Homeಕರ್ನಾಟಕಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

- Advertisement -
- Advertisement -

ಭೂಮಿ ಮತ್ತು ವಸತಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕುಗಳ 102 ಹಳ್ಳಿಗಳಲ್ಲಿ ಎರಡು ದಿನಗಳ ಬೈಕ್ ಜಾಥಾ ಮತ್ತು ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಮಂಗಳವಾರ ಹೇಳಿದೆ.‌ ಮಾರ್ಚ್ 24-25 ರಂದು ಜಿಲ್ಲೆಯಾದ್ಯಂತ ಬೈಕ್‌‌‌ ಜಾಥಾ ನಡೆಯಲಿದ್ದು, ಮಾರ್ಚ್ 28ರ ಸೋಮವಾರದಂದು ಕೊಪ್ಪ ತಾಲ್ಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕೆ. ಎಲ್‌. ಅಶೋಕ್‌ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ಅಶೋಕ್‌, “ಕಳೆದ ಹತ್ತಾರು ವರ್ಷಗಳಿಂದ ತಮ್ಮ ನೆತ್ತಿಯ ಮೇಲೋಂದು ಸೂರು ಹಾಗು ತಮ್ಮ ಕನಿಷ್ಟ ಜೀವನೋಪಾಯಕ್ಕಾಗಿ ಎರಡೋ ಮೂರೋ ಎಕರೆ ಭೂಮಿಯನ್ನು ಕೃಷಿ ಮಾಡಿಕೊಂಡು, ಅದರ ಮಂಜೂರಿಗಾಗಿ ಸಾವಿರಾರು ಜನರು ಹತ್ತಾರು ವರ್ಷಗಳಿಂದ  ಹಾಕಿ ಕಾಯುತ್ತಾ ಕುಳಿತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

“ಇನ್ನೂ ಹಲವರು ನಿವೇಶನಕ್ಕಾಗಿ ಸರ್ಕಾರಕ್ಕೂ ಗ್ರಾಮಪಂಚಾಯಿತಿಗೂ ಅರ್ಜಿ ಹಾಕಿ ಜನಪ್ರತಿನಿಧಿಗಳ ಭರವಸೆಯಿಂದ ತಾವಿದ್ದ ಬಾಡಿಗೆ ಮನೆಯಲ್ಲೋ ,ಎಸ್ಟೇಟ್‌ಗಳಲೈನ್‌ಗಳಲ್ಲಿ ಕಾಯುತ್ತಿದ್ದಾರೆ. ಆದರೆ ಒಂದು ಜವಾಬ್ದಾರಿಯುತ ಆಡಳಿತ ಯಂತ್ರಾಂಗ ಹಾಗು ಸರ್ಕಾರ ತಮಗೆ ಸಿಗಬೇಕಾದ ನ್ಯಾಯಬದ್ದ ಹಕ್ಕಾದ ಭೂಮಿ ಹಾಗು ನಿವೇಶನ ನೀಡಲು ಮೀನಾಮೇಷ ಎಣಿಸುತ್ತಾ ಕಾಲಕಳೆಯುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈಗಾಗಲೇ ಮಲೆನಾಡಿನ ಬಹುತೇಕ ಭೂಮಿಯನ್ನ ಒಂದೋ ರಾಷ್ಟ್ರೀಯ ಉದ್ಯಾನ, ಹುಲಿಯೋಜನೆ, ಕಸ್ತೂರಿ ರಂಗನ್ ವರದಿ ಹೆಸರಲ್ಲಿ ಬಡವರನ್ನು ಭೂಮಿ ವಂಚಿತರನ್ನಾಗಿಸಲು ಸರ್ಕಾರ ಹೊರಟಿದೆ. ಉಳಿದ ಸರ್ಕಾರಿ ಭೂಮಿಯನ್ನು ಸೆಕ್ಷನ್ 4 ಎಂದು ಘೋಷಿಸಿ ಈಗಾಗಲೇ ವಾಸವಿರುವ ಹಾಗೂ ಕೃಷಿ ಮಾಡಿಕೊಂಡಿರುವ ಭೂಮಿಯನ್ನೂ ಮೀಸಲು ಅರಣ್ಯ ಮಾಡುವ ಹುನ್ನಾರದಲ್ಲಿದ್ದಾರೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಹಿಂದೆಯೇ ಅರಣ್ಯ ಇಲಾಖೆ ಒಂದೊಂದು ನೋಟಿಸ್ ಕೊಟ್ಟು ದಾಖಲೆ ಕೇಳುತ್ತಿದೆ. ಜನರು ಆ ಕ್ಷಣದಲ್ಲಿ ಎದ್ದು ಬಿದ್ದು ಆಕ್ಷೇಪಣೆ ಸಲ್ಲಿಸಿ ಹಾಗೇ ತಮ್ಮ ಜವಾಬ್ದಾರಿ ಮುಗಿಯಿತೆಂಬಂತೆ ಇರುತ್ತಾರೆ. ಆದರೆ ಇದು ಇಲ್ಲಿಗೇ ಮುಗಿಯುವುದಿಲ್ಲ. ಒಂದು ಆಕ್ಷೇಪಣೆ ಸಲ್ಲಿಸಿದ ಮಾತ್ರಕ್ಕೆ ನಿವೇಶನ ಹಾಗೂ ಕೃಷಿ ಭೂಮಿಗೆ ಹಕ್ಕುಪತ್ರ ಸಿಗುವುದಿಲ್ಲ” ಎಂದು ಕರ್ನಾಟಕ ಜನಶಕ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ 

