರಿದ್ದಾರೆ.

ಎಲ್ಲಾ ನಾಲ್ವರು ಶಾಸಕರು ಆರೋಗ್ಯ, ಶಿಕ್ಷಣ ಮತ್ತು ಇತರ ರೀತಿಯ ಸಾರ್ವಜನಿಕ ಕಲ್ಯಾಣದ ಬಗ್ಗೆ ಕಾಳಜಿ ವಹಿಸದ ಸರ್ಕಾರದ ನಿರಾಸಕ್ತಿಯಿಂದ ಬಳಲುತ್ತಿರುವ “ರಾಜ್ಯದ ಅತ್ಯಂತ ಬಡ, ಪ್ರವಾಹ ಪೀಡಿತ ಪ್ರದೇಶದಿಂದ ಬಂದವರು” ಎಂದು ತೇಜಸ್ವಿ ಯಾದವ್ ಒತ್ತಿ ಹೇಳಿದ್ದಾರೆ.

ಕಳೆದ ಚುನಾವಣೆಯಲ್ಲಿ ಆರ್‌ಜೆಡಿ 75 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಉಪಚುನಾವಣೆಯಲ್ಲಿ ಮತ್ತೊಂದು ಸ್ಥಾನ ಗೆದ್ದಿದೆ. ಈಗ ನಾಲ್ವರು ಶಾಸಕರು ಸೇರಿ ಒಟ್ಟು 80 ಶಾಸಕರನ್ನು ಹೊಂದಿದೆ.

“ಎಲ್ಲಾ ಜಾತ್ಯತೀತ ಶಕ್ತಿಗಳು ಒಗ್ಗೂಡಿ ಬಲಿಷ್ಠವಾಗಬೇಕೆಂದು ನಾವು ಬಯಸುತ್ತೇವೆ. ಕೋಮುವಾದದ ವಿರುದ್ಧದ ಹೋರಾಟದಲ್ಲಿ ಆರ್‌ಜೆಡಿ ಪಾತ್ರವನ್ನು ಅತಿಯಾಗಿ ಹೇಳಲಾಗುವುದಿಲ್ಲ. ಬಿಹಾರದಲ್ಲಿ ಬಿಜೆಪಿಯು ಸ್ವಂತವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯವನ್ನು ಎಂದಿಗೂ ತೋರಿಸಲಿಲ್ಲ. ಎನ್‌ಡಿಎಯು ಬಿಹಾರದಲ್ಲಿ ಅನೈತಿಕ ವಿಧಾನಗಳಿಂದ ಅಧಿಕಾರವನ್ನು ಪಡೆದಿರಬಹುದು. ಆದರೆ, ಸಂಖ್ಯಾಬಲದಲ್ಲಿ ಮೂರನೇ ಸ್ಥಾನದಲ್ಲಿರುವ ಮುಖ್ಯಮಂತ್ರಿಯನ್ನು ಸಹಿಸಿಕೊಳ್ಳುತ್ತಿದೆ” ಎಂದು ಆರ್‌ಜೆಡಿ ನಾಯಕ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಪತ್ರಕರ್ತ ಜುಬೇರ್‌ ವಿರುದ್ಧ ದೂರು ನೀಡಿದ್ದ ಟ್ವಿಟರ್‌ ಅಕೌಂಟ್‌ ಡಿಲೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...