Homeಕರ್ನಾಟಕಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

- Advertisement -
- Advertisement -

ಭೂಮಿ ಮತ್ತು ವಸತಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕುಗಳ 102 ಹಳ್ಳಿಗಳಲ್ಲಿ ಎರಡು ದಿನಗಳ ಬೈಕ್ ಜಾಥಾ ಮತ್ತು ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಮಂಗಳವಾರ ಹೇಳಿದೆ.‌ ಮಾರ್ಚ್ 24-25 ರಂದು ಜಿಲ್ಲೆಯಾದ್ಯಂತ ಬೈಕ್‌‌‌ ಜಾಥಾ ನಡೆಯಲಿದ್ದು, ಮಾರ್ಚ್ 28ರ ಸೋಮವಾರದಂದು ಕೊಪ್ಪ ತಾಲ್ಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕೆ. ಎಲ್‌. ಅಶೋಕ್‌ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ಅಶೋಕ್‌, “ಕಳೆದ ಹತ್ತಾರು ವರ್ಷಗಳಿಂದ ತಮ್ಮ ನೆತ್ತಿಯ ಮೇಲೋಂದು ಸೂರು ಹಾಗು ತಮ್ಮ ಕನಿಷ್ಟ ಜೀವನೋಪಾಯಕ್ಕಾಗಿ ಎರಡೋ ಮೂರೋ ಎಕರೆ ಭೂಮಿಯನ್ನು ಕೃಷಿ ಮಾಡಿಕೊಂಡು, ಅದರ ಮಂಜೂರಿಗಾಗಿ ಸಾವಿರಾರು ಜನರು ಹತ್ತಾರು ವರ್ಷಗಳಿಂದ  ಹಾಕಿ ಕಾಯುತ್ತಾ ಕುಳಿತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

“ಇನ್ನೂ ಹಲವರು ನಿವೇಶನಕ್ಕಾಗಿ ಸರ್ಕಾರಕ್ಕೂ ಗ್ರಾಮಪಂಚಾಯಿತಿಗೂ ಅರ್ಜಿ ಹಾಕಿ ಜನಪ್ರತಿನಿಧಿಗಳ ಭರವಸೆಯಿಂದ ತಾವಿದ್ದ ಬಾಡಿಗೆ ಮನೆಯಲ್ಲೋ ,ಎಸ್ಟೇಟ್‌ಗಳಲೈನ್‌ಗಳಲ್ಲಿ ಕಾಯುತ್ತಿದ್ದಾರೆ. ಆದರೆ ಒಂದು ಜವಾಬ್ದಾರಿಯುತ ಆಡಳಿತ ಯಂತ್ರಾಂಗ ಹಾಗು ಸರ್ಕಾರ ತಮಗೆ ಸಿಗಬೇಕಾದ ನ್ಯಾಯಬದ್ದ ಹಕ್ಕಾದ ಭೂಮಿ ಹಾಗು ನಿವೇಶನ ನೀಡಲು ಮೀನಾಮೇಷ ಎಣಿಸುತ್ತಾ ಕಾಲಕಳೆಯುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈಗಾಗಲೇ ಮಲೆನಾಡಿನ ಬಹುತೇಕ ಭೂಮಿಯನ್ನ ಒಂದೋ ರಾಷ್ಟ್ರೀಯ ಉದ್ಯಾನ, ಹುಲಿಯೋಜನೆ, ಕಸ್ತೂರಿ ರಂಗನ್ ವರದಿ ಹೆಸರಲ್ಲಿ ಬಡವರನ್ನು ಭೂಮಿ ವಂಚಿತರನ್ನಾಗಿಸಲು ಸರ್ಕಾರ ಹೊರಟಿದೆ. ಉಳಿದ ಸರ್ಕಾರಿ ಭೂಮಿಯನ್ನು ಸೆಕ್ಷನ್ 4 ಎಂದು ಘೋಷಿಸಿ ಈಗಾಗಲೇ ವಾಸವಿರುವ ಹಾಗೂ ಕೃಷಿ ಮಾಡಿಕೊಂಡಿರುವ ಭೂಮಿಯನ್ನೂ ಮೀಸಲು ಅರಣ್ಯ ಮಾಡುವ ಹುನ್ನಾರದಲ್ಲಿದ್ದಾರೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಹಿಂದೆಯೇ ಅರಣ್ಯ ಇಲಾಖೆ ಒಂದೊಂದು ನೋಟಿಸ್ ಕೊಟ್ಟು ದಾಖಲೆ ಕೇಳುತ್ತಿದೆ. ಜನರು ಆ ಕ್ಷಣದಲ್ಲಿ ಎದ್ದು ಬಿದ್ದು ಆಕ್ಷೇಪಣೆ ಸಲ್ಲಿಸಿ ಹಾಗೇ ತಮ್ಮ ಜವಾಬ್ದಾರಿ ಮುಗಿಯಿತೆಂಬಂತೆ ಇರುತ್ತಾರೆ. ಆದರೆ ಇದು ಇಲ್ಲಿಗೇ ಮುಗಿಯುವುದಿಲ್ಲ. ಒಂದು ಆಕ್ಷೇಪಣೆ ಸಲ್ಲಿಸಿದ ಮಾತ್ರಕ್ಕೆ ನಿವೇಶನ ಹಾಗೂ ಕೃಷಿ ಭೂಮಿಗೆ ಹಕ್ಕುಪತ್ರ ಸಿಗುವುದಿಲ್ಲ” ಎಂದು ಕರ್ನಾಟಕ ಜನಶಕ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ 

