Homeಕರೋನಾ ತಲ್ಲಣಬಿಹಾರ; ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ, ತಜ್ಞರ ಅನುಮಾನ!

ಬಿಹಾರ; ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ, ತಜ್ಞರ ಅನುಮಾನ!

ವೈದ್ಯಕೀಯ ಸಂಪನ್ಮೂಲಗಳ ಕೊರತೆ ಇರುವ ರಾಜ್ಯದಲ್ಲಿ, ಇಂತಹ ಅಂಕಿ-ಅಂಶಗಳು ಸತ್ಯವಾಗಿವೆಯೇ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ರಿಜೊ ಜಾನ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಬಿಹಾರದಲ್ಲಿ ಚುನಾವಣಾ ಪ್ರಚಾರಗಳಲ್ಲಿ ಸಮಾವೇಶಗೊಳ್ಳುತ್ತಿರುವ ಜನಸಮೂಹ ಯಾವ ಕೊರೊನಾ ನಿಬಂಧನೆಗಳನ್ನು ಅನುಸರಿಸುತ್ತಿಲ್ಲ. ಇದು ಚುನಾವಣಾ ಆಯೋಗದ ಗಮನಕ್ಕೂ ಬಂದಿದ್ದು, ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ. ಆದರೆ ಕೊರೊನಾ ಪ್ರಕರಣಗಳ ಸಂಖ್ಯೆ ಮಾತ್ರ ಇಳಿಮುಖವಾಗುತ್ತಿದೆ.

ಆದರೆ, ಇಷ್ಟೊಂದು ಮಟ್ಟದಲ್ಲಿ ಜನ ಸೇರುತ್ತಿದ್ದರೂ, ಮಾಸ್ಕ್‌ ಧರಿಸುವುದರಲ್ಲಿ, ದೈಹಿಕ ಅಂತರ ಪಾಲಿಸುವುದರಲ್ಲಿ ಕಾಳಜಿ ವಹಿಸದ, ಅತಿರೇಕದ ವರ್ತನೆ ತೋರುತ್ತಿದ್ದರೂ, ಕೊರೊನಾ ಪ್ರಕರಣಗಳು ಕಡಿಮೆ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಇದು ಆರೋಗ್ಯ ತಜ್ಞರ ಅನುಮಾನಕ್ಕೆ ಕಾರಣವಾಗಿದೆ. ಬಿಹಾರದಲ್ಲಿ ವೈದ್ಯಕೀಯ ಸೌಕರ್ಯಗಳ ಕೊರತೆ ಹೆಚ್ಚಾಗಿದೆ.

ಬಿಹಾರದಲ್ಲೇ ಒಂದು ಕೋಟಿ ಜನರಿಗೆ ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗಿದೆ. ಪ್ರತಿದಿನ 1.5 ಲಕ್ಷ ಮಾದರಿಗಳನ್ನು ಪರೀಕ್ಷಿಸುತ್ತಿದೆ. ಆದರೆ, ಕಳೆದೆರಡು ತಿಂಗಳಲ್ಲಿ ಶೇ. 5ರಷ್ಟು ಕೊರೊನಾ ಪಾಸಿಟಿವ್‌ ಪ್ರಕರಣಗಳು ಮಾತ್ರ ವರದಿ ಆಗಿವೆ.

ರಾಜ್ಯದಲ್ಲಿ ನಿರಂತರವಾಗಿ ಪಾಸಿಟಿವ್ ಪ್ರಕರಣಗಳು ಕುಸಿತಗೊಂಡಿವೆ. ವೈದ್ಯಕೀಯ ಸಂಪನ್ಮೂಲಗಳ ಕೊರತೆ ಇರುವ ರಾಜ್ಯದಲ್ಲಿ, ಇಂತಹ ಅಂಕಿ-ಅಂಶಗಳು ಸತ್ಯವಾಗಿವೆಯೇ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ರಿಜೊ ಜಾನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ: ಬಿಹಾರದ ನಂತರ ಇದೀಗ ಮಧ್ಯಪ್ರದೇಶ!

