Homeಮುಖಪುಟಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: 36 ಲಕ್ಷ ಜನರು ಅವರ ವಿಳಾಸಗಳಲ್ಲಿ ಇಲ್ಲ ಎಂದ ಚುನಾವಣೆ...

ಬಿಹಾರ ಮತದಾರ ಪಟ್ಟಿ ಪರಿಷ್ಕರಣೆ: 36 ಲಕ್ಷ ಜನರು ಅವರ ವಿಳಾಸಗಳಲ್ಲಿ ಇಲ್ಲ ಎಂದ ಚುನಾವಣೆ ಆಯೋಗ

- Advertisement -
- Advertisement -

ಪಾಟ್ನಾ: ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ಪರಿಷ್ಕರಣೆ (SIR) ನಡೆಸುತ್ತಿದೆ.  ಈಗಾಗಲೇ 90.12% ಮತದಾರರ ನಮೂನೆ ಅರ್ಜಿಗಳು ಬಂದಿವೆ ಎಂದು ಆಯೋಗ ಹೇಳಿಕೊಂಡಿದೆ. ಅಲ್ಲದೆ, 36 ಲಕ್ಷಕ್ಕೂ ಹೆಚ್ಚು ಜನರು ‘ಅವರ ವಿಳಾಸಗಳಲ್ಲಿ ವಾಸವಿಲ್ಲ’ವೆಂದೂ ಹೇಳಿದೆ. ಇದು, ಲಕ್ಷಾಂತರ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಾಧ್ಯತೆ ಇದ್ದು, ನಿರ್ದಿಷ್ಟ ವರ್ಗದ ಜನತೆಯನ್ನು ಚುನಾವಣೆ ಕಣದಿಂದ ದೂರುವಿಡುವುದು ಈ ಕ್ರಮದ ಉದ್ದೇಶವೆಂದು ಆರೋಪಿಸಲಾಗುತ್ತಿದೆ.

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಗುಡುವು ಇದೇ ಜುಲೈ 25ರಣದಯ ಅಂತ್ಯವಾಗುತ್ತದೆ. ಬಿಹಾರದಲ್ಲಿ ಎಸ್‌ಐಆರ್‌ ಪ್ರಕ್ರಿಯೆಗೆ ಜೂನ್ 24ರಂದು ಆಯೋಗವು ಆದೇಶಿಸಿತ್ತು. ಜೂನ್ 25ರಿಂದ ಪ್ರಕ್ರಿಯೆ ಆರಂಭವಾಯಿತು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತದಾರರು ತಮ್ಮ ಪೌರತ್ವ ಮತ್ತು ಬಿಹಾರದ ನಿವಾಸಿಗಳು ಎಂಬುದನ್ನು ಸಾಬೀತು ಮಾಡಬೇಕೆಂಬುದು ಆಯೋಗ ಹೊರಡಿಸಿದ್ದ ಆದೇಶದ ಸಾರವಾಗಿತ್ತು. ಆಯೋಗದ ಪೌರತ್ವ ಪರಿಷ್ಕರಣೆ ಮಾದರಿಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದಾಗ್ಯೂ, ಎಸ್‌ಐಆರ್‌ ಮುಂದುವರೆಸಲು ಅನುಮತಿ ನೀಡಿದ ನ್ಯಾಯಾಲಯವು, ಆಧಾರ್‌ ಕಾರ್ಡ್‌ ರೀತಿಯ ಗುರುತಿನ ಚೀಟಿಗಳನ್ನು ಪುರಾವೆಗಳಾಗಿ ಪರಿಗಣಿಸಲು ಸೂಚಿಸಿತ್ತು.

ಬಿಹಾರದಲ್ಲಿ ಒಟ್ಟು 7.8 ಕೋಟಿ ನೋಂದಾಯಿತ ಮತದಾರರಿದ್ದಾರೆ. ಅವರೆಲ್ಲರೂ ಜುಲೈ 25ರೊಳಗೆ ತಮ್ಮ ಗಣತಿ ನಮೂನೆಯನ್ನು ಸಲ್ಲಿಸಬೇಕಿದೆ. ಅವುಗಳನ್ನು ಪರಿಶೀಲಿಸಿ ಆಗಸ್ಟ್‌ 1ರಂದು ಆಯೋಗವು ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಿದೆ.

ಈ ನಡುವೆ, ಶುಕ್ರವಾರ ಮಾಹಿತಿ ಹಂಚಿಕೊಂಡಿರುವ ಆಯೋಗವು ಈವರೆಗೆ 7.11 ಕೋಟಿ (90.12%) ಮತದಾರರು ತಮ್ಮ ನಮೂನೆಗಳನ್ನು ಸಲ್ಲಿಸಿದ್ದಾರೆ. ಅವುಗಳಲ್ಲಿ 6.85 ಕೋಟಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಅವರಲ್ಲಿ, 36.86 ಲಕ್ಷ ಮತದಾರರು (ಒಟ್ಟು ಮತದಾರರಲ್ಲಿ 4.67%) ಅವರ ವಿಳಾಸಗಳಲ್ಲಿ ಇಲ್ಲ. ‘ಬಹುಶಃ’ ಸಾವನ್ನಪ್ಪಿದ್ದಾರೆ ಅಥವಾ ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಅವರಲ್ಲಿಯೂ 6,978 ಮತದಾರರನ್ನು ‘ಪತ್ತೆಹಚ್ಚಲು ಸಾಧ್ಯವೇ ಇಲ್ಲ’ ಎಂದು ಹೇಳಿಕೊಂಡಿದೆ.

ಬಹುಶಃ’ ಮರಣ ಹೊಂದಿದ, ಸ್ಥಳಾಂತರಗೊಂಡ ಹಾಗೂ ಪತ್ತೆಯಾಗದ ಮತದಾರರ ನಿಖರ ಸ್ಥಿತಿಗಳನ್ನು ರಾಜಕೀಯ ಪಕ್ಷಗಳ ಜಿಲ್ಲಾ ಅಧ್ಯಕ್ಷರು ಮತ್ತು ಅವರ ಬೂತ್ ಮಟ್ಟದ ಏಜೆಂಟ್‌ಗಳ ನೆರವು ಪಡೆದು, ಜುಲೈ 25ರೊಳಗೆ ಖಚಿತಪಡಿಸಿಕೊಳ್ಳಲಾಗುತ್ತದೆ ಎಂದು ಆಯೋಗ ಹೇಳಿದೆ.

ಆಗಸ್ಟ್‌ 1ರಂದು ಕರಡು ಪಟ್ಟಿ ಪ್ರಕಟಿಸಲಾಗುತ್ತದೆ. ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 1ರವರೆಗೆ ಸಮಯ ಇರುತ್ತದೆ. ಆನಂತರ, ಸೆಪ್ಟೆಂಬರ್ 25ರೊಳಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಚುನಾವಣಾ ಅಧಿಕಾರಿಗಳು ವಿಲೇವಾರಿ ಮಾಡಲಿದ್ದಾರೆ ಎಂದು ಆಯೋಗ ಹೇಳಿಕೊಂಡಿದೆ.

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕಾಗಿ ಹೋರಾಟ, ಸವಾಲುಗಳು ಮತ್ತು ನಿರೀಕ್ಷೆಗಳು – ಸಮಗ್ರ ವಿಶ್ಲೇಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...