Homeಮುಖಪುಟಬಿಹಾರ: ಯುವ ಪತ್ರಕರ್ತನ ಅಪಹರಿಸಿ-ಕೊಲೆ; ಮಹಿಳೆ ಸೇರಿ 6 ಜನರ ಬಂಧನ

ಬಿಹಾರ: ಯುವ ಪತ್ರಕರ್ತನ ಅಪಹರಿಸಿ-ಕೊಲೆ; ಮಹಿಳೆ ಸೇರಿ 6 ಜನರ ಬಂಧನ

- Advertisement -
- Advertisement -

24 ವರ್ಷದ ಪತ್ರಕರ್ತ ಬುದ್ದಿನಾಥ್ ಝಾ ಅಲಿಯಾಸ್ ಅವಿನಾಶ್ ಝಾ ಅವರ ಅಪಹರಣ ಮತ್ತು ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಿ ಒಬ್ಬ ಮಹಿಳೆ ಸೇರಿದಂತೆ ಆರು ಜನರನ್ನು ಬಿಹಾರದ ಮಧುಬನಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಜಿಲ್ಲೆಯ ಬೆನಿಪಟ್ಟಿ ಠಾಣೆಯ ಪೊಲೀಸರ ಪ್ರಕಾರ, ಬುದ್ಧಿನಾಥ್ ಅವರನ್ನು ನವೆಂಬರ್ 9 ರ ಮಂಗಳವಾರ ರಾತ್ರಿ ಅಪಹರಿಸಲಾಗಿತ್ತು. ನಂತರ ಅವರ ಮೃತದೇಹವು ಸುಟ್ಟು ಕರುಕಲಾದ ಸ್ಥಿತಿಯಲ್ಲಿ, ಶುಕ್ರವಾರ ಸಂಜೆ ರಾಜ್ಯ ಹೆದ್ದಾರಿ 52 ರ ಉರೇನಾ ಗ್ರಾಮದಲ್ಲಿ ಪತ್ತೆಯಾಗಿತ್ತು.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

ಸಾವಿಗೀಡಾಗಿರುವ ಪತ್ರಕರ್ತ ಬುದ್ಧಿನಾಥ್‌‌ ತಮ್ಮ ವೆಬ್ ಪೋರ್ಟಲ್ ಮತ್ತು ಫೇಸ್‌ಬುಕ್ ಪೋಸ್ಟ್‌ಗಳಲ್ಲಿ ಮಧುಬನಿಯಲ್ಲಿ ಸಕ್ರಿಯವಾಗಿರುವ ‘ವೈದ್ಯಕೀಯ ಮಾಫಿಯಾ’ ವಿರುದ್ಧ ಅಭಿಯಾನವನ್ನು ಪ್ರಾರಂಭಿಸಿದ್ದರು. ಈ ಭಾಗವಾಗಿ ಖಾಸಗಿ ನರ್ಸಿಂಗ್ ಹೋಂಗಳು ಮತ್ತು ಆಸ್ಪತ್ರೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಅವರ ತನಿಖೆಯ ಮೇರೆಗೆ ಜಿಲ್ಲಾ ಸಿವಿಲ್ ಸರ್ಜನ್ ನಾಲ್ಕು ನೋಂದಣಿಯಾಗದ ಮತ್ತು ಗುಣಮಟ್ಟವಿಲ್ಲದ ಆಸ್ಪತ್ರೆಗಳಿಗೆ 50,000 ರೂ.ಗಳ ದಂಡವನ್ನು ವಿಧಿಸಿದ್ದರು.

ಇನ್ನೂ ಹತ್ತು ನೋಂದಣಿಯಾಗದ ಮತ್ತು ಕಳಪೆ ಗುಣಮಟ್ಟದ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಅವರು ನವೆಂಬರ್ 7 ರಂದು ತಮ್ಮ ಫೇಸ್ ಬುಕ್ ಪೋಸ್ಟ್ ಮೂಲಕ, ‘ನವೆಂಬರ್ 15 ರಂದು ಇತರ ಆಸ್ಪತ್ರೆಗಳ ಕಾರ್ಯನಿರ್ವಹಣೆಯ ವರದಿಗಳನ್ನು ಬಿಡುಗಡೆ ಮಾಡುತ್ತೇನೆ’ ಎಂದು ಘೋಷಿಸಿದ್ದರು.

ಆರ್‌ಟಿಐ ಕಾಯ್ದೆಯ ಮೂಲಕ ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿ ಕುರಿತು ಮಾಹಿತಿ ಕೇಳಿದ್ದ ಅವರು ವೈದ್ಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಅವರ ಹಿರಿಯ ಸಹೋದರ ಚಂದ್ರಶೇಖರ್ ಕುಮಾರ್ ಅವರು ನೀಡಿರುವ ದೂರಿನಲ್ಲಿ, “ನಕಲಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳ ಪಟ್ಟಿಯನ್ನು ಬುದ್ಧಿನಾಥ್‌ ಸಲ್ಲಿಸಿದ್ದು, ಅವುಗಳ ವೈದ್ಯರು, ಪ್ರವರ್ತಕರು ಮತ್ತು ಸಿಬ್ಬಂದಿಗಳು ಅವಿನಾಶ್‌ನ ಅಪಹರಣ ಮತ್ತು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

