Homeಕರೋನಾ ತಲ್ಲಣಬಿಹಾರ; ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ, ತಜ್ಞರ ಅನುಮಾನ!

ಬಿಹಾರ; ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ, ತಜ್ಞರ ಅನುಮಾನ!

ವೈದ್ಯಕೀಯ ಸಂಪನ್ಮೂಲಗಳ ಕೊರತೆ ಇರುವ ರಾಜ್ಯದಲ್ಲಿ, ಇಂತಹ ಅಂಕಿ-ಅಂಶಗಳು ಸತ್ಯವಾಗಿವೆಯೇ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ರಿಜೊ ಜಾನ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಬಿಹಾರದಲ್ಲಿ ಚುನಾವಣಾ ಪ್ರಚಾರಗಳಲ್ಲಿ ಸಮಾವೇಶಗೊಳ್ಳುತ್ತಿರುವ ಜನಸಮೂಹ ಯಾವ ಕೊರೊನಾ ನಿಬಂಧನೆಗಳನ್ನು ಅನುಸರಿಸುತ್ತಿಲ್ಲ. ಇದು ಚುನಾವಣಾ ಆಯೋಗದ ಗಮನಕ್ಕೂ ಬಂದಿದ್ದು, ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ. ಆದರೆ ಕೊರೊನಾ ಪ್ರಕರಣಗಳ ಸಂಖ್ಯೆ ಮಾತ್ರ ಇಳಿಮುಖವಾಗುತ್ತಿದೆ.

ಆದರೆ, ಇಷ್ಟೊಂದು ಮಟ್ಟದಲ್ಲಿ ಜನ ಸೇರುತ್ತಿದ್ದರೂ, ಮಾಸ್ಕ್‌ ಧರಿಸುವುದರಲ್ಲಿ, ದೈಹಿಕ ಅಂತರ ಪಾಲಿಸುವುದರಲ್ಲಿ ಕಾಳಜಿ ವಹಿಸದ, ಅತಿರೇಕದ ವರ್ತನೆ ತೋರುತ್ತಿದ್ದರೂ, ಕೊರೊನಾ ಪ್ರಕರಣಗಳು ಕಡಿಮೆ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಇದು ಆರೋಗ್ಯ ತಜ್ಞರ ಅನುಮಾನಕ್ಕೆ ಕಾರಣವಾಗಿದೆ. ಬಿಹಾರದಲ್ಲಿ ವೈದ್ಯಕೀಯ ಸೌಕರ್ಯಗಳ ಕೊರತೆ ಹೆಚ್ಚಾಗಿದೆ.

ಬಿಹಾರದಲ್ಲೇ ಒಂದು ಕೋಟಿ ಜನರಿಗೆ ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗಿದೆ. ಪ್ರತಿದಿನ 1.5 ಲಕ್ಷ ಮಾದರಿಗಳನ್ನು ಪರೀಕ್ಷಿಸುತ್ತಿದೆ. ಆದರೆ, ಕಳೆದೆರಡು ತಿಂಗಳಲ್ಲಿ ಶೇ. 5ರಷ್ಟು ಕೊರೊನಾ ಪಾಸಿಟಿವ್‌ ಪ್ರಕರಣಗಳು ಮಾತ್ರ ವರದಿ ಆಗಿವೆ.

ರಾಜ್ಯದಲ್ಲಿ ನಿರಂತರವಾಗಿ ಪಾಸಿಟಿವ್ ಪ್ರಕರಣಗಳು ಕುಸಿತಗೊಂಡಿವೆ. ವೈದ್ಯಕೀಯ ಸಂಪನ್ಮೂಲಗಳ ಕೊರತೆ ಇರುವ ರಾಜ್ಯದಲ್ಲಿ, ಇಂತಹ ಅಂಕಿ-ಅಂಶಗಳು ಸತ್ಯವಾಗಿವೆಯೇ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ರಿಜೊ ಜಾನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ಸಾವಿರಾರು ಮಂದಿ ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಆಗಸ್ಟ್‌ನಲ್ಲಿ ಕೊರೊನಾ‌ ಪ್ರಕರಣಗಳು ಹೆಚ್ಚಾಳದವಾದರೂ, ನಂತರದ ದಿನಗಳಲ್ಲಿ  ಸೋಂಕಿತರ ಸಂಖ್ಯೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಸದ್ಯ ಬಿಹಾರದಲ್ಲಿ ಒಟ್ಟಾರೆ 2,14,946 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 1076 ಮಂದಿ ಮೃತಪಟ್ಟಿದ್ದಾರೆ.