ಸಾವಿರಾರು ಮಂದಿ ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಆಗಸ್ಟ್‌ನಲ್ಲಿ ಕೊರೊನಾ‌ ಪ್ರಕರಣಗಳು ಹೆಚ್ಚಾಳದವಾದರೂ, ನಂತರದ ದಿನಗಳಲ್ಲಿ  ಸೋಂಕಿತರ ಸಂಖ್ಯೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಸದ್ಯ ಬಿಹಾರದಲ್ಲಿ ಒಟ್ಟಾರೆ 2,14,946 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 1076 ಮಂದಿ ಮೃತಪಟ್ಟಿದ್ದಾರೆ.

ಕೆಲವು ಸಮಯದಿಂದ ಮೈಕ್ರೊ-ಲೆವೆಲ್ ಕೋವಿಡ್ ಡೇಟಾವನ್ನು ಟ್ರ್ಯಾಕ್ ಮಾಡುತ್ತಿರುವ ಹಿರಿಯ ಆರೋಗ್ಯ ಸಂಶೋಧಕರು ಹೇಳುವಂತೆ, “ಭಾರತದ ಬಡ ರಾಜ್ಯಗಳಲ್ಲಿ ಒಂದಾದ ಬಿಹಾರದ ಮಾಹಿತಿಯು ಕಾಗದದ ಮೇಲೆ ತುಂಬಾ ಚೆನ್ನಾಗಿ ಕಾಣುತ್ತದೆ, ಅದು ನಂಬಲಾಗದ ಮಟ್ಟಿಗೆ. ಆದರೆ ಯಾವುದೇ ಕ್ರಮ ಕೈಗೊಳ್ಳುವ ಮುನ್ನ ನಮಗೆ ಹೆಚ್ಚಿನ ಮಾಹಿತಿ ಬೇಕು” ಎಂದು ತಿಳಿಸಿದ್ದಾರೆ.

“ಉದಾಹರಣೆಗೆ, ಸ್ಯಾಂಪಲ್ಸ್,  ಪರೀಕ್ಷಾ ಪ್ರಕಾರಗಳು, ಪರೀಕ್ಷೆಗಳನ್ನು ಮಾಡಿರುವ ಪ್ರದೇಶಗಳು ಇತ್ಯಾದಿಗಳ ಮೂಲಕ ಪರೀಕ್ಷಿಸುವುದು ನಮಗೆ ಸಹಾಯ ಮಾಡುತ್ತದೆ. ಈಗಿನಿಂದ ಸುಮಾರು ಎರಡು ವಾರಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗದಿದ್ದರೆ, ಅದು ಪವಾಡ ಅಥವಾ ವರದಿಯ ಅಡಿಯಲ್ಲಿ ವ್ಯವಸ್ಥಿತವಾಗಿರುತ್ತದೆ” ಎಂದು ತಿಳಿಸಿದ್ದಾರೆ.

ಬಿಹಾರವು ದೇಶದಲ್ಲಿ ಅತಿ ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿದೆ. ಸಾವಿನ ಪ್ರಮಾಣ ಶೇಕಡಾ 0.52 ರಷ್ಟಿದ್ದು, ಇದು ರಾಷ್ಟ್ರೀಯ ಸರಾಸರಿ ಶೇಕಡಾ 1.51 ಕ್ಕಿಂತ ಕಡಿಮೆಯಾಗಿದೆ. ರಾಷ್ಟ್ರೀಯ ಆರೋಗ್ಯ ವಿವರ 2018 ರ ಮಾಹಿತಿಯ ಪ್ರಕಾರ, ಬಿಹಾರದಲ್ಲಿ ಒಟ್ಟು 40,649 ಅಲೋಪತಿ ವೈದ್ಯರಿದ್ದಾರೆ. ರಾಜ್ಯದ ಪ್ರತಿ 2,435 ಜನರಿಗೆ ಒಬ್ಬ ವೈದ್ಯ ಲಭ್ಯವಿದ್ದಾರೆ.


ಇದನ್ನೂ ಓದಿ : ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...