Homeಮುಖಪುಟಬಿಹಾರ: ಯುವ ಪತ್ರಕರ್ತನ ಅಪಹರಿಸಿ-ಕೊಲೆ; ಮಹಿಳೆ ಸೇರಿ 6 ಜನರ ಬಂಧನ

ಬಿಹಾರ: ಯುವ ಪತ್ರಕರ್ತನ ಅಪಹರಿಸಿ-ಕೊಲೆ; ಮಹಿಳೆ ಸೇರಿ 6 ಜನರ ಬಂಧನ

- Advertisement -
- Advertisement -

24 ವರ್ಷದ ಪತ್ರಕರ್ತ ಬುದ್ದಿನಾಥ್ ಝಾ ಅಲಿಯಾಸ್ ಅವಿನಾಶ್ ಝಾ ಅವರ ಅಪಹರಣ ಮತ್ತು ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಿ ಒಬ್ಬ ಮಹಿಳೆ ಸೇರಿದಂತೆ ಆರು ಜನರನ್ನು ಬಿಹಾರದ ಮಧುಬನಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಜಿಲ್ಲೆಯ ಬೆನಿಪಟ್ಟಿ ಠಾಣೆಯ ಪೊಲೀಸರ ಪ್ರಕಾರ, ಬುದ್ಧಿನಾಥ್ ಅವರನ್ನು ನವೆಂಬರ್ 9 ರ ಮಂಗಳವಾರ ರಾತ್ರಿ ಅಪಹರಿಸಲಾಗಿತ್ತು. ನಂತರ ಅವರ ಮೃತದೇಹವು ಸುಟ್ಟು ಕರುಕಲಾದ ಸ್ಥಿತಿಯಲ್ಲಿ, ಶುಕ್ರವಾರ ಸಂಜೆ ರಾಜ್ಯ ಹೆದ್ದಾರಿ 52 ರ ಉರೇನಾ ಗ್ರಾಮದಲ್ಲಿ ಪತ್ತೆಯಾಗಿತ್ತು.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

ಸಾವಿಗೀಡಾಗಿರುವ ಪತ್ರಕರ್ತ ಬುದ್ಧಿನಾಥ್‌‌ ತಮ್ಮ ವೆಬ್ ಪೋರ್ಟಲ್ ಮತ್ತು ಫೇಸ್‌ಬುಕ್ ಪೋಸ್ಟ್‌ಗಳಲ್ಲಿ ಮಧುಬನಿಯಲ್ಲಿ ಸಕ್ರಿಯವಾಗಿರುವ ‘ವೈದ್ಯಕೀಯ ಮಾಫಿಯಾ’ ವಿರುದ್ಧ ಅಭಿಯಾನವನ್ನು ಪ್ರಾರಂಭಿಸಿದ್ದರು. ಈ ಭಾಗವಾಗಿ ಖಾಸಗಿ ನರ್ಸಿಂಗ್ ಹೋಂಗಳು ಮತ್ತು ಆಸ್ಪತ್ರೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಅವರ ತನಿಖೆಯ ಮೇರೆಗೆ ಜಿಲ್ಲಾ ಸಿವಿಲ್ ಸರ್ಜನ್ ನಾಲ್ಕು ನೋಂದಣಿಯಾಗದ ಮತ್ತು ಗುಣಮಟ್ಟವಿಲ್ಲದ ಆಸ್ಪತ್ರೆಗಳಿಗೆ 50,000 ರೂ.ಗಳ ದಂಡವನ್ನು ವಿಧಿಸಿದ್ದರು.

ಇನ್ನೂ ಹತ್ತು ನೋಂದಣಿಯಾಗದ ಮತ್ತು ಕಳಪೆ ಗುಣಮಟ್ಟದ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಅವರು ನವೆಂಬರ್ 7 ರಂದು ತಮ್ಮ ಫೇಸ್ ಬುಕ್ ಪೋಸ್ಟ್ ಮೂಲಕ, ‘ನವೆಂಬರ್ 15 ರಂದು ಇತರ ಆಸ್ಪತ್ರೆಗಳ ಕಾರ್ಯನಿರ್ವಹಣೆಯ ವರದಿಗಳನ್ನು ಬಿಡುಗಡೆ ಮಾಡುತ್ತೇನೆ’ ಎಂದು ಘೋಷಿಸಿದ್ದರು.

ಆರ್‌ಟಿಐ ಕಾಯ್ದೆಯ ಮೂಲಕ ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿ ಕುರಿತು ಮಾಹಿತಿ ಕೇಳಿದ್ದ ಅವರು ವೈದ್ಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಅವರ ಹಿರಿಯ ಸಹೋದರ ಚಂದ್ರಶೇಖರ್ ಕುಮಾರ್ ಅವರು ನೀಡಿರುವ ದೂರಿನಲ್ಲಿ, “ನಕಲಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳ ಪಟ್ಟಿಯನ್ನು ಬುದ್ಧಿನಾಥ್‌ ಸಲ್ಲಿಸಿದ್ದು, ಅವುಗಳ ವೈದ್ಯರು, ಪ್ರವರ್ತಕರು ಮತ್ತು ಸಿಬ್ಬಂದಿಗಳು ಅವಿನಾಶ್‌ನ ಅಪಹರಣ ಮತ್ತು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

