Homeಮುಖಪುಟಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

ಜನರು ಇನ್ನೂ ಬಿಜೆಪಿಯ ಬಗ್ಗೆ ಉತ್ಸಾಹದಿಂದಿದ್ದಾರೆ ಎಂಬುದನ್ನು ಈ ಫಲಿತಾಂಶಗಳು ಸ್ಪಷ್ಟಪಡಿಸಿವೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಗೆಲುವು

- Advertisement -
- Advertisement -

ಬಿಹಾರ ಚುನಾವಣೆಯಲ್ಲಿ ನಿರೀಕ್ಷೆಗಿಂತ ಉತ್ತಮ ಸಾಧನೆ ತೋರಿದ ಬಿಜೆಪಿಯನ್ನು ಹೊಗಳಿರುವ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್, ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. “ಈ ಫಲಿತಾಂಶವು ಬಿಜೆಪಿಯ ಮೇಲೆ ಜನರಿಗಿರುವ ನಿರಂತರ ನಂಬಿಕೆಯನ್ನು ತೋರಿಸುತ್ತದೆ” ಎಂದು ಹೇಳಿದ್ದಾರೆ.

“ಬಿಹಾರದ ಸಾರ್ವಜನಿಕರು ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ತಮ್ಮ ನಂಬಿಕೆಯನ್ನು ತೋರಿಸಿದ್ದಾರೆ. ಜನರು ಇನ್ನೂ ಬಿಜೆಪಿಯ ಬಗ್ಗೆ ಉತ್ಸಾಹದಿಂದಿದ್ದಾರೆ ಎಂಬುದನ್ನು ಈ ಫಲಿತಾಂಶಗಳು ಸ್ಪಷ್ಟಪಡಿಸಿವೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಗೆಲುವು” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Bihar Election Results: ಸರಳ ಬಹುಮತ ಪಡೆದ NDA; 5 ನೇ ಭಾರಿಗೆ ಮುಖ್ಯಮಂತ್ರಿಯಾಗಲಿದ್ದಾರ…

ಚಿರಾಗ್ ಪಾಸ್ವಾನ್ ಅವರ ಪಕ್ಷವು ಕೇವಲ ಒಂದು ಸ್ಥಾನವನ್ನು ಗೆದ್ದಿದೆ.

119 ಕ್ಷೇತ್ರಗಳಲ್ಲಿ ಗೆದ್ದರೂ ಸರ್ಟಿಫಿಕೆಟ್ ನೀಡದ ಚುನಾವಣಾ ಆಯೋಗ: ಅಕ್ರಮ ನಡೆಯುತ್ತಿದೆಯೆಂದು RJD ಆರೋಪ

ಬಿಜೆಪಿ 74 ಸ್ಥಾನಗಳನ್ನು ಗೆದ್ದಿದ್ದರೆ, ಪ್ರಮುಖ ಪ್ರತಿಸ್ಪರ್ಧಿ, ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿಯ 75 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆಡಳಿತಾರೂಢ ಎನ್‌ಡಿಎ 125 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚಿಸಲು ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಜೆಡಿಯು 43 ಸ್ಥಾನಗಳನ್ನು, ಕಾಂಗ್ರೆಸ್ 19 ಸ್ಥಾನಗಳನ್ನು ಮತ್ತು ಸಿಪಿಐ-ಎಂಎಲ್ 11 ಸ್ಥಾನಗಳನ್ನು ಗೆದ್ದಿದೆ.

ಈ ಗೆಲುವಿನ ಕುರಿತು ಟ್ವೀಟ್ ಮಾಡಿರುವ ಮೋದಿ, “ಬಿಹಾರದ ಜನತೆ ಅಭಿವೃದ್ಧಿಗೆ ನೀಡಿದ ಪ್ರಾಶಸ್ತ್ಯವೇ ಈ ಫಲಿತಾಂಶವಾಗಿದೆ” ಎಂದು ಟ್ವೀಟ್ ಮಾಡಿದ್ದರು

ಚಿರಾಗ್ ಪಾಸ್ವಾನ್ ಮೊದಲಿನಿಂದಲೂ ನಿತೀಶ್‌ ಕುಮಾರ್ ವಿರೋಧವಾಗಿಯೇ ಹೇಳಿಕೆಯನ್ನು ನೀಡುತ್ತಿದ್ದಾರೆ. ಅವರ ಮೇಲಿನ ಮುನಿಸಿನಿಂದಲೇ ಎನ್‌ಡಿಎ ಮೈತ್ರಿ ಕೂಟವನ್ನು ಬಿಟ್ಟು ಹೊರನಡೆದಿದ್ದರು. ಚುನಾವಣೆಯ ನಂತರ ಬಿಜೆಪಿಯೊಟ್ಟಿಗೆ ಸೇರಿ ಸರ್ಕಾರ ರಚಿಸುವುದಾಗಿಯೂ ಹೇಳಿದ್ದರು.

ಇದೇ ಸಮಯದಲ್ಲಿ ತೇಜಸ್ವಿ ಯಾದವ್ ಪರ ಸಕಾರಾತ್ಮಕ ನಿಲುವನ್ನೂ ತಳೆದಿದ್ದರು. ಆದರೂ ಚಿರಾಗ್ ಪಾಸ್ವಾನ್ ಪಕ್ಷವು ಈ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...