Homeಕರ್ನಾಟಕಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

ಭೂಮಿ-ವಸತಿ ಸಮಸ್ಯೆಗಳ ಪರಿಹಾರಕ್ಕಾಗಿ ಮಲೆನಾಡಿಗರ ಬೈಕ್‌ ರ್‍ಯಾಲಿ ಮತ್ತು ಬೃಹತ್ ಪ್ರತಿಭಟನೆ

- Advertisement -
- Advertisement -

ಭೂಮಿ ಮತ್ತು ವಸತಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕುಗಳ 102 ಹಳ್ಳಿಗಳಲ್ಲಿ ಎರಡು ದಿನಗಳ ಬೈಕ್ ಜಾಥಾ ಮತ್ತು ಪ್ರತಿಭಟನೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಮಂಗಳವಾರ ಹೇಳಿದೆ.‌ ಮಾರ್ಚ್ 24-25 ರಂದು ಜಿಲ್ಲೆಯಾದ್ಯಂತ ಬೈಕ್‌‌‌ ಜಾಥಾ ನಡೆಯಲಿದ್ದು, ಮಾರ್ಚ್ 28ರ ಸೋಮವಾರದಂದು ಕೊಪ್ಪ ತಾಲ್ಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಕರ್ನಾಟಕ ಜನಶಕ್ತಿ ಕಾರ್ಯದರ್ಶಿ ಕೆ. ಎಲ್‌. ಅಶೋಕ್‌ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿರುವ ಅಶೋಕ್‌, “ಕಳೆದ ಹತ್ತಾರು ವರ್ಷಗಳಿಂದ ತಮ್ಮ ನೆತ್ತಿಯ ಮೇಲೋಂದು ಸೂರು ಹಾಗು ತಮ್ಮ ಕನಿಷ್ಟ ಜೀವನೋಪಾಯಕ್ಕಾಗಿ ಎರಡೋ ಮೂರೋ ಎಕರೆ ಭೂಮಿಯನ್ನು ಕೃಷಿ ಮಾಡಿಕೊಂಡು, ಅದರ ಮಂಜೂರಿಗಾಗಿ ಸಾವಿರಾರು ಜನರು ಹತ್ತಾರು ವರ್ಷಗಳಿಂದ  ಹಾಕಿ ಕಾಯುತ್ತಾ ಕುಳಿತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಗಳ ಹಿನ್ನೆಲೆಯಲ್ಲಿ ಚಳವಳಿಗಳು ಮತ್ತು ಚುನಾವಣೆಗಳು

“ಇನ್ನೂ ಹಲವರು ನಿವೇಶನಕ್ಕಾಗಿ ಸರ್ಕಾರಕ್ಕೂ ಗ್ರಾಮಪಂಚಾಯಿತಿಗೂ ಅರ್ಜಿ ಹಾಕಿ ಜನಪ್ರತಿನಿಧಿಗಳ ಭರವಸೆಯಿಂದ ತಾವಿದ್ದ ಬಾಡಿಗೆ ಮನೆಯಲ್ಲೋ ,ಎಸ್ಟೇಟ್‌ಗಳಲೈನ್‌ಗಳಲ್ಲಿ ಕಾಯುತ್ತಿದ್ದಾರೆ. ಆದರೆ ಒಂದು ಜವಾಬ್ದಾರಿಯುತ ಆಡಳಿತ ಯಂತ್ರಾಂಗ ಹಾಗು ಸರ್ಕಾರ ತಮಗೆ ಸಿಗಬೇಕಾದ ನ್ಯಾಯಬದ್ದ ಹಕ್ಕಾದ ಭೂಮಿ ಹಾಗು ನಿವೇಶನ ನೀಡಲು ಮೀನಾಮೇಷ ಎಣಿಸುತ್ತಾ ಕಾಲಕಳೆಯುತ್ತಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈಗಾಗಲೇ ಮಲೆನಾಡಿನ ಬಹುತೇಕ ಭೂಮಿಯನ್ನ ಒಂದೋ ರಾಷ್ಟ್ರೀಯ ಉದ್ಯಾನ, ಹುಲಿಯೋಜನೆ, ಕಸ್ತೂರಿ ರಂಗನ್ ವರದಿ ಹೆಸರಲ್ಲಿ ಬಡವರನ್ನು ಭೂಮಿ ವಂಚಿತರನ್ನಾಗಿಸಲು ಸರ್ಕಾರ ಹೊರಟಿದೆ. ಉಳಿದ ಸರ್ಕಾರಿ ಭೂಮಿಯನ್ನು ಸೆಕ್ಷನ್ 4 ಎಂದು ಘೋಷಿಸಿ ಈಗಾಗಲೇ ವಾಸವಿರುವ ಹಾಗೂ ಕೃಷಿ ಮಾಡಿಕೊಂಡಿರುವ ಭೂಮಿಯನ್ನೂ ಮೀಸಲು ಅರಣ್ಯ ಮಾಡುವ ಹುನ್ನಾರದಲ್ಲಿದ್ದಾರೆ” ಎಂದು ಕರ್ನಾಟಕ ಜನಶಕ್ತಿ ಹೇಳಿದೆ.

