Homeಮುಖಪುಟಯೂಟ್ಯೂಬ್ ನೋಡಿ 15 ವರ್ಷದ ಬಾಲಕನಿಗೆ ಆಪರೇಷನ್ ಮಾಡಿದ ನಕಲಿ ವೈದ್ಯ!

ಯೂಟ್ಯೂಬ್ ನೋಡಿ 15 ವರ್ಷದ ಬಾಲಕನಿಗೆ ಆಪರೇಷನ್ ಮಾಡಿದ ನಕಲಿ ವೈದ್ಯ!

- Advertisement -
- Advertisement -

ನಕಲಿ ವೈದ್ಯನೊಬ್ಬ ಮೊಬೈಲ್ ಫೋನ್‌ನಲ್ಲಿ ಯೂಟ್ಯೂಬ್ ವೀಡಿಯೊಗಳನ್ನು ನೋಡಿ ಪಿತ್ತಕೋಶದ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ನಡೆಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಆರೋಪಿಯನ್ನು ಅಜಿತ್ ಕುಮಾರ್ ಪುರಿ ಎಂದು ಗುರುತಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಪಟ್ಟ 15 ವರ್ಷದ ಬಾಲಕ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಘಟನೆಯ ನಂತರ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಜಿತ್ ಕುಮಾರ್ ಪುರಿಯನ್ನು, ಎರಡು ದಿನಗಳ ಕಳೆದು ಸೋಮವಾರ ಬಂಧಿಸಲಾಗಿದೆ. ಆತನ ಕ್ಲಿನಿಕ್ ಅನ್ನು ಸೀಲ್ ಮಾಡಲಾಗಿದೆ ಎಂದು ಸರನ್ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ಭಾರ್ತಿ ತಿಳಿಸಿದ್ದಾರೆ. ಈ ಹಿಂದೆ ಬಾಲಕನ ಕುಟುಂಬಸ್ಥರ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತ ಕೃಷ್ಣ ಕುಮಾರ್ ಅಲಿಯಾಸ್ ಗೋಲು ಅವರ ತಂದೆ ಚಂದನ್ ಶಾ ಅವರು ತಮ್ಮ ಒಪ್ಪಿಗೆ ಅಥವಾ ಅರಿವಿಗೆ ಬಾರದೆ ತನ್ನ ಮಗನಿಗೆ ಆಪರೇಷನ್ ಮಾಡಲಾಗಿದೆ ಎಂದು ಲಿಖಿತ ದೂರಿನಲ್ಲಿ ಹೇಳಿದ್ದಾರೆ. ಯೂಟ್ಯೂಬ್ ವೀಡಿಯೋಗಳನ್ನು ನೋಡಿ ಪುರಿ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದದ್ದನ್ನು ಪ್ರಶ್ನಿಸಿದಾಗ, ಆರೋಪಿಯು ತಾನು ವೈದ್ಯನಲ್ಲ ಎಂದು ಹೇಳಿದ್ದನು ಎಂದು ಚಂದನ್ ಶಾ ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಶಸ್ತ್ರಚಿಕಿತ್ಸೆಯ ಸಮಯದಲ್ಲಿ, ಗೋಲು ಅವರ ಆರೋಗ್ಯವು ಹದಗೆಟ್ಟಿತ್ತು. ಈ ವೇಳೆ ಅವರ ಕುಟುಂಬವು ಪ್ರತಿಭಟಿಸಿದಾಗ ನಕಲಿ ವೈದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಪಾಟ್ನಾಗೆ ಕರೆದೊಯ್ಯುವುದಾಗಿ ಭರವಸೆ ನೀಡಿದ್ದನು. ಆದರೆ ಪಾಟ್ನಾಗೆ ತೆರಳುವ ಮಾರ್ಗಮಧ್ಯೆ ನಕಲಿ ವೈದ್ಯ ಪರಾರಿಯಾಗಿದ್ದಾಗಿ ವರದಿಯಾಗಿದೆ.

