Homeಕರೋನಾ ತಲ್ಲಣಬಿಹಾರ; ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ, ತಜ್ಞರ ಅನುಮಾನ!

ಬಿಹಾರ; ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ, ತಜ್ಞರ ಅನುಮಾನ!

ವೈದ್ಯಕೀಯ ಸಂಪನ್ಮೂಲಗಳ ಕೊರತೆ ಇರುವ ರಾಜ್ಯದಲ್ಲಿ, ಇಂತಹ ಅಂಕಿ-ಅಂಶಗಳು ಸತ್ಯವಾಗಿವೆಯೇ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ರಿಜೊ ಜಾನ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಬಿಹಾರದಲ್ಲಿ ಚುನಾವಣಾ ಪ್ರಚಾರಗಳಲ್ಲಿ ಸಮಾವೇಶಗೊಳ್ಳುತ್ತಿರುವ ಜನಸಮೂಹ ಯಾವ ಕೊರೊನಾ ನಿಬಂಧನೆಗಳನ್ನು ಅನುಸರಿಸುತ್ತಿಲ್ಲ. ಇದು ಚುನಾವಣಾ ಆಯೋಗದ ಗಮನಕ್ಕೂ ಬಂದಿದ್ದು, ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ. ಆದರೆ ಕೊರೊನಾ ಪ್ರಕರಣಗಳ ಸಂಖ್ಯೆ ಮಾತ್ರ ಇಳಿಮುಖವಾಗುತ್ತಿದೆ.

ಆದರೆ, ಇಷ್ಟೊಂದು ಮಟ್ಟದಲ್ಲಿ ಜನ ಸೇರುತ್ತಿದ್ದರೂ, ಮಾಸ್ಕ್‌ ಧರಿಸುವುದರಲ್ಲಿ, ದೈಹಿಕ ಅಂತರ ಪಾಲಿಸುವುದರಲ್ಲಿ ಕಾಳಜಿ ವಹಿಸದ, ಅತಿರೇಕದ ವರ್ತನೆ ತೋರುತ್ತಿದ್ದರೂ, ಕೊರೊನಾ ಪ್ರಕರಣಗಳು ಕಡಿಮೆ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಇದು ಆರೋಗ್ಯ ತಜ್ಞರ ಅನುಮಾನಕ್ಕೆ ಕಾರಣವಾಗಿದೆ. ಬಿಹಾರದಲ್ಲಿ ವೈದ್ಯಕೀಯ ಸೌಕರ್ಯಗಳ ಕೊರತೆ ಹೆಚ್ಚಾಗಿದೆ.

ಬಿಹಾರದಲ್ಲೇ ಒಂದು ಕೋಟಿ ಜನರಿಗೆ ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗಿದೆ. ಪ್ರತಿದಿನ 1.5 ಲಕ್ಷ ಮಾದರಿಗಳನ್ನು ಪರೀಕ್ಷಿಸುತ್ತಿದೆ. ಆದರೆ, ಕಳೆದೆರಡು ತಿಂಗಳಲ್ಲಿ ಶೇ. 5ರಷ್ಟು ಕೊರೊನಾ ಪಾಸಿಟಿವ್‌ ಪ್ರಕರಣಗಳು ಮಾತ್ರ ವರದಿ ಆಗಿವೆ.

ರಾಜ್ಯದಲ್ಲಿ ನಿರಂತರವಾಗಿ ಪಾಸಿಟಿವ್ ಪ್ರಕರಣಗಳು ಕುಸಿತಗೊಂಡಿವೆ. ವೈದ್ಯಕೀಯ ಸಂಪನ್ಮೂಲಗಳ ಕೊರತೆ ಇರುವ ರಾಜ್ಯದಲ್ಲಿ, ಇಂತಹ ಅಂಕಿ-ಅಂಶಗಳು ಸತ್ಯವಾಗಿವೆಯೇ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ರಿಜೊ ಜಾನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ಸಾವಿರಾರು ಮಂದಿ ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಆಗಸ್ಟ್‌ನಲ್ಲಿ ಕೊರೊನಾ‌ ಪ್ರಕರಣಗಳು ಹೆಚ್ಚಾಳದವಾದರೂ, ನಂತರದ ದಿನಗಳಲ್ಲಿ  ಸೋಂಕಿತರ ಸಂಖ್ಯೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಸದ್ಯ ಬಿಹಾರದಲ್ಲಿ ಒಟ್ಟಾರೆ 2,14,946 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 1076 ಮಂದಿ ಮೃತಪಟ್ಟಿದ್ದಾರೆ.