ಇದಕ್ಕೆ ಉದಾಹರಣೆಯಾಗಿ ‘ಕುದುರೆ ಮುಖ ರಾಷ್ಟ್ರೀಯ ಉದ್ಯಾನ’ ಇದೆ ಎಂದು ಹೇಳಿರುವ ಕರ್ನಾಟಕ ಜನಶಕ್ತಿ, “ಕುದುರೆ ಮುಖ ವ್ಯಾಪ್ತಿಯ ಜನರು ತಮ್ಮ ಜೀವನಕ್ಕಾಗಿ ಕೃಷಿ ಮಾಡಿಕೊಂಡಿದ್ದ ಭೂಮಿಗೆ 2001 ರಲ್ಲಿ ಸರ್ಕಾರ ಹಕ್ಕು ಪತ್ರ ನೀಡಿತ್ತು. ಅವರಿಗೆ ಎಲ್ಲಾ ದಾಖಲೆ ಗಳು ಇದ್ದಾಗ್ಯೂ 2014 ರಲ್ಲಿ ಅರಣ್ಯ ಇಲಾಖೆ ಸುಮಾರು 50 ಜನ ಆದಿವಾಸಿಗಳ ಮೇಲೆ ಸರ್ಕಾರಿ ಭೂಮಿ ಅಕ್ರಮ ಭೂ ಕಭಳಿಕೆ ಮಾಡಿರುವ ಆರೋಪದಡಿ ಕೇಸು ದಾಖಲಿಸಿ ಕೋರ್ಟಿಗೆ ಅಲೆಯುವಂತೆ ಮಾಡಿದೆ. ಸರ್ಕಾರ ಒಂದು ಕಡೆ ಎಲ್ಲರಿಗೂ ಭೂಮಿ ಕೊಡುತ್ತೇವೆ, ನಿವೇಶನ ಕೊಡುತ್ತೇವೆ ಎನ್ನುತ್ತದೆ. ಆದರೆ ಆದೇ ಸಮಯದಲ್ಲಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಳ್ಳುವ ಹುನ್ನಾರ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಮೂಲಭೂತ ಅಗತ್ಯವಾದ ನಿವೇಶನ ಹಾಗೂ ಭೂಮಿಯ ಹಕ್ಕಿಗಾಗಿ ಹೋರಾಡದೇ ಹೋದರೆ, ಮುಂದಿನ ದಿನಗಳಲ್ಲಿ ಬದುಕು ಕಟ್ಟಿಕೊಂಡ ಭೂಮಿಯಲ್ಲಿ ಪರಕೀಯರಂತೆ ಬದುಕ ಬೇಕಾಗುತ್ತದೆ ಎಂದು ಎಚ್ಚರಿಸಿರುವ ಕರ್ನಾಟಕ ಜನಶಕ್ತಿ, ಜನರನ್ನು ಜಾಗೃತರಾಗುವಂತೆ ಕರೆ ನೀಡಿದೆ.

ಈ ಹಿನ್ನಲೆಯಲ್ಲಿ ಮಾರ್ಚ್‌ 24-25 ರಂದು ಭೂಮಿ ಹಾಗು ನಿವೇಶನಕ್ಕೆ ಆಗ್ರಹಿಸಿ ಹಾಗೂ ಇಡೀ ಮಲೆನಾಡನ್ನು ಮೀಸಲು ಅರಣ್ಯ ಮಾಡುವ ಹುನ್ನಾರದ ಸೆಕ್ಷನ್ 4 ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಶಕ್ತಿಯು ಮಲೆನಾಡಿನ ಜನ ಜನಜಾಗೃತಿ ಬೈಕ್‌ ಜಾಥಾವನ್ನು ಹಾಗೂ 28 ರಂದು ಕೊಪ್ಪ ತಾಲ್ಲೂಕು ಕಛೇರಿ ಮುಂದೆ ನಡೆಯುವ ಜನಾಗ್ರಹ ಸಭೆ ನಡೆಸಲಿದೆ ಎಂದು ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: 10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....