“ಈ ಹಿಂದೆಯೇ ಅರಣ್ಯ ಇಲಾಖೆ ಒಂದೊಂದು ನೋಟಿಸ್ ಕೊಟ್ಟು ದಾಖಲೆ ಕೇಳುತ್ತಿದೆ. ಜನರು ಆ ಕ್ಷಣದಲ್ಲಿ ಎದ್ದು ಬಿದ್ದು ಆಕ್ಷೇಪಣೆ ಸಲ್ಲಿಸಿ ಹಾಗೇ ತಮ್ಮ ಜವಾಬ್ದಾರಿ ಮುಗಿಯಿತೆಂಬಂತೆ ಇರುತ್ತಾರೆ. ಆದರೆ ಇದು ಇಲ್ಲಿಗೇ ಮುಗಿಯುವುದಿಲ್ಲ. ಒಂದು ಆಕ್ಷೇಪಣೆ ಸಲ್ಲಿಸಿದ ಮಾತ್ರಕ್ಕೆ ನಿವೇಶನ ಹಾಗೂ ಕೃಷಿ ಭೂಮಿಗೆ ಹಕ್ಕುಪತ್ರ ಸಿಗುವುದಿಲ್ಲ” ಎಂದು ಕರ್ನಾಟಕ ಜನಶಕ್ತಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ 

ಇದಕ್ಕೆ ಉದಾಹರಣೆಯಾಗಿ ‘ಕುದುರೆ ಮುಖ ರಾಷ್ಟ್ರೀಯ ಉದ್ಯಾನ’ ಇದೆ ಎಂದು ಹೇಳಿರುವ ಕರ್ನಾಟಕ ಜನಶಕ್ತಿ, “ಕುದುರೆ ಮುಖ ವ್ಯಾಪ್ತಿಯ ಜನರು ತಮ್ಮ ಜೀವನಕ್ಕಾಗಿ ಕೃಷಿ ಮಾಡಿಕೊಂಡಿದ್ದ ಭೂಮಿಗೆ 2001 ರಲ್ಲಿ ಸರ್ಕಾರ ಹಕ್ಕು ಪತ್ರ ನೀಡಿತ್ತು. ಅವರಿಗೆ ಎಲ್ಲಾ ದಾಖಲೆ ಗಳು ಇದ್ದಾಗ್ಯೂ 2014 ರಲ್ಲಿ ಅರಣ್ಯ ಇಲಾಖೆ ಸುಮಾರು 50 ಜನ ಆದಿವಾಸಿಗಳ ಮೇಲೆ ಸರ್ಕಾರಿ ಭೂಮಿ ಅಕ್ರಮ ಭೂ ಕಭಳಿಕೆ ಮಾಡಿರುವ ಆರೋಪದಡಿ ಕೇಸು ದಾಖಲಿಸಿ ಕೋರ್ಟಿಗೆ ಅಲೆಯುವಂತೆ ಮಾಡಿದೆ. ಸರ್ಕಾರ ಒಂದು ಕಡೆ ಎಲ್ಲರಿಗೂ ಭೂಮಿ ಕೊಡುತ್ತೇವೆ, ನಿವೇಶನ ಕೊಡುತ್ತೇವೆ ಎನ್ನುತ್ತದೆ. ಆದರೆ ಆದೇ ಸಮಯದಲ್ಲಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಳ್ಳುವ ಹುನ್ನಾರ ಮಾಡುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಮೂಲಭೂತ ಅಗತ್ಯವಾದ ನಿವೇಶನ ಹಾಗೂ ಭೂಮಿಯ ಹಕ್ಕಿಗಾಗಿ ಹೋರಾಡದೇ ಹೋದರೆ, ಮುಂದಿನ ದಿನಗಳಲ್ಲಿ ಬದುಕು ಕಟ್ಟಿಕೊಂಡ ಭೂಮಿಯಲ್ಲಿ ಪರಕೀಯರಂತೆ ಬದುಕ ಬೇಕಾಗುತ್ತದೆ ಎಂದು ಎಚ್ಚರಿಸಿರುವ ಕರ್ನಾಟಕ ಜನಶಕ್ತಿ, ಜನರನ್ನು ಜಾಗೃತರಾಗುವಂತೆ ಕರೆ ನೀಡಿದೆ.

ಈ ಹಿನ್ನಲೆಯಲ್ಲಿ ಮಾರ್ಚ್‌ 24-25 ರಂದು ಭೂಮಿ ಹಾಗು ನಿವೇಶನಕ್ಕೆ ಆಗ್ರಹಿಸಿ ಹಾಗೂ ಇಡೀ ಮಲೆನಾಡನ್ನು ಮೀಸಲು ಅರಣ್ಯ ಮಾಡುವ ಹುನ್ನಾರದ ಸೆಕ್ಷನ್ 4 ರದ್ದುಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಶಕ್ತಿಯು ಮಲೆನಾಡಿನ ಜನ ಜನಜಾಗೃತಿ ಬೈಕ್‌ ಜಾಥಾವನ್ನು ಹಾಗೂ 28 ರಂದು ಕೊಪ್ಪ ತಾಲ್ಲೂಕು ಕಛೇರಿ ಮುಂದೆ ನಡೆಯುವ ಜನಾಗ್ರಹ ಸಭೆ ನಡೆಸಲಿದೆ ಎಂದು ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ: 10 ವರ್ಷಗಳ ಸತತ ಹೋರಾಟ!; 2011ರ ದೇಶದ್ರೋಹ ಪ್ರಕರಣದಲ್ಲಿ ಹೋರಾಟಗಾರ್ತಿ ಸೋನಿ ಸೋರಿ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...