Homeಕರ್ನಾಟಕಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

- Advertisement -
- Advertisement -

ಭೂಮಿ ಮತ್ತು ವಸತಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕುಗಳ 102 ಹಳ್ಳಿಗಳಲ್ಲಿ ಎರಡು ದಿನಗಳ ಬೈಕ್ ಜಾಥಾ ಮತ್ತು ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಮಂಗಳವಾರ ಹೇಳಿದೆ.‌ ಮಾರ್ಚ್ 24-25 ರಂದು ಜಿಲ್ಲೆಯಾದ್ಯಂತ ಬೈಕ್‌‌‌ ಜಾಥಾ ನಡೆಯಲಿದ್ದು, ಮಾರ್ಚ್ 28ರ ಸೋಮವಾರದಂದು ಕೊಪ್ಪ ತಾಲ್ಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕೆ. ಎಲ್‌. ಅಶೋಕ್‌ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ಅಶೋಕ್‌, “ಕಳೆದ ಹತ್ತಾರು ವರ್ಷಗಳಿಂದ ತಮ್ಮ ನೆತ್ತಿಯ ಮೇಲೋಂದು ಸೂರು ಹಾಗು ತಮ್ಮ ಕನಿಷ್ಟ ಜೀವನೋಪಾಯಕ್ಕಾಗಿ ಎರಡೋ ಮೂರೋ ಎಕರೆ ಭೂಮಿಯನ್ನು ಕೃಷಿ ಮಾಡಿಕೊಂಡು, ಅದರ ಮಂಜೂರಿಗಾಗಿ ಸಾವಿರಾರು ಜನರು ಹತ್ತಾರು ವರ್ಷಗಳಿಂದ  ಹಾಕಿ ಕಾಯುತ್ತಾ ಕುಳಿತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

“ಇನ್ನೂ ಹಲವರು ನಿವೇಶನಕ್ಕಾಗಿ ಸರ್ಕಾರಕ್ಕೂ ಗ್ರಾಮಪಂಚಾಯಿತಿಗೂ ಅರ್ಜಿ ಹಾಕಿ ಜನಪ್ರತಿನಿಧಿಗಳ ಭರವಸೆಯಿಂದ ತಾವಿದ್ದ ಬಾಡಿಗೆ ಮನೆಯಲ್ಲೋ ,ಎಸ್ಟೇಟ್‌ಗಳಲೈನ್‌ಗಳಲ್ಲಿ ಕಾಯುತ್ತಿದ್ದಾರೆ. ಆದರೆ ಒಂದು ಜವಾಬ್ದಾರಿಯುತ ಆಡಳಿತ ಯಂತ್ರಾಂಗ ಹಾಗು ಸರ್ಕಾರ ತಮಗೆ ಸಿಗಬೇಕಾದ ನ್ಯಾಯಬದ್ದ ಹಕ್ಕಾದ ಭೂಮಿ ಹಾಗು ನಿವೇಶನ ನೀಡಲು ಮೀನಾಮೇಷ ಎಣಿಸುತ್ತಾ ಕಾಲಕಳೆಯುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈಗಾಗಲೇ ಮಲೆನಾಡಿನ ಬಹುತೇಕ ಭೂಮಿಯನ್ನ ಒಂದೋ ರಾಷ್ಟ್ರೀಯ ಉದ್ಯಾನ, ಹುಲಿಯೋಜನೆ, ಕಸ್ತೂರಿ ರಂಗನ್ ವರದಿ ಹೆಸರಲ್ಲಿ ಬಡವರನ್ನು ಭೂಮಿ ವಂಚಿತರನ್ನಾಗಿಸಲು ಸರ್ಕಾರ ಹೊರಟಿದೆ. ಉಳಿದ ಸರ್ಕಾರಿ ಭೂಮಿಯನ್ನು ಸೆಕ್ಷನ್ 4 ಎಂದು ಘೋಷಿಸಿ ಈಗಾಗಲೇ ವಾಸವಿರುವ ಹಾಗೂ ಕೃಷಿ ಮಾಡಿಕೊಂಡಿರುವ ಭೂಮಿಯನ್ನೂ ಮೀಸಲು ಅರಣ್ಯ ಮಾಡುವ ಹುನ್ನಾರದಲ್ಲಿದ್ದಾರೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಹಿಂದೆಯೇ ಅರಣ್ಯ ಇಲಾಖೆ ಒಂದೊಂದು ನೋಟಿಸ್ ಕೊಟ್ಟು ದಾಖಲೆ ಕೇಳುತ್ತಿದೆ. ಜನರು ಆ ಕ್ಷಣದಲ್ಲಿ ಎದ್ದು ಬಿದ್ದು ಆಕ್ಷೇಪಣೆ ಸಲ್ಲಿಸಿ ಹಾಗೇ ತಮ್ಮ ಜವಾಬ್ದಾರಿ ಮುಗಿಯಿತೆಂಬಂತೆ ಇರುತ್ತಾರೆ. ಆದರೆ ಇದು ಇಲ್ಲಿಗೇ ಮುಗಿಯುವುದಿಲ್ಲ. ಒಂದು ಆಕ್ಷೇಪಣೆ ಸಲ್ಲಿಸಿದ ಮಾತ್ರಕ್ಕೆ ನಿವೇಶನ ಹಾಗೂ ಕೃಷಿ ಭೂಮಿಗೆ ಹಕ್ಕುಪತ್ರ ಸಿಗುವುದಿಲ್ಲ” ಎಂದು ಕರ್ನಾಟಕ ಜನಶಕ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ 