“ಕಳೆದ ವಾರ ವಾಂತಿ ಮತ್ತು ಹೊಟ್ಟೆ ನೋವಿನ ಕಾರಣಕ್ಕೆ ನಾವು ಸರನ್‌ನ ಮೋತಿರಾಜಪುರ ಧರಂಬಾಗಿ ಬಜಾರ್‌ನಲ್ಲಿರುವ ಅಜಿತ್ ಕುಮಾರ್ ಪುರಿ ಅವರ ಖಾಸಗಿ ಕ್ಲಿನಿಕ್ ಗಣಪತಿ ಸೇವಾ ಸದನ್‌ಗೆ ಮಗನನ್ನು ದಾಖಲಿಸಿದ್ದೆವು. ಆರಂಭದಲ್ಲಿ ಎರಡು ದಿನಗಳ ಕಾಲ ಅವರಿಗೆ ಚುಚ್ಚುಮದ್ದು ಮತ್ತು ಔಷಧಿಗಳೊಂದಿಗೆ ಚಿಕಿತ್ಸೆ ನೀಡಲಾಯಿತು. ಆದರೆ ಕಳೆದ ಶುಕ್ರವಾರ, ಯೂಟ್ಯೂಬ್ ವೀಡಿಯೊಗಳನ್ನು ನೋಡುತ್ತಲೇ ಪುರಿ ಶಸ್ತ್ರಚಿಕಿತ್ಸೆ ನಡೆಸಿದ್ದರು” ಎಂದು ಚಂದನ್ ಶಾ ಹೇಳಿದ್ದಾರೆ.

ಇದನ್ನೂಓದಿ:ಖನಿಜಗಳ ಮೇಲಿನ ರಾಯಧನ -ಬಾಕಿ ತೆರಿಗೆ ವಸೂಲಿ ಕುರಿತ ರಾಜ್ಯಗಳ ಅರ್ಜಿ; ಪ್ರತ್ಯೇಕ ಪೀಠದಲ್ಲಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಮೊದಲು ನಾಲ್ಕು ವರ್ಷಗಳ ಕಾಲ ಸಹಾಯಕ ಕಮ್ ಕಾಂಪೌಂಡರ್ ಆಗಿ ಕೆಲಸ ಮಾಡಿದ ಪುರಿ ನಂತರ ಸ್ವಯಂ ಘೋಷಿತ ವೈದ್ಯರಾಗಿ ಬದಲಾಗಿದ್ದ ಎಂದು ಪೊಲೀಸರ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ. ಗ್ರಾಮೀಣ ಬಿಹಾರದಲ್ಲಿ ಆರೋಗ್ಯ ಸೇವೆಯ ಸ್ಥಿತಿ ಎಷ್ಟು ದಯನೀಯವಾಗಿದೆ ಎಂಬುದಕ್ಕೆ ಗೋಲು ಪ್ರಕರಣ ಒಂದು ಉದಾಹರಣೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಸ್ಥಳೀಯವಾಗಿ “ಜೋಲಾ ಚಾಪ್” ಎಂದು ಕರೆಯಲ್ಪಡುವ ನಕಲಿ ವೈದ್ಯರು ರಾಜ್ಯದಾದ್ಯಂತ ನೂರಾರು ಖಾಸಗಿ ಚಿಕಿತ್ಸಾಲಯಗಳನ್ನು ನಡೆಸುತ್ತಿದ್ದಾರೆ ಮತ್ತು ಬಡ ಜನರು ಅವರ ಬಲಿಪಶುಗಳಾಗುತ್ತಾರೆ ಎಂದು ವರದಿಗಳು ಹೇಳಿವೆ. ಆದರೆ ಅಂತಹ ಹೆಚ್ಚಿನ ಪ್ರಕರಣಗಳು ವರದಿಯಾಗುವುದಿಲ್ಲ.

ವಿಡಿಯೊ ನೋಡಿ: ಗೌರಿ ನೆನಪು-2024 ಗೌರಿ ನಮನ ಕಾರ್ಯಕ್ರಮ ಸಮಾಧಿ ಬಳಿಯಿಂದ ನೇರ ಪ್ರಸಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....