ಕೆಲವು ಸಮಯದಿಂದ ಮೈಕ್ರೊ-ಲೆವೆಲ್ ಕೋವಿಡ್ ಡೇಟಾವನ್ನು ಟ್ರ್ಯಾಕ್ ಮಾಡುತ್ತಿರುವ ಹಿರಿಯ ಆರೋಗ್ಯ ಸಂಶೋಧಕರು ಹೇಳುವಂತೆ, “ಭಾರತದ ಬಡ ರಾಜ್ಯಗಳಲ್ಲಿ ಒಂದಾದ ಬಿಹಾರದ ಮಾಹಿತಿಯು ಕಾಗದದ ಮೇಲೆ ತುಂಬಾ ಚೆನ್ನಾಗಿ ಕಾಣುತ್ತದೆ, ಅದು ನಂಬಲಾಗದ ಮಟ್ಟಿಗೆ. ಆದರೆ ಯಾವುದೇ ಕ್ರಮ ಕೈಗೊಳ್ಳುವ ಮುನ್ನ ನಮಗೆ ಹೆಚ್ಚಿನ ಮಾಹಿತಿ ಬೇಕು” ಎಂದು ತಿಳಿಸಿದ್ದಾರೆ.

“ಉದಾಹರಣೆಗೆ, ಸ್ಯಾಂಪಲ್ಸ್,  ಪರೀಕ್ಷಾ ಪ್ರಕಾರಗಳು, ಪರೀಕ್ಷೆಗಳನ್ನು ಮಾಡಿರುವ ಪ್ರದೇಶಗಳು ಇತ್ಯಾದಿಗಳ ಮೂಲಕ ಪರೀಕ್ಷಿಸುವುದು ನಮಗೆ ಸಹಾಯ ಮಾಡುತ್ತದೆ. ಈಗಿನಿಂದ ಸುಮಾರು ಎರಡು ವಾರಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗದಿದ್ದರೆ, ಅದು ಪವಾಡ ಅಥವಾ ವರದಿಯ ಅಡಿಯಲ್ಲಿ ವ್ಯವಸ್ಥಿತವಾಗಿರುತ್ತದೆ” ಎಂದು ತಿಳಿಸಿದ್ದಾರೆ.

ಬಿಹಾರವು ದೇಶದಲ್ಲಿ ಅತಿ ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿದೆ. ಸಾವಿನ ಪ್ರಮಾಣ ಶೇಕಡಾ 0.52 ರಷ್ಟಿದ್ದು, ಇದು ರಾಷ್ಟ್ರೀಯ ಸರಾಸರಿ ಶೇಕಡಾ 1.51 ಕ್ಕಿಂತ ಕಡಿಮೆಯಾಗಿದೆ. ರಾಷ್ಟ್ರೀಯ ಆರೋಗ್ಯ ವಿವರ 2018 ರ ಮಾಹಿತಿಯ ಪ್ರಕಾರ, ಬಿಹಾರದಲ್ಲಿ ಒಟ್ಟು 40,649 ಅಲೋಪತಿ ವೈದ್ಯರಿದ್ದಾರೆ. ರಾಜ್ಯದ ಪ್ರತಿ 2,435 ಜನರಿಗೆ ಒಬ್ಬ ವೈದ್ಯ ಲಭ್ಯವಿದ್ದಾರೆ.


ಇದನ್ನೂ ಓದಿ : ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...