ಇದಕ್ಕೆ ಉದಾಹರಣೆಯಾಗಿ ‘ಕುದುರೆ ಮುಖ ರಾಷ್ಟ್ರೀಯ ಉದ್ಯಾನ’ ಇದೆ ಎಂದು ಹೇಳಿರುವ ಕರ್ನಾಟಕ ಜನಶಕ್ತಿ, “ಕುದುರೆ ಮುಖ ವ್ಯಾಪ್ತಿಯ ಜನರು ತಮ್ಮ ಜೀವನಕ್ಕಾಗಿ ಕೃಷಿ ಮಾಡಿಕೊಂಡಿದ್ದ ಭೂಮಿಗೆ 2001 ರಲ್ಲಿ ಸರ್ಕಾರ ಹಕ್ಕು ಪತ್ರ ನೀಡಿತ್ತು. ಅವರಿಗೆ ಎಲ್ಲಾ ದಾಖಲೆ ಗಳು ಇದ್ದಾಗ್ಯೂ 2014 ರಲ್ಲಿ ಅರಣ್ಯ ಇಲಾಖೆ ಸುಮಾರು 50 ಜನ ಆದಿವಾಸಿಗಳ ಮೇಲೆ ಸರ್ಕಾರಿ ಭೂಮಿ ಅಕ್ರಮ ಭೂ ಕಭಳಿಕೆ ಮಾಡಿರುವ ಆರೋಪದಡಿ ಕೇಸು ದಾಖಲಿಸಿ ಕೋರ್ಟಿಗೆ ಅಲೆಯುವಂತೆ ಮಾಡಿದೆ. ಸರ್ಕಾರ ಒಂದು ಕಡೆ ಎಲ್ಲರಿಗೂ ಭೂಮಿ ಕೊಡುತ್ತೇವೆ, ನಿವೇಶನ ಕೊಡುತ್ತೇವೆ ಎನ್ನುತ್ತದೆ. ಆದರೆ ಆದೇ ಸಮಯದಲ್ಲಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಳ್ಳುವ ಹುನ್ನಾರ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಮೂಲಭೂತ ಅಗತ್ಯವಾದ ನಿವೇಶನ ಹಾಗೂ ಭೂಮಿಯ ಹಕ್ಕಿಗಾಗಿ ಹೋರಾಡದೇ ಹೋದರೆ, ಮುಂದಿನ ದಿನಗಳಲ್ಲಿ ಬದುಕು ಕಟ್ಟಿಕೊಂಡ ಭೂಮಿಯಲ್ಲಿ ಪರಕೀಯರಂತೆ ಬದುಕ ಬೇಕಾಗುತ್ತದೆ ಎಂದು ಎಚ್ಚರಿಸಿರುವ ಕರ್ನಾಟಕ ಜನಶಕ್ತಿ, ಜನರನ್ನು ಜಾಗೃತರಾಗುವಂತೆ ಕರೆ ನೀಡಿದೆ.

ಈ ಹಿನ್ನಲೆಯಲ್ಲಿ ಮಾರ್ಚ್‌ 24-25 ರಂದು ಭೂಮಿ ಹಾಗು ನಿವೇಶನಕ್ಕೆ ಆಗ್ರಹಿಸಿ ಹಾಗೂ ಇಡೀ ಮಲೆನಾಡನ್ನು ಮೀಸಲು ಅರಣ್ಯ ಮಾಡುವ ಹುನ್ನಾರದ ಸೆಕ್ಷನ್ 4 ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಶಕ್ತಿಯು ಮಲೆನಾಡಿನ ಜನ ಜನಜಾಗೃತಿ ಬೈಕ್‌ ಜಾಥಾವನ್ನು ಹಾಗೂ 28 ರಂದು ಕೊಪ್ಪ ತಾಲ್ಲೂಕು ಕಛೇರಿ ಮುಂದೆ ನಡೆಯುವ ಜನಾಗ್ರಹ ಸಭೆ ನಡೆಸಲಿದೆ ಎಂದು ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: 10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...