Homeಮುಖಪುಟ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ಮೈತ್ರಿಕೂಟದ ಪಕ್ಷಗಳಾದ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮತ್ತು ಎಡ ಪಕ್ಷಗಳು ಬಿಹಾರ ವಿಧಾನಸಭಾ ಚುಣಾವಣೆಯ ಪ್ರಣಾಳಿಕೆ ಬಿಡುಗಡೆಗೊಳಿಸಿದೆ

- Advertisement -
- Advertisement -

ಬಿಹಾರದ ”ಮಹಾಘಟಬಂಧನ್” ಮೈತ್ರಿ ಪಕ್ಷಗಳಾದ ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಮತ್ತು ಎಡ ಪಕ್ಷಗಳು ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಗೊಳಿಸಿದೆ. ಪ್ರಣಾಳಿಕೆಯೂ ಕೃಷಿ ಕಾನೂನುಗಳು ಮತ್ತು ಉದ್ಯೋಗಗಳ ಮೇಲೆ ಕೇಂದ್ರೀಕರಿಸಿದೆ.

ಮೈತ್ರಿಕೂಟವು ಚುನಾವಣೆಯಲ್ಲಿ ಗೆದ್ದರೆ, ಆರ್ಜೆಡಿಯ ತೇಜಶ್ವಿ ಯಾದವ್ ಅವರ ನೇತೃತ್ವದಲ್ಲಿ ಕಳೆದ ತಿಂಗಳು ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ವಿರೋಧಿ ಕಾನೂನುಗಳನ್ನು ಮೊದಲ ವಿಧಾನಸಭಾ ಅಧಿವೇಶನದಲ್ಲಿಯೇ ರದ್ದುಗೊಳಿಸುವ ಮಸೂದೆಯನ್ನು ಅಂಗೀಕರಿಸಲಿದೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಬಿಜೆಪಿ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ಬಿಜೆಪಿಯನ್ನು ತೀವ್ರ ತರಾಟೆಗೆ ಪಡೆದ ಸುರ್ಜೆವಾಲಾ, “ಬಿಜೆಪಿ ಮೂರು ಮೈತ್ರಿಗಳ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ, ಒಂದು ಜನತಾದಳ (ಯುನೈಟೆಡ್) ನೊಂದಿಗೆ, ಇನ್ನೊಂದು ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ) ಯೊಂದಿಗೆ ಮತ್ತು ಮೂರನೆಯದು ’ಓವೈಸಿ ಸಾಹೇಬ್’ ನೊಂದಿಗೆ” ಎಂದು ಹೇಳಿದ್ದಾರೆ.

“ಮಹಾಘಟಬಂಧನ್‌‌” ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಶ್ವಿ ಯಾದವ್ ಮಾತನಾಡಿ, ಪ್ರವಾಹದಿಂದ ಎಷ್ಟು ಜನರು ಹಾನಿಗೊಳಗಾಗಿದ್ದಾರೆಂದು ನೋಡಲು ಕೇಂದ್ರ ತಂಡವು ಇಲ್ಲಿಯವರೆಗೆ ರಾಜ್ಯಕ್ಕೆ ಭೇಟಿ ನೀಡಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಈ ವಾರದ ಆರಂಭದಲ್ಲಿ, “ಮಹಾಘಟಬಂಧನ್” ಮೈತ್ರಿಕೂಟದ ಪಕ್ಷಗಳು ಬಿಹಾರ ವಿಧಾನಸಭೆಯ 243 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದವು. ಬಿಹಾರದಲ್ಲಿ ಅಕ್ಟೋಬರ್ 28 ರಿಂದ ಮೂರು ಹಂತಗಳಲ್ಲಿ ನಡೆಯಲಿದ್ದು, ಫಲಿತಾಂಶಗಳನ್ನು ನವೆಂಬರ್ 10 ರಂದು ಘೋಷಿಸಲಾಗುತ್ತದೆ.

ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆ: ಶುರುವಾಗಿದೆ NDA ವಿರುದ್ಧ ’ಬ್ಯಾನರ್’ ಯುದ್ಧ!‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...

ತಮಿಳುನಾಡು | ಕಸ್ಟಡಿಯಲ್ಲಿದ್ದ ದಲಿತ ಯುವಕ ಸಾವು : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ

ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮಾನಮದುರೈನಲ್ಲಿ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ 26 ವರ್ಷದ ದಲಿತ ಯುವಕ ಚಿಕಿತ್ಸೆ ಪಡೆಯುತ್ತಿದ್ದಾಗ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದು, ಪೊಲೀಸರ ಕಸ್ಟಡಿ ಚಿತ್ರಹಿಂಸೆಯೇ ಈ ಸಾವಿಗೆ ಕಾರಣ ಎಂದು...

ಕೇರಳ | ದೇವಸ್ಥಾನದ ಉತ್ಸವದಲ್ಲಿ ಗುಂಪು ಹಲ್ಲೆ : 18 ವರ್ಷದ ಯುವಕ ಸಾವು

ಕೇರಳದ ಕೊಲ್ಲಂ ಜಿಲ್ಲೆಯ ದೇವಸ್ಥಾನವೊಂದರ ಉತ್ಸವದಲ್ಲಿ ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವಿಗೀಡಾಗಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಮೃತನ...

ಬಿಹಾರ : ಕಂಬಕ್ಕೆ ಕಟ್ಟಿ ಥಳಿಸಿ, ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಗುಂಪು : ಗಂಭೀರವಾಗಿ ಗಾಯಗೊಂಡಿದ್ದ ಮುಸ್ಲಿಂ ಮಹಿಳೆ ಸಾವು

ರಂಝಾನ್ ಉಪವಾಸ ನಿರತ ಮುಸ್ಲಿಂ ಮಹಿಳೆಯೊಬ್ಬರನ್ನು ಕಂಬಕ್ಕೆ ಕಟ್ಟಿ ಭೀಕರವಾಗಿ ಥಳಿಸಿ, ಆಕೆ ನೀರು ಕೇಳಿದಾಗ ಮದ್ಯ ಮಿಶ್ರಿತ ಮೂತ್ರ ಕುಡಿಸಿದ ಅಮಾನವೀಯ, ಅನಾಗರಿಕ ಮತ್ತು ಆಘಾತಕಾರಿ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...