Homeಮುಖಪುಟಯೂಟ್ಯೂಬ್ ನೋಡಿ 15 ವರ್ಷದ ಬಾಲಕನಿಗೆ ಆಪರೇಷನ್ ಮಾಡಿದ ನಕಲಿ ವೈದ್ಯ!

ಯೂಟ್ಯೂಬ್ ನೋಡಿ 15 ವರ್ಷದ ಬಾಲಕನಿಗೆ ಆಪರೇಷನ್ ಮಾಡಿದ ನಕಲಿ ವೈದ್ಯ!

- Advertisement -
- Advertisement -

ನಕಲಿ ವೈದ್ಯನೊಬ್ಬ ಮೊಬೈಲ್ ಫೋನ್‌ನಲ್ಲಿ ಯೂಟ್ಯೂಬ್ ವೀಡಿಯೊಗಳನ್ನು ನೋಡಿ ಪಿತ್ತಕೋಶದ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ನಡೆಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಆರೋಪಿಯನ್ನು ಅಜಿತ್ ಕುಮಾರ್ ಪುರಿ ಎಂದು ಗುರುತಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಪಟ್ಟ 15 ವರ್ಷದ ಬಾಲಕ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಘಟನೆಯ ನಂತರ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಜಿತ್ ಕುಮಾರ್ ಪುರಿಯನ್ನು, ಎರಡು ದಿನಗಳ ಕಳೆದು ಸೋಮವಾರ ಬಂಧಿಸಲಾಗಿದೆ. ಆತನ ಕ್ಲಿನಿಕ್ ಅನ್ನು ಸೀಲ್ ಮಾಡಲಾಗಿದೆ ಎಂದು ಸರನ್ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ಭಾರ್ತಿ ತಿಳಿಸಿದ್ದಾರೆ. ಈ ಹಿಂದೆ ಬಾಲಕನ ಕುಟುಂಬಸ್ಥರ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತ ಕೃಷ್ಣ ಕುಮಾರ್ ಅಲಿಯಾಸ್ ಗೋಲು ಅವರ ತಂದೆ ಚಂದನ್ ಶಾ ಅವರು ತಮ್ಮ ಒಪ್ಪಿಗೆ ಅಥವಾ ಅರಿವಿಗೆ ಬಾರದೆ ತನ್ನ ಮಗನಿಗೆ ಆಪರೇಷನ್ ಮಾಡಲಾಗಿದೆ ಎಂದು ಲಿಖಿತ ದೂರಿನಲ್ಲಿ ಹೇಳಿದ್ದಾರೆ. ಯೂಟ್ಯೂಬ್ ವೀಡಿಯೋಗಳನ್ನು ನೋಡಿ ಪುರಿ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದದ್ದನ್ನು ಪ್ರಶ್ನಿಸಿದಾಗ, ಆರೋಪಿಯು ತಾನು ವೈದ್ಯನಲ್ಲ ಎಂದು ಹೇಳಿದ್ದನು ಎಂದು ಚಂದನ್ ಶಾ ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಶಸ್ತ್ರಚಿಕಿತ್ಸೆಯ ಸಮಯದಲ್ಲಿ, ಗೋಲು ಅವರ ಆರೋಗ್ಯವು ಹದಗೆಟ್ಟಿತ್ತು. ಈ ವೇಳೆ ಅವರ ಕುಟುಂಬವು ಪ್ರತಿಭಟಿಸಿದಾಗ ನಕಲಿ ವೈದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಪಾಟ್ನಾಗೆ ಕರೆದೊಯ್ಯುವುದಾಗಿ ಭರವಸೆ ನೀಡಿದ್ದನು. ಆದರೆ ಪಾಟ್ನಾಗೆ ತೆರಳುವ ಮಾರ್ಗಮಧ್ಯೆ ನಕಲಿ ವೈದ್ಯ ಪರಾರಿಯಾಗಿದ್ದಾಗಿ ವರದಿಯಾಗಿದೆ.

