Homeಕರ್ನಾಟಕಮಂಡ್ಯ| ಪೊಲೀಸರು ಅಡ್ಡಗಟ್ಟಿದಾಗ ನಿಯಂತ್ರಣ ತಪ್ಪಿದ ಬೈಕ್‌; 3 ವರ್ಷದ ಮಗು ಸಾವು

ಮಂಡ್ಯ| ಪೊಲೀಸರು ಅಡ್ಡಗಟ್ಟಿದಾಗ ನಿಯಂತ್ರಣ ತಪ್ಪಿದ ಬೈಕ್‌; 3 ವರ್ಷದ ಮಗು ಸಾವು

- Advertisement -
- Advertisement -

ಟ್ರಾಫಿಕ್ ಪೊಲೀಸರು ಬೈಕ್ ಅಡ್ಡಗಟ್ಟಿದ್ದರಿಂದ ಸವಾರ ಬೆದರಿದ್ದು, ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದ ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಭಾನುವಾರ ನಡೆದಿದೆ.

ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ 3 ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದೆ ಎಂದು ಪೋಷಕರು ಹಾಗೂ ಸ್ಥಳೀಯರು ಆರೋಪ ಮಾಡಿದ್ದಾರೆ. ಮಗು ಸತ್ತಿರುವ ಘಟನೆಯು ಭಾರೀ ಜನಾಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸರ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ.

ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಗ್ರಾಮದ ಅಶೋಕ್ ಮತ್ತು ವಾಣಿ ಎಂಬುವವರು ಮೂರು ವರ್ಷದ ಹೃತೀಕ್ಷಗೆ ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆ ಕೊಡಿಸುವುದಕ್ಕಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಬರುತ್ತಿದ್ದರು. ಇದೇ ಸಂದರ್ಭದಲ್ಲಿ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದರು. ಹಠಾತ್ ಆಗಿ ಪೊಲೀಸರು ಬೈಕ್‌ ಅಡ್ಡಗಟ್ಟಿದ ಪರಿಣಾಮ, ಅಶೋಕ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿದೆ. ಅಪಘಾತದ ಬಳಿಕ ಬಾಲಕಿ ಹೃತೀಕ್ಷ ತಲೆಯ ಮೇಲೆ ಹಿಂದಿನಿಂದ ಬಂದ ಟೆಂಪೋ ಹರಿದಿದೆ. ಇದರಿಂದ ಆಕೆಯ ತಲೆಗೆ ಭಾರೀ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಾಳೆ.

ಏನಾಗುತ್ತಿದೆ ಎಂದು ಅರಿವಾಗುವ ಮೊದಲೇ ಮಗಳ ಮರಣದಿಂದ ಆಘಾತಕ್ಕೊಳಗಾದ ಪೋಷಕರು, ನಡುರಸ್ತೆಯಲ್ಲೇ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಗೋಳಾಡಿದ್ದಾರೆ. ಅವರ ದುಃಖದ ದೃಶ್ಯ ಅಲ್ಲಿ ನೆರೆದಿದ್ದವರ ಕಣ್ಣು ನೀರಾಗುವಂತೆ ಮಾಡಿತ್ತು.

ಮೃತ ಮಗು ಹೃತೀಕ್ಷ

ಮಗಳ ಜೀವ ಹೋಗಿದ್ದಕ್ಕೆ ಪೊಲೀಸರೇ ಕಾರಣ: ಮೃತ ಬಾಲಕಿ ತಂದೆ ಆಕ್ರೋಶ

ಪೊಲೀಸರು ಗಾಡಿ ಅಡ್ಡ ಹಾಕಿದಾಗ, ನಾವು ಅರ್ಜೆಂಟ್​ ಅಲ್ಲಿ ಆಸ್ಪತ್ರೆಗೆ ಹೊರಟೆವು. ಆದರೆ, ಅವರು ನನ್ನ ಬೈಕ್ ಚಾಲನೆ ಮಾಡಲು ಅವಕಾಶ ಕೊಡಲಿಲ್ಲ. ಅವರು ಇದ್ದಕ್ಕಿಂದ್ದಂತಯೇ ಗಾಡಿ ಅಡ್ಡ ಹಾಕಿದ ಪರಿಣಾಮ ನಮ್ಮ ಬೈಕ್ ಸ್ಕಿಡ್ ಆಗಿದೆ. ಬೈಕ್‌ನಿಂದ ಮಗು ಬೀಳುತ್ತಿದ್ದಂತೆಯೇ ಬೇರೆ ವಾಹನ ಬಂದು ಪಾಪು ಮೇಲೆ ಹತ್ತಿದೆ. ನನ್ನ ಮಗಳ ಜೀವ ತಿನ್ನೋಕೆ ಇವರೇ ಕಾರಣ ಸ್ವಾಮಿ. ಅವರಿಗೆ ಬ್ಯಾಂಡೇಜ್ ಹಾಕಿದ್ದೂ ಕಾಣಿಸಿಲ್ವಾ? ಇವರ ದುಡ್ಡನ್ನು ತಿಂದು ಹೋಗ್ತೀವಾ? ನನ್ನ ಮಗಳಿಗೆ ಪರಿಹಾರ ಕೊಡ್ತಾರಂತೆ. ನಾನೇ ಹತ್ತು ಲಕ್ಷ ಕೊಡ್ತೀನಿ; ನೀವು ನನ್ನ ಮಗಳ ತಂದು ಕೊಡ್ತೀರಾ? ನೀವು ನನ್ನ ಮಗಳನ್ನು ತಂದು ಕೊಡ್ತೀರಾ ಎಂದು ಕಣ್ಣೀರಿಟ್ಟಿದ್ದಾರೆ.

ಎರಡು ತಿಂಗಳ ಬಳಿಕ 18 ಜನ ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....