ಕೆಲವು ಸಮಯದಿಂದ ಮೈಕ್ರೊ-ಲೆವೆಲ್ ಕೋವಿಡ್ ಡೇಟಾವನ್ನು ಟ್ರ್ಯಾಕ್ ಮಾಡುತ್ತಿರುವ ಹಿರಿಯ ಆರೋಗ್ಯ ಸಂಶೋಧಕರು ಹೇಳುವಂತೆ, “ಭಾರತದ ಬಡ ರಾಜ್ಯಗಳಲ್ಲಿ ಒಂದಾದ ಬಿಹಾರದ ಮಾಹಿತಿಯು ಕಾಗದದ ಮೇಲೆ ತುಂಬಾ ಚೆನ್ನಾಗಿ ಕಾಣುತ್ತದೆ, ಅದು ನಂಬಲಾಗದ ಮಟ್ಟಿಗೆ. ಆದರೆ ಯಾವುದೇ ಕ್ರಮ ಕೈಗೊಳ್ಳುವ ಮುನ್ನ ನಮಗೆ ಹೆಚ್ಚಿನ ಮಾಹಿತಿ ಬೇಕು” ಎಂದು ತಿಳಿಸಿದ್ದಾರೆ.

“ಉದಾಹರಣೆಗೆ, ಸ್ಯಾಂಪಲ್ಸ್,  ಪರೀಕ್ಷಾ ಪ್ರಕಾರಗಳು, ಪರೀಕ್ಷೆಗಳನ್ನು ಮಾಡಿರುವ ಪ್ರದೇಶಗಳು ಇತ್ಯಾದಿಗಳ ಮೂಲಕ ಪರೀಕ್ಷಿಸುವುದು ನಮಗೆ ಸಹಾಯ ಮಾಡುತ್ತದೆ. ಈಗಿನಿಂದ ಸುಮಾರು ಎರಡು ವಾರಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗದಿದ್ದರೆ, ಅದು ಪವಾಡ ಅಥವಾ ವರದಿಯ ಅಡಿಯಲ್ಲಿ ವ್ಯವಸ್ಥಿತವಾಗಿರುತ್ತದೆ” ಎಂದು ತಿಳಿಸಿದ್ದಾರೆ.

ಬಿಹಾರವು ದೇಶದಲ್ಲಿ ಅತಿ ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿದೆ. ಸಾವಿನ ಪ್ರಮಾಣ ಶೇಕಡಾ 0.52 ರಷ್ಟಿದ್ದು, ಇದು ರಾಷ್ಟ್ರೀಯ ಸರಾಸರಿ ಶೇಕಡಾ 1.51 ಕ್ಕಿಂತ ಕಡಿಮೆಯಾಗಿದೆ. ರಾಷ್ಟ್ರೀಯ ಆರೋಗ್ಯ ವಿವರ 2018 ರ ಮಾಹಿತಿಯ ಪ್ರಕಾರ, ಬಿಹಾರದಲ್ಲಿ ಒಟ್ಟು 40,649 ಅಲೋಪತಿ ವೈದ್ಯರಿದ್ದಾರೆ. ರಾಜ್ಯದ ಪ್ರತಿ 2,435 ಜನರಿಗೆ ಒಬ್ಬ ವೈದ್ಯ ಲಭ್ಯವಿದ್ದಾರೆ.


ಇದನ್ನೂ ಓದಿ : ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...