Homeಮುಖಪುಟಬಿಹಾರ | ಚುನಾವಣೆ ನಂತರ ಅಥವಾ ಮುಂಚೆ, ಬಿಜೆಪಿ ಜೊತೆ ಮೈತ್ರಿಯಿಲ್ಲ: ಪ್ರಶಾಂತ್ ಕಿಶೋರ್

ಬಿಹಾರ | ಚುನಾವಣೆ ನಂತರ ಅಥವಾ ಮುಂಚೆ, ಬಿಜೆಪಿ ಜೊತೆ ಮೈತ್ರಿಯಿಲ್ಲ: ಪ್ರಶಾಂತ್ ಕಿಶೋರ್

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯ ನಂತರವಾಗಲಿ, ಚುನಾವಣೆಗೆ ಮುಂಚಿತವಾಗಲಿ ಬಿಜೆಪಿ ಜೊತೆಗೆ ಯಾವುದೆ ಮೈತ್ರಿಯನ್ನು ತಮ್ಮ ಪಕ್ಷವು ಮಾಡುವುದಿಲ್ಲ ಎಂದು ಜನ್ ಸುರಾಜ್ ಸಂಸ್ಥಾಪಕ ಮತ್ತು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಶನಿವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 2 ರಂದು ತಮ್ಮ ರಾಜಕೀಯ ಸಂಘಟನೆಯನ್ನು ಪ್ರಾರಂಭಿಸಲಿರುವ ಕಿಶೋರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ವಿಧಾನಸಭಾ ಚುನಾವಣೆಯ ನಂತರ ಬಿಜೆಪಿಯೊಂದಿಗೆ ಯಾವುದೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬ ವಿಚಾರದಲ್ಲಿ ತಮ್ಮ ಪಕ್ಷವು ದೃಢವಾಗಿದೆ ಎಂದು ಹೇಳಿದ್ದು, ಈ ಬಗ್ಗೆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಕಳೆದ ಎರಡು ವರ್ಷಗಳಿಂದ ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಸಮಾವೇಶ ನಡೆಸುತ್ತಿರುವ ಅವರು ತಮ್ಮ ಸಂಘಟನೆಯು ರಾಜ್ಯದಾದ್ಯಂತ ಎಲ್ಲಾ ಸಾಮಾಜಿಕ ಗುಂಪುಗಳ ಜನರನ್ನು ಬೆಂಬಲಿಸುತ್ತದೆ ಎಂದು ಹೇಳಬಹುದು ಎಂದು ಅವರು ಹೇಳಿದ್ದಾರೆ. ಬಿಹಾರ ಮತ್ತು ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಯನ್ನು ಕೇಂದ್ರೀಕರಿಸುವ ತಮ್ಮ ಸಂಘಟನೆಯ ಬಗ್ಗೆ ಜನರು ಮಾತನಾಡಲು ಪ್ರಾರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ‘ಸುಲಿಗೆ’ | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ FIR

“ವಿಧಾನಸಭಾ ಚುನಾವಣೆಯ ನಂತರ ನನ್ನ ಪಕ್ಷವು ಸೀಟುಗಳ ವಿಷಯದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು ಅಥವಾ 4 ರಿಂದ 5 ಸೀಟುಗಳಿಗೆ ಸೀಮಿತವಾಗಬಹುದು. ಜನರು ಇನ್ನೂ ಆರ್ಥಿಕ ಅಭಿವೃದ್ಧಿಗೆ ಹಿನ್ನಡೆಯಾಗುವ ಜಾತಿ ರಾಜಕೀಯವನ್ನು ಬಯಸುತ್ತಾರೆಯೇ ಅಥವಾ ನನ್ನ ಪಕ್ಷಕ್ಕೆ ಮತ ನೀಡುವ ಮೂಲಕ ಬೆಳವಣಿಗೆಯ ಹಾದಿಯಲ್ಲಿ ಮುನ್ನಡೆಯಲು ಸಿದ್ಧರಿದ್ದಾರೆಯೇ ಎಂಬುದರ ಮೇಲೆ ಎಲ್ಲವೂ ಅವಲಂಬಿಸಿದೆ” ಎಂದು ಅವರು ಹೇಳಿದ್ದಾರೆ.

ಅದಾಗ್ಯೂ, ನಿಗದಿತ ಅವಧಿಗೂ ಮುನ್ನವೇ ಬಿಹಾರ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯನ್ನು ಅವರು ತಳ್ಳಿಹಾಕಿದ್ದಾರೆ. ”ಅವಧಿಗಿಂತ ಮುಂಚೆ ಚುನಾವಣೆ ನಡೆಯುವ ಬಗ್ಗೆ ನನಗೆ ಯಾವುದೇ ಕಾರಣ ಕಾಣುತ್ತಿಲ್ಲ. ಚುನಾವಣೆಯನ್ನು ಮುಂದೂಡಲು ಒಂದು ಕಾರಣವಿರಬೇಕು” ಎಂದು ಅವರು ಪ್ರತಿಪಾದಿಸಿದ್ದಾರೆ. ರಾಜಕೀಯ ಪಕ್ಷಗಳು ಸಾಕಷ್ಟು ಮುಂಚಿತವಾಗಿ ಸಿದ್ಧತೆಗಳನ್ನು ಪ್ರಾರಂಭಿಸುವುದು ತುಂಬಾ ಸಹಜ ಎಂದು ಹೇಳಿದ್ದಾರೆ.

ಅಕ್ಟೋಬರ್ 2 ರಂದು, ಕಿಶೋರ್ ಅವರು ಔಪಚಾರಿಕವಾಗಿ ತಮ್ಮ ಪಕ್ಷದ 25 ಸದಸ್ಯರ ಸ್ಟೀರಿಂಗ್ ಕಮಿಟಿಯನ್ನು ಸ್ಥಾಪಿಸಲಿದ್ದಾರೆ. ಇದು 2025 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಲಿದೆ. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷರು ಮತ್ತು ಇತರ ಪದಾಧಿಕಾರಿಗಳ ಹೆಸರನ್ನು ಸಹ ಪ್ರಕಟಿಸಲಾಗುವುದು ಎಂದು ವರದಿಯಾಗಿದೆ.

ವಿಡಿಯೊ ನೊಡಿ: ದಲಿತ ಸಮುದಾಯಗಳ ಒಡಕಿನಲ್ಲೂ ಒಗ್ಗಟ್ಟಿದೆ: ಅಗ್ರಹಾರ ಕೃಷ್ಣಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...