ಇದಕ್ಕೆ ಉದಾಹರಣೆಯಾಗಿ ‘ಕುದುರೆ ಮುಖ ರಾಷ್ಟ್ರೀಯ ಉದ್ಯಾನ’ ಇದೆ ಎಂದು ಹೇಳಿರುವ ಕರ್ನಾಟಕ ಜನಶಕ್ತಿ, “ಕುದುರೆ ಮುಖ ವ್ಯಾಪ್ತಿಯ ಜನರು ತಮ್ಮ ಜೀವನಕ್ಕಾಗಿ ಕೃಷಿ ಮಾಡಿಕೊಂಡಿದ್ದ ಭೂಮಿಗೆ 2001 ರಲ್ಲಿ ಸರ್ಕಾರ ಹಕ್ಕು ಪತ್ರ ನೀಡಿತ್ತು. ಅವರಿಗೆ ಎಲ್ಲಾ ದಾಖಲೆ ಗಳು ಇದ್ದಾಗ್ಯೂ 2014 ರಲ್ಲಿ ಅರಣ್ಯ ಇಲಾಖೆ ಸುಮಾರು 50 ಜನ ಆದಿವಾಸಿಗಳ ಮೇಲೆ ಸರ್ಕಾರಿ ಭೂಮಿ ಅಕ್ರಮ ಭೂ ಕಭಳಿಕೆ ಮಾಡಿರುವ ಆರೋಪದಡಿ ಕೇಸು ದಾಖಲಿಸಿ ಕೋರ್ಟಿಗೆ ಅಲೆಯುವಂತೆ ಮಾಡಿದೆ. ಸರ್ಕಾರ ಒಂದು ಕಡೆ ಎಲ್ಲರಿಗೂ ಭೂಮಿ ಕೊಡುತ್ತೇವೆ, ನಿವೇಶನ ಕೊಡುತ್ತೇವೆ ಎನ್ನುತ್ತದೆ. ಆದರೆ ಆದೇ ಸಮಯದಲ್ಲಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಳ್ಳುವ ಹುನ್ನಾರ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಮೂಲಭೂತ ಅಗತ್ಯವಾದ ನಿವೇಶನ ಹಾಗೂ ಭೂಮಿಯ ಹಕ್ಕಿಗಾಗಿ ಹೋರಾಡದೇ ಹೋದರೆ, ಮುಂದಿನ ದಿನಗಳಲ್ಲಿ ಬದುಕು ಕಟ್ಟಿಕೊಂಡ ಭೂಮಿಯಲ್ಲಿ ಪರಕೀಯರಂತೆ ಬದುಕ ಬೇಕಾಗುತ್ತದೆ ಎಂದು ಎಚ್ಚರಿಸಿರುವ ಕರ್ನಾಟಕ ಜನಶಕ್ತಿ, ಜನರನ್ನು ಜಾಗೃತರಾಗುವಂತೆ ಕರೆ ನೀಡಿದೆ.

ಈ ಹಿನ್ನಲೆಯಲ್ಲಿ ಮಾರ್ಚ್‌ 24-25 ರಂದು ಭೂಮಿ ಹಾಗು ನಿವೇಶನಕ್ಕೆ ಆಗ್ರಹಿಸಿ ಹಾಗೂ ಇಡೀ ಮಲೆನಾಡನ್ನು ಮೀಸಲು ಅರಣ್ಯ ಮಾಡುವ ಹುನ್ನಾರದ ಸೆಕ್ಷನ್ 4 ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಶಕ್ತಿಯು ಮಲೆನಾಡಿನ ಜನ ಜನಜಾಗೃತಿ ಬೈಕ್‌ ಜಾಥಾವನ್ನು ಹಾಗೂ 28 ರಂದು ಕೊಪ್ಪ ತಾಲ್ಲೂಕು ಕಛೇರಿ ಮುಂದೆ ನಡೆಯುವ ಜನಾಗ್ರಹ ಸಭೆ ನಡೆಸಲಿದೆ ಎಂದು ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: 10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...