Homeಮುಖಪುಟಬಿಹಾರದ 40°C ಬೇಸಿಗೆಯ ವೇಳೆ ಜನರಿಗೆ ಕಂಬಳಿ ನೀಡಿದ ಬಿಜೆಪಿ ಸಚಿವ; 'ವಿಲಕ್ಷಣ ವರ್ತನೆ' ಎಂದ...

ಬಿಹಾರದ 40°C ಬೇಸಿಗೆಯ ವೇಳೆ ಜನರಿಗೆ ಕಂಬಳಿ ನೀಡಿದ ಬಿಜೆಪಿ ಸಚಿವ; ‘ವಿಲಕ್ಷಣ ವರ್ತನೆ’ ಎಂದ ಆರ್‌ಜೆಡಿ

- Advertisement -
- Advertisement -

ಬಿಹಾರದಲ್ಲಿ ಚುನಾವಣಾ ಕಾವು ಮತ್ತು ಬೇಸಿಗೆಯ ಬಿಸಿ ಏರುತ್ತಿರುವ ಹೊತ್ತಿನಲ್ಲೆ ರಾಜ್ಯದ ಬಿಜೆಪಿ ಸಚಿವರೊಬ್ಬರು ಜನರಿಗೆ ಕಂಬಳಿ ವಿತರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಂಗ್ಯಕ್ಕೀಡಾಡಿದ್ದಾರೆ. ಸಚಿವರ ಈ ನಡೆಯನ್ನು ವಿಪಕ್ಷ ಆರ್‌ಜೆಡಿ ‘ವಿಲಕ್ಷಣ ವರ್ತನೆ’ ಎಂದು ಕರೆದಿದೆ. ಕಾರ್ಯಕ್ರಮವೂ ಕ್ಷೇತ್ರದ ಜನರಿಗೆ ಕೃತಜ್ಞತೆ ಮತ್ತು ಗೌರವದ ಸಂಕೇತವೆಂದು ಸಚಿವರು ಕಂಬಳಿಗಳನ್ನು ವಿತರಿಸುವ ವೇಳೆ ಬಣ್ಣಿಸಿದ್ದಾರೆ ಎಂದು ವರದಿಯಾಗಿದೆ. ಬಿಹಾರದ 40°C ಬೇಸಿಗೆಯ

ಬಿಹಾರದ ಕ್ರೀಡಾ ಸಚಿವ ಸುರೇಂದ್ರ ಕುಮಾರ್ ಮೆಹ್ತಾ ಅವರು ರಾಜ್ಯವು 40 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ತಲುಪಿದಾಗ ಜನರಿಗೆ ಕಂಬಳಿ ವಿತರಿಸುವ ವೀಡಿಯೊವನ್ನು ಪೋಸ್ಟ್ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ಬಿಜೆಪಿಯ ಸಂಸ್ಥಾಪನಾ ದಿನದ ಅಂಗವಾಗಿ ಬೇಗುಸರಾಯ್ ಜಿಲ್ಲೆಯ ಮನ್ಸುರ್ಚಕ್ ಬ್ಲಾಕ್‌ನ ಅಹಿಯಾಪುರ್ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಸುಮಾರು 700 ಜನರಿಗೆ ಸಾಂಪ್ರದಾಯಿಕ ಬಟ್ಟೆ ಮತ್ತು ಕಂಬಳಿಗಳನ್ನು ವಿತರಿಸಿದ್ದಾರೆ.

ಏಪ್ರಿಲ್ 6 ರಂದು ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಸಚಿವರು ಜನರಿಗೆ ‘ಆಂಗ್ ವಸ್ತ್ರ’ ಹಸ್ತಾಂತರಿಸುವ ಮೂಲಕ ಗೌರವಿಸಿದರು ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. “ಫಲಾನುಭವಿಗಳಿಗೆ ಬಟ್ಟೆಗಳು ಬೇಕಾಗಿದ್ದವು. ಅವರಿಗೆ ಸಾಂಪ್ರದಾಯಿಕ ‘ಆಂಗ್ ವಸ್ತ್ರ’ವನ್ನು ಒದಗಿಸಲು ನಾವು ಈ ಸಂದರ್ಭವನ್ನು ಆರಿಸಿಕೊಂಡೆವು. ಅದರ ಜೊತೆಗೆ ಜನರಿಗೆ ಕಂಬಳಿಗಳನ್ನು ಸಹ ಹಸ್ತಾಂತರಿಸಲಾಯಿತು” ಎಂದು ಸಚಿವರ ಆಪ್ತರೊಬ್ಬರು ಹೇಳಿದ್ದಾಗಿ TNIE ವರದಿ ಮಾಡಿದೆ.

ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹಾಕಿದ್ದ ಈ ವಿಡಿಯೊವನ್ನು ವಿವಾದದ ನಂತರ ಸಚಿವ ಮೆಹ್ತಾ ಅವರು ಅಳಿಸಿದ್ದಾರೆ. ಅಳಿಸಲ್ಪಟ್ಟ ಈ ಪೋಸ್ಟ್‌ನಲ್ಲಿ, “ಬಡವರ ಉನ್ನತಿ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಬದ್ಧವಾಗಿರುವ ವಿಶ್ವದ ಅತಿದೊಡ್ಡ ಪಕ್ಷದ 45 ನೇ ಸಂಸ್ಥಾಪನಾ ದಿನದಂದು, ನಾವು ಅಹಿಯಾಪುರದಲ್ಲಿ ಜನರಿಗೆ ‘ಅಂಗ್ ವಸ್ತ್ರ’ ನೀಡುವ ಮೂಲಕ ಗೌರವಿಸಿದ್ದೇವೆ” ಎಂದು ಬರೆದಿದ್ದಾರೆ.

“ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅನಿಯಮಿತ ವರ್ತನೆಯು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. ಆದರೆ ಅವರ ಸಚಿವ ಸಹೋದ್ಯೋಗಿ ಮೆಹ್ತಾ ಅವರ ಈ ಕ್ರಮವು ರಾಜಕೀಯ ವಲಯದಲ್ಲಿ ಕೋಲಾಹಲವನ್ನು ಸೃಷ್ಟಿಸಿದೆ” ಎಂದು ಪಾಟ್ನಾದ ಮರೌರ್ಹಿ ನಿವಾಸಿ ಆರ್‌ಜೆಡಿ ನಾಯಕ ನಿರಂಜನ್ ಯಾದವ್ ಹೇಳಿದ್ದಾರೆ.

ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಡವರನ್ನು ಓಲೈಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದಾಗ್ಯೂ, ಬಿಜೆಪಿಯ ಪ್ರಮುಖ ಮಿತ್ರ ಪಕ್ಷವಾದ ಜೆಡಿ(ಯು) ಸಚಿವರನ್ನು ಸಮರ್ಥಿಸಿಕೊಂಡಿದ್ದು, ವೈರಲ್ ವೀಡಿಯೊದಲ್ಲಿ ತೋರಿಸಿರುವಂತೆ ಜನರಿಗೆ ಕಂಬಳಿಗಳನ್ನು ಅಲ್ಲ, ಬದಲಾಗಿ ‘ಚಾದರ್‌ಗಳನ್ನು’ ಹಸ್ತಾಂತರಿಸಲಾಗಿದೆ ಎಂದು ಹೇಳಿದ್ದಾರೆ. ಬಿಹಾರದ 40°C ಬೇಸಿಗೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಬಂಗಾಳವನ್ನು ಒಡೆದು ಆಳುವುದಕ್ಕೆ ಸಾಧ್ಯವಿಲ್ಲ..’; ವಕ್ಫ್ ಕಾಯ್ದೆ ಜಾರಿಗೆ ತರುವುದಿಲ್ಲ ಎಂದ ಮಮತಾ ಬ್ಯಾನರ್ಜಿ

‘ಬಂಗಾಳವನ್ನು ಒಡೆದು ಆಳುವುದಕ್ಕೆ ಸಾಧ್ಯವಿಲ್ಲ..’; ವಕ್ಫ್ ಕಾಯ್ದೆ ಜಾರಿಗೆ ತರುವುದಿಲ್ಲ ಎಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...