Homeಮುಖಪುಟಬಿಹಾರ: ಯುವ ಪತ್ರಕರ್ತನ ಅಪಹರಿಸಿ-ಕೊಲೆ; ಮಹಿಳೆ ಸೇರಿ 6 ಜನರ ಬಂಧನ

ಬಿಹಾರ: ಯುವ ಪತ್ರಕರ್ತನ ಅಪಹರಿಸಿ-ಕೊಲೆ; ಮಹಿಳೆ ಸೇರಿ 6 ಜನರ ಬಂಧನ

- Advertisement -
- Advertisement -

24 ವರ್ಷದ ಪತ್ರಕರ್ತ ಬುದ್ದಿನಾಥ್ ಝಾ ಅಲಿಯಾಸ್ ಅವಿನಾಶ್ ಝಾ ಅವರ ಅಪಹರಣ ಮತ್ತು ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಿ ಒಬ್ಬ ಮಹಿಳೆ ಸೇರಿದಂತೆ ಆರು ಜನರನ್ನು ಬಿಹಾರದ ಮಧುಬನಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಜಿಲ್ಲೆಯ ಬೆನಿಪಟ್ಟಿ ಠಾಣೆಯ ಪೊಲೀಸರ ಪ್ರಕಾರ, ಬುದ್ಧಿನಾಥ್ ಅವರನ್ನು ನವೆಂಬರ್ 9 ರ ಮಂಗಳವಾರ ರಾತ್ರಿ ಅಪಹರಿಸಲಾಗಿತ್ತು. ನಂತರ ಅವರ ಮೃತದೇಹವು ಸುಟ್ಟು ಕರುಕಲಾದ ಸ್ಥಿತಿಯಲ್ಲಿ, ಶುಕ್ರವಾರ ಸಂಜೆ ರಾಜ್ಯ ಹೆದ್ದಾರಿ 52 ರ ಉರೇನಾ ಗ್ರಾಮದಲ್ಲಿ ಪತ್ತೆಯಾಗಿತ್ತು.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

ಸಾವಿಗೀಡಾಗಿರುವ ಪತ್ರಕರ್ತ ಬುದ್ಧಿನಾಥ್‌‌ ತಮ್ಮ ವೆಬ್ ಪೋರ್ಟಲ್ ಮತ್ತು ಫೇಸ್‌ಬುಕ್ ಪೋಸ್ಟ್‌ಗಳಲ್ಲಿ ಮಧುಬನಿಯಲ್ಲಿ ಸಕ್ರಿಯವಾಗಿರುವ ‘ವೈದ್ಯಕೀಯ ಮಾಫಿಯಾ’ ವಿರುದ್ಧ ಅಭಿಯಾನವನ್ನು ಪ್ರಾರಂಭಿಸಿದ್ದರು. ಈ ಭಾಗವಾಗಿ ಖಾಸಗಿ ನರ್ಸಿಂಗ್ ಹೋಂಗಳು ಮತ್ತು ಆಸ್ಪತ್ರೆಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಅವರ ತನಿಖೆಯ ಮೇರೆಗೆ ಜಿಲ್ಲಾ ಸಿವಿಲ್ ಸರ್ಜನ್ ನಾಲ್ಕು ನೋಂದಣಿಯಾಗದ ಮತ್ತು ಗುಣಮಟ್ಟವಿಲ್ಲದ ಆಸ್ಪತ್ರೆಗಳಿಗೆ 50,000 ರೂ.ಗಳ ದಂಡವನ್ನು ವಿಧಿಸಿದ್ದರು.

ಇನ್ನೂ ಹತ್ತು ನೋಂದಣಿಯಾಗದ ಮತ್ತು ಕಳಪೆ ಗುಣಮಟ್ಟದ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಅವರು ನವೆಂಬರ್ 7 ರಂದು ತಮ್ಮ ಫೇಸ್ ಬುಕ್ ಪೋಸ್ಟ್ ಮೂಲಕ, ‘ನವೆಂಬರ್ 15 ರಂದು ಇತರ ಆಸ್ಪತ್ರೆಗಳ ಕಾರ್ಯನಿರ್ವಹಣೆಯ ವರದಿಗಳನ್ನು ಬಿಡುಗಡೆ ಮಾಡುತ್ತೇನೆ’ ಎಂದು ಘೋಷಿಸಿದ್ದರು.

ಆರ್‌ಟಿಐ ಕಾಯ್ದೆಯ ಮೂಲಕ ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿ ಕುರಿತು ಮಾಹಿತಿ ಕೇಳಿದ್ದ ಅವರು ವೈದ್ಯರ ಕೆಂಗಣ್ಣಿಗೆ ಗುರಿಯಾಗಿದ್ದರು.

ಅವರ ಹಿರಿಯ ಸಹೋದರ ಚಂದ್ರಶೇಖರ್ ಕುಮಾರ್ ಅವರು ನೀಡಿರುವ ದೂರಿನಲ್ಲಿ, “ನಕಲಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳ ಪಟ್ಟಿಯನ್ನು ಬುದ್ಧಿನಾಥ್‌ ಸಲ್ಲಿಸಿದ್ದು, ಅವುಗಳ ವೈದ್ಯರು, ಪ್ರವರ್ತಕರು ಮತ್ತು ಸಿಬ್ಬಂದಿಗಳು ಅವಿನಾಶ್‌ನ ಅಪಹರಣ ಮತ್ತು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

