Homeಮುಖಪುಟಬಿಹಾರ: ಒಂದೆ ದಿನ ಮೂರು ಸೇತುವೆಗಳು ಕುಸಿತ, 15 ದಿನಗಳಲ್ಲಿ 9ನೇ ಪ್ರಕರಣ

ಬಿಹಾರ: ಒಂದೆ ದಿನ ಮೂರು ಸೇತುವೆಗಳು ಕುಸಿತ, 15 ದಿನಗಳಲ್ಲಿ 9ನೇ ಪ್ರಕರಣ

- Advertisement -
- Advertisement -

ಬಿಹಾರದಲ್ಲಿ ಸೇತುವೆ ಕುಸಿತ ಪ್ರಕರಣಗಳ ಸರಣಿ ಮುಂದುವರಿದಿದ್ದು, ಬುಧವಾರ ಕನಿಷ್ಠ ಮೂರು ಸೇತುವೆಗಳು ಅಕುಸಿತಕ್ಕೆ ಸಾಕ್ಷಿಯಾಗಿದೆ; ಕಳೆದ 15 ದಿನಗಳಲ್ಲಿ ಮಳೆ ಪೀಡಿತ ರಾಜ್ಯದಲ್ಲಿ ಇದು ಒಂಬತ್ತನೇ ಘಟನೆಯಾಗಿದೆ.

30 ರಿಂದ 80 ವರ್ಷಗಳ ಹಿಂದೆ ಸ್ಥಳೀಯ ಅಧಿಕಾರಿಗಳು ನಿರ್ಮಿಸಿದ ಮೂರು ಬ್ರಿಜ್‌ಗಳು ಸರನ್ ಮತ್ತು ಸಿವಾನ್ ಜಿಲ್ಲೆಗಳಲ್ಲಿ ಕುಸಿದಿದ್ದು, ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಒಂದೇ ದಿನದಲ್ಲಿ ನಾಲ್ಕು ಸೇತುವೆಗಳು ಕುಸಿದಿದ್ದು, ಮುಖ್ಯಮಂತ್ರಿ ಮತ್ತು ಅವರ ಜನಪ್ರತಿನಿಧಿಗಳು ಮೌನವಾಗಿದ್ದಾರೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಸ್ತೆ ನಿರ್ಮಾಣ ಇಲಾಖೆ (ಆರ್‌ಸಿಡಿ) ಮತ್ತು ಗ್ರಾಮೀಣ ಕಾಮಗಾರಿ ಇಲಾಖೆ (ಆರ್‌ಡಬ್ಲ್ಯೂಡಿ) ಕ್ಕೆ ರಾಜ್ಯದಲ್ಲಿರುವ ಎಲ್ಲ ಹಳೆಯ ಸೇತುವೆಗಳ ಸಮೀಕ್ಷೆಯನ್ನು ತಕ್ಷಣವೇ ನಡೆಸುವಂತೆ ಮತ್ತು ತಕ್ಷಣದ ದುರಸ್ತಿ ಅಗತ್ಯವಿರುವ ಸೇತುವೆಗಳನ್ನು ಗುರುತಿಸುವಂತೆ ಸೂಚಿಸಿದರು.

“ಬುಧವಾರ ಕುಸಿತ ಕಂಡಿರುವ ಸಿವಾನ್ ಮತ್ತು ಸರನ್‌ನಲ್ಲಿ ಗುಹೆಯಿರುವ ಸೇತುವೆಗಳು/ಕಾಸ್‌ವೇಗಳ ಕೆಲವು ಭಾಗಗಳು ಬಹಳ ಹಳೆಯವು” ಎಂದು ಡಬ್ಲ್ಯುಆರ್‌ಡಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚೈತನ್ಯ ಪ್ರಸಾದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಅಗತ್ಯವಿರುವ ನಿಯಮಗಳನ್ನು ಅನುಸರಿಸಿ ಈ ಸೇತುವೆಗಳನ್ನು ನಿರ್ಮಿಸಲಾಗಿದೆ ಎಂದು ತೋರುತ್ತಿಲ್ಲ. ಅಡಿಪಾಯವು ಸಾಕಷ್ಟು ಆಳವಿಲ್ಲ ಎಂದು ತೋರುತ್ತದೆ, ಇದು ಪ್ರವಾಹದ ಸಮಯದಲ್ಲಿ ಈ ರಚನೆಗಳು ಹಾನಿಗೊಳಗಾಗಲು ಕಾರಣ” ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಮೊದಲಿಗೆ, ಸಿವಾನ್ ಜಿಲ್ಲೆಯ ಡಿಯೋರಿಯಾ ಬ್ಲಾಕ್‌ನಲ್ಲಿ ಗಂಡಕಿ ನದಿಯ ಮೇಲಿನ ಸಣ್ಣ ಸೇತುವೆಯ ಒಂದು ಭಾಗವು ಬೆಳಿಗ್ಗೆ 5 ಗಂಟೆ ಸುಮಾರಿಗೆ ಕುಸಿದಿದೆ. ಡಿಯೋರಿಯಾ ಬ್ಲಾಕ್‌ನಲ್ಲಿ ಸೇತುವೆಯ ಒಂದು ಭಾಗವು ಇಂದು ಬೆಳಿಗ್ಗೆ ಕುಸಿದಿದೆ ಎಂದು ಡೆಪ್ಯುಟಿ ಡೆವಲಪ್‌ಮೆಂಟ್ ಕಮಿಷನರ್ ಮುಖೇಶ್ ಕುಮಾರ್ ಅವರು ತನಿಖೆಯಲ್ಲಿ ತಿಳಿಸಿದ್ದಾರೆ.

