Homeಕರ್ನಾಟಕಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

- Advertisement -
- Advertisement -

ಭೂಮಿ ಮತ್ತು ವಸತಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕುಗಳ 102 ಹಳ್ಳಿಗಳಲ್ಲಿ ಎರಡು ದಿನಗಳ ಬೈಕ್ ಜಾಥಾ ಮತ್ತು ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಮಂಗಳವಾರ ಹೇಳಿದೆ.‌ ಮಾರ್ಚ್ 24-25 ರಂದು ಜಿಲ್ಲೆಯಾದ್ಯಂತ ಬೈಕ್‌‌‌ ಜಾಥಾ ನಡೆಯಲಿದ್ದು, ಮಾರ್ಚ್ 28ರ ಸೋಮವಾರದಂದು ಕೊಪ್ಪ ತಾಲ್ಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕೆ. ಎಲ್‌. ಅಶೋಕ್‌ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ಅಶೋಕ್‌, “ಕಳೆದ ಹತ್ತಾರು ವರ್ಷಗಳಿಂದ ತಮ್ಮ ನೆತ್ತಿಯ ಮೇಲೋಂದು ಸೂರು ಹಾಗು ತಮ್ಮ ಕನಿಷ್ಟ ಜೀವನೋಪಾಯಕ್ಕಾಗಿ ಎರಡೋ ಮೂರೋ ಎಕರೆ ಭೂಮಿಯನ್ನು ಕೃಷಿ ಮಾಡಿಕೊಂಡು, ಅದರ ಮಂಜೂರಿಗಾಗಿ ಸಾವಿರಾರು ಜನರು ಹತ್ತಾರು ವರ್ಷಗಳಿಂದ  ಹಾಕಿ ಕಾಯುತ್ತಾ ಕುಳಿತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

“ಇನ್ನೂ ಹಲವರು ನಿವೇಶನಕ್ಕಾಗಿ ಸರ್ಕಾರಕ್ಕೂ ಗ್ರಾಮಪಂಚಾಯಿತಿಗೂ ಅರ್ಜಿ ಹಾಕಿ ಜನಪ್ರತಿನಿಧಿಗಳ ಭರವಸೆಯಿಂದ ತಾವಿದ್ದ ಬಾಡಿಗೆ ಮನೆಯಲ್ಲೋ ,ಎಸ್ಟೇಟ್‌ಗಳಲೈನ್‌ಗಳಲ್ಲಿ ಕಾಯುತ್ತಿದ್ದಾರೆ. ಆದರೆ ಒಂದು ಜವಾಬ್ದಾರಿಯುತ ಆಡಳಿತ ಯಂತ್ರಾಂಗ ಹಾಗು ಸರ್ಕಾರ ತಮಗೆ ಸಿಗಬೇಕಾದ ನ್ಯಾಯಬದ್ದ ಹಕ್ಕಾದ ಭೂಮಿ ಹಾಗು ನಿವೇಶನ ನೀಡಲು ಮೀನಾಮೇಷ ಎಣಿಸುತ್ತಾ ಕಾಲಕಳೆಯುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈಗಾಗಲೇ ಮಲೆನಾಡಿನ ಬಹುತೇಕ ಭೂಮಿಯನ್ನ ಒಂದೋ ರಾಷ್ಟ್ರೀಯ ಉದ್ಯಾನ, ಹುಲಿಯೋಜನೆ, ಕಸ್ತೂರಿ ರಂಗನ್ ವರದಿ ಹೆಸರಲ್ಲಿ ಬಡವರನ್ನು ಭೂಮಿ ವಂಚಿತರನ್ನಾಗಿಸಲು ಸರ್ಕಾರ ಹೊರಟಿದೆ. ಉಳಿದ ಸರ್ಕಾರಿ ಭೂಮಿಯನ್ನು ಸೆಕ್ಷನ್ 4 ಎಂದು ಘೋಷಿಸಿ ಈಗಾಗಲೇ ವಾಸವಿರುವ ಹಾಗೂ ಕೃಷಿ ಮಾಡಿಕೊಂಡಿರುವ ಭೂಮಿಯನ್ನೂ ಮೀಸಲು ಅರಣ್ಯ ಮಾಡುವ ಹುನ್ನಾರದಲ್ಲಿದ್ದಾರೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಹಿಂದೆಯೇ ಅರಣ್ಯ ಇಲಾಖೆ ಒಂದೊಂದು ನೋಟಿಸ್ ಕೊಟ್ಟು ದಾಖಲೆ ಕೇಳುತ್ತಿದೆ. ಜನರು ಆ ಕ್ಷಣದಲ್ಲಿ ಎದ್ದು ಬಿದ್ದು ಆಕ್ಷೇಪಣೆ ಸಲ್ಲಿಸಿ ಹಾಗೇ ತಮ್ಮ ಜವಾಬ್ದಾರಿ ಮುಗಿಯಿತೆಂಬಂತೆ ಇರುತ್ತಾರೆ. ಆದರೆ ಇದು ಇಲ್ಲಿಗೇ ಮುಗಿಯುವುದಿಲ್ಲ. ಒಂದು ಆಕ್ಷೇಪಣೆ ಸಲ್ಲಿಸಿದ ಮಾತ್ರಕ್ಕೆ ನಿವೇಶನ ಹಾಗೂ ಕೃಷಿ ಭೂಮಿಗೆ ಹಕ್ಕುಪತ್ರ ಸಿಗುವುದಿಲ್ಲ” ಎಂದು ಕರ್ನಾಟಕ ಜನಶಕ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ 