ಬುದ್ದಿನಾಥ್‌ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಕೊನೆಯ ಬಾರಿಗೆ ಕಾಣಿಸಿಕೊಂಡಿರುವುದಾಗಿ ಅವರ ಮನೆಯ ಹತ್ತಿರದ ಸಿಸಿಟಿವಿ ಫೂಟೇಜ್‌ನಲ್ಲಿ ದಾಖಲಾಗಿದೆ. ರಾತ್ರಿ 9 ರಿಂದ ಹಲವಾರು ಬಾರಿ ಕಿರಿದಾದ ಓಣಿಯಲ್ಲಿರುವ ತನ್ನ ಮನೆಯಿಂದ ಹೊರಗೆ ಬರುವುದು ಮತ್ತು ಹತ್ತಿರದ ಮುಖ್ಯ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ. ಕೊನೆಯ ಬಾರಿಗೆ ಅವರು ರಾತ್ರಿ 9.58 ಕ್ಕೆ ಕುತ್ತಿಗೆಗೆ ಹಳದಿ ಸ್ಕಾರ್ಫ್ ಧರಿಸಿ ಮನೆಯಿಂದ ಹೊರಟಿರುವುದಾಗಿ ಸಿಸಿಟಿವಿ ಫೂಟೇಜ್‌ನಲ್ಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

“ಅವರ ಬೈಕ್‌ ಇನ್ನೂ ಮನೆಯಲ್ಲಿಯೇ ಇತ್ತು. ಲ್ಯಾಪ್‌ಟಾಪ್ ಕೂಡ ಆನ್ ಆಗಿತ್ತು. ಬುದ್ದಿನಾಥ್ ಅವರು ಮಂಗಳವಾರ ತಡರಾತ್ರಿ ಅಥವಾ ಬುಧವಾರ ಬೆಳಗ್ಗೆ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದು, ವಾಪಸ್ ಬರುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಅವನು ಹಿಂತಿರುಗಲಿಲ್ಲ” ಎಂದಿರುವ ಅವರ ಕುಟುಂಬದವರು, ಮನೆಯಿಂದ ತೆರಳಿ ಒಂದು ದಿನವಾದರೂ ಅವರು ಮನೆಗೆ ಹಿಂದಿರುಗದೇ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದಲ್ಲಿ ಇದುವರೆಗೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರು ಮಂದಿಯನ್ನು ರೋಷನ್ ಕುಮಾರ್, ಬಿಟ್ಟು ಕುಮಾರ್, ದೀಪಕ್ ಕುಮಾರ್, ಪವನ್ ಕುಮಾರ್, ಮನೀಶ್ ಕುಮಾರ್ ಮತ್ತು ಪೂರ್ಣ ಕಲಾ ದೇವಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ತುಮಕೂರು: ಸ್ಥಳೀಯ ಪತ್ರಕರ್ತನ ಮೇಲೆ ಹಲ್ಲೆ, ದೂರು ದಾಖಲು

ಇದೀಗ ಬಂಧನಕ್ಕೆ ಒಳಗಾಗಿರುವ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಹೇಳಿರುವಂತೆ, ಆರೋಪಿಗಳಲ್ಲಿ ಒಬ್ಬರಾಗಿರುವ ಪೂರ್ಣ ಕಲಾ ದೇವಿ ತಾನು ಬುದ್ಧಿನಾಥ್ ಝಾ ಅವರನ್ನು ಪ್ರೀತಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ. ಆದರೆ ಬಂಧನಕ್ಕೆ ಒಳಗಾಗಿರುವ ಪವನ್ ಕುಮಾರ್ ಎಂಬಾತ ಆಕೆಯನ್ನು ಪ್ರೀತಿಸುತ್ತಿದ್ದ.

“ಬಂಧಿತರಾಗಿರುವ ಪವನ್, ಬುದ್ಧಿನಾಥ್ ಝಾ ಮತ್ತು ಪೂರ್ಣ ಕಲಾ ದೇವಿ ಪರಸ್ಪರ ಮಾತನಾಡುತ್ತಿರುವುದನ್ನು ಸಹಿಸುತ್ತಿರಲಿಲ್ಲ. ಬುದ್ಧಿನಾಥ್ ಜೊತೆ ಮಾತನಾಡದಂತೆ ಆರೋಪಿ ಪವನ್, ಪೂರ್ಣ ಕಲಾ ದೇವಿ ಮೇಲೆ ಒತ್ತಡ ಹೇರುತ್ತಿದ್ದನು” ಎಂದು ಪೊಲೀಸರು ತಿಳಿಸಿದ್ದಾರೆ.

ಇಷ್ಟೇ ಅಲ್ಲದೆ, ಪವನ್ ಕುಮಾರ್ ಮತ್ತು ರೋಷನ್ ಕುಮಾರ್ ತಮ್ಮ ವೈಯಕ್ತಿಕ ಕಾರಣಕ್ಕಾಗಿ ಬುದ್ಧಿನಾಥ್ ಝಾ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಹಾರದ ಬೆನಿಪಟ್ಟಿಯಲ್ಲಿ ಪರೀಕ್ಷಾ ಪ್ರಯೋಗಾಲಯವನ್ನು ನಡೆಸುತ್ತಿರುವ ರೋಷನ್ ಕುಮಾರ್ ಕೊಲೆಯಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ, ಇದುವರೆಗಿನ ತನಿಖೆಯಲ್ಲಿ ಬುದ್ದಿನಾಥ್ ಝಾ ಅವರನ್ನು ಸ್ಥಳೀಯ ಪತ್ರಕರ್ತ ಎಂದು ಪೊಲೀಸರು ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...