ಬುದ್ದಿನಾಥ್‌ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಕೊನೆಯ ಬಾರಿಗೆ ಕಾಣಿಸಿಕೊಂಡಿರುವುದಾಗಿ ಅವರ ಮನೆಯ ಹತ್ತಿರದ ಸಿಸಿಟಿವಿ ಫೂಟೇಜ್‌ನಲ್ಲಿ ದಾಖಲಾಗಿದೆ. ರಾತ್ರಿ 9 ರಿಂದ ಹಲವಾರು ಬಾರಿ ಕಿರಿದಾದ ಓಣಿಯಲ್ಲಿರುವ ತನ್ನ ಮನೆಯಿಂದ ಹೊರಗೆ ಬರುವುದು ಮತ್ತು ಹತ್ತಿರದ ಮುಖ್ಯ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ. ಕೊನೆಯ ಬಾರಿಗೆ ಅವರು ರಾತ್ರಿ 9.58 ಕ್ಕೆ ಕುತ್ತಿಗೆಗೆ ಹಳದಿ ಸ್ಕಾರ್ಫ್ ಧರಿಸಿ ಮನೆಯಿಂದ ಹೊರಟಿರುವುದಾಗಿ ಸಿಸಿಟಿವಿ ಫೂಟೇಜ್‌ನಲ್ಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

“ಅವರ ಬೈಕ್‌ ಇನ್ನೂ ಮನೆಯಲ್ಲಿಯೇ ಇತ್ತು. ಲ್ಯಾಪ್‌ಟಾಪ್ ಕೂಡ ಆನ್ ಆಗಿತ್ತು. ಬುದ್ದಿನಾಥ್ ಅವರು ಮಂಗಳವಾರ ತಡರಾತ್ರಿ ಅಥವಾ ಬುಧವಾರ ಬೆಳಗ್ಗೆ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದು, ವಾಪಸ್ ಬರುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಅವನು ಹಿಂತಿರುಗಲಿಲ್ಲ” ಎಂದಿರುವ ಅವರ ಕುಟುಂಬದವರು, ಮನೆಯಿಂದ ತೆರಳಿ ಒಂದು ದಿನವಾದರೂ ಅವರು ಮನೆಗೆ ಹಿಂದಿರುಗದೇ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದಲ್ಲಿ ಇದುವರೆಗೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರು ಮಂದಿಯನ್ನು ರೋಷನ್ ಕುಮಾರ್, ಬಿಟ್ಟು ಕುಮಾರ್, ದೀಪಕ್ ಕುಮಾರ್, ಪವನ್ ಕುಮಾರ್, ಮನೀಶ್ ಕುಮಾರ್ ಮತ್ತು ಪೂರ್ಣ ಕಲಾ ದೇವಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ತುಮಕೂರು: ಸ್ಥಳೀಯ ಪತ್ರಕರ್ತನ ಮೇಲೆ ಹಲ್ಲೆ, ದೂರು ದಾಖಲು

ಇದೀಗ ಬಂಧನಕ್ಕೆ ಒಳಗಾಗಿರುವ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಹೇಳಿರುವಂತೆ, ಆರೋಪಿಗಳಲ್ಲಿ ಒಬ್ಬರಾಗಿರುವ ಪೂರ್ಣ ಕಲಾ ದೇವಿ ತಾನು ಬುದ್ಧಿನಾಥ್ ಝಾ ಅವರನ್ನು ಪ್ರೀತಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ. ಆದರೆ ಬಂಧನಕ್ಕೆ ಒಳಗಾಗಿರುವ ಪವನ್ ಕುಮಾರ್ ಎಂಬಾತ ಆಕೆಯನ್ನು ಪ್ರೀತಿಸುತ್ತಿದ್ದ.

“ಬಂಧಿತರಾಗಿರುವ ಪವನ್, ಬುದ್ಧಿನಾಥ್ ಝಾ ಮತ್ತು ಪೂರ್ಣ ಕಲಾ ದೇವಿ ಪರಸ್ಪರ ಮಾತನಾಡುತ್ತಿರುವುದನ್ನು ಸಹಿಸುತ್ತಿರಲಿಲ್ಲ. ಬುದ್ಧಿನಾಥ್ ಜೊತೆ ಮಾತನಾಡದಂತೆ ಆರೋಪಿ ಪವನ್, ಪೂರ್ಣ ಕಲಾ ದೇವಿ ಮೇಲೆ ಒತ್ತಡ ಹೇರುತ್ತಿದ್ದನು” ಎಂದು ಪೊಲೀಸರು ತಿಳಿಸಿದ್ದಾರೆ.

ಇಷ್ಟೇ ಅಲ್ಲದೆ, ಪವನ್ ಕುಮಾರ್ ಮತ್ತು ರೋಷನ್ ಕುಮಾರ್ ತಮ್ಮ ವೈಯಕ್ತಿಕ ಕಾರಣಕ್ಕಾಗಿ ಬುದ್ಧಿನಾಥ್ ಝಾ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಹಾರದ ಬೆನಿಪಟ್ಟಿಯಲ್ಲಿ ಪರೀಕ್ಷಾ ಪ್ರಯೋಗಾಲಯವನ್ನು ನಡೆಸುತ್ತಿರುವ ರೋಷನ್ ಕುಮಾರ್ ಕೊಲೆಯಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ, ಇದುವರೆಗಿನ ತನಿಖೆಯಲ್ಲಿ ಬುದ್ದಿನಾಥ್ ಝಾ ಅವರನ್ನು ಸ್ಥಳೀಯ ಪತ್ರಕರ್ತ ಎಂದು ಪೊಲೀಸರು ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...