ಇದಕ್ಕೆ ಉದಾಹರಣೆಯಾಗಿ ‘ಕುದುರೆ ಮುಖ ರಾಷ್ಟ್ರೀಯ ಉದ್ಯಾನ’ ಇದೆ ಎಂದು ಹೇಳಿರುವ ಕರ್ನಾಟಕ ಜನಶಕ್ತಿ, “ಕುದುರೆ ಮುಖ ವ್ಯಾಪ್ತಿಯ ಜನರು ತಮ್ಮ ಜೀವನಕ್ಕಾಗಿ ಕೃಷಿ ಮಾಡಿಕೊಂಡಿದ್ದ ಭೂಮಿಗೆ 2001 ರಲ್ಲಿ ಸರ್ಕಾರ ಹಕ್ಕು ಪತ್ರ ನೀಡಿತ್ತು. ಅವರಿಗೆ ಎಲ್ಲಾ ದಾಖಲೆ ಗಳು ಇದ್ದಾಗ್ಯೂ 2014 ರಲ್ಲಿ ಅರಣ್ಯ ಇಲಾಖೆ ಸುಮಾರು 50 ಜನ ಆದಿವಾಸಿಗಳ ಮೇಲೆ ಸರ್ಕಾರಿ ಭೂಮಿ ಅಕ್ರಮ ಭೂ ಕಭಳಿಕೆ ಮಾಡಿರುವ ಆರೋಪದಡಿ ಕೇಸು ದಾಖಲಿಸಿ ಕೋರ್ಟಿಗೆ ಅಲೆಯುವಂತೆ ಮಾಡಿದೆ. ಸರ್ಕಾರ ಒಂದು ಕಡೆ ಎಲ್ಲರಿಗೂ ಭೂಮಿ ಕೊಡುತ್ತೇವೆ, ನಿವೇಶನ ಕೊಡುತ್ತೇವೆ ಎನ್ನುತ್ತದೆ. ಆದರೆ ಆದೇ ಸಮಯದಲ್ಲಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಳ್ಳುವ ಹುನ್ನಾರ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಮೂಲಭೂತ ಅಗತ್ಯವಾದ ನಿವೇಶನ ಹಾಗೂ ಭೂಮಿಯ ಹಕ್ಕಿಗಾಗಿ ಹೋರಾಡದೇ ಹೋದರೆ, ಮುಂದಿನ ದಿನಗಳಲ್ಲಿ ಬದುಕು ಕಟ್ಟಿಕೊಂಡ ಭೂಮಿಯಲ್ಲಿ ಪರಕೀಯರಂತೆ ಬದುಕ ಬೇಕಾಗುತ್ತದೆ ಎಂದು ಎಚ್ಚರಿಸಿರುವ ಕರ್ನಾಟಕ ಜನಶಕ್ತಿ, ಜನರನ್ನು ಜಾಗೃತರಾಗುವಂತೆ ಕರೆ ನೀಡಿದೆ.

ಈ ಹಿನ್ನಲೆಯಲ್ಲಿ ಮಾರ್ಚ್‌ 24-25 ರಂದು ಭೂಮಿ ಹಾಗು ನಿವೇಶನಕ್ಕೆ ಆಗ್ರಹಿಸಿ ಹಾಗೂ ಇಡೀ ಮಲೆನಾಡನ್ನು ಮೀಸಲು ಅರಣ್ಯ ಮಾಡುವ ಹುನ್ನಾರದ ಸೆಕ್ಷನ್ 4 ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಶಕ್ತಿಯು ಮಲೆನಾಡಿನ ಜನ ಜನಜಾಗೃತಿ ಬೈಕ್‌ ಜಾಥಾವನ್ನು ಹಾಗೂ 28 ರಂದು ಕೊಪ್ಪ ತಾಲ್ಲೂಕು ಕಛೇರಿ ಮುಂದೆ ನಡೆಯುವ ಜನಾಗ್ರಹ ಸಭೆ ನಡೆಸಲಿದೆ ಎಂದು ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: 10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...