“ಕಳೆದ ವಾರ ವಾಂತಿ ಮತ್ತು ಹೊಟ್ಟೆ ನೋವಿನ ಕಾರಣಕ್ಕೆ ನಾವು ಸರನ್‌ನ ಮೋತಿರಾಜಪುರ ಧರಂಬಾಗಿ ಬಜಾರ್‌ನಲ್ಲಿರುವ ಅಜಿತ್ ಕುಮಾರ್ ಪುರಿ ಅವರ ಖಾಸಗಿ ಕ್ಲಿನಿಕ್ ಗಣಪತಿ ಸೇವಾ ಸದನ್‌ಗೆ ಮಗನನ್ನು ದಾಖಲಿಸಿದ್ದೆವು. ಆರಂಭದಲ್ಲಿ ಎರಡು ದಿನಗಳ ಕಾಲ ಅವರಿಗೆ ಚುಚ್ಚುಮದ್ದು ಮತ್ತು ಔಷಧಿಗಳೊಂದಿಗೆ ಚಿಕಿತ್ಸೆ ನೀಡಲಾಯಿತು. ಆದರೆ ಕಳೆದ ಶುಕ್ರವಾರ, ಯೂಟ್ಯೂಬ್ ವೀಡಿಯೊಗಳನ್ನು ನೋಡುತ್ತಲೇ ಪುರಿ ಶಸ್ತ್ರಚಿಕಿತ್ಸೆ ನಡೆಸಿದ್ದರು” ಎಂದು ಚಂದನ್ ಶಾ ಹೇಳಿದ್ದಾರೆ.

ಇದನ್ನೂಓದಿ:ಖನಿಜಗಳ ಮೇಲಿನ ರಾಯಧನ -ಬಾಕಿ ತೆರಿಗೆ ವಸೂಲಿ ಕುರಿತ ರಾಜ್ಯಗಳ ಅರ್ಜಿ; ಪ್ರತ್ಯೇಕ ಪೀಠದಲ್ಲಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಮೊದಲು ನಾಲ್ಕು ವರ್ಷಗಳ ಕಾಲ ಸಹಾಯಕ ಕಮ್ ಕಾಂಪೌಂಡರ್ ಆಗಿ ಕೆಲಸ ಮಾಡಿದ ಪುರಿ ನಂತರ ಸ್ವಯಂ ಘೋಷಿತ ವೈದ್ಯರಾಗಿ ಬದಲಾಗಿದ್ದ ಎಂದು ಪೊಲೀಸರ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ. ಗ್ರಾಮೀಣ ಬಿಹಾರದಲ್ಲಿ ಆರೋಗ್ಯ ಸೇವೆಯ ಸ್ಥಿತಿ ಎಷ್ಟು ದಯನೀಯವಾಗಿದೆ ಎಂಬುದಕ್ಕೆ ಗೋಲು ಪ್ರಕರಣ ಒಂದು ಉದಾಹರಣೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಸ್ಥಳೀಯವಾಗಿ “ಜೋಲಾ ಚಾಪ್” ಎಂದು ಕರೆಯಲ್ಪಡುವ ನಕಲಿ ವೈದ್ಯರು ರಾಜ್ಯದಾದ್ಯಂತ ನೂರಾರು ಖಾಸಗಿ ಚಿಕಿತ್ಸಾಲಯಗಳನ್ನು ನಡೆಸುತ್ತಿದ್ದಾರೆ ಮತ್ತು ಬಡ ಜನರು ಅವರ ಬಲಿಪಶುಗಳಾಗುತ್ತಾರೆ ಎಂದು ವರದಿಗಳು ಹೇಳಿವೆ. ಆದರೆ ಅಂತಹ ಹೆಚ್ಚಿನ ಪ್ರಕರಣಗಳು ವರದಿಯಾಗುವುದಿಲ್ಲ.

ವಿಡಿಯೊ ನೋಡಿ: ಗೌರಿ ನೆನಪು-2024 ಗೌರಿ ನಮನ ಕಾರ್ಯಕ್ರಮ ಸಮಾಧಿ ಬಳಿಯಿಂದ ನೇರ ಪ್ರಸಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...