Homeಕರ್ನಾಟಕಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

’ಹೆಣ್ಣು ಮಕ್ಕಳಿಗೆ ನ್ಯಾಯ ನೀಡುವ ಬದಲು ಇಬ್ಬರ ಕುಟುಂಬಕ್ಕೆ ಗ್ರಾಮದಲ್ಲಿ ಪಂಚಾಯಿತಿ ನಡೆಸಿ, ಬೆದರಿಕೆ ಹಾಕಿದ್ದಾರೆ"

- Advertisement -
- Advertisement -

ದೇಶವೇ ಕೊರೊನಾ ಎರಡನೇ ಅಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವಾಗಲೂ ದಲಿತರ ಮೇಲಿನ ದೌರ್ಜನ್ಯ ಮಾತ್ರ ಕಡಿಮೆಯಾಗಿಲ್ಲ. ವಿಜಯಪುರದ ಬಸವನಬಾಗೇವಾಡಿಯಲ್ಲಿ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿ ಬಾವಿಗೆ ಎಸೆದು ಕೊಲೆ ಮಾಡಿರುವ ದುರಂತ ಘಟನೆ ನಡೆದಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಬಸವನಬಾಗೇವಾಡಿ ತಾಲೂಕಿನ ಕುದುರೆ ಸಾಲವಾಡಗಿ ಗ್ರಾಮದ 14 ಮತ್ತು 15 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರು ಕಾಣೆಯಾಗಿದ್ದರು. ಕಾಣೆಯಾದ ಎರಡು ದಿನಗಳ ನಂತರ ಇಬ್ಬರ ಮೃತ ದೇಹಗಳು ಕೈ ಕಟ್ಟಿದ ಸ್ಥಿತಿಯಲ್ಲಿ ಬಾವಿಯೊಂದರಲ್ಲಿ ಪತ್ತೆಯಾಗಿವೆ.

ಅದೇ ಊರಿನ ಯುವಕ ಹಬ್ಬು ಮೈಹಿಬೂಬಸಾಬ ಗುಳಬಾಳ ಎಂಬುವವನು ಕಳೆದ 6 ತಿಂಗಳಿನಿಂದ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಹಿಂಸಿಸುತ್ತಿದ್ದ. ಆತನೆ ತನ್ನ ತಂಗಿ ಮತ್ತು ಆಕೆಯ ಸ್ನೇಹಿತೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂದು ಮೃತಳ ಸಹೋದರ ದೂರು ನೀಡಿದ್ದಾರೆ. ಬಸವನಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಫೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ಬಸವನಬಾಗೇವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಈ ಗ್ರಾಮದ ಬಾಲಕಿಯರು ಮೇ 12 ರ ಮಧ್ಯಾಹ್ನ ಕಾಣೆಯಾಗಿದ್ದರು. ಸ್ನೇಹಿತೆಯ ಮನೆಯಲ್ಲಿ ಇರಬಹುದು ಎಂದು ಎರಡು ಕುಟುಂಬದವರು ಸುಮ್ಮನಿದ್ದರು. ಆದರೆ ಶುಕ್ರವಾರ ಬಾವಿಯೊಂದರಲ್ಲಿ ಇಬ್ಬರ ಕೈಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.

ದುರಂತದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜಾಂಭವ ಯುವಸೇನೆ ಸಂಸ್ಥಾಪಕ ರಮೇಶ್ ಚಕ್ರವರ್ತಿ, “ಘಟನೆ ಕುರಿತು ಫೋಕ್ಸೋ ಕಾಯ್ದೆ ಅಡಿಯಲ್ಲಿ 8 ಜನರ ಮೇಲೆ ಪ್ರಕರಣ ದಾಖಲಾಗಿದೆ. ಮುಖ್ಯ ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತರ ಕುಟುಂಬಕ್ಕೆ ಜಾಂಭವ ಯುವ ಸೇನಾ ವತಿಯಿಂದ ಪರಿಹಾರ ಮತ್ತು ಸಾಂತ್ವನ ನೀಡಲಾಗಿದೆ. ಕೇಸಿನ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದೇವೆ. ಗೃಹ ಸಚಿವ ಬಸವರಾಜ ಬೊಮ್ಮಯಿ ಅವರ ಬಳಿಯೂ ಮಾತುಕತೆ ನಡೆದಿದೆ. ಸಂಘಟನೆ ಕಡೆಯಿಂದ ಎಲ್ಲಾ ರೀತಿಯ ಸಹಾಯ ಮಾಡಲಾಗುತ್ತಿದೆ. ಇಬ್ಬರು ಮಕ್ಕಳಿಗೆ ನ್ಯಾಯ ದೊರಕುವವರೆಗೆ ನಾವು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನೂ ಬಾಲಕಿಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತು ತನಿಖೆ ನಡೆಸಿ, 5 ದಿನಗಳಲ್ಲಿ ವರದಿ ನೀಡುವಂತೆ ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಆಯೋಗದ ಸದಸ್ಯ ಎಚ್.ವೆಂಕಟೇಶ ದೊಡ್ಡೇರಿ ವಿಜಯಪುರ ಜಿಲ್ಲಾಧಿಕಾರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಬಿಜಾಪುರ: ಬಸವನಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ ಮಾಡಿ, ಕೈ ಕಟ್ಟಿ ಬಾವಿಗೆ ಎಸೆದು ಕೊಲೆ

“ಮಾದಿಗ ಸಮುದಾಯದ ಇಬ್ಬರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿ, ಕೈಗಳನ್ನು ಕಟ್ಟಿ 20-25 ಅಡಿ ಆಳದ ಬಾವಿಗೆ ಎಸೆದಿದ್ದಾರೆ. ಆದರೆ, ಹೆಣ್ಣು ಮಕ್ಕಳಿಗೆ ನ್ಯಾಯ ನೀಡುವ ಬದಲು ಇಬ್ಬರ ಕುಟುಂಬಕ್ಕೆ ಗ್ರಾಮದಲ್ಲಿ ಪಂಚಾಯಿತಿ ನಡೆಸಿ, ಬೆದರಿಕೆ ಹಾಕಿದ್ದಾರೆ. ಇವರ ಸಾವಿಗೆ ನ್ಯಾಯ ದೊರಕಬೇಕು. ತನಿಖೆಯನ್ನು ಸಿಐಡಿಗೆ ಒಪ್ಪಿಸಬೇಕು. ತನಿಖೆ ಸರಿಯಾಗಿ ನಡೆಯದಿದ್ದರೇ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಪ್ರತಿಭಟನೆ ನಡೆಸಲಾಗುತ್ತದೆ” ಎಂದು  ಜಾಂಭವ ಯುವಸೇನೆ ವಿಜಯಪುರ ಜಿಲ್ಲಾಧ್ಯಕ್ಷ ಮಕ್ಕಪ್ಪ ಬಾಗೇವಾಡಿ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...