Homeಮುಖಪುಟಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

ಜನರು ಇನ್ನೂ ಬಿಜೆಪಿಯ ಬಗ್ಗೆ ಉತ್ಸಾಹದಿಂದಿದ್ದಾರೆ ಎಂಬುದನ್ನು ಈ ಫಲಿತಾಂಶಗಳು ಸ್ಪಷ್ಟಪಡಿಸಿವೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಗೆಲುವು

- Advertisement -
- Advertisement -

ಬಿಹಾರ ಚುನಾವಣೆಯಲ್ಲಿ ನಿರೀಕ್ಷೆಗಿಂತ ಉತ್ತಮ ಸಾಧನೆ ತೋರಿದ ಬಿಜೆಪಿಯನ್ನು ಹೊಗಳಿರುವ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್, ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ. “ಈ ಫಲಿತಾಂಶವು ಬಿಜೆಪಿಯ ಮೇಲೆ ಜನರಿಗಿರುವ ನಿರಂತರ ನಂಬಿಕೆಯನ್ನು ತೋರಿಸುತ್ತದೆ” ಎಂದು ಹೇಳಿದ್ದಾರೆ.

“ಬಿಹಾರದ ಸಾರ್ವಜನಿಕರು ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ತಮ್ಮ ನಂಬಿಕೆಯನ್ನು ತೋರಿಸಿದ್ದಾರೆ. ಜನರು ಇನ್ನೂ ಬಿಜೆಪಿಯ ಬಗ್ಗೆ ಉತ್ಸಾಹದಿಂದಿದ್ದಾರೆ ಎಂಬುದನ್ನು ಈ ಫಲಿತಾಂಶಗಳು ಸ್ಪಷ್ಟಪಡಿಸಿವೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಗೆಲುವು” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Bihar Election Results: ಸರಳ ಬಹುಮತ ಪಡೆದ NDA; 5 ನೇ ಭಾರಿಗೆ ಮುಖ್ಯಮಂತ್ರಿಯಾಗಲಿದ್ದಾರ…

ಚಿರಾಗ್ ಪಾಸ್ವಾನ್ ಅವರ ಪಕ್ಷವು ಕೇವಲ ಒಂದು ಸ್ಥಾನವನ್ನು ಗೆದ್ದಿದೆ.

119 ಕ್ಷೇತ್ರಗಳಲ್ಲಿ ಗೆದ್ದರೂ ಸರ್ಟಿಫಿಕೆಟ್ ನೀಡದ ಚುನಾವಣಾ ಆಯೋಗ: ಅಕ್ರಮ ನಡೆಯುತ್ತಿದೆಯೆಂದು RJD ಆರೋಪ

ಬಿಜೆಪಿ 74 ಸ್ಥಾನಗಳನ್ನು ಗೆದ್ದಿದ್ದರೆ, ಪ್ರಮುಖ ಪ್ರತಿಸ್ಪರ್ಧಿ, ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿಯ 75 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆಡಳಿತಾರೂಢ ಎನ್‌ಡಿಎ 125 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚಿಸಲು ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ. ಜೆಡಿಯು 43 ಸ್ಥಾನಗಳನ್ನು, ಕಾಂಗ್ರೆಸ್ 19 ಸ್ಥಾನಗಳನ್ನು ಮತ್ತು ಸಿಪಿಐ-ಎಂಎಲ್ 11 ಸ್ಥಾನಗಳನ್ನು ಗೆದ್ದಿದೆ.

ಈ ಗೆಲುವಿನ ಕುರಿತು ಟ್ವೀಟ್ ಮಾಡಿರುವ ಮೋದಿ, “ಬಿಹಾರದ ಜನತೆ ಅಭಿವೃದ್ಧಿಗೆ ನೀಡಿದ ಪ್ರಾಶಸ್ತ್ಯವೇ ಈ ಫಲಿತಾಂಶವಾಗಿದೆ” ಎಂದು ಟ್ವೀಟ್ ಮಾಡಿದ್ದರು

ಚಿರಾಗ್ ಪಾಸ್ವಾನ್ ಮೊದಲಿನಿಂದಲೂ ನಿತೀಶ್‌ ಕುಮಾರ್ ವಿರೋಧವಾಗಿಯೇ ಹೇಳಿಕೆಯನ್ನು ನೀಡುತ್ತಿದ್ದಾರೆ. ಅವರ ಮೇಲಿನ ಮುನಿಸಿನಿಂದಲೇ ಎನ್‌ಡಿಎ ಮೈತ್ರಿ ಕೂಟವನ್ನು ಬಿಟ್ಟು ಹೊರನಡೆದಿದ್ದರು. ಚುನಾವಣೆಯ ನಂತರ ಬಿಜೆಪಿಯೊಟ್ಟಿಗೆ ಸೇರಿ ಸರ್ಕಾರ ರಚಿಸುವುದಾಗಿಯೂ ಹೇಳಿದ್ದರು.

ಇದೇ ಸಮಯದಲ್ಲಿ ತೇಜಸ್ವಿ ಯಾದವ್ ಪರ ಸಕಾರಾತ್ಮಕ ನಿಲುವನ್ನೂ ತಳೆದಿದ್ದರು. ಆದರೂ ಚಿರಾಗ್ ಪಾಸ್ವಾನ್ ಪಕ್ಷವು ಈ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...