ಬುದ್ದಿನಾಥ್‌ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಕೊನೆಯ ಬಾರಿಗೆ ಕಾಣಿಸಿಕೊಂಡಿರುವುದಾಗಿ ಅವರ ಮನೆಯ ಹತ್ತಿರದ ಸಿಸಿಟಿವಿ ಫೂಟೇಜ್‌ನಲ್ಲಿ ದಾಖಲಾಗಿದೆ. ರಾತ್ರಿ 9 ರಿಂದ ಹಲವಾರು ಬಾರಿ ಕಿರಿದಾದ ಓಣಿಯಲ್ಲಿರುವ ತನ್ನ ಮನೆಯಿಂದ ಹೊರಗೆ ಬರುವುದು ಮತ್ತು ಹತ್ತಿರದ ಮುಖ್ಯ ರಸ್ತೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡಿದ್ದಾರೆ. ಕೊನೆಯ ಬಾರಿಗೆ ಅವರು ರಾತ್ರಿ 9.58 ಕ್ಕೆ ಕುತ್ತಿಗೆಗೆ ಹಳದಿ ಸ್ಕಾರ್ಫ್ ಧರಿಸಿ ಮನೆಯಿಂದ ಹೊರಟಿರುವುದಾಗಿ ಸಿಸಿಟಿವಿ ಫೂಟೇಜ್‌ನಲ್ಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

“ಅವರ ಬೈಕ್‌ ಇನ್ನೂ ಮನೆಯಲ್ಲಿಯೇ ಇತ್ತು. ಲ್ಯಾಪ್‌ಟಾಪ್ ಕೂಡ ಆನ್ ಆಗಿತ್ತು. ಬುದ್ದಿನಾಥ್ ಅವರು ಮಂಗಳವಾರ ತಡರಾತ್ರಿ ಅಥವಾ ಬುಧವಾರ ಬೆಳಗ್ಗೆ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದು, ವಾಪಸ್ ಬರುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಅವನು ಹಿಂತಿರುಗಲಿಲ್ಲ” ಎಂದಿರುವ ಅವರ ಕುಟುಂಬದವರು, ಮನೆಯಿಂದ ತೆರಳಿ ಒಂದು ದಿನವಾದರೂ ಅವರು ಮನೆಗೆ ಹಿಂದಿರುಗದೇ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದಲ್ಲಿ ಇದುವರೆಗೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರು ಮಂದಿಯನ್ನು ರೋಷನ್ ಕುಮಾರ್, ಬಿಟ್ಟು ಕುಮಾರ್, ದೀಪಕ್ ಕುಮಾರ್, ಪವನ್ ಕುಮಾರ್, ಮನೀಶ್ ಕುಮಾರ್ ಮತ್ತು ಪೂರ್ಣ ಕಲಾ ದೇವಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ತುಮಕೂರು: ಸ್ಥಳೀಯ ಪತ್ರಕರ್ತನ ಮೇಲೆ ಹಲ್ಲೆ, ದೂರು ದಾಖಲು

ಇದೀಗ ಬಂಧನಕ್ಕೆ ಒಳಗಾಗಿರುವ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಹೇಳಿರುವಂತೆ, ಆರೋಪಿಗಳಲ್ಲಿ ಒಬ್ಬರಾಗಿರುವ ಪೂರ್ಣ ಕಲಾ ದೇವಿ ತಾನು ಬುದ್ಧಿನಾಥ್ ಝಾ ಅವರನ್ನು ಪ್ರೀತಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ. ಆದರೆ ಬಂಧನಕ್ಕೆ ಒಳಗಾಗಿರುವ ಪವನ್ ಕುಮಾರ್ ಎಂಬಾತ ಆಕೆಯನ್ನು ಪ್ರೀತಿಸುತ್ತಿದ್ದ.

“ಬಂಧಿತರಾಗಿರುವ ಪವನ್, ಬುದ್ಧಿನಾಥ್ ಝಾ ಮತ್ತು ಪೂರ್ಣ ಕಲಾ ದೇವಿ ಪರಸ್ಪರ ಮಾತನಾಡುತ್ತಿರುವುದನ್ನು ಸಹಿಸುತ್ತಿರಲಿಲ್ಲ. ಬುದ್ಧಿನಾಥ್ ಜೊತೆ ಮಾತನಾಡದಂತೆ ಆರೋಪಿ ಪವನ್, ಪೂರ್ಣ ಕಲಾ ದೇವಿ ಮೇಲೆ ಒತ್ತಡ ಹೇರುತ್ತಿದ್ದನು” ಎಂದು ಪೊಲೀಸರು ತಿಳಿಸಿದ್ದಾರೆ.

ಇಷ್ಟೇ ಅಲ್ಲದೆ, ಪವನ್ ಕುಮಾರ್ ಮತ್ತು ರೋಷನ್ ಕುಮಾರ್ ತಮ್ಮ ವೈಯಕ್ತಿಕ ಕಾರಣಕ್ಕಾಗಿ ಬುದ್ಧಿನಾಥ್ ಝಾ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಹಾರದ ಬೆನಿಪಟ್ಟಿಯಲ್ಲಿ ಪರೀಕ್ಷಾ ಪ್ರಯೋಗಾಲಯವನ್ನು ನಡೆಸುತ್ತಿರುವ ರೋಷನ್ ಕುಮಾರ್ ಕೊಲೆಯಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ, ಇದುವರೆಗಿನ ತನಿಖೆಯಲ್ಲಿ ಬುದ್ದಿನಾಥ್ ಝಾ ಅವರನ್ನು ಸ್ಥಳೀಯ ಪತ್ರಕರ್ತ ಎಂದು ಪೊಲೀಸರು ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...