ನಂತರ, ಜಿಲ್ಲೆಯ ತೇಗ್ರಾ ಬ್ಲಾಕ್‌ನಲ್ಲಿ ಮತ್ತೊಂದು ಸಣ್ಣ ಸೇತುವೆಯು ಅದೇ ಪರಿಸ್ಥಿತಿ ಎದುರಿಸಿತು ಎಂದು ವರದಿಯಾಗಿದೆ. ಸರನ್‌ನಲ್ಲಿ ಇನ್ನೂ ಎರಡು ಸಣ್ಣ ಸೇತುವೆಗಳು ಕುಸಿದಿವೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್ ಹೇಳಿದ್ದಾರೆ.

“ಜಂತಾ ಬಜಾರ್ ಪ್ರದೇಶದಲ್ಲಿ ಕುಸಿದಿರುವ ಒಂದು ಸಣ್ಣ ಸೇತುವೆ 100 ವರ್ಷಗಳಷ್ಟು ಹಳೆಯದು. ಇನ್ನೊಂದು ಗುಹೆಯೊಂದು ಲಹ್ಲಾದ್‌ಪುರ ಪ್ರದೇಶದಲ್ಲಿದೆ ಮತ್ತು 25 ವರ್ಷಗಳ ಹಿಂದೆ ನಿರ್ಮಿಸಲಾಗಿದೆ. ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ” ಎಂದು ಸಮೀರ್ ಹೇಳಿದರು.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈ ಸೇತುವೆಗಳು ಕುಸಿದು ಬೀಳಲು ಕಾರಣವಾಗಿರಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಕಳೆದ 15 ದಿನಗಳಲ್ಲಿ ರಾಜ್ಯದ ವಿವಿಧೆಡೆ ಇಂತಹ 10ಕ್ಕೂ ಹೆಚ್ಚು ಸೇತುವೆ ಕುಸಿದ ಘಟನೆಗಳು ವರದಿಯಾಗಿವೆ.

ಈ ಬೆಳವಣಿಗೆಗಳ ನಡುವೆ, ಎಲ್ಲ ಹಳೆಯ ಸೇತುವೆಗಳ ಸಮೀಕ್ಷೆಯನ್ನು ತಕ್ಷಣವೇ ನಡೆಸುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಆರ್‌ಡಬ್ಲ್ಯೂಡಿ ಮತ್ತು ಆರ್‌ಸಿಡಿ ಅಧಿಕಾರಿಗಳಿಗೆ ಸೂಚಿಸಿದರು.

ಇಲಾಖೆಗಳ ನಿರ್ವಹಣಾ ನೀತಿಗಳನ್ನು ಪರಿಶೀಲಿಸಲು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ, “ಆರ್‌ಸಿಡಿ ಈಗಾಗಲೇ ತನ್ನ ಸೇತುವೆ ನಿರ್ವಹಣಾ ನೀತಿಯನ್ನು ಸಿದ್ಧಪಡಿಸಿದೆ ಮತ್ತು ಆರ್‌ಡಬ್ಲ್ಯೂಡಿ ತನ್ನ ಯೋಜನೆಯನ್ನು ಶೀಘ್ರವಾಗಿ ರೂಪಿಸಬೇಕು” ಎಮದು ಹೇಳಿದ್ದಾರೆ. ಕಳೆದ 15 ದಿನಗಳಲ್ಲಿ ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್‌ನಂತಹ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಒಂಬತ್ತು ಸೇತುವೆಗಳು ಕುಸಿದಿವೆ.

ಮುಖ್ಯಮಂತ್ರಿಗಳ ಕಚೇರಿ ಹೊರಡಿಸಿದ ಹೇಳಿಕೆಯ ಪ್ರಕಾರ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಮಾರ್ ಇಲಾಖಾ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.

ಆರ್‌ಜೆಡಿ ಹಿರಿಯ ನಾಯಕ ತೇಜಸ್ವಿ ಯಾದವ್ ಅವರು, “ಬಿಹಾರದಲ್ಲಿ ಒಂದೇ ದಿನದಲ್ಲಿ ನಾಲ್ಕು ಸೇತುವೆಗಳು ಕುಸಿದಿವೆ! ರಾಜ್ಯದ ಸಿಎಂ ಮತ್ತು ಇಬ್ಬರೂ ಡಿಸಿಎಂಗಳು ಅದರ ಬಗ್ಗೆ ಮೌನವಾಗಿದ್ದಾರೆ. ಯಾರು ತಪ್ಪಿತಸ್ಥರು ಎಂಬುದನ್ನು ಎನ್‌ಡಿಎ ಸರ್ಕಾರ ಹೇಳಬೇಕು” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಸ್ಪಷ್ಟವಾಗಿ, ಬಿಜೆಪಿ ಸರ್ಕಾರದಲ್ಲಿರುವುದರಿಂದ, ಭ್ರಷ್ಟಾಚಾರ ಮತ್ತು ಅಪರಾಧವು ಇನ್ನು ಮುಂದೆ ಸಮಸ್ಯೆಯಾಗಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ; ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ: ಹೇಮಂತ್ ಸೊರೇನ್ ಮತ್ತೆ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...