Homeಕರ್ನಾಟಕಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

ಬಸವನ ಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಕೈ ಕಟ್ಟಿ ಬಾವಿಗೆ ಎಸೆದು ಕೊಲೆಗೈದ ದುಷ್ಕರ್ಮಿಗಳು

’ಹೆಣ್ಣು ಮಕ್ಕಳಿಗೆ ನ್ಯಾಯ ನೀಡುವ ಬದಲು ಇಬ್ಬರ ಕುಟುಂಬಕ್ಕೆ ಗ್ರಾಮದಲ್ಲಿ ಪಂಚಾಯಿತಿ ನಡೆಸಿ, ಬೆದರಿಕೆ ಹಾಕಿದ್ದಾರೆ"

- Advertisement -
- Advertisement -

ದೇಶವೇ ಕೊರೊನಾ ಎರಡನೇ ಅಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವಾಗಲೂ ದಲಿತರ ಮೇಲಿನ ದೌರ್ಜನ್ಯ ಮಾತ್ರ ಕಡಿಮೆಯಾಗಿಲ್ಲ. ವಿಜಯಪುರದ ಬಸವನಬಾಗೇವಾಡಿಯಲ್ಲಿ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿ ಬಾವಿಗೆ ಎಸೆದು ಕೊಲೆ ಮಾಡಿರುವ ದುರಂತ ಘಟನೆ ನಡೆದಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಬಸವನಬಾಗೇವಾಡಿ ತಾಲೂಕಿನ ಕುದುರೆ ಸಾಲವಾಡಗಿ ಗ್ರಾಮದ 14 ಮತ್ತು 15 ವರ್ಷದ ಇಬ್ಬರು ಅಪ್ರಾಪ್ತ ಬಾಲಕಿಯರು ಕಾಣೆಯಾಗಿದ್ದರು. ಕಾಣೆಯಾದ ಎರಡು ದಿನಗಳ ನಂತರ ಇಬ್ಬರ ಮೃತ ದೇಹಗಳು ಕೈ ಕಟ್ಟಿದ ಸ್ಥಿತಿಯಲ್ಲಿ ಬಾವಿಯೊಂದರಲ್ಲಿ ಪತ್ತೆಯಾಗಿವೆ.

ಅದೇ ಊರಿನ ಯುವಕ ಹಬ್ಬು ಮೈಹಿಬೂಬಸಾಬ ಗುಳಬಾಳ ಎಂಬುವವನು ಕಳೆದ 6 ತಿಂಗಳಿನಿಂದ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಹಿಂಸಿಸುತ್ತಿದ್ದ. ಆತನೆ ತನ್ನ ತಂಗಿ ಮತ್ತು ಆಕೆಯ ಸ್ನೇಹಿತೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂದು ಮೃತಳ ಸಹೋದರ ದೂರು ನೀಡಿದ್ದಾರೆ. ಬಸವನಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಫೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ಬಸವನಬಾಗೇವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಈ ಗ್ರಾಮದ ಬಾಲಕಿಯರು ಮೇ 12 ರ ಮಧ್ಯಾಹ್ನ ಕಾಣೆಯಾಗಿದ್ದರು. ಸ್ನೇಹಿತೆಯ ಮನೆಯಲ್ಲಿ ಇರಬಹುದು ಎಂದು ಎರಡು ಕುಟುಂಬದವರು ಸುಮ್ಮನಿದ್ದರು. ಆದರೆ ಶುಕ್ರವಾರ ಬಾವಿಯೊಂದರಲ್ಲಿ ಇಬ್ಬರ ಕೈಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ.

ದುರಂತದ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜಾಂಭವ ಯುವಸೇನೆ ಸಂಸ್ಥಾಪಕ ರಮೇಶ್ ಚಕ್ರವರ್ತಿ, “ಘಟನೆ ಕುರಿತು ಫೋಕ್ಸೋ ಕಾಯ್ದೆ ಅಡಿಯಲ್ಲಿ 8 ಜನರ ಮೇಲೆ ಪ್ರಕರಣ ದಾಖಲಾಗಿದೆ. ಮುಖ್ಯ ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತರ ಕುಟುಂಬಕ್ಕೆ ಜಾಂಭವ ಯುವ ಸೇನಾ ವತಿಯಿಂದ ಪರಿಹಾರ ಮತ್ತು ಸಾಂತ್ವನ ನೀಡಲಾಗಿದೆ. ಕೇಸಿನ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದೇವೆ. ಗೃಹ ಸಚಿವ ಬಸವರಾಜ ಬೊಮ್ಮಯಿ ಅವರ ಬಳಿಯೂ ಮಾತುಕತೆ ನಡೆದಿದೆ. ಸಂಘಟನೆ ಕಡೆಯಿಂದ ಎಲ್ಲಾ ರೀತಿಯ ಸಹಾಯ ಮಾಡಲಾಗುತ್ತಿದೆ. ಇಬ್ಬರು ಮಕ್ಕಳಿಗೆ ನ್ಯಾಯ ದೊರಕುವವರೆಗೆ ನಾವು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನೂ ಬಾಲಕಿಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಕುರಿತು ತನಿಖೆ ನಡೆಸಿ, 5 ದಿನಗಳಲ್ಲಿ ವರದಿ ನೀಡುವಂತೆ ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಆಯೋಗದ ಸದಸ್ಯ ಎಚ್.ವೆಂಕಟೇಶ ದೊಡ್ಡೇರಿ ವಿಜಯಪುರ ಜಿಲ್ಲಾಧಿಕಾರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಬಿಜಾಪುರ: ಬಸವನಬಾಗೇವಾಡಿಯಲ್ಲಿ ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ ಮಾಡಿ, ಕೈ ಕಟ್ಟಿ ಬಾವಿಗೆ ಎಸೆದು ಕೊಲೆ

“ಮಾದಿಗ ಸಮುದಾಯದ ಇಬ್ಬರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿ, ಕೈಗಳನ್ನು ಕಟ್ಟಿ 20-25 ಅಡಿ ಆಳದ ಬಾವಿಗೆ ಎಸೆದಿದ್ದಾರೆ. ಆದರೆ, ಹೆಣ್ಣು ಮಕ್ಕಳಿಗೆ ನ್ಯಾಯ ನೀಡುವ ಬದಲು ಇಬ್ಬರ ಕುಟುಂಬಕ್ಕೆ ಗ್ರಾಮದಲ್ಲಿ ಪಂಚಾಯಿತಿ ನಡೆಸಿ, ಬೆದರಿಕೆ ಹಾಕಿದ್ದಾರೆ. ಇವರ ಸಾವಿಗೆ ನ್ಯಾಯ ದೊರಕಬೇಕು. ತನಿಖೆಯನ್ನು ಸಿಐಡಿಗೆ ಒಪ್ಪಿಸಬೇಕು. ತನಿಖೆ ಸರಿಯಾಗಿ ನಡೆಯದಿದ್ದರೇ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಪ್ರತಿಭಟನೆ ನಡೆಸಲಾಗುತ್ತದೆ” ಎಂದು  ಜಾಂಭವ ಯುವಸೇನೆ ವಿಜಯಪುರ ಜಿಲ್ಲಾಧ್ಯಕ್ಷ ಮಕ್ಕಪ್ಪ ಬಾಗೇವಾಡಿ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ಚಿಕಿತ್ಸೆಗಾಗಿ ಗಂಡನನ್ನ ದಾಖಲಿಸಿದ್ದ ಆಸ್ಪತ್ರೆಯಲ್